ಬೆಂಗಳೂರು: ವಿಶೇಷಚೇತನರ ಕೋಟಾದಡಿ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ, ವೈದ್ಯಕೀಯ ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮುಖ್ಯ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳಾದ ಶಿಕ್ಷಕ ಭರಮಪ್ಪ, ವಿಜಯನಗರದ ಹೊಸಪೇಟೆಯ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ಮಕ್ಕಳ ತಜ್ಞ ಡಾ.ಶ್ರೀನಿವಾಸ್, ಕೊಪ್ಪಳದ …
Read More »ಓದುವ ವಯಸ್ಸಲ್ಲಿ ಪ್ರೀತಿ-ಪ್ರೇಮ: ಹೆದರಿ ದುರಂತ ಅಂತ್ಯ
ಕೋಲಾರ, (ಸೆಪ್ಟೆಂಬರ್ 25): ಅಪ್ರಾಪ್ತ ಪ್ರೇಮಿಗಳ ಪ್ರೀತಿ-ಪ್ರೇಮ ಸಾವಿನಲ್ಲಿ ಅಂತ್ಯವಾಗಿದೆ. ಹೌದು…ಕುಟುಂಬದ ಭಯದಿಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ. ಮುಂಜಾನೆ ಎದ್ದು ತನ್ನ ತಾಯಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ತಾನು ಪ್ರೀತಿಸಿದ್ದ ಹುಡುಗಿಯೊಂದಿಗೆ ನಿರ್ಜನ ಪ್ರದೇಶದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮನೆಯವರು ತಮ್ಮ ಪ್ರೀತಿಯನ್ನು …
Read More »ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ
ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆ ಚುನಾವಣೆಯ ಹಿನ್ನೆಲೆ ಶ್ರೀ ಮಲಪ್ರಭಾ ಸಹಕಾರಿ ಕಾರ್ಖಾನೆಯ ಪುನಶ್ಚೇತನ ರೈತರ ಪ್ಯಾನಲ್’ನ್ನು ಬೆಂಬಲಿಸಿ’ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಇಂದು ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಪ್ಯಾನಲ್’ನ ಸರ್ವ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ, ಶ್ರೀ ಮಲಪ್ರಭಾ …
Read More »ಕಾಂತಾರ ಚಾಪ್ಟರ್ 1′ ಟ್ರೈಲರ್ ಬಿಡುಗಡೆ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟ ರಿಷಬ್ ಶೆಟ್ಟಿ ದಂಪತಿ
ಬೈಂದೂರು(ಉಡುಪಿ): ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾಗಿದ್ದು ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ರಿಷಬ್ ಶೆಟ್ಟಿ ಪತ್ನಿ ಸಹಿತ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಸಿನಿಮಾದ ಯಶಸ್ಸಿಗಾಗಿ ಪ್ರಾರ್ಥಿಸಿದರು. ತಮ್ಮ ಪ್ರತಿ ಸಿನಿಮಾ ಬಿಡುಗಡೆಗೂ ಮುನ್ನ ರಿಷಬ್ ಅವರು ತಾಯಿ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಇನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ …
Read More »14 ದಲಿತ ಕ್ರಿಶ್ಚಿಯನ್ ಹೆಸರನ್ನು ಹಿಂಪಡೆಯಲು ಬಿಜೆಪಿ ನಿಯೋಗ ಆಗ್ರಹ
ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ದಲಿತ ಕ್ರಿಶ್ಚಿಯನ್ ನಮೂದು ಹಿಂಪಡೆಯುವಂತೆ ಬಿಜೆಪಿ ನಿಯೋಗ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿತು. ಬೆಂಗಳೂರಿನ ವಸಂತನಗರದ ಆಯೋಗದ ಕಚೇರಿಯಲ್ಲಿ ಅಧ್ಯಕ್ಷ ಮಧುಸೂದನ್ ನಾಯಕ್ಗೆ ಮನವಿ ಸಲ್ಲಿಕೆ ಮಾಡಿದರು. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ದಲಿತ ಕ್ರಿಶ್ಚಿಯನ್ ನಮೂದು ಹಿಂಪಡೆಯುವಂತೆ ಹಾಗೂ ಮತ್ತೊಮ್ಮೆ ಎಸ್ಸಿ ಸಮುದಾಯದ ಗಣತಿ ನಡೆಸದಂತೆ ಆಗ್ರಹಿಸಿದರು. ಹಿಂದುಳಿದ ವರ್ಗಗಳ ಆಯೋಗದ ಕಚೇರಿಯಲ್ಲಿ …
Read More »ಬಸವಣ್ಣ ಲಿಂಗಾಯತ ಧರ್ಮವನ್ನು ಸ್ಥಾಪಿಸಿಲ್ಲ: ಯತ್ನಾಳ್
ಚಿಕ್ಕೋಡಿ (ಬೆಳಗಾವಿ): ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದ್ದಾರೆ. ಜಿಲ್ಲೆಯ ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು …
Read More »ಸುಸಜ್ಜಿತ ಆಸ್ಪತ್ರೆಗಾಗಿ ದಶಕಗಳ ಹೋರಾಟ: ಚಿಕಿತ್ಸೆಗಾಗಿ ಹಳೇ ದಾವಣಗೆರೆ ಭಾಗದ ಜನರ ಪರದಾಟ
ದಾವಣಗೆರೆ: ಹಳೇ ದಾವಣಗೆರೆ ಭಾಗದಲ್ಲಿ ಹೆಚ್ಚು ಅಲ್ಪಸಂಖ್ಯಾತ ಕುಟುಂಬಗಳು ವಾಸಿಸುತ್ತಿವೆ. ಕೂಲಿ ಕಾರ್ಮಿಕರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಕಟ್ಟಡ ಕಾರ್ಮಿರು ಸೇರಿ ಬರೋಬ್ಬರಿ 80 ಸಾವಿರ ಜನಸಂಖ್ಯೆ ಇದೆ. ಆದರೆ, ಇಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ಇದಕ್ಕಾಗಿ ಜನ ದಶಕಗಳಿಂದ ಹೋರಾಟ ಮಾಡ್ತಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿ ಎದುರಾದರೆ ಇಲ್ಲಿಯ ಜನ ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಚಿಕಿತ್ಸೆಗಾಗಿ ಇಲ್ಲಿನ ಜನ ರೈಲ್ವೆ ಹಳಿ ದಾಟಿ ಸಿಜಿ ಆಸ್ಪತ್ರೆ ಸೇರಿದಂತೆ ಇತರ ಖಾಸಗಿ ಆಸ್ಪತ್ರೆಗೆ …
Read More »ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ
ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ ಚಿಕ್ಕೋಡಿ: ತಾಲೂಕಿನ ಕೇರೂರ ಗ್ರಾಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಕೇರೂರ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಯಿತು. ಕಳೆದ 19 ವರ್ಷಗಳ ಹಿಂದೆ ಸುಮಾರು 184 ಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡಿಲಾಗಿತ್ತು.ಆದ್ರೆ ಇನ್ನೂವರೆಗೆ ಜಾಗ ನೀಡಿಲ್ಲ,ಜಾಗ ನೀಡುವಂತೆ ಪ್ರತಿಭಟನೆಗಾರರು ಆಗ್ರಹಿಸಿದರು. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಚಿಕ್ಕೋಡಿ ತಾಲೂಕಾ ಪಂಚಾಯತ …
Read More »ರಾಜ್ಯ ಸರ್ಕಾರ ಸಂವಿಧಾನ ಉಲ್ಲಂಘಿಸಿ ತನ್ನ ಅಧಿಕಾರ ವ್ಯಾಪ್ತಿ ಮೀರಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದ್ದು, ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ 1995ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಹಾಗೂ ಮಾಜಿ ಶಾಸಕ ಹಿರಿಯ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರು ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ. ಅರ್ಜಿಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ …
Read More »ಬಿಜೆಪಿಯವರು ಮತಗಳ್ಳತನ ಮಾಡುತ್ತಿದ್ದಾರೆ, ನನ್ನ ಬಳಿ ಅಧಿಕೃತ ದಾಖಲೆಗಳಿವೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: “ಬಿಜೆಪಿಯವರೇ ಮತಗಳ್ಳತನ ಮಾಡುತ್ತಿದ್ದಾರೆ. ನನ್ನ ಬಳಿ ಅಧಿಕೃತ ದಾಖಲೆಗಳಿವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಆಳಂದ ಮತ ಕ್ಷೇತ್ರದಲ್ಲಿ ಮತಗಳವು ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “2023ರ ಚುನಾವಣೆಗೂ ಮುನ್ನ 7,250 ಮತದಾರರ ಹೆಸರು ಏಕಾಏಕಿ ಮತದಾರರಿಗೆ ಗೊತ್ತಿಲ್ಲದೆ ಡಿಲೀಟ್ ಆಗ್ತಿತ್ತು. ಅದರ ಬಗ್ಗೆ ಶಾಸಕ ಬಿ.ಆರ್.ಪಾಟೀಲ್ ಮತ್ತು ನಾನು ಎಲೆಕ್ಷನ್ ಕಮಿಷನ್ಗೆ ದೂರು ಕೊಟ್ಟಿದ್ದೆವು. ಅದರ ಆಧಾರದ ಮೇಲೆ ಕಲಬುರಗಿಯಲ್ಲಿ ಎಫ್ಐಆರ್ ದಾಖಲಿಸಲಾಯಿತು. ಪರಿಶೀಲನೆ …
Read More »
Laxmi News 24×7