Breaking News

ರಾಷ್ಟ್ರೀಯ

ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ,

ಬೆಂಗಳೂರು, ಜುಲೈ 19: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ಉಪನದಿಗಳು ಅವುಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಗಳಲ್ಲಿ ಅತ್ಯಧಿಕ ನೀರು ಸಂಗ್ರಹವಾಗಿದೆ. ಈ ಪೈಕಿ ಹೇಮಾವತಿ ಜಲಾಶಯದಲ್ಲೂ ಸಹ ಅತ್ಯಧಿಕ ಒಳಹರಿವು ದಾಖಲಾಗಿದೆ. ಇಂದು ಜುಲೈ 19ರಂದು ನೀರಿನ ಸಂಗ್ರಹ ಮಟ್ಟ ಎಷ್ಟಿದೆ, ಅಪ್ಡೇಟ್ ಮಾಹಿತಿ ಇಲ್ಲಿದೆ. ಹೇಮಾವತಿ ನದಿಯು ಕಾವೇರಿ ಉಪನದಿಗಳಲ್ಲಿ ಒಂದಾಗಿದೆ. ಈ ನದಿಗೆ ಹಾಸನ ಜಿಲ್ಲೆಯ ಗೂರೂರು …

Read More »

ಮೈಕ್ರೋಸಾಫ್ಟ್‌ ತಾಂತ್ರಿಕ ದೋಷ.ಜಾಗತಿಕವಾಗಿ ಬಳಕೆದಾರರ ಪರದಾಟ

ಮೈಕ್ರೋಸಾಫ್ಟ್‌ ತಾಂತ್ರಿಕ ದೋಷ.ಜಾಗತಿಕವಾಗಿ ಬಳಕೆದಾರರ ಪರದಾಟ ನವದೆಹಲಿ: ಸಾಫ್ಟ್‌ ವೇರ್‌ ಕ್ಷೇತ್ರದ ದಿಗ್ಗಜ ಮೈಕ್ರೋಸಾಫ್ಟ್‌ ವಿಂಡೋಸ್‌ ನಲ್ಲಿ ತಾಂತ್ರಿಕ ದೋಷ ( Technical Issues) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 19) ಭಾರತ ಸೇರಿದಂತೆ ಜಾಗತಿಕವಾಗಿ ಮೈಕ್ರೋಸಾಫ್ಟ್‌ ಬಳಕೆದಾರರು ಪರದಾಡುವಂತಾಗಿತ್ತು. ಭಾರತದಲ್ಲಿ ವಿಸ್ತಾರ, ಇಂಡಿಗೋ, ಸ್ಪೈಸ್‌ ಜೆಟ್‌ ಮತ್ತು ಅಕ್ಸಾ ವಿಮಾನ ಸಂಸ್ಥೆಗಳು ಟಿಕೆಟ್‌ ಬುಕ್ಕಿಂಗ್‌, ಚೆಕ್‌ ಇನ್‌ ಸೇರಿದಂತೆ ಹಲವು ತಾಂತ್ರಿಕ ದೋಷಗಳನ್ನು ಎದುರಿಸಿದ್ದು, ಏರ್‌ ಲೈನ್ಸ್‌ ಸದ್ಯ ಪ್ರಯಾಣಿಕರನ್ನು …

Read More »

ನನ್ನ ಮದುವೆಗೂ ಮುನ್ನ ದರ್ಶನ್ ಜೈಲಿನಿಂದ ರಿಲೀಸ್ ಆಗ್ತಾರೆ : ನಿರ್ದೇಶಕ ತರುಣ್ ಸುಧೀರ್ ಹೇಳಿಕೆ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಭೇಟಿ ಮಾಡಲು ಇಂದು ನಿರ್ದೇಶಕ ತರುಣ್ ಸುಧೀರ್ ಜೈಲಿಗೆ ಆಗಮಿಸಿದ್ದರು. ಈ ವೇಳೆ ನಟ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು ನನ್ನ ಮದುವೆ ವಿಷಯ ದರ್ಶನ್ ಅವರಿಗೆ ಮೊದಲೇ ಗೊತ್ತಿತ್ತು. ಹಾಗಾಗಿ ನನ್ನ ಮದುವೆ ಅಸ್ಟೊತ್ತಿಗೆ ದರ್ಶನ್ ಜೈಲಿನಿಂದ ರಿಲೀಸ್ ಆಗುತ್ತಾರೆ ಎಂದು ತಿಳಿಸಿದರು. ರೇಣುಕಾ …

Read More »

FASTAG ಮುಂಭಾಗದಲ್ಲಿಇಲ್ಲದಿದ್ದರೆ ಡಬಲ್‌ ಟೋಲ್‌!

ಹೊಸದಿಲ್ಲಿ: ಉದ್ದೇಶಪೂರ್ವಕವಾಗಿ ವಾಹನದ ಮುಂದಿನ ಗಾಜಿಗೆ ಫಾಸ್ಟಾಗ್‌ ಅಂಟಿಸದೇ ಇರುವವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHIA), ದುಪ್ಪಟ್ಟು ಟೋಲ್‌ ವಿಧಿಸಲು ಮುಂದಾಗಿದೆ. ಈ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿರುವ ಎನ್‌ಎಚ್‌ಐಎ, ಫಾಸ್ಟಾಗ್‌ ಅಂಟಿಸದಿರುವುದರಿಂದ ಟೋಲ್‌ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬವಾ ಗುತ್ತಿದೆ. ಇದನ್ನು ತಡೆಯಲು ದುಪ್ಪಟ್ಟು ಶುಲ್ಕ ವಿಧಿಸಬೇಕು ಎಂದು ಸೂಚಿಸಿದೆ. ಫಾಸ್ಟಾಗ್‌ ನಿಯಮಗಳನ್ನು ಪಾಲಿಸ ದಿದ್ದರೆ ವಿಧಿಸಲಾಗುವ ದಂಡಗಳ ಕುರಿತು ಟೋಲ್‌ ಪ್ಲಾಜಾಗಳಲ್ಲಿ ಎಲ್ಲರಿಗೂ ಕಾಣಿಸುವಂತೆ ಮಾಹಿತಿ ಪ್ರದರ್ಶಿಸಬೇಕು. ಫಾಸ್ಟಾಗ್‌ ಇಲ್ಲದ …

Read More »

ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ;

ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸುವ ಭಕ್ತರು ಶ್ರೀಮಠದ ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆಯನ್ನು ಇನ್ನು ಮುಂದೆ ಅನುಸರಿಸಬೇಕಿದೆ. ಈ ಕುರಿತು ಶ್ರೀಮಠದ ಆಡಳಿತ ಮಂಡಳಿ ಮಹತ್ವದ ತೀರ್ಮಾನ ಕೈಗೊಂಡಿದೆ.   ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ತೆರಳುವ ಭಕ್ತರು ಆಗಸ್ಟ್ 15 ರಿಂದ ಭಾರತೀಯ ಸಂಪ್ರದಾಯದಂತೆ ವಸ್ತ್ರ ಧರಿಸಿ ಶ್ರೀಗಳ ದರ್ಶನ ಪಡೆಯಬೇಕು. ಪುರುಷರು ಧೋತಿ ಮತ್ತು ಶಲ್ಯ ಹಾಗೂ ಉತ್ತರೀಯವನ್ನು ಧರಿಸಬೇಕು. …

Read More »

ಪ್ರಾಧಿಕಾರ ವಿರುದ್ಧ ಎಫ್‌ಐಆರ್‌: ಕೃಷ್ಣ ಬೈರೇಗೌಡ

ಬೆಂಗಳೂರು: ಅಂಕೋಲಾದ ಶಿರೂರಿನ ಗುಡ್ಡ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ( ಎನ್‌ಎಚ್‌ಎ) ಬೇಜವಾಬ್ದಾರಿಯೇ ಕಾರಣ’ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಾಧಿಕಾರ ಮತ್ತು ಐಆರ್‌ಬಿ ಕಂಪೆನಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದಾಗಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಡ್ಡ ಕುಸಿತ ಆಗಬಹುದು ಎಂಬ ಬಗ್ಗೆ ಕಳೆದ ವರ್ಷವೇ ಮಾಹಿತಿ ನೀಡಿದ್ದೆವು. ಆದರೆ ಗುಡ್ಡ ಕುಸಿತ ತಡೆಗಟ್ಟುವ ಕೆಲಸ ಅವರು ಮಾಡಿಲ್ಲ. ಬುಧವಾರವೂ ತ್ವರಿತವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸ್ಪಂದಿಸಲಿಲ್ಲ. …

Read More »

ಸಮವಸ್ತ್ರ ಧರಿಸಿ 5 ಗಂಟೆ ಗಸ್ತು: ಪೊಲೀಸರಿಗೆ ಐಜಿಪಿ ಆದೇಶ

ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ 11ರ ವರೆಗೆ ಹಾಗೂ ಸಾಯಂಕಾಲ 6ರಿಂದ ರಾತ್ರಿ 9ರ ವರೆಗೆ ಒಟ್ಟು 5 ಗಂಟೆ ಗಸ್ತು ತಿರುಗುವಂತೆ ರಾಜ್ಯ ಡಿಜಿ-ಐಜಿಪಿ ಆಲೋಕ್‌ ಮೋಹನ್‌ ಪೊಲೀಸರಿಗೆ ಆದೇಶಿಸಿದ್ದಾರೆ. ಕಮಿಷನರೆಟ್‌ ವ್ಯಾಪ್ತಿಯಲ್ಲಿ ಡಿಸಿಪಿಗಳು, ಜಿಲ್ಲೆಗಳಲ್ಲಿ ಎಸ್‌ಪಿ ನೇತೃತ್ವದಲ್ಲಿ ಪೊಲೀಸರು ಗಸ್ತು ತಿರುಗಬೇಕು. ಪ್ರಮುಖ ಅಪರಾಧ ಪ್ರಕರಣಗಳು ಘಟಿಸಿದಾಗ ಸ್ಥಳಕ್ಕೆ ಭೇಟಿ ನೀಡಬೇಕು. ಆಯಾ ವಲಯ ಐಜಿಪಿಗಳು, ಹೆಚ್ಚುವರಿ ಪೊಲೀಸ್‌ ಆಯುಕ್ತರು ಠಾಣೆಗಳಿಗೆ ಭೇಟಿ ನೀಡಬೇಕು. ಶಾಲಾ ಕಾಲೇಜು …

Read More »

ಕೃಷ್ಣಾ- ಪಂಚಗಂಗಾ ನದಿಗಳ ಸಂಗಮ ಕ್ಷೇತ್ರದ ಸುಕ್ಷೇತ್ರ ನರಸಿಂಹವಾಡಿ ಶ್ರೀ ದತ್ತಮಂದಿರ ಜಲಾವೃತ

ಚಿಕ್ಕೋಡಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ ಮತ್ತು ಪಂಚಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಗಡಿಭಾಗದ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ಶ್ರೀ ದತ್ತ ಮಂದಿರ ಜಲಾವೃತಗೊಂಡಿದೆ. ಕೃಷ್ಣಾ ನದಿ ಮತ್ತು ಪಂಚಗಂಗಾ ನದಿ ಸಂಗಮ ಕ್ಷೇತ್ರವಾದ ನರಸಿಂಹವಾಡಿ ಶ್ರೀ ದತ್ತ ದೇವಸ್ಥಾನಕ್ಕೆ ಮಂಗಳವಾರ ನೀರು ನುಗ್ಗಿದೆ. ದೇವವಸ್ಥಾನ ಅರ್ಧ ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಹೀಗಾಗಿ ದೇವಸ್ಥಾನ …

Read More »

ಗಡಿಯಲ್ಲಿಯ ಘಾಟ್‌ ಹೆದ್ದಾರಿ ಭಾರೀ ಅಪಾಯಕಾರಿ-ಗುಡ್ಡ ಕುಸಿತಕ್ಕೆ ತಡೆ ಇಲ್ಲವೇ?

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಶುರು ವಾಯಿತೆಂದರೆ ಗಡಿ ಭಾಗ ಬೆಳಗಾವಿ ಜಿಲ್ಲೆಯಿಂದ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಹಾಗೂ ಮಣ್ಣು ಕುಸಿತ ಆಗುವುದು ಸಾಮಾನ್ಯವಾಗಿದ್ದು, ಕುಸಿತಕ್ಕೆ ತಡೆ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುವ ಧಾರಾಕಾರ ಮಳೆಯಿಂದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಅಪಾಯಕಾರಿ ಮಟ್ಟಕ್ಕೆ ತಲುಪುತ್ತವೆ. ಗುಡ್ಡ ಕುಸಿತ ಆಗುವುದು ಈ ಪ್ರದೇಶದಲ್ಲಿ ಸಾಮಾನ್ಯವಾಗಿದೆ. …

Read More »

ಚಿಕ್ಕೋಡಿ‌ | ಸಮಸ್ಯೆಗಳ ಆಗರದಲ್ಲಿ ಸರ್ಕಾರಿ ಪಾಲಿಟೆಕ್ನಿಕ್: ವಿದ್ಯಾರ್ಥಿಗಳ ಪರದಾಟ

ಚಿಕ್ಕೋಡಿ: ₹8 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ, ಆವರಣ ಗೋಡೆಯೇ ಇಲ್ಲ. ಬೋಧನೆಗೆ ಕಾಯಂ ಉಪನ್ಯಾಸಕರಿಲ್ಲ. ಕೊಳವೆಬಾವಿ ಇದ್ದರೂ, ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಕಾಲೇಜಿಗೆ ಬರಲು ಸರಿಯಾಗಿ ಬಸ್‌ ವ್ಯವಸ್ಥೆಯೂ ಇಲ್ಲ. ಹೀಗೆ ಸಾಲು ಸಾಲು ಸಮಸ್ಯೆಗಳಿಂದ ತಾಲ್ಲೂಕಿನ ಸದಲಗಾ ಹೊರವಲಯದ ಸರ್ಕಾರಿ ಪಾಲಿಟೆಕ್ನಿಕ್ ಬಳಲುತ್ತಿದೆ. ಸ್ಥಳೀಯ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಪ್ರಯತ್ನದಿಂದ ಇಲ್ಲಿ ಸುಸಜ್ಜಿತ ಕಟ್ಟಡ ತಲೆ ಎತ್ತಿ, …

Read More »