Breaking News

ರಾಷ್ಟ್ರೀಯ

ಬೈಂದೂರು: ಕುಸಿಯುತ್ತಿದೆ ಸೋಮೇಶ್ವರ ಗುಡ್ಡ

ಬೈಂದೂರು: ಪಡುವರಿ ಗ್ರಾಮದ ಸೋಮೇಶ್ವರ ಗುಡ್ಡದಲ್ಲಿ ಖಾಸಗಿ ಕಟ್ಟಡಕ್ಕೆ ರಸ್ತೆ ನಿರ್ಮಿಸಿದ ಪರಿಣಾಮ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದೆ. ನಿರಂತರ ಸುರಿಯುತ್ತಿರುವ ಮಳೆಯ ಅಬ್ಬರದ ಪರಿಣಾಮವಾಗಿ ಸೊಮೇಶ್ವರ-ದೊಂಬೆ ರಸ್ತೆಗೆ ಮಣ್ಣು ಕುಸಿಯುತ್ತಿದೆ ಎಂದು ಸಾರ್ವಜನಿಕರು ಬುಧವಾರ ಆಕ್ರೋಶ ವ್ಯಕ್ತಪಡಿಸಿದರು.   ಗುಡ್ಡವು ಯಾವುದೇ ಕ್ಷಣದಲ್ಲೂ ಕುಸಿಯುವ ಸಾಧ್ಯತೆ ಇದ್ದು, ಒಂದೊಮ್ಮೆ ಕುಸಿದರೆ ರಸ್ತೆಯ ಇನ್ನೊಂದು ಪಾರ್ಶ್ವದ ಗುಡ್ಡವು ಸೋಮೇಶ್ವರ ದೇವಾಲಯದ ಆವರಣ, ಕೆರೆ ಹಾಗೂ ಸುತ್ತಮುತ್ತ ಜರಿದು ಬೀಳಲಿದೆ ಎಂದಿದ್ದಾರೆ. …

Read More »

ಮೂಲ ಸೌಕರ್ಯ ವಲಯದಲ್ಲಿ ಹೂಡಿಕೆ ವರದಾನ: LICಗೆ ಶೇ 79ರಷ್ಟು ಗಳಿಕೆ

ಮುಂಬೈ: ದೇಶದ ಮೂಲ ಸೌಕರ್ಯ ವಲಯದ ಷೇರುಗಳಲ್ಲಿನ ಹೂಡಿಕೆಯು ಸರ್ಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಪಾಲಿಗೆ ವರದಾನವಾಗಿದೆ. ಒಂದು ವರ್ಷದಲ್ಲಿ ನಿಗಮದ ಷೇರಿನ ಮೌಲ್ಯದಲ್ಲಿ ಶೇ 79ರಷ್ಟು ಏರಿಕೆಯಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. ಎಚ್‌ಡಿಎಫ್‌ಸಿ ಲೈಫ್‌ ಮತ್ತು ಐಸಿಐಸಿಐ ಪ್ರುಡೆನ್ಶಿಯಲ್‌ ಲೈಫ್‌ ಕಂಪನಿಯು ಮಾಹಿತಿ ತಂತ್ರಜ್ಞಾನ, ಗ್ರಾಹಕ, ಬ್ಯಾಂಕಿಂಗ್‌, ಹಣಕಾಸು ಸೇವೆಗಳು ಮತ್ತು ವಿಮೆ (ಬಿಎಫ್‌ಎಸ್‌ಐ) ವಲಯಗಳಲ್ಲಿ ಹೆಚ್ಚು ಹೂಡಿಕೆ ಮಾಡಿವೆ. ಆದರೆ, …

Read More »

ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದ ಸರ್ಕಾರ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ. ಕನ್ನಡಿಗರ ಮೀಸಲಾತಿ ನೀಡುವ ವಿಧೇಯಕ ಪುನರ್ ಪರಿಶೀಲಿಸಲಾಗುವುದು. ಹೀಗಾಗಿ ತಕ್ಷಣಕ್ಕೆ ಮಸೂದೆ ಮಂಡಿಸದಿರಲು ನಿರ್ಧರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸಂತೋಷ್ ಲಾಡ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ನಾಲ್ಕು ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಸೂಕ್ತ …

Read More »

ಹುಬ್ಬಳ್ಳಿ | ಇಂಗ್ಲಿಷ್‌ ಮಾಧ್ಯಮ; ಶಿಕ್ಷಕರ ಕೊರತೆ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ಇನ್ನೂ ಆರು ಇಂಗ್ಲಿಷ್‌ ಮಾಧ್ಯಮದ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಇಲಾಖೆಯು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವವೂ ಸಲ್ಲಿಸಿದೆ. ಜಿಲ್ಲೆಯಲ್ಲಿ ಪ್ರಸ್ತುತ ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ ಶಹರ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದದಲ್ಲಿ ತಲಾ ಒಂದೊಂದು ಶಾಲೆ ಸೇರಿ ಒಟ್ಟು 8 ಕರ್ನಾಟಕ ಪಬ್ಲಿಕ್‌ ಶಾಲೆಗಳಿವೆ (ಕೆಪಿಎಸ್‌). ಇಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ ಬೋಧಿಸಲಾಗುತ್ತದೆ. ‘ಪೋಷಕರು ಹಾಗೂ ವಲಯ ವ್ಯಾಪ್ತಿಯ …

Read More »

270ಕ್ಕೂ ಹೆಚ್ಚು ನಕಲಿ ಖಾತೆ ಸೃಷ್ಟಿಸಿ ಅವ್ಯವಹಾರ: ಪೊಲೀಸ್ ಬಲೆಗೆ ಸೈಬರ್ ವಂಚಕರು

ಹುಬ್ಬಳ್ಳಿ: ಸೈಬರ್ ವಂಚಕರ ಜಾಲವನ್ನು ಪತ್ತೆ ಮಾಡಿರುವ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಮತ್ತು ಮುಂಬೈಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊಬೈಲ್, ಲ್ಯಾಪ್‌ಟಾಪ್ ಸೇರಿ ಕೆಲ ದಾಖಲೆ ವಶಪಡಿಸಿಕೊಂಡು, ಕೆಲ ಬ್ಯಾಂಕ್‌ಗಳ ಖಾತೆಗಳನ್ನು ನಿಷ್ಕ್ರಿಯಗೊಳಿಸಿ ₹ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ.   ದೆಹಲಿಯ ನಿಖಿಲಕುಮಾರ್‌ ರೌನಿ ಮತ್ತು ಸಚಿನ್‌ ಬೋಲಾ ಹಾಗೂ ಮುಂಬೈಯ ನಿಗಮ್ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, …

Read More »

ಪೊಲೀಸ್ ಬಲೆಗೆ ಸೈಬರ್ ವಂಚಕರು

ಹುಬ್ಬಳ್ಳಿ: ಸೈಬರ್ ವಂಚಕರ ಜಾಲವನ್ನು ಪತ್ತೆ ಮಾಡಿರುವ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಮತ್ತು ಮುಂಬೈಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೊಬೈಲ್, ಲ್ಯಾಪ್‌ಟಾಪ್ ಸೇರಿ ಕೆಲ ದಾಖಲೆ ವಶಪಡಿಸಿಕೊಂಡು, ಕೆಲ ಬ್ಯಾಂಕ್‌ಗಳ ಖಾತೆಗಳನ್ನು ನಿಷ್ಕ್ರಿಯಗೊಳಿಸಿ ₹ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ. ದೆಹಲಿಯ ನಿಖಿಲಕುಮಾರ್‌ ರೌನಿ ಮತ್ತು ಸಚಿನ್‌ ಬೋಲಾ ಹಾಗೂ ಮುಂಬೈಯ ನಿಗಮ್ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, ನ್ಯಾಯಾಂಗ …

Read More »

ಅನಂತನಾರಾಯಣ ವಾದ್ಯಾರ್ ಅವರಿಗೆ ವ್ಯಾಸಜ್ಯೋತಿ ಪ್ರಶಸ್ತಿ

ಬೆಂಗಳೂರು: ಭಾರತೀಯ ವಿದ್ಯಾಭವನ ಮತ್ತು ಜ್ಯೋತಿ ಚಾರಿಟಬಲ್ ಟ್ರಸ್ಟ್, ಬೆಂಗಳೂರು ಸಹಯೋಗದಲ್ಲಿ ನೀಡುವ 2024ನೇ ಸಾಲಿನ ‘ವ್ಯಾಸಜ್ಯೋತಿ ಪ್ರಶಸ್ತಿ’ಗೆ ವೇದಬ್ರಹ್ಮ ಶ್ರೀ ಅನಂತನಾರಾಯಣ ವಾದ್ಯಾರ್ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಯು ನಗದು ಮತ್ತು ಫಲಕವನ್ನು ಒಳಗೊಂಡಿದೆ. ಜು. 21ರಂದು ್ಗ ಭಾರತೀಯ ವಿದ್ಯಾ ಭವನದ ಕೆ.ಆರ್.ಜಿ. ಸಭಾಂಗಣದಲ್ಲಿ ಬೆಳಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ವಿಶ್ವಸ್ಥರಾದ ಎಂ. ನರಸಿಂಹನ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್ …

Read More »

ಜಾರಿ ಬಿದ್ದ ಶಾಸಕ ರೇವಣ್ಣ

ಹೊಳೆನರಸೀಪುರ: ತಾಲ್ಲೂಕಿನ ಹರದನಹಳ್ಳಿಯ ಶಿವನ ದೇವಾಲಯದಲ್ಲಿ ಬುಧವಾರ ಬೆಳಗಿನ ಜಾವ ಪೂಜೆ ಸಲ್ಲಿಸಿ ಬರುವಾಗ ಮೆಟ್ಟಿಲಿನ ಮೇಲೆ ಕಾಲು ಜಾರಿಬಿದ್ದ ಶಾಸಕ ಎಚ್.ಡಿ. ರೇವಣ್ಣ ಅವರ ಬಲಪಕ್ಕೆಯ 6 ನೇ ಮೂಳೆಯಲ್ಲಿ ಸಣ್ಣ ಬಿರುಕು ಬಿಟ್ಟಿದೆ. 7ನೇ ಮೂಳೆಗೆ ಹೆಚ್ಚು ಹಾನಿಯಾಗಿದೆ.   ‌ಅವರಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಧನಶೇಖರ್, ಮೂಳೆ ತಜ್ಞರಾದ ಡಾ.ಜೆ.ಕೆ. ದಿನೇಶ್, ಡಾ. ದಿನೇಶ್ ಕುಮಾರ್ ಹಾಗೂ ಡಾ. ಸತ್ಯಪ್ರಕಾಶ್, ತೀವ್ರ ನಿಗಾ ಘಟಕದಲ್ಲಿ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಕ್ಯಾಮ್​; ಮಾಜಿ ಸಚಿವ ನಾಗೇಂದ್ರ ಪತ್ನಿ ED ವಶಕ್ಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ. ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್​ ಶಾಸಕ ಬಸನ್​ಗೌಡ ದದ್ದಲ್​ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು .ಪ್ರಕರಣಕ್ಕೆ ಸಂಬಂಧಿಸಿದಂತೆ …

Read More »

SIT’ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ,ಮುಡಾ’ ಹಗರಣದಲ್ಲಿ ಸಿಎಂ ಇಡೀ ಕುಟುಂಬವೆ ಭಾಗಿ

SIT’ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ ಶಿವಮೊಗ್ಗ : ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, SIT ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಎಂದು ವಾಗ್ದಾಳಿ ನಡೆಸಿದರು.   ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಿಷ್ಠ ನೋಟಿಸ್ ಕೊಟ್ಟು ನಾಗೇಂದ್ರಗೆ ಅಧಿಕಾರಿಗಳು ವಿಚಾರಣೆಗೆ ಕರೆದಿಲ್ಲ. ಎಸ್‌ಐಟಿ ಅಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ …

Read More »