ಬೆಂಗಳೂರು, ಜುಲೈ 12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದೆ. ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿವೈ …
Read More »ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪತ್ರ ಚಳವಳಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ, ಬಸವ ಜಯಮೃತ್ಯುಂಜಯ ಶ್ರೀ, ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ನೂರಕ್ಕೂ ಹೆಚ್ಚು ಪದಾಧಿಕಾರಿಗಳೊಂದಿಗೆ ಭೇಟಿ ನೀಡಿದರು. ಬಸವ ಜಯಮೃತ್ಯುಂಜಯ ಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪತ್ರ ನೀಡಿ, ಈ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮನವಿ …
Read More »ಬೆಂಗಳೂರಿನಲ್ಲಿ ಮನೆ ಬಾಡಿಗೆ ಇಳಿಕೆ ಆರಂಭ, ಹೊರ ವಲಯದಲ್ಲಿ ಬೇಡಿಕೆ
ಬೆಂಗಳೂರು, ಜುಲೈ 11: ಕಳೆದ ಎರಡು ವರ್ಷಗಳಿಂದ ಬಾಡಿಗೆ (rent) ಬೇಡಿಕೆಯ ಹೆಚ್ಚಳದ ನಂತರ ಬೆಂಗಳೂರಿನ ಟೆಕ್ ವೃತ್ತಿಪರರು ಈಗ ಐಟಿ ಕೇಂದ್ರಗಳಿಂದ ನಗರದ ಹೊರವಲಯಕ್ಕೆ ಹೆಚ್ಚು ಕೈಗೆಟುಕುವ ವಸತಿಗಾಗಿ ಸ್ಥಳಾಂತರಗೊಳ್ಳುತ್ತಿದ್ದಾರೆ. ವೈಟ್ಫೀಲ್ಡ್ನಂತಹ ಐಟಿ ಉಪನಗರಗಳಲ್ಲಿನ ಬಾಡಿಗೆಗಳು ವರ್ಷದಿಂದ ವರ್ಷಕ್ಕೆ 15-20% ರಷ್ಟು ಕಡಿಮೆಯಾಗಿದೆ ಎಂದು ಬ್ರೋಕರ್ಗಳು ತಿಳಿಸಿದ್ದಾರೆ. ಇತ್ತೀಚೆಗೆ, ಐಟಿಯಲ್ಲಿ ಕೆಲಸ ಮಾಡುವ ದಂಪತಿಗಳು ಸರ್ಜಾಪುರದಿಂದ ಸುಮಾರು 5 ಕಿಮೀ ದೂರದ ಹೊರವಲಯಕ್ಕೆ ಹೋಗಲು ನಿರ್ಧರಿಸಿದರು. ಅವರು 38,000 …
Read More »ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು, : ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್ಗಳ ತಿದ್ದುಪಡಿಗೂ ಇದೆ ಅವಕಾಶ ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ …
Read More »ಸರ್ಕಾರಕ್ಕೆ 7 ಪ್ರಮುಖ ಬೇಡಿಕೆ ಮುಂದಿಟ್ಟ ಸರ್ಕಾರಿ ನೌಕರರು
ನವದೆಹಲಿ, ಜುಲೈ 11: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಸರ್ಕಾರಿ ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೇಲೆ ಸರ್ಕಾರಿ ನೌಕರರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಪುಟ ಕಾರ್ಯದರ್ಶಿಗೆ ಪತ್ರ ಬರೆದಿರುವ ಸರ್ಕಾರಿ ನೌಕರರು 8ನೇ ವೇತನ ಆಯೋಗ ರಚನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಮನವಿ …
Read More »2ಎ ಮೀಸಲಾತಿಗೆ ಸದನದಲ್ಲಿ ಆಗ್ರಹಿಸುವೆ: ಶಾಸಕ ಕಾಶಪ್ಪನವರ
ಇಳಕಲ್: ‘ಲಿಂಗಾಯತ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಅಡಿ ಸೇರಿಸಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ 28 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ನ್ಯಾಯ ಸಿಗುವವರೆಗೆ ಈ ಹೋರಾಟ ನಿಲ್ಲದು, ಸಂದರ್ಭ ಬಂದರೆ ಅಧಿಕಾರ ತ್ಯಾಗ ಮಾಡಿ ಹೋರಾಟದಲ್ಲಿ ಪಾಲ್ಗೊಳ್ಳುವೆ’ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ನಗರದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೀಸಲಾತಿಗಾಗಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿ ನೀಡಿದ …
Read More »ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ
ಬೆಳಗಾವಿ : ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಬಲಿ** ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಶಂಕಿತ ಡೆಂಘಿ ಜ್ವರಕ್ಕೆ ಬಾಲಕಿ ಸಾವನ್ನಪ್ಪಿದ್ದಾಳೆ. 11 ವರ್ಷದ ಶ್ರೇಯಾ ಕೃಷ್ಣಾ ದೇವದಾತೆ, ತಂದೆ, ಡೆಂಗಿ ಜ್ವರದ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶ್ರೇಯಾ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ನಿವಾಸಿಯಾಗಿದ್ದು, ಥೈಪಾಡ್ನಿಂದ ಬಳಲುತ್ತಿದ್ದಳು. ಈ ಕುರಿತು, ಡಿಹೆಚ್ಒ ಮಹೇಶ ಕೋಣಿ, ಜಿ ಬಿ ಏನ್ 7 …
Read More »ಗುರುಸಿದ್ಧದೇವ ಶಿವಾಚಾರ್ಯರ ಪುಣ್ಯಸ್ಮರಣೋತ್ಸವ 17ರಂದು
ಬಾದಾಮಿ: ಶಿವಯೋಗಮಂದಿರ ಸಮೀಪದ ಮಲಪ್ರಭಾ ನದಿ ದಂಡೆಯ ಬಸವೇಶ್ವರ ಪುಣ್ಯಕ್ಷೇತ್ರದಲ್ಲಿ ಜುಲೈ 17ರಂದು ಬಂದಗದ್ದೆ, ಕೆಳದಿ ಸಂಸ್ಥಾನ ರಾಜಗುರು ಹಿರೇಮಠ ಮತ್ತು ಮಂಗಳೂರ ಮಠದ ಗುರುಸಿದ್ಧದೇವ ಶಿವಾಚಾರ್ಯರ 15ನೇ ಪುಣ್ಯಸ್ಮರಣೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಸಂಸ್ಥಾನ ಹಿರೇಮಠ ಬಂದಗದ್ದೆ, ಕೆಳದಿ ಮಂಗಳೂರು ಮಠದ ಮೃತ್ಯುಂಜಯ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 6 ಗಂಟೆಗೆ ಗುಳೇದಗುಡ್ಡ ಮುರುಘಾಮಠದ ಕಾಶಿನಾಥ ಸ್ವಾಮೀಜಿ ಷಟ್ ಸ್ಥಲ ಧ್ವಜಾರೋಹಣ ನೆರವೇರಿಸುವರು. ಲಿಂ. ಗುರುಸಿದ್ಧದೇವ …
Read More »ಕೋತಿ ಕಚ್ಚಿ 8 ಮಂದಿಗೆ ಗಾಯ
ಬಾದಾಮಿ: ಬನಶಂಕರಿ ರಸ್ತೆಯ ಕಾಳಿದಾಸ ಶಿಕ್ಷಣ ಸಂಸ್ಥೆಯ ಸಮೀಪ ಮಂಗಳವಾರ ಸಂಜೆ ಕಪ್ಪು ಕೋತಿಯೊಂದು ಮಹಿಳೆಯರು ಸೇರಿದಂತೆ ಎಂಟಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ ಎಂದು ಗಾಯಗೊಂಡ ಮಹಾದೇವ ಪತ್ರಿಕೆಗೆ ಹೇಳಿದರು. ಅರಣ್ಯ ಇಲಾಖೆ ಸಿಬ್ಬಂದಿ ಕೋತಿಯನ್ನು ಹಿಡಿದು ಬೇರೆಡೆ ಸಾಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಕೋತಿ ನೆಗೆದಾಡುತ್ತ ಜನರ ತಲೆ, ಕಾಲು, ಬೆನ್ನು ಮತ್ತು ಕೈಗೆ ಕಚ್ಚಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗಾಯಗೊಂಡವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಗೆ ಭೂಮಿಪೂಜೆ
ಇಳಕಲ್: ‘ಬಡವರಿಗೆ, ಕೂಲಿಕಾರರಿಗೆ ರಿಯಾಯ್ತಿ ದರದಲ್ಲಿ ಊಟ, ಉಪಹಾರ ನೀಡುವ ಇಂದಿರಾ ಕ್ಯಾಂಟಿನ್ ಹುನಗುಂದದಲ್ಲಿ ಮಂಜೂರಾಗಿದ್ದರೂ, ಹಿಂದಿನ ಸರ್ಕಾರ ಹಾಗೂ ಆಗಿನ ಶಾಸಕರು ದುರುದ್ದೇಶದಿಂದ ಆರಂಭಿಸಿರಲಿಲ್ಲ’ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಆರೋಪಿಸಿದರು. ಅವರು ಮಂಗಳವಾರ ಇಲ್ಲಿಯ ಪೊಲೀಸ್ ಠಾಣೆಯ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟಡದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ‘ಕೆಲವೇ ತಿಂಗಳುಗಳಲ್ಲಿ ಕ್ಯಾಂಟಿನ್ ಅರಂಭವಾಗಲಿದೆ. ಕೇವಲ ₹ 5 ಮತ್ತು …
Read More »