Breaking News

ರಾಷ್ಟ್ರೀಯ

ಪ್ರಮಾಣ ವಚನ ಸ್ವೀಕರಿಸಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ಸಿಟಿ ರವಿ, ಕಿವಿ ಹಿಂಡಿ ಅಭಿನಂದಿಸಿದ ಸಿಎಂ!

ಬೆಂಗಳೂರು: ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ (Member Of Legislative Assembly) ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ (MLA Oath Ceremony) ವೇಳೆ ಅನೇಕ ಸದಸ್ಯರು ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಕಾಲು ಮುಟ್ಟಿ ಆಶೀರ್ವಾದ ಪಡೆದರು. ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣ …

Read More »

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ ಬಾಗಲಕೋಟೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತಪಟ್ಟ ಘಟನೆ ಬಾಗಲಕೋಟೆಯ ಬೀಳಗಿ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಜಾನಮಟ್ಟಿ ಲಮಾಣಿ ತಾಂಡಾ 1 ಗ್ರಾಮದ ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎನ್ನಲಾಗಿದೆ. ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀಳಗಿ ಪಟ್ಟಣದಲ್ಲಿರುವ ಬಸವ ಪಾಲಿ ಕ್ಲಿನಿಕ್ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ, ಅದರಂತೆ ಬೆಳಿಗ್ಗೆ …

Read More »

ಫಿಟ್ನೆಸ್ ಮೇಂಟೇನೂ ಇಲ್ಲ, ಚಿಕನ್, ಮಟನ್ನೂ ಇಲ್ಲ! ಒಗ್ಗದ ಜೈಲೂಟ ತಿನ್ನಲು ದರ್ಶನ್ ಪರದಾಟ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ನಟ ದರ್ಶನ್ (Actor Darshan and Gang) ಮತ್ತು ಸಹಚರರು ಜೈಲು ಪಾಲಾಗಿದ್ದಾರೆ. ಆದರೆ ನಟ ದರ್ಶನ್ ಜೈಲೂಟ ತಿನ್ನಲು ಒಗ್ಗದೆ ಪರದಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜೈಲಿನಿಂದ ಹೊರಗಿದ್ದಾಗ ಐಷಾರಾಮಿ ಜೀವನದ ಜೊತೆಗೆ ಬಿಂದಾಸ್ ಆಗಿ ಇರುತ್ತಿದ್ದ ದರ್ಶನ್, ಫಿಟ್ನೆಸ್ ಮೇಂಟೈನ್ ಮಾಡಲು‌ ಚಿಕನ್, ಮಟನ್, ಪ್ರೂಟ್ಸ್ ಜೊತೆಗೆ ಜ್ಯೂಸ್ ಸೇವಿಸುತ್ತಿದ್ದರು. ಆದರೆ ಈಗ ಜೈಲಿನಲ್ಲಿ ಸರಿಯಾಗಿ …

Read More »

ಜಾತಿಗೊಂದು ಡಿಸಿಎಂ ಹುದ್ದೆ ಬೇಕು: ಸಚಿವ ರಾಜಣ್ಣ

ಬಾಗಲಕೋಟೆ: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಕೆಲವು ಜಾತಿಗೆ ಆದ್ಯತೆ ನೀಡಲಯ ಸಮುದಾಯ ಆಧಾರಿತ ಡಿಸಿಎಂ ಹುದ್ದೆ ನೀಡಬೇಕು ಎಂಬುದು ನಮ್ಮ ಪ್ರಬಲ ಬೇಡಿಕೆ ಇದ್ದೇ ಇದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆ ಆಕಾಂಕ್ಷಿ ಅಲ್ಲ. ಮುಂದೆ ನಾನು ಚುನಾವಣೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಸಮುದಾಯ ಆಧಾರಿತ ಡಿಸಿಎಂ ಹುದ್ದೆಯ …

Read More »

ಸೋಮವಾರದಿಂದ ಲೋಕಸಭೆ ಅಧಿವೇಶನ: ಸ್ಪೀಕರ್ ಯಾರು?

ನವದೆಹಲಿ, ಜೂನ್ 23: ಲೋಕಸಭೆ ಚುನಾವಣೆ 2024ರ ಬಳಿಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರ ಸೋಮವಾರ ಆರಂಭವಾಗಲಿದೆ. ಲೋಕಸಭೆ ಸದಸ್ಯರ ಪ್ರಮಾಣ ವಚನ ಎರಡು ದಿನಗಳ ಕಾಲ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಜೆಪಿ ನಾಯಕ ಮತ್ತು 7 ಅವಧಿಗೆ ಸದಸ್ಯರಾಗಿ ಆಯ್ಕೆಯಾದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ …

Read More »

ದರ್ಶನ್​ ನ್ಯಾಯಾಂಗ ಬಂಧನ: ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದ ರೇಣುಕಾಸ್ವಾಮಿ ತಂದೆ

ಚಿತ್ರದುರ್ಗ, ಜೂನ್​ 22: ನಟ ದರ್ಶನ್ (Darshan)​ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ದರ್ಶನ್​ ಜೈಲು ಸೇರಿದ್ದಾರೆ. ಈ ವಿಚಾರವಾಗಿ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ (Renukaswamy) ತಂದೆ ಕಾಶಿನಾಥಯ್ಯ ಪ್ರತಿಕ್ರಿಯಿಸಿದ್ದು, ಪೊಲೀಸರ ನ್ಯಾಯಯುತ ಶ್ರಮದಿಂದ ದರ್ಶನ್‌ ಜೈಲುಪಾಲಾಗಿದ್ದಾರೆ. ನನ್ನ ಮಗ ಅನುಭವಿಸಿದ ನೋವಿನ ಶಿಕ್ಷೆ ಆರೋಪಿಗಳಿಗೂ ಆಗಬೇಕು. ಜೈಲು ಶಿಕ್ಷೆ, ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದಿದ್ದಾರೆ. ನನ್ನ ಮಗ ರೇಣುಕಾಸ್ವಾಮಿಗೆ ಯಾವ ರೀತಿ ಗಾಯಗಳು ಆಗಿದ್ದವೋ ಅದೇ ರೀತಿ ಗಾಯ ಆಗಬೇಕು, ವಿದ್ಯುತ್ ಶಾಕ್ …

Read More »

ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ; ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಜೆಡಿಎಸ್ ಕಾರ್ಯಕರ್ತನ ಮೇಲೆ ಸಲಿಂಗಕಾಮದ ಆರೋಪದ ಮೇಲೆ ಅರೆಸ್ಟ್ ಆಗಿರುವ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇವರು. ರೇವಣ್ಣ ಕುಟುಂಬದ ಮತ್ತೊಂದು ಪ್ರಕರಣ ಸಧ್ಯ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ಸಲಿಂಗಕಾಮದ ಆರೋಪದ ಮೇಲೆ ಶನಿವಾರ ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ವಿಚಾರಣೆಗೆ ಬಂದಾಗ ವಶಕ್ಕೆ ಪಡೆದುಕೊಂಡಿದ್ದಾರೆ. …

Read More »

ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ

ಮೇಷ: ಕೆಲಸಕ್ಕೆ ವಿರಾಮವಾಗಿರುವುದರಿಂದ ಮನಸ್ಸಿಗೂ ವಿರಾಮ. ಸಂಸಾರದ ಆವಶ್ಯ ಕತೆಗಳತ್ತ ಗಮನ. ಉದ್ಯಮಿಗಳಿಗೆ ಅಭಿವೃದ್ಧಿಯ ಮಾರ್ಗಗಳ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಸಂಜೆ ಬಂಧು- ಮಿತ್ರರ ಭೇಟಿ. ವೃಷಭ: ಕೆಲವರಿಗೆ ಅನಿರೀಕ್ಷಿತ ಧನಪ್ರಾಪ್ತಿಯ ಸಾಧ್ಯತೆ. ವ್ಯವಹಾರ ವಿಸ್ತರಣೆಗೆ ವಿವಿಧ ಮೂಲಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಸಾಮಾಜಿಕ ಸಮಸ್ಯೆಗಳ ಕುರಿತು ಚಿಂತನೆ. ಮಿಥುನ: ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಬಂಧುಗಳ ಆಗಮನ. ಅನವಶ್ಯ ವೆಚ್ಚಗಳ ಬಗ್ಗೆ ಎಚ್ಚರ. …

Read More »

PFʼ ಖಾತೆದಾರರೇ ಗಮನಕ್ಕೆ : ʻUANʼ ಸಂಖ್ಯೆಗೆ ʻಆಧಾರ್‌ ಕಾರ್ಡ್‌ʼ ಲಿಂಕ್‌ ಮಾಡೋದು ಕಡ್ಡಾಯ

ನವದೆಹಲಿ : ಪಿಎಫ್ ಖಾತೆದಾರರು ತಮ್ಮ ಯುಎಎನ್ ಸಂಖ್ಯೆಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, ಪಿಎಫ್ ಮೊತ್ತವನ್ನು ಹಿಂಪಡೆಯುವಾಗ ಸಮಸ್ಯೆಗಳು ಉಂಟಾಗುತ್ತವೆ. ಸಾಮಾಜಿಕ ಭದ್ರತಾ ಸಂಹಿತೆ, 2020 ರ ಸೆಕ್ಷನ್ 142 ರ ಪ್ರಕಾರ, ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಮತ್ತು ಕಾರ್ಮಿಕರು ತಮ್ಮ ಆಧಾರ್ ಖಾತೆಯನ್ನು ಇಪಿಎಫ್ ಖಾತೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಲಿಂಕ್ ಪ್ರಕ್ರಿಯೆಯನ್ನು ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಮಾಡಬಹುದು. ಆನ್ ಲೈನ್ ನಲ್ಲಿ ಹೇಗೆ …

Read More »

ಇಲ್ಲಿದೆ ಇಂದಿನ ’53ನೇ GST ಕೌನ್ಸಿಲ್ ಸಭೆ’ಯ ಪ್ರಮುಖ ಅಂಶಗಳು

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 53 ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್ಟಿ ಅನುಸರಣೆಯನ್ನು ಸುವ್ಯವಸ್ಥಿತಗೊಳಿಸುವ ಮತ್ತು ತೆರಿಗೆದಾರರ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಶಿಫಾರಸುಗಳನ್ನು ತರಲಾಯಿತು. ಹೊಸ ಸರ್ಕಾರ ರಚನೆಯಾದ ನಂತರ ಇದು ಜಿಎಸ್ಟಿ ಮಂಡಳಿಯ ಮೊದಲ ಸಭೆಯಾಗಿದೆ. ಹೀಗಿವೆ ಇಂದಿನ 53ನೇ ಜಿಎಸ್ಟಿ ಕೌನ್ಸಿಲ್ ಸಭೆಯ ಹೈಲೈಟ್ಸ್ ಬಡ್ಡಿ ಮತ್ತು ದಂಡ ಮನ್ನಾ: 2017-18, 2018-19 ಮತ್ತು 2019-20ರ ಹಣಕಾಸು …

Read More »