Breaking News

ರಾಷ್ಟ್ರೀಯ

ಗೋಕಾಕ | ನಕಲಿ ನೋಟು ಪತ್ತೆ: ಐವರ ಬಂಧನ

ಗೋಕಾಕ: ಗೋಕಾಕ-ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದನ್ನು ತಪಾಸಣೆ ಮಾಡಿದಾಗ ₹100, ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು, ಐವರನ್ನು ಬಂಧಿಸಲಾಗಿದೆ. ಈಚೆಗೆ ಬೆಳಗಿನ ಜಾವ ಗಸ್ತು ಪೊಲೀಸರು ನಡೆಸಿದ ತಪಾಸಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.   ಮೂಡಲಗಿ ತಾಲ್ಲೂಕಿನ ಅರಭಾವಿಯ ಅನ್ವರ ಮೊಹ್ಮದಸಲೀಂ ಯಾದವಾಡ, ಮಹಾಲಿಂಗಪೂರದ ಸದ್ದಾಮ ಮುಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ ಮಹಾದೇವ ವನಶೆಣವಿ ಮತ್ತು ವಿಠ್ಠಲ …

Read More »

ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌: ಹೆಬ್ಬಾಳಕರ

ಬೆಳಗಾವಿ: ‘ತಮ್ಮ ಕೆಲಸಗಳಿಗೆ ಉತ್ತಮ ಮೊಬೈಲ್ ಅಗತ್ಯ ಎಂದು ಅಂಗನವಾಡಿ ಕಾರ್ಯಕರ್ತೆಯರು ಕಳೆದ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದರು. ಇದಕ್ಕೆ ಹಿಂದಿನ ಬಿಜೆಪಿ ಸರ್ಕಾರ ಸ್ಪಂದಿಸಿರಲಿಲ್ಲ. ನಾನು ಮುಖ್ಯಮಂತ್ರಿಗೆ, ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದರಿಂದ ಮೊಬೈಲ್‌ ಮಂಜೂರಾಗಿವೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ. ‘ಮೊಬೈಲ್ ಮಂಜೂರು ಮಾಡಿದ್ದು ಕೇಂದ್ರ ಸರ್ಕಾರ’ ಎಂಬ ಶಾಸಕ ಅಭಯ ಪಾಟೀಲ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಕೇಂದ್ರ ಸರ್ಕಾರ ಪೋಷಣ್ ಅಭಿಯಾನದ ಅಡಿಯಲ್ಲಿ …

Read More »

ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

ವಿಜಯಪುರ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡುತ್ತಿದ್ದಾರೆ ಎಂಬ ಭೀತಿಯಿಂದ ತೆಪ್ಪದ ಮೂಲಕ ನದಿಯಲ್ಲಿ ಹೊರಟಿದ್ದಾಗ ಬಿರುಗಾಳಿಗೆ ತೆಪ್ಪ ಮುಳುಗಿದ ಘಟನೆ ಮಂಗಳವಾರ ಸಂಜೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದು, ಓರ್ವನ ಶವ ಪತ್ತೆಯಾಗಿದೆ.   ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಬಳಿ ಕೃಷ್ಣಾ ನದಿಗೆ ನಿರ್ಮಿಸಿರುವ ಏತ ನೀರಾವರಿ ಜಾಕವೆಲ್ ಬಳಿ ದುರಂತ ಸಂಭವಿಸಿದೆ. 35 ವರ್ಷದ ಪುಂಡಲೀಕ ಎನ್ ಕಂಚಿ ಎಂಬಾತನ …

Read More »

ಉದ್ಯೋಗ ವಾರ್ತೆ : ‘KSRTC’ ಯಿಂದ 13,000 ಚಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : KSRTC ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. KSRTC 13 ಸಾವಿರ ಬಸ್ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ. …

Read More »

ವಸತಿ ರಹಿತರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್..!

ಚನ್ನಪಟ್ಟಣ : ಸೈಟ್ ಇಲ್ಲದವರಿಗೆ ಸೈಟ್ ಹಾಗೂ ಮನೆ ಇಲ್ಲದವರಿಗೆ ಮನೆ ಕೊಡಿಸುವ ಕಾರ್ಯಕ್ರಮವನ್ನು ರೂಪಿಸಿ ಅದನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನನ್ನದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚನ್ನಪಟ್ಟಣದ ಮಳೂರಿನಲ್ಲಿ ಇಂದು ಹಮ್ಮಿಕೊಂಡಿದ್ದ ‘ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಬೃಹತ್ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. ಜನರನ್ನು ಸರ್ಕಾರವೇ ನೇರವಾಗಿ ಈ ಕಾರ್ಯಕ್ರಮದಡಿ ಸಂಪರ್ಕಿಸುತ್ತಿದೆ. ಪ್ರತಿನಿತ್ಯ ಜನರು ಸರ್ಕಾರಿ ಕಚೇರಿಗಳಿಗೆ …

Read More »

ಖಾಸಗಿ ಕಂಪನಿಯಿಂದ ಬಾರದ ಹಣ; ನಾಲ್ವರು ಕೆಂಪು ಮೆಣಸಿನಕಾಯಿ ಬೆಳೆಗಾರರು ಆತ್ಮಹತ್ಯೆ ಯತ್ನ

ಬಳ್ಳಾರಿ: ತಮ್ಮ ಉತ್ಪನ್ನಗಳನ್ನು ಖರೀದಿಸಿದ ಖಾಸಗಿ ಕಂಪನಿಯು ಕಳೆದ ಒಂದೂವರೆ ವರ್ಷಗಳಿಂದ ಹಣವನ್ನು ಪಾವತಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ನಾಲ್ವರು ಮೆಣಸಿನಕಾಯಿ ರೈತರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರುದ್ರೇಶ್ (55), ಹನುಮಂತ್ (40), ಶೇಖರ್ (45) ಮತ್ತು ಕುನೇಶ್ (50) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಣ ಪಾವತಿ ಮಾಡಲು ವಿಳಂಬ ಮಾಡಿದ್ದನ್ನು ವಿರೋಧಿಸಿ ಇತರ ರೈತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಷ ಸೇವಿಸಿದ್ದಾರೆ. ಅವರನ್ನು …

Read More »

ನನಗೆ ಜಾಮೀನು ಕೊಡಿಸಿ: ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ‘ನಟ ದರ್ಶನ್’ ಕರೆ ಮಾಡಿ ದುಂಬಾಲು

ಬೆಂಗಳೂರು: ನನಗೆ ಜೈಲಿನಲ್ಲಿ ಇರೋಕೆ ಆಗ್ತಿಲ್ಲ. ನನಗೆ ಜಾಮೀನು ಕೊಡಿಸುವಂತೆ ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ಕರೆ ಮಾಡುತ್ತಿರುವಂತ ನಟ ದರ್ಶನ್ ದುಂಬಾಲು ಬೀಳುತ್ತಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವಂತ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಟೆಲಿಪೋನ್ ಬೂತ್ ನಿಂದ ವಾರಕ್ಕೆ ಮೂರು ಬಾರಿ ಕರೆ ಮಾಡೋದಕ್ಕೆ ಜೈಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ. ತನ್ನ ಸರದಿಯಲ್ಲದೇ ಜೈಲಿನಲ್ಲಿರುವಂತ …

Read More »

ಲೋನಾವಾಲಾ ದುರಂತ ; ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹಗಳು ಪತ್ತೆ

ಮುಂಬೈ: ಭಾನುವಾರ ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹ ಪತ್ತೆಯಾಗಿದೆ. ಭಾನುವಾರ ಮಧ್ಯಾಹ್ನ ಕುಟುಂಬವೊಂದು ವಿಹಾರಕ್ಕೆಂದು ಹೋಗಿದ್ದ ವೇಳೆ ಜಲಪಾತದಲ್ಲಿ ಕೊಚ್ಚಿ ಹೋಗಿದ್ದರು. ಕೂಡಲೇ ಶೋಧ ಮತ್ತು ರಕ್ಷಣಾ ತಂಡಗಳು ಅಲ್ಲಿಗೆ ಧಾವಿಸಿ ನೀರಲ್ಲಿ ನಾಪತ್ತೆಯಾದವರಿಗಾಗಿ ಹುಡುಕಾಟ ಆರಂಭಿಸಿತ್ತು. ಮಹಿಳೆ ಮಗು ಸೇರಿ ಐವರ ಶವಗಳನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ. ಹಡಪ್ಸರ್ ಪ್ರದೇಶದ ಅನ್ಸಾರಿ ಕುಟುಂಬದ ಸದಸ್ಯರು …

Read More »

ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

ಹುಬ್ಬಳ್ಳಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ 2024-25ರ ವಾರ್ಷಿಕ ಯೋಜನೆಯಲ್ಲಿ ಕರ್ನಾಟಕದ ಒಟ್ಟು 470 ಕಿ.ಮೀ. ರಸ್ತೆ ಅಭಿವೃದ್ಧಿಗಾಗಿ 8,006 ಕೋಟಿ ರೂ., ಹೊಸದಾಗಿ 459 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು 15 ಕೋಟಿ ರೂ. ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಹೆದ್ದಾರಿ ಕಾಮಗಾರಿ ಯೋಜನೆ ಅನುಮೋದನೆಗೆ ಸಂಸದ ಮನವಿ ಸಂಸದ ಬಿ.ವೈ. ರಾಘವೇಂದ್ರ …

Read More »

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಈ ವಿಷಯ ಈಗ ಬಹಳ ಚರ್ಚೆಯಲ್ಲಿದೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಈಗ ಯಾವುದೇ ಚುನಾವಣೆ ಇಲ್ಲ. ಆದರೆ ಮತಗಳನ್ನು ತಂದುಕೊಡುವ ಹಾಗೂ ಪಕ್ಷವನ್ನು ಸಂಘಟಿಸುವವರಿಗೆ ಈ ಹುದ್ದೆ ನೀಡಬೇಕು ಎಂದರು. ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನು ಕೇಳಿಲ್ಲ. ಅದೇನೇ ಇದ್ದರೂ ಹೈಕಮಾಂಡ್ ಮಟ್ಟದಲ್ಲಿ …

Read More »