ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಡ್ರದ ಕೊಲ್ಲಾಪೂರ ಜಿಲ್ಲೆಯ ರಾಧಾನಗರಿ ತಾಲೂಕಿನ ಕಾಳಮ್ಮವಾಡಿ ಜಲಾಶಯಕ್ಕೆ ನಿಪ್ಪಾಣಿ ಮೂಲದ 13 ಜನ ಯುವಕರು ಪ್ರವಾಸಕ್ಕೆ ತೆರಳಿದರು. ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. ನಿಪ್ಪಾಣಿಯ ಗಣೇಶ ಕದಮ್, ಪ್ರತೀಕ್ ಪಾಟೀಲ್ ನೀರುಪಾಲಾದ ಯುವಕರು. ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆಯ ಅಬ್ಬರ ಮುಂದುವರಿದಿದೆ. ಆದರೂ ಶವ …
Read More »ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್ ಮಂಜುಳಾ ನಾಯಿಕ
ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ ನದಿ ತುಂಬಿ ಹರಿಯುತಿದ್ದು ಭವಿಷ್ಯದಲ್ಲಿ ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಿಕ ಅವರು ಶನಿವಾರ ಸಂಕೇಶ್ವರಕ್ಕೆ ಭೇಟಿ ನೀಡಿ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ವಿಕ್ಷಿಸಿದರು. ಮುಂದಿನ ದಿನಗಳಲ್ಲಿ ಹಿರಣ್ಯಕೇಶಿ ನದಿಗೆ ಹೆಚ್ಚು ನೀರು ಬಂದರೆ ನದಿ ಗಲ್ಲಿ, ಶಂಕರಲಿಂಗ ಮಠ, ಹೊಸ …
Read More »ಪ್ರಜ್ವಲ್ ಬಳಿ ಇತ್ತು 15 ಸಿಮ್ ಕಾರ್ಡ್ʼಗಳು.! ಒಂದು ನಂಬರ್ ಬ್ಲಾಕ್ ಮಾಡಿದ್ರೆ ಮತ್ತೊಂದು ನಂಬರ್ ನಿಂದ ಕಾಲ್
ಬೆಂಗಳೂರು: ಜೈಲಿನಲ್ಲಿರುವ ಅತ್ಯಾಚಾರ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಒಂದೊಂದೇ ಕೃತ್ಯಗಳು ಬಯಲಿಗೆ ಬರುತ್ತಿವೆ. ಪ್ರಜ್ವಲ್ ರೇವಣ್ಣ ಬಳಿ ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಿಮ್ ಗಳು ಇತ್ತಂತೆ. ಒಂದು ನಂಬರ್ ಬ್ಲಾಕ್ ಮಾಡಿದ್ರೆ ಮತ್ತೊಂದು ನಂಬರ್ ನಿಂದ ಕಾಲ್. ಹೀಗೆ ಪ್ರಜ್ವಲ್ ರೇವಣ್ಣ ಬರೋಬ್ಬರಿ 15 ಸಿಮ್ ಕಾರ್ಡ್ ಹೊಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ಪರಿಚಿತರ ಪತ್ನಿಯರೇ ಪ್ರಜ್ವಲ್ಗೆ ಟಾರ್ಗೆಟ್. ಕೆಲಸ ಕೇಳಿಕೊಂಡು, ಮಕ್ಕಳಿಗೆ ಸೀಟ್ ಕೇಳಿಕೊಂಡು …
Read More »ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ ಎರಡು ಕಾರುಗಳು ನುಜ್ಜುಗುಜ್ಜಾಗಿದ್ದು ದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿ
ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ ಮುಂಬಯಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಶುಕ್ರವಾರ ರಾತ್ರಿ ಸುಮಾರು ಹನ್ನೊಂದು ಗಂಟೆಯ ಸುಮಾರಿಗೆ ಕಾರು ಚಾಲಕ ಕಾರಿಗೆ ಪೆಟ್ರೋಲ್ ಹಾಕಲೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ವೇಗವಾಗಿ ಬರುತಿದ್ದ ಮತ್ತೊಂದು ಕಾರು …
Read More »ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ
ಕುಷ್ಟಗಿ: ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಕೋತಿಯ ಹುಚ್ಚಾಟಕ್ಕೆ ಜನ ಆತಂಕಗೊಂಡಿದ್ದಾರೆ. ಕೋತಿ ಕಚ್ಚುವಿಕೆ ಮುಂದುವರಿದ ಹಿನ್ನೆಲೆಯಲ್ಲಿ ಜೂ.29ರ ಶನಿವಾರ ಶಾಲೆಗೆ ರಜೆ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಜೂನ್ 27 ರಿಂದ ಕೋತಿಯ ಉಪಟಳ ಜಾಸ್ತಿಯಾಗಿದೆ. ಗಿಡ, ಮನೆಯ ಮಾಳಿಗೆಯ ಮೇಲೆ ಕೂರುವ ಕೋತಿ ಜನರ ಮೇಲೆ ಏಕಾಏಕಿ ದಾಳಿ ಮಾಡಿ ಸಿಕ್ಕ ಸಿಕ್ಕಲ್ಲಿ ಕಚ್ಚಿ ಗಾಯಗೊಳಿಸಿದೆ. ಹುಚ್ಚು ಕೋತಿಯ ದಾಳಿಗೆ ಮಕ್ಕಳಿಂದ ಹಿಡಿದು ವೃದ್ದರವರೆಗೆ ಒಟ್ಟು 15 …
Read More »ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ
ಶಿವಮೊಗ್ಗ: ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ. ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಸರ್ಕಾರಿ ಹಣ ಲೂಟಿ ಮಾಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಮುಖ್ಯಮಂತ್ರಿ ಗಳು ಸಹ ರಾಜೀನಾಮೆ ಕೊಡಬೇಕಾಗುತ್ತದೆ. ಸಿಎಂ ಅವರೇ ಹಣಕಾಸಿನ ಸಚಿವರಾಗಿದ್ದಾರೆ. ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. …
Read More »ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಶೆಟ್ಟರ್ ಮನವಿ
ಬೆಳಗಾವಿ: ಬೆಳಗಾವಿ – ಕಿತ್ತೂರು – ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದರು. ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಬೆಳಗಾವಿ – ಕಿತ್ತೂರು – ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ …
Read More »ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ
ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಗ್ರಾಮದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಾಗಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು.ಕಳಪೆ ಆಹಾರಗಳ ಪೂರೈಕೆಯನ್ನು …
Read More »ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!
ನವದೆಹಲಿ: ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ರೀಚಾರ್ಜ್ ಮತ್ತು ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ ಮಾಡಿದ ಬೆನ್ನಲ್ಲೇ, ಇನ್ನೊಂದು ಪ್ರಮುಖ ಕಂಪೆನಿ ಭಾರ್ತಿ ಏರ್ಟೆಲ್ ಸಹ ತನ್ನ ಮೊಬೈಲ್ ರೀಚಾರ್ಜ್, ಪ್ಲಾನ್ ಗಳ ದರಗಳನ್ನು ಏರಿಕೆ ಮಾಡಿದೆ. ಈ ದರಗಳು ಜುಲೈ 3ರಿಂದ ಜಾರಿಗೆ ಬರಲಿವೆ. 179 ರೂ. ಗಳಿಗೆ 28 ದಿನ ವ್ಯಾಲಿಡಿಟಿ 2ಜಿಬಿ ಡಾಟಾ, ಅನಿಯಮಿತ ಕರೆ ಇದ್ದ ಪ್ಲಾನ್ 199 ರೂ.ಗಳಿಗೆ ಏರಿಕೆಯಾಗಿದೆ. …
Read More »IND vs SA: ಬಾರ್ಬಡೋಸ್ನಲ್ಲಿ ಫೈನಲ್ ಮೇಲೂ ಮಳೆಯ ನೆರಳು
IND vs SA Final, Barbados Weather Update: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್ನ ಬ್ರಿಡ್ಜ್ಟೌನ್ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ. ಭಾರತ ಮತ್ತು ದಕ್ಷಿಣ …
Read More »
Laxmi News 24×7