ನವದೆಹಲಿ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಿನ್ನೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದರು.ಆದರೆ ಅಮಿತ್ ಶಾ ಅವರು ಈಶ್ವರಪ್ಪ ಅವರ ಭೇಟಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಇದೀಗ ಅವರು ವಾಪಸ್ ಆಗಿದ್ದಾರೆ. ಅಮಿತ್ ಶಾ ಬೇಟಿಗೆ ಸಮಯ ಸಿಗದ ಕಾರಣ ಇದೀಗ …
Read More »ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತನ ಭೀಕರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಬೆಳಗಾವಿ : ಇತಿಗೆ ಕಲಬುರ್ಗಿಯ ಸಂಸದ ಉಮೇಶ್ ಜಾಧವ್ ಅವರ ಪರಮಾಪ್ತ ಗಿರೀಶ್ ಚಕ್ರ ಹತ್ಯೆ ಮಾಸುವ ಮುನ್ನವೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪರಮಾಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೌದು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. …
Read More »BSY ವಿರುದ್ಧದ ಪೋಕ್ಸೊ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಸಿಜೆಗೆ ಮನವಿ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಸಂತ್ರಸ್ತೆಯ ತಾಯಿ ಗಂಭೀರ ಆರೋಪ ಮಾಡಿದ್ದು, ಸಿಬಿಐ ತನಿಖೆಗೆ ವಹಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿದ್ದಾರೆ. ಅವರ ಮನವಿಯನ್ನು ಮಂಗಳವಾರ ಹೈಕೋರ್ಟ್ ಸ್ವೀಕರಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ಪ್ರಕ್ರಿಯೆ ಅನುಸರಿಸದೇ ವಿಳಂಬ ಮಾಡುತ್ತಿದ್ದಾರೆ. ಕೇಸ್ ಗೆ ಸಂಬಂಧಪಡದ ವ್ಯಕ್ತಿಗಳನ್ನು ಅನಗತ್ಯವಾಗಿ ಕರೆಸಿ ವಿಚಾರಣೆ ನಡೆಸಿ ಕಾಲಹರಣ ಮಾಡುತ್ತಿದ್ದಾರೆ. ಪ್ರಭಾವಿ …
Read More »ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದ ಸುಪ್ರೀಂ ಕೋರ್ಟ್
ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಜಯ್ ರಸ್ತೋಗಿ ಹೇಳಿದ್ದಾರೆ.ಬಂಧನದಲ್ಲಿರುವ ವ್ಯಕ್ತಿಯು ಅಧಿಕಾರದಲ್ಲಿ ಮುಂದುವರಿಯುವುದು ಒಳ್ಳೆಯದಲ್ಲ” ಎಂದು ಅವರು ಹೇಳಿದರು. ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಮಾಜಿ ನ್ಯಾಯಾಧೀಶರು, “ನೀವು ಮುಖ್ಯಮಂತ್ರಿಯ ಉನ್ನತ ಹುದ್ದೆಯನ್ನು ಹೊಂದಿದ್ದೀರಿ, ಮತ್ತು ಅದು ಸಾರ್ವಜನಿಕ ಕಚೇರಿಯಾಗಿದೆ. ನೀವು …
Read More »ಬಸ್ ನಿಲ್ದಾಣದಲ್ಲಿ ನೇಣಿಗೆ ಶರಣಾದ ರೈತ
ವಿಜಯಪುರ : ಸಾಲಬಾಧೆಯಿಂದ ಮನನೊಂದು ರೈತರೊಬ್ಬರು ಬಸ್ ನಿಲ್ದಾಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನೇಣಿಗೆ ಶರಣಾದ ರೈತರನ್ನು ಭೀಮಪ್ಪ ಡೋಣೂರ (76) ಎಂದು ಗುರುತಿಸಲಾಗಿದೆ.ಬಸವನಬಾಗೇಬಾಡಿ ತಾಲೂಕಿನ ಹುಣಸ್ಯಾಳ ಗ್ರಾಮದ ರೈತ ಭೀಮಪ್ಪ ಹೂವಿನಹಿಪ್ಪರಗಿ ಬಸ್ ನಿಲ್ದಾಣದ ಆವರಣದಲ್ಲಿ ಕಬ್ಜಿಣದ ಸರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಭೀಮಪ್ಪ ಸಾಲ ಮರುಪಾವತಿ ಮಾಡಲಾಗದೇ ನೊಂದಿದ್ದ. …
Read More »ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಎದುರಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಬೆಂಗಳೂರು : ನ್ಯಾಯಾಲಯದ ವಿಚಾರಣೆ ವೇಳೆ ಅನಾಮಿಕ ವ್ಯಕ್ತಿಯೊಬ್ಬ ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೈಕೋರ್ಟ್ನ ಹಾಲ್ ಸಂಖ್ಯೆ 1ರಲ್ಲಿ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಎಚ್.ಬಿ.ಪ್ರಭಾಕರ್ ಶಾಸ್ತ್ರಿ ಅವರ ಪೀಠದ ಮುಂದೆ ಪ್ರಕರಣವೊಂದರ ವಿಚಾರಣೆ ನಡೆಯುತ್ತಿತ್ತು.ಈ ವೇಳೆ ಅಲ್ಲಿಗೆ ಆಗಮಿಸಿದ ವ್ಯಕ್ತಿ ಕೈ ಕೊಯ್ದುಕೊಂಡಿದ್ದಾರೆ. ಕೂಡಲೇ ವ್ಯಕ್ತಿಯನ್ನು ವೈದ್ಯರ ಬಳಿಗೆ ಕರೆದೊಯ್ಯಲು ಪೊಲೀಸರಿಗೆ ಪೀಠ ಸೂಚಿಸಿತು. ಪೊಲೀಸರು ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದರು. ಇದೇ …
Read More »ಬಾದಾಮಿ: ₹5.55 ಲಕ್ಷ ನಗದು ಜಪ್ತಿ
ಬಾದಾಮಿ: ಸಮೀಪದ ಜಾಲಿಹಾಳ ಗ್ರಾಮದ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹5.55 ಲಕ್ಷ ನಗದನ್ನು ಬುಧವಾರ ಜಪ್ತಿ ಮಾಡಲಾಗಿದೆ ಎಂದು ಪಿ.ಎಸ್.ಐ. ವಿಠ್ಠಲ ನಾಯಕ ತಿಳಿಸಿದ್ದಾರೆ. ಗದಗದಿಂದ ಬೇಲೂರು ಗ್ರಾಮದ ಕಡೆಗೆ ಖಾಸಗಿ ವಾಹನದಲ್ಲಿ ಸಾಗಿಸುತ್ತಿದ್ದಾಗ ಚೆಕ್ಪೋಸ್ಟ್ ಅಧಿಕಾರಿಗಳು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದಿದೆ. ಮಹಾಂತೇಶ ಹರದೊಳ್ಳಿ ,ಮುದಕಪ್ಪ ಖಾನಾಪೂರ, ಮುದಕಪ್ಪ ಕಬಾಡದ, ಅರ್ಜುನ ಪವಾರ, ಮತ್ತು ಮಂಜು ಉಪ್ಪಾರ ಪೋಲಿಸ್ ಸಿಬ್ಬಂದಿ ಇದ್ದರು.
Read More »ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ದಿಂಗಾಲೇಶ್ವರ ಶ್ರೀಗಳಿಗೆ ಭಕ್ತರ ಒತ್ತಾಯ
ಧಾರವಾಡ: ಲೋಕಸಭಾ ಚುನಾವಣೆಗೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬ ವಿಚಾರವಾಗಿ ಧಾರವಾಡದ ಸೇವಾಲಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದಿದ್ದರು. ಸ್ವಾಮೀಜಿಗಳು ಸೇವಾಲಯಕ್ಕೆ ಬರುತ್ತಿದ್ದಂತೆ ಭಕ್ತಗಣ ಹೂವಿನ ಹಾಸಿಗೆ ಮೇಲೆ ಅವರನ್ನು ಬರಮಾಡಿಕೊಂಡರು. ನಾನು ಒಂದು ಗುರಿ ಇಟ್ಟುಕೊಂಡಿದ್ದು, ಆ ಗುರಿ ಮುಟ್ಟುವ ತನಕ ಕೊರಳಲ್ಲಿ ಮಾಲೆ ಹಾಕಿಕೊಳ್ಳುವುದಿಲ್ಲ ಎಂದು ಭಕ್ತರಿಗೆ ಇದೇ ಸಂದರ್ಭದಲ್ಲಿ ತಿಳಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಭಕ್ತರೊಂದಿಗೆ ಮಾತುಕತೆ …
Read More »ಸುಮಲತಾಗೆ ಕೃತಜ್ಞತೆ ಸಲ್ಲಿಸಿ ದ ಹೆಚ್ಡಿಕೆ
ಮಂಡ್ಯ: ಕ್ಷೇತ್ರ ಬಿಟ್ಟುಕೊಟ್ಟ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಮೈತ್ರಿ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ (Former CM HD Kumaraswamy) ಕೃತಜ್ಞತೆ ಸಲ್ಲಿಸಿದ್ದಾರೆ. ಮಂಡ್ಯದ ಪಾಂಡವಪುರದ ಕ್ಯಾತನಹಳ್ಳಿಯಲ್ಲಿರುವ ರೈತ ನಾಯಕ ದಿವಂಗತ ಕೆಎಸ್ ಪುಟ್ಟಣ್ಣಯ್ಯ (KS Puttannaiah) ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, ನಾಮಪತ್ರ ಸಲ್ಲಿಕೆಗೂ ಮೊದಲು ಹಿರಿಯ ಹೋರಾಟಗಾರರಿಗೆ ಪುಷ್ಷ ನಮನ ಸಲ್ಲಿಸುತ್ತಿದ್ದೇನೆ. ನಾಳೆ ಬೆಳಗ್ಗೆ ದೇವಸ್ಥಾನಕ್ಕೆ ಪೂಜೆ …
Read More »ಯೋಧ’ ಸಿನಿಮಾ ಸೋಲಿಗೆ ಒಟಿಟಿ ಕಾರಣ ಎಂದ ರಾಶಿ ಖನ್ನಾ
ಒಬ್ಬರಿಗೆ ಸಿನಿಮಾ ಇಷ್ಟ ಆದರೆ, ಇನ್ನೂ ಕೆಲವರಿಗೆ ಸಿನಿಮಾ ಇಷ್ಟ ಆಗುವುದಿಲ್ಲ. ಇದು ಅವರವರಿಗೆ ಬಿಟ್ಟ ಆಯ್ಕೆ. ಅದೇ ರೀತಿ ‘ಯೋಧ’ ಚಿತ್ರವನ್ನು ಒಂದಷ್ಟು ಮಂದಿ ಇಷ್ಟಪಟ್ಟರೆ, ಇನ್ನೂ ಕೆಲವರು ಇಷ್ಟಪಟ್ಟಿಲ್ಲ. ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 4 ಕೋಟಿ ರೂಪಾಯಿ. ಇತ್ತೀಚೆಗೆ ರಿಲೀಸ್ ಆದ ಸಿದ್ದಾರ್ಥ್ ಮಲ್ಹೋತ್ರ (Sidharth Malhotra) ಹಾಗೂ ರಾಶಿ ಖನ್ನಾ ನಟನೆಯ ‘ಯೋಧ’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ಈ ಚಿತ್ರ ಅಂದುಕೊಂಡ ರೀತಿಯಲ್ಲಿ …
Read More »