ಬೆಂಗಳೂರು,- ಏಪ್ರಿಲ್ 1ರಿಂದ ಔಷಧಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಪೈನ್ಕಿಲ್ಲರ್, ಆಯಂಟಿ ಇನೆಕ್ಷನ್ ಸೇರಿದಂತೆ ಸುಮಾರು 800 ಪ್ರಮುಖ ಔಷಧಗಳ ಬೆಲೆಯಲ್ಲಿ ಏರಿಕೆ ಕಂಡು ಬರಲಿದೆ. ಹೋಲ್ಸೇಲ್ ಪ್ರೈಸ್ ಇಂಡೆಕ್ಸ್ ಬದಲಾವಣೆಯ ನಂತರ ರಾಷ್ಟ್ರೀಯ ಅಗತ್ಯ ಪಟ್ಟಿಯಲ್ಲಿ ಔಷಧಿಗಳ ಬೆಲೆಯಲ್ಲಿ ಶೇ.0.0055ರಷ್ಟು ಹೆಚ್ಚಳವನ್ನು ಸರ್ಕಾರ ಅನುಮೋದಿಸಲಿದೆ. ಹಣದುಬ್ಬರದ ಪರಿಣಾಮವಾಗಿ ಔಷಧ ಕಂಪನಿಗಳು ಬೆಲೆ ಏರಿಕೆ ಮಾಡುವಂತೆ ಕೆಲ ದಿನಗಳಿಂದ ಬೇಡಿಕೆ ಇಟ್ಟಿದ್ದವು. 2022ರಲ್ಲಿ ಔಷಧಗಳ ಬೆಲೆಯನ್ನು ಶೇ.10ರಿಂದ 12ರವರೆಗೆ …
Read More »ಹಾನಗಲ್ನಲ್ಲಿ ತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನೇ ಹತ್ಯೆಗೈದ ಯುವಕ
ಹಾವೇರಿ, ಮಾ.19: ಜಿಲ್ಲೆಯ ಹಾನಗಲ್(Hangal)ಹೊರವಲಯದಲ್ಲಿತಾನೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯನ್ನ ಯುವಕನೊಬ್ಬ ಹತ್ಯೆಗೈದ ಘಟನೆ ನಡೆದಿದೆ. ಮೂಡೂರು ಗ್ರಾಮದ ದೀಪಾ ಮಂಜಪ್ಪ ಗೊಂದಿ(21) ಮೃತ ರ್ದುದೈವಿ. ಆರೋಪಿ ಮಾಲತೇಶ್ ಎಂಬಾತ ಮೊದಲು ವಿಷ ಕೊಟ್ಟು ಬಳಿಕ ದೀಪಾಳನ್ನು ನೇಣುಹಾಕಿದ್ದಾನೆ. ವಿಷಯ ತಿಳಿದ ಕೋಡಲೇ ಅರಳೇಶ್ವರ ಗ್ರಾಮದ ಆರೋಪಿ ಮಾಲತೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದು ಐದು ದಿನಗಳ ನಂತರ ಕೊಲೆ ಪ್ರಕರಣ ಬಯಲು ಮುಂದಿನ ತಿಂಗಳ ಏಪ್ರಿಲ್ 12ರಂದು ದೀಪಾ …
Read More »ಯಾವ ಕುರಿಯನ್ನು ಎಲ್ಲಿ ನಿಲ್ಲಿಸಬೇಕು, ಹೇಗೆ ಬಲಿ ಕೊಡಬೇಕು ಬಿಜೆಪಿ ನಾಯಕರು ಶಿಸ್ತುಬದ್ಧವಾಗಿ ಪ್ಲ್ಯಾನ್ ಮಾಡಿದ್ದಾರೆ: ಸವದಿ
ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬಂದು ಪುನಃ ಬಿಜೆಪಿಗೆ ವಾಪಸ್ಸು ಹೋದ ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ತಾನು ಮಾಡಿದ ಪ್ರಮಾದಕ್ಕೆ ಪಾಠ ಕಲಿಸುವ ಯೋಜನೆ ಬಿಜೆಪಿ ನಾಯಕರಿಗಿದೆಯೇ? ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳುವ ಪ್ರಕಾರ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಲು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ (Belagavi Lok Sabha seat) ಕಣಕ್ಕಿಳಿಸುವ ಹುನ್ನಾರ ನಡೆದಿದೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸವದಿ, ಶೆಟ್ಟರ್ ಅವರಿಗೆ ಉದ್ದೇಶಪೂರ್ವಕವಾಗಿ …
Read More »21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
ಕೊಪ್ಪಳ : ಮುಂದಿನ ರಾಜಕೀಯ ನಿರ್ಧಾರಕ್ಕೆ ಗುರುವಾರ ಮಾ 21 ರಂದು ನಿರ್ಧಾರ ಮಾಡುತ್ತೇನೆ. ಅಂದು ಬೆಂಬಲಿಗರ ಸಭೆ ಕರೆದಿರುವೆ. ಬೆಂಬಲುಗರ ಸಭೆಯ ನಂತರ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸದ ಸಂಗಣ್ಣ ಕರಡಿ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಡಾ ಬಸವರಾಜ ಅವರಿಗೆ ಘೋಷಣೆಯಾಗಿದೆ.ಅವರಿಗೆ ಶುಭ ಕೋರುತ್ತೇನೆ. ನನಗೆ 8 ವಿಧಾನ ಸಭಾ ಕ್ಷೇತ್ರದ …
Read More »ಬಿಜೆಪಿ ಐದು ಅಭ್ಯರ್ಥಿಗಳ ಹೆಸರು ಇಂದೇ ಫೈನಲ್ – ಪಟ್ಟಿಯಲ್ಲಿರೋ ಹೆಸರು ಹೀಗಿದೆ!
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ (Lokasabha Election 2024) ಬಿಜೆಪಿಯು (BJP) ಅಭ್ಯರ್ಥಿಗಳ ಹೆಸರನ್ನು ಬಾಕಿ ಉಳಿಸಿಕೊಂಡಿರುವ ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಸಿದ್ದವಾಗಿದೆ. ಉತ್ತರ ಕನ್ನಡ, ಬೆಳಗಾವಿ, ರಾಯಚೂರು, ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದ್ದು, ದೆಹಲಿ ವರಿಷ್ಠರ ಭೇಟಿಗೆ ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ದೌಡಾಯಿಸಿದ್ದಾರೆ. ಉತ್ತರ ಕನ್ನಡ – ಅನಂತ ಕುಮಾರ್, ಬೆಳಗಾವಿ – ಜಗದೀಶ್ ಶೆಟ್ಟರ್, ರಾಯಚೂರು – …
Read More »ಜೆಡಿಎಸ್ ಅಭ್ಯರ್ಥಿಗಳ ಘೋಷಣೆ ಇನ್ನಷ್ಟು ವಿಳಂಬ
ಬೆಂಗಳೂರು: ಒಂದೆಡೆ ಮೈತ್ರಿ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಳಂಬ, ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ೋಷಣೆ ಮತ್ತಷ್ಟು ವಿಳಂಬವಾಗಲಿದೆ. ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರೂ ಕೋಲಾರ ವಿಚಾರದಲ್ಲಿ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್ಗೆ ಮೂರು ಕ್ಷೇತ್ರ ಕೊಡುತ್ತೇವೆ ಎಂದು ಹೇಳಿದ್ದಾರೆ. …
Read More »ಬೆಳಗಾವಿಯಲ್ಲಿ ಆಸ್ತಿ ವಿವಾದ: ಅಳಿಯನ ಮೇಲೆಯೇ ಮಾವನಿಂದ ಫೈರಿಂಗ್
ಬೆಳಗಾವಿ, ಮಾರ್ಚ್ 18: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಳಿಯನ ಮೇಲೆ ಮಾವನಿಂದ ಫೈರಿಂಗ್(firing)ಮಾಡಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ ಕೃತ್ಯ ನಡೆದಿದೆ. 30 ಗುಂಟೆ ಜಮೀನಿಗಾಗಿ ಶಾಂತಿನಾಥ ಆಲಗೂರು (32) ಮೇಲೆ ಮಾವ ಧನಪಾಲ್ ಆಸಂಗಿ (54) ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ದಿಂದಲೇ ಒಂದು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ ಧನಪಾಲ್. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿ ಧನಪಾಲ್ ಬಂಧಿಸಿ ವಿಚಾರಣೆ …
Read More »ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್ಸುಂದರ್ ಗಾಯಕವಾಡ್
ಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಶಾಮಸುಂದರ್ ಗಾಯಕವಾಡ್ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ 50 ಲಕ್ಷ ಜನಸಂಖ್ಯೆಯಿರುವ ಮರಾಠ ಸಮುದಾಯಕ್ಕೆ ಬಿಜೆಪಿ ಸರಿಯಾದ ಪ್ರಾತಿನಿಧ್ಯ ನೀಡುತ್ತಿಲ್ಲ. ರಾಜ್ಯದಲ್ಲಿ ಶೇ 52ರಷ್ಟು ಜನಸಂಖ್ಯೆ ಹೊಂದಿರುವ ಹಿಂದುಳಿದ ವರ್ಗದ ಕುರುಬರು, ನೇಕಾರರು, ಗೊಲ್ಲರು, ಮೀನುಗಾರರು, ತಿಗಳರು, ಗಾಣಿಗರು, ಕುಂಬಾರರು, ಮಡಿವಾಳ, ದೇವಾಡಿಗ ಸಮುದಾಯದವರಿಗೆ ಟಿಕೆಟ್ …
Read More »ರಾಜ್ಯದಲ್ಲಿ ಇನ್ಮೇಲೆ ಕೆಎಂಎಫ್ ಎಮ್ಮೆ ಹಾಲು ಸಿಗಲ್ಲ! ಮೂರೇ ತಿಂಗಳಿಗೆ ಮಾರಾಟಕ್ಕೆ ಬ್ರೇಕ್ ಹಾಕಲು ಚಿಂತನೆ
ಬೆಂಗಳೂರು: ಕಳೆದ ಮೂರು ತಿಂಗಳ ಹಿಂದಷ್ಟೇ ಕರ್ನಾಟಕ ಹಾಲು ಒಕ್ಕೂಟ (Karnataka Milk Federation) ರಾಜ್ಯಾಧ್ಯಂತ ಎಮ್ಮೆ ಹಾಲು ಮಾರಾಟಕ್ಕೆ (Selling buffalo milk) ಚಾಲನೆ ನೀಡಿತ್ತು. ಆದರೆ ಇದಾದ ಮೂರೇ ತಿಂಗಳಿಗೆ ಎಮ್ಮೆ ಹಾಲು ಮಾರಾಟಕ್ಕೆ ಬ್ರೇಕ್ ಹಾಕಲು ಕೆಎಂಎಫ್ (KMF) ಚಿಂತನೆ ನಡೆಸಿದೆಯಂತೆ. ಹೌದು, ಕಳೆದ ವರ್ಷ ಡಿಸೆಂಬರ್ ತಿಂಗಳಿಂದ ಎಮ್ಮೆ ಹಾಲು ಮಾರುಕಟ್ಟೆಗೆ (Market) ಕೆಎಂಎಫ್ ಬಿಡುಗಡೆ ಮಾಡಿತ್ತು, ಆದರೆ ಸದ್ಯ ಎಮ್ಮೆ ಹಾಲು ಮಾರಾಟ …
Read More »ಸೂಲಗತ್ತಿ ಲಕ್ಷ್ಮೀಬಾಯಿಗೆ ಶಾಂತ ಸಿರಿ ಪ್ರಶಸ್ತಿ
ಸಿಂದಗಿ: 600 ಮಹಿಳೆಯರಿಗೆ ಉಚಿತವಾಗಿ ಸಹಜ ಹೆರಿಗೆ ಮಾಡಿಸಿದ ತಾಲ್ಲೂಕಿನ ಯರಗಲ್ ಬಿ.ಕೆ. ಗ್ರಾಮದ ಲಕ್ಷ್ಮೀಬಾಯಿ ಪಂಚಯ್ಯ ಗುಬ್ಬೇವಾಡ ಇವರಿಗೆ ಶಾಂತ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಲ್ಲಿಯ ಊರನಹಿರಿಯಮಠದ ಶಿವಾನುಭವ ಮಂಟಪದಲ್ಲಿ ಭಾನುವಾರ ರಾತ್ರಿ ಶಾಂತವೀರ ಪಟ್ಟಾಧ್ಯಕ್ಷರ 44ನೆಯ ಸ್ಮರಣೋತ್ಸವದ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಪ್ರಶಸ್ತಿ ₹5 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಅಫಜಲಪುರ ಸಂಸ್ಥಾನಹಿರೇಮಠದ ಪೀಠಾಧ್ಯಕ್ಷ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ …
Read More »
Laxmi News 24×7