Breaking News

ರಾಷ್ಟ್ರೀಯ

ಬೆಳಗಾವಿಯಲ್ಲೂ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ. ಕೆಲಸ ಹುಡುಕಿಕೊಂಡು ನಿತ್ಯ ಸಾವಿರಾರು ಜನರು ಗೋವಾ, ಉಡುಪಿ, ಮಂಗಳೂರು ಕಡೆಗೆ ವಲಸೆ

ಬೆಳಗಾವಿಯಲ್ಲೂ ಇದೇ ಸ್ಥಿತಿ: ಜಿಲ್ಲೆಯ 506 ಗ್ರಾಪಂ ವ್ಯಾಪ್ರಿಯ 640ಕ್ಕೂ ಅಧಿಕ ಹಳ್ಳಿಗಳಲ್ಲಿ ರೈತರು, ಕೂಲಿಕಾರರಿಗೆ ನರೇಗಾ ಯೋಜನೆ ಆಶ್ರಯವಾಗಿತ್ತು. ಆದರೆ, ನಾಲ್ಕೈದು ತಿಂಗಳಿನಿಂದ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಯಾಗದಿರುವ ಹಿನ್ನೆಲೆಯಲ್ಲಿ ಜನರು ಬೆಂಗಳೂರು, ಹೈದರಾಬಾದ್, ಬೆಳಗಾವಿ, ಮಹಾರಾಷ್ಟ್ರದ ಪುಣೆ, ಮುಂಬೈ, ಕೊಲ್ಲಾಪುರ, ಗೋವಾ ರಾಜ್ಯದ ವಾಸ್ಕೋ, ಪಣಜಿ ಸೇರಿ ಇತರ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದಾರೆ. ಈಗಾಗಲೇ ಹಿಂಗಾರು ಹಂಗಾಮಿನ ಜೋಳ, ಕಡಲೆ, ಸೂರ್ಯಕಾಂತಿ ಸುಗ್ಗಿ ಮುಗಿದಿದೆ. ಕಬ್ಬು ಕಟಾವು …

Read More »

ಭೀಕರ ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ.

ಈ ವರ್ಷ ಭೀಕರ ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಗುಳೆ ಹೋಗುವವರ ಸಂಖ್ಯೆ ದುಪ್ಪಟ್ಟಾಗಿದೆ. ಕೆಲಸ ಹುಡುಕಿಕೊಂಡು ನಿತ್ಯ ಸಾವಿರಾರು ಜನರು ಗೋವಾ, ಉಡುಪಿ, ಮಂಗಳೂರು ಕಡೆಗೆ ವಲಸೆ ಹೋಗುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗವೊಂದರಿಂದಲೇ ಪ್ರತಿ ದಿನ ಮಂಗಳೂರಿಗೆ 22 ಬಸ್​ಗಳನ್ನು ಬಿಡಲಾಗುತ್ತಿದೆ. ಮಂಗಳೂರು ವಿಭಾಗದಿಂದ 20 ಬಸ್​ಗಳು ಸಂಚರಿಸುತ್ತವೆ. ಬಾಗಲಕೋಟೆಯಿಂದ ಗೋವಾಕ್ಕೆ ಪ್ರತಿದಿನ 18 ಬಸ್ ಓಡಾಡುತ್ತಿವೆ. ಹೀಗಾಗಿ ಕೂಲಿ ಕೆಲಸ ಹುಡುಕಿಕೊಂಡು …

Read More »

ಭಾರತದ ಮೊದಲ ನೀರೊಳಗಿನ ಮೆಟ್ರೋ ಉದ್ಘಾಟನೆಗೆ ದಿನಾಂಕ ಫಿಕ್ಸ್​;

ಕೋಲ್ಕತ್ತಾ: ಮಾರ್ಚ್ 6ರಂದು ಕೋಲ್ಕತ್ತಾದಲ್ಲಿ ನಿರ್ಮಿಸಲಾದ ಭಾರತದ ಮೊದಲ ನದಿಯೊಳಗಿನ ಮೆಟ್ರೋ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಹೂಗ್ಲಿ ನದಿಯ ಅಡಿಯಲ್ಲಿ ನಿರ್ಮಿಸಲಾದ ಸುರಂಗವು ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್‌ನ ಭಾಗವಾಗಿದೆ. ಇದು ಹೌರಾ ಮೈದಾನದಿಂದ ಎಸ್‌ಪ್ಲೇನೇಡ್‌ಗೆ ಸಂಪರ್ಕಿಸುತ್ತದೆ ಎಂದು ವರದಿಯಾಗಿದೆ. ಅದೇ ದಿನ ಕೋಲ್ಕತ್ತಾ ಮೆಟ್ರೋದ ಕವಿ ಸುಭಾಷ್-ಹೇಮಂತ ಮುಖೋಪಾಧ್ಯಾಯ ಮತ್ತು ತಾರಾತಲಾ-ಮಜೆರ್ಹತ್ ವಿಭಾಗಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ವಿಭಾಗಗಳು ರಸ್ತೆ ದಟ್ಟಣೆಯನ್ನು ನಿವಾರಿಸಲು ಮತ್ತು …

Read More »

ಮೂವರು ವಿದ್ಯಾರ್ಥಿನಿಯರ ಮೇಲೆ ಆಯಸಿಡ್ ದಾಳಿ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರಿ ಕಾಲೇಜಿನಲ್ಲಿ ಮೂವರು ಹೆಣ್ಮಕ್ಕಳ ಮೇಲೆ ದುಷ್ಟನೊಬ್ಬ ಆಯಸಿಡ್ (Acid attack) ಎರಚಿದ್ದಾನೆ. ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ದಾಳಿ ಮಾಡಿದ್ದಾನೆ. ಈ ಮೂವರು ವಿದ್ಯಾರ್ಥಿನಿಯರು ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು. ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಹ್ಯಾಟ್ ಹಾಕಿದ್ದ ಕಿರಾತಕ ಏಕಾಏಕಿ ವಿದ್ಯಾರ್ಥಿನಿಯರ ಮೇಲೆ ಆಯಸಿಡ್ ಹಾಕಿದ್ದಾನೆ. ಆಯಸಿಡ್ ಮುಖಕ್ಕೆ ಬೀಳುತ್ತಿದ್ದ ವಿದ್ಯಾರ್ಥಿನಿಯರು ಕಿರುಚಾಡಿದ್ದಾರೆ. ಆಯಸಿಡ್ ದಾಳಿಗೆ …

Read More »

ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ಶಾರಿಕ್‌?; ತೀವ್ರ ವಿಚಾರಣೆ, ಯಾರೀ ಕರ್ನಲ್‌!?

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್‌ ಸ್ಫೋಟ (Blast in Bengaluru) ಸಂಭವಿಸಿ 70 ಗಂಟೆಗಳೇ ಕಳೆದಿವೆ. ರಾಜ್ಯ ಪೊಲೀಸರ ಹಲವಾರು ತಂಡಗಳು ಸಿಸಿಟಿವಿ ಫೂಟೇಜ್‌ ಸೇರಿದಂತೆ ಎಲ್ಲ ದಿಕ್ಕುಗಳಲ್ಲೂ ತನಿಖೆ ನಡೆಯುತ್ತಿದೆ. ಈ ನಡುವೆ ರಾಜ್ಯ ಸರ್ಕಾರ (Karnataka Government) ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (National Investigation Agency) ವಹಿಸಿದೆ.   ಇದರ ನಡುವೆ ಮಾರ್ಚ್‌ 1ರಂದು ಮಧ್ಯಾಹ್ನ 12.55ರ ಹೊತ್ತಿಗೆ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ …

Read More »

ಬರಿದಾಗುತ್ತಿದೆ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಜೀವನಾಡಿ ಹಿಡಕಲ್ ಜಲಾಶಯ

ಬೆಳಗಾವಿ, ಮಾರ್ಚ್​​ 03: ಭೀಕರ ಬರಗಾಲದಿಂದ (Drought) ರಾಜ್ಯದ ಜಲಾಶಯಗಳು ಭಣಗುಡುತ್ತಿವೆ. ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಬೇಸಿಗೆ ಆರಂಭದಲ್ಲೇ ಜಲಕ್ಷಾಮದ ಬಿಸಿ ರಾಜ್ಯಕ್ಕೆ ತಟ್ಟಿದೆ. ಹನಿ ನೀರಿಗೂ ಪರದಾಡುವಂತೆ ಪರಿಸ್ಥಿತಿ ಎದುರಾಗಿದೆ. ಇನ್ನು ಬೆಳಗಾವಿ (Belagavi) ಮತ್ತು ಬಾಗಲಕೋಟೆ (Bagalkote) ಜಿಲ್ಲೆಗಳಿಗೆ ಜೀವನಾಡಿಯಾಗಿರುವ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯ (Hidkal Dam) ಬರಿದಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಜನ ಪರಿತಪ್ಪಿಸುತ್ತಿದ್ದಾರೆ. ಬೆಳಗಾವಿಯ ಮತ್ತು ಬಾಗಲಕೋಟೆ ಜಿಲ್ಲೆ ಜೀವನಾಡಿ ಆಗಿರುವ ಹಿಡಕಲ್ …

Read More »

ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರು

ವಿಜಯಪುರ,: ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (BJP MP ramesh jigajinagi) ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ (ಮಾರ್ಚ್​ 2) ತಡ ರಾತ್ರಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ …

Read More »

ಲೋಕಸಭೆ ಚುನಾವಣೆ 2024: ಮಾ. 4, 5 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೆಳಗಾವಿ ಜಿಲ್ಲೆ ಪ್ರವಾಸ

ಬೆಳಗಾವಿ, ಮಾರ್ಚ್​ 03: ಲೋಕಸಭೆ ಚುನಾವಣೆಗೆ (Lok Sabha Election) ಎರಡು ತಿಂಗಳು ಬಾಕಿ ಉಳಿದಿದೆ. ಭಾರತೀಯ ಜನತಾ ಪಾರ್ಟಿ (BJP) ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಅದು ಕೂಡ ಈ ಸಲ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಗೆಲವು ಸಾಧಿಸಲು ರಣತಂತ್ರ ಹೆಣೆಯುತ್ತಿದೆ. ಬಿಜೆಪಿ ಈಗಾಗಲೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಕಾರ್ನಾಟಕದ ಯಾವೊಬ್ಬ …

Read More »

ಡಾರ್ಲಿಂಗ್ ಕೃಷ್ಣ ಸ್ಫೋಟಕ ಬ್ಯಾಟಿಂಗ್; ಸತತ ಎರಡನೇ ಜಯ ದಾಖಲಿಸಿದ ಕರ್ನಾಟಕ ಬುಲ್ಡೋಜರ್ಸ್​​

ಹೈದರಾಬಾದ್: ಇಲ್ಲಿನ ರಾಜೀವ್​ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಪ್ರೀಮಿಯರ್​ ಲೀಗ್​ನ 8ನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್​ ತಂಡವು ಬೆಂಗಾಲ್ ಟೈಗರ್ಸ್​ಅನ್ನು ಮಣಿಸುವ ಮೂಲಕ ಗೆಲುವಿನ ನಗೆ ಬೀರಿದೆ. ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್​ ಡಾರ್ಲಿಂಗ್​ ಕೃಷ್ಣ (72 ರನ್, 33 ಎಸೆತ) ಅರ್ಧಶತಕದ ನೆರವಿನೊಂದಿಗೆ ಮೊದಲ ಇನ್ನಿಂಗ್ಸ್​ನ 10 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 117ರನ್​ ಗಳಿಸಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ 118 ರನ್​ಗಳ ಗುರಿ ಬೆನ್ನಟ್ಟಿದ …

Read More »

ನನ್ನ ಪತ್ನಿ ಗೀತಾ MP ಆಗುವುದನ್ನು ನೋಡಲು ಬಯಸುತ್ತೇನೆ: ಶಿವರಾಜ್​ಕುಮಾರ್

ಬೆಂಗಳೂರು: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಚಿತ್ರ ನಟರು, ಮಾಜಿ ಕ್ರೀಡಾ ತಾರೆಯರು ರಾಷ್ಟ್ರೀಯ ಪಕ್ಷಗಳನ್ನು ಸೇರುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ.   ಮಹತ್ವದ ಬೆಳವಣಿಗೆ ಒಂದರಲ್ಲಿ ರಾಜಕೀಯದ ಕುರಿತು ಮಾತನಾಡಿರುವ ನಟ ಡಾ. ಶಿವರಾಜ್​ಕುಮಾರ್​ ನನ್ನ ಪತ್ನಿ ಗೀತಾ ಸಂಸದೆ ಆಗುವ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ ಎಂದು ಆಶಿಸಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಸಚಿವ …

Read More »