Breaking News

ರಾಷ್ಟ್ರೀಯ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು,

ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಮೃತಪಟ್ಟಿದ್ದಾರೆ, ತೀವ್ರ ರಕ್ತಸ್ರಾವವಾದ ಕಾರಣ ಬೇರೆ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಮಗು ಹಾಗೂ ತಾಯಿ ಇಬ್ಬರೂ ಮೃತಪಟ್ಟಿದ್ದಾರೆ. ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ, ಮಾರ್ಚ್​.18: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ (Doctors Negligence). ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ( …

Read More »

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು,ಮಾ.18- ಮುಂದಿನ ಎರಡು ಮೂರು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದವಾರ ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಮಳೆಯಾಗಿತ್ತು. ನಿನ್ನೆ ಬೀದರ್ ಮತ್ತು ಕಲಬುರಗಿಯಲ್ಲಿ ಮಳೆಯಾಗಿದ್ದು, ಮುಂದಿನ 2-3 ದಿನಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಸಾಧಾರಣವಾಗಿ ಮಳೆಯಾಗಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನಲ್ಲಿ ಕಾಣಿಸಿಕೊಂಡಿರುವ ಟ್ರಪ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಕರ್ನಾಟಕದ …

Read More »

ಬೆಳಗಾವಿ, ಚಿಕ್ಕೋಡಿ, ಕೈ ಅಭ್ಯರ್ಥಿಗಳ ಪಟ್ಟಿ ನಾಳೆ ಅಂತಿಮ?ದಿಲ್ಲಿ ಸಿಇಸಿ ಸಭೆಯಲ್ಲಿ 2ನೇ ಹಂತದ ಪಟ್ಟಿ ಚರ್ಚೆ

ಬೆಂಗಳೂರು: ಚುನಾವಣೆಗೆ ಕೈ’ ಅಭ್ಯರ್ಥಿಗಳ ಎರಡನೇ ಹಂತದ ಪಟ್ಟಿಯನ್ನು ಅಂತಿಮಗೊಳಿಸಲು ಮಂಗಳವಾರ ದಿಲ್ಲಿಯಲ್ಲಿ ಪಕ್ಷದ ಚುನಾವಣ ಸಮಿತಿ ಸಭೆ ನಡೆಯಲಿದ್ದು, ಬುಧವಾರ ಪಟ್ಟಿ ಬಿಡುಗಡೆ ಯಾಗುವ ಸಾಧ್ಯತೆ ಇದೆ. ಈ ಕುರಿತು ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ನಾಳೆ ಯಾವುದು ಅಂತಿಮ? ಧಾರವಾಡ, ಕಲಬುರಗಿ, ಚಿತ್ರದುರ್ಗ (ಮೀಸಲು), ಕೋಲಾರ (ಮೀಸಲು), ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಬೆಂಗಳೂರು ದಕ್ಷಿಣ, ಕೇಂದ್ರ ಮತ್ತು ಉತ್ತರ, ದಾವಣಗೆರೆ, ಚಾಮರಾಜನಗರ, ಉತ್ತರ ಕನ್ನಡ, ಬೀದರ್‌, ಮೈಸೂರು.

Read More »

ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ

ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಮಾರ್ಚ್ 19ರಂದು ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಅಂತಿಮ ಹಂತದ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ, ಮಾರ್ಚ್ 19ರಂದು ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಗಳ 2ನೇ ಪಟ್ಟಿ ಬಗ್ಗೆ ಚರ್ಚಿಸಲಾಗುವುದು. ಮಾರ್ಚ್ 20ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದರು. ಇಂದು …

Read More »

ಅಲ್ಲು ಅರ್ಜುನ್ ʼಪುಷ್ಪ-2ʼ ಜೊತೆ‌ ಪ್ರಭಾಸ್ ʼಕಲ್ಕಿ 2898‌ ಎಡಿʼ ರಿಲೀಸ್?

ಹೈದರಾಬಾದ್: ಈ ವರ್ಷ ಟಾಲಿವುಡ್‌ ಸಿನಿರಂಗದಲ್ಲಿ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾಗಳು ತೆರೆ ಕಾಣಲಿವೆ. ʼಪುಷ್ಪ-2ʼ ಹಾಗೂ ಮಲ್ಟಿಸ್ಟಾರ್ಸ್‌ ವುಳ್ಳ ನಾಗ್‌ ಅಶ್ವಿನ್‌ ನಿರ್ದೇಶನದ ʼ ಕಲ್ಕಿ 2898 ಎಡಿʼ ರಿಲೀಸ್‌ ಗೆ ಪ್ರೇಕ್ಷಕರು ಕಾಯುತ್ತಿದ್ದಾರೆ. ಈ ಎರಡು ಸಿನಿಮಾಗಳು ಪ್ಯಾನ್‌ ಇಂಡಿಯಾದಲ್ಲಿ ರಿಲೀಸ್‌ ಗೂ ಮುನ್ನವೇ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಪ್ರಭಾಸ್‌ ಅವರ ʼಕಲ್ಕಿʼ ಅಂದುಕೊಂಡಂತೆ ಆದರೆ ಮೇ 9 ರಂದು ಸಿನಿಮಾ ರಿಲೀಸ್‌ ಆಗಲಿದೆ. ಆದರೆ ಆಂಧ್ರ ವಿಧಾನಸಭಾ …

Read More »

ಮೈಸೂರು ಅರಮನೆ ಮುಂದೆ ರಂಗೋಲಿಯಲ್ಲಿ ಅರಳಿದ ಅಪ್ಪು,

ಈ ಹಸರು ಚಿಕ್ಕ ಮಗುವಿನಿಂದ ಹಿಡಿದು ಅಜ್ಜಂದಿರವರ ಮನಸ್ಸಲ್ಲಿ ಅಚ್ಚಳಿಯದೇ ಅಚ್ಚಹಸಿರಿನ ಗಿಡ, ಮರದಂತೆ ನೆಲೆಸಿಬಿಟ್ಟಿದ್ದಾರೆ. ಈ ಮೂಲಕ ಅವರು ಅಜರಾಮರಾಗಿಬಿಟ್ಟಿದ್ದಾರೆ. ಆ ಅದ್ಭುತ ಹೆಸರೇ ಅಪ್ಪು (ಪುನೀತ್ ರಾಜ್‌ಕುಮಾರ್‌). ಇನ್ನು ಇಂದು (ಮಾರ್ಚ್‌ 17) ಪುನೀತ್‌ ರಾಜ್‌ಕುಮಾರ್ ಅವರ 49ನೇ ವರ್ಷದ ಹುಟ್ಟುಹಬ್ಬವನ್ನು ರಾಜ್ಯದೆಲ್ಲೆಡೆ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಹಾಗೆಯೇ ಇಲ್ಲೊಬ್ಬ ಅಭಿಮಾನಿಯೊಬ್ಬರು ಅವರ ಚಿತ್ರ ಬಿಡಿಸುವ ಮೂಲಕ ವಿಶೇಷವಾಗಿ ಶುಭಕೋರಿದ್ದಾರೆ.ಮೈಸೂರು ಅರಮನೆ ಮುಂದೆ ರಂಗೋಲಿಯಲ್ಲಿ ಕರ್ನಾಟಕ ರತ್ನ ಪುನೀತ್‌ …

Read More »

ಗಮನಿಸಿ : ಆನ್ ಲೈನ್ ನಲ್ಲಿ ‘VOTER ID’ ಪಡೆಯುವುದು ಈಗ ಬಹಳ ಸುಲಭ , ಜಸ್ಟ್ ಹೀಗೆ ಮಾಡಿ

ಭಾರತದಲ್ಲಿ 18 ವರ್ಷ ಮೀರಿದ ಯಾರೇ ಆಗಲಿ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಚುನಾವಣಾ ಆಯೋಗವು ಹೊಸ ಸೌಲಭ್ಯವೊಂದು ಒದಗಿಸಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಸೆಕೆಂಡುಗಳಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು.   ಹೊಸ ಮತದಾರರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿ ಭೌತಿಕ ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ಭಾರತದ ಚುನಾವಣಾ ಆಯೋಗ (ಇಸಿಐ) ಸಿಹಿ ಸುದ್ದಿ ನೀಡಿದೆ. ಇ-ಮತದಾರರ ಗುರುತಿನ ಚೀಟಿಯನ್ನು (ಇ-ಎಪಿಕ್) ಮೊಬೈಲ್ …

Read More »

ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳಲ್ಲಿ ರಾಜಕೀಯ ಚಟುವಟಿಕೆ ನಿರ್ಬಂಧ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಶಾಂತಿಯುತ ಹಾಗೂ ಮುಕ್ತ ರೀತಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಹೆಚ್.ಗಂಗಾಧರ್ ಅವರು ತಿಳಿಸಿದ್ದಾರೆ.   ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ …

Read More »

12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕ: ಚುನಾವಣಾ ಆಯೋಗ

ನವದೆಹಲಿ: ದೇಶದ 12 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿದ್ದಾರೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ದೇಶದಲ್ಲಿ ಒಟ್ಟು 47.1 ಕೋಟಿ ಮಹಿಳೆಯರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ‘ದೇಶದಲ್ಲಿ ಲಿಂಗಾನುಪಾತದ ಪ್ರಮಾಣ 1000 ಪುರುಷರಿಗೆ 948 ಮಹಿಳೆಯರಿದ್ದಾರೆ. ಲಿಂಗಾನುಪಾತವು 1000ಕ್ಕಿಂತ ಹೆಚ್ಚಿರುವ 12 ರಾಜ್ಯಗಳಿವೆ. ಅಂದರೆ ಈ …

Read More »

ಮತ್ತೊಮ್ಮೆ ಸ್ವಪಕ್ಷೀಯರ ವಿರುದ್ಧ ಅಸಮಾಧಾನ ಹೊರಹಾಕಿದ ಬಿ. ಶಿವರಾಂ

ಬೇಲೂರು: ‘ಎಲ್ಲ ಚುನಾವಣೆಯಲ್ಲೂ ಪಕ್ಷದ ಕಾರ್ಯಕ್ರಮಕ್ಕೆ ಬರದೇ ಇರುವ ಇನ್ನೊಂದು ಗುಂಪು ಕಲೆಕ್ಷನ್‌ಗೆ ಕಾಯುತ್ತಾ ಇರುತ್ತದೆ. ಅವರು ಕಲೆಕ್ಷನ್‌ಗೆ ಹೊರತು ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ‌ ಮಾಡಲು ಅಲ್ಲ. ಇಷ್ಟೊತ್ತಿಗೆ ಅವನು ಸರಿಯಿಲ್ಲ, ಇವನು ಸರಿಯಲ್ಲ. ನಾವು ನಿಮಗೆ ಕೆಲಸ ಮಾಡ್ತೀವಿ ಎಂದು ರೇವಣ್ಣ ಅವರ ಹತ್ತಿರ ಮಾತನಾಡಿಕೊಂಡು ಬಂದಿರುತ್ತಾರೆ’ ಎಂದು ಕಾಂಗ್ರೆಸ್‌ ಮುಖಂಡ ಬಿ. ಶಿವರಾಂ ಹೇಳಿರುವುದು ಪಕ್ಷದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಜಿ …

Read More »