Breaking News

ರಾಷ್ಟ್ರೀಯ

ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದವಾಗಿ ವಿದ್ಯಾರ್ಥಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಾಸನ: ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ (Self harming) ಪತ್ತೆಯಾಗಿದೆ. ಹಾಸನ ನಗರದ ಉದಯಗಿರಿಯಲ್ಲಿರುವ (Hasana News) ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ವಿಕಾಶ್ (18) ಮೃತ ದುರ್ದೈವಿ. ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ಸುರೇಶ್ ಹಾಗೂ ಮಮತಾ ದಂಪತಿಯ ಪುತ್ರ ವಿಕಾಸ್ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಮಾಸ್ಟರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಕಾಶ್‌ ಅಲ್ಲಿನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಫೆ.22ರ …

Read More »

ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್

ಬೆಂಗಳೂರು,ಫೆ.22- ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ. ಹೀಗಾದರೆ ಸದನ ಏಕೆ ನಡೆಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ತೀವ್ರ ಆಕ್ಷೇಪವನ್ನು ವಿಧಾನಸಭೆಯಲ್ಲಿಂದು ವ್ಯಕ್ತಪಡಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಅಶೋಕ್‍ರವರು ಆಡಳಿತ ಪಕ್ಷದ ಮುಂದಿನ ಎರಡೂ ಸಾಲುಗಳು ಖಾಲಿ ಇವೆ. ಮಂತ್ರಿಗಳಿಲ್ಲ, ಅಧಿಕಾರಿಗಳೂ ಇಲ್ಲ. ಹೀಗಾದರೆ ಏಕೆ ಅಧಿವೇಶನ ನಡೆಸಬೇಕು, ನಮಗೂ ಕಾರ್ಯಕ್ರಮಗಳಿವೆ, ಪ್ರವಾಸ ಹೋಗಬೇಕಿತ್ತು. ಅಧಿವೇಶನ ಮುಖ್ಯವಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು. ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ? ಅವರದೇ …

Read More »

ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿಗಳು,

ಮೈಸೂರು,ಫೆ.18- ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ತೆರವುಗೊಳಿಸಲಾಗಿದೆ.ಮೈಸೂರಿನ ನಜರ್ಬಾದ್ನಲ್ಲಿರುವ ಮಿನಿ ವಿಧಾನಸೌಧ ಹಿಂಭಾಗದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ತಲೆಯೆತ್ತಿದ್ದ ಕೆಲ ಮಳಿಗೆಗಳನ್ನು ನೆಲಸಮಗೊಳಿಸಲಾಗಿದೆ. ಹಲವು ವರ್ಷಗಳಿಂದ ಅಕ್ರಮವಾಗಿ ಈ ಕಟ್ಟಡವನ್ನು ನಿರ್ಮಿಸಿ ವಾಣಿಜ್ಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ. ಒಂದೇ ಸೂರಿನಡಿ ಐದು ಮಳಿಗೆಗಳನ್ನು ನಿರ್ಮಿಸಿ ಅದನ್ನು ಪತ್ರ ಬರಹಗಾರರ ಕಚೇರಿ, ಜೆರಾಕ್ಸ್ ಅಂಗಡಿ ಸೇರಿದಂತೆ ಕೆಲ ವಾಣಿಜ್ಯ ಚಟುವಟಿಕೆಗಳಿಗೆ ಬಾಡಿಗೆ ನೀಡಲಾಗಿತ್ತು. ಈ ಅಕ್ರಮ ಕಟ್ಟಡಕ್ಕೆ ಚೆಸ್ಕಾಂನಿಂದ ವಿದ್ಯುತ್ ಸಂಪರ್ಕವನ್ನು …

Read More »

ಲಂಚ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮರು ತನಿಖೆಗೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಬೆಂಗಳೂರು, ಫೆಬ್ರವರಿ 22: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಮುಖ್ಯಮಂತ್ರಿಯಾಗಿದ್ದಾಗ ಲಂಚ ಪಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah)ಈಗ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಮರುತನಿಖೆ ನಡೆಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ (Lokayukta) ಸೂಚನೆ ನೀಡಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿರುವುದು ರಾಜಕೀಯವಾಗಿ ಪ್ರತಿಪಕ್ಷ ಬಿಜೆಪಿಗೆ ಪ್ರಮುಖ ಅಸ್ತ್ರವಾಗುವ …

Read More »

ಬೆಂಗಳೂರು: ಚಿರತೆಗಾಗಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದು ನಾಯಿ!

ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಚಿರತೆ ಕಾಣಿಸಿಕೊಂಡಿದೆ ಎಂದು ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರು. ನಂತರ ಚಿರತೆಗಾಗಿ ಶೋಧ ಕಾರ್ಯ ಆರಂಭಿಸಿದರು. ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಚಿರತೆ ಬದಲು ಈ ಪ್ರದೇಶದಲ್ಲಿ ನಾಯಿ ಪತ್ತೆಯಾಗಿದ್ದು ನಾವು ಈಗ ನಾಯಿಯ ಮಾಲೀಕರನ್ನು ಪತ್ತೆ ಮಾಡಬೇಕೇ? ಎಂದು ಅರಣ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತ ಪಡಿಸಿದ್ದಾರೆ. ಫೆಬ್ರವರಿ …

Read More »

ಮರಳಿ ‘ಕೈ’ ಹಿಡಿಯುತ್ತಾರಾ ಮಾಜಿ ಸಚಿವ ಡಾ. ಕೆ ಸುಧಾಕರ್:

ಬೆಂಗಳೂರು, ಫೆಬ್ರವರಿ 22: ಮಾಜಿ ಸಚಿವ ಡಾ. ಕೆ ಸುಧಾಕರ್ (K Sudhakar) ಕಾಂಗ್ರೆಸ್‌ಗೆ (Congress) ವಾಪಸಾಗುವ ಬಗ್ಗೆ ‘ಕೈ’ ಪಾಳೆಯದಲ್ಲಿ ಚರ್ಚೆ ಜೋರಾಗಿದೆ. ಈ ವಿಚಾರವಾಗಿ ಕೆಲ ದಿನಗಳ ಹಿಂದೆ ಚಿಕ್ಕಬಳ್ಳಾಪುರ (Chikkaballapur) ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರಿಸಿಕೊಳ್ಳುವ ಬಗ್ಗೆ ಚಿಕ್ಕಬಳ್ಳಾಪುರ ನಾಯಕರಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ. …

Read More »

ಕುಮಾರಸ್ವಾಮಿಯಂತೆ ನಂಗೂ ಏಕವಚನದಲ್ಲಿ ಮಾತಾಡಲು ಬರುತ್ತೆ:ಡಿಕೆ ಸುರೇಶ್

ವಕೀಲರ ಪ್ರತಿಭಟನೆ ರಾಜಕೀಯಕ್ಕೆ ಬಳಸಿಕೊಳ್ಳುವ ಕುತಂತ್ರ ಕುಮಾರಸ್ವಾಮಿ ಮತ್ತು ಅಶೋಕ ಮಾಡಿದ್ದಾರೆ, ಕುಮಾರಸ್ವಾಮಿಯಂತೆ ತನಗೂ ಏಕವಚನದಲ್ಲಿ ಮಾತಾಡಲು ಬರುತ್ತದೆ, ಸಮಯ ಬಂದಾಗ ಹಾಗೆ ಮಾತಾಡ್ತೀನಿ ಹೋಗಿ ‘ಅವನಿಗೆ’ ಹೇಳಿ ಅಂತ ಮಾಧ್ಯಮದವರಿಗೆ ಹೇಳುತ್ತಾರೆ.

Read More »

ಆಸ್ತಿ ವಿವಾದ: ರಾಜಿ ಸಂಧಾನ ಮಾಡಿದ್ರೂ ತಮ್ಮನನ್ನೇ ಕೊಂದ ಅಣ್ಣ

ಧಾರವಾಡ, ಫೆ.21: ಆಸ್ತಿ ವಿವಾದ ಸಂಬಂಧ ಎರಡು ಗುಂಪುಗಳು ಬಡಿದಾಡಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಧಾರವಾಡ(Dharwad) ತಾಲೂಕಿನತಲವಾಯಿಗ್ರಾಮದಲ್ಲಿ ನಡೆದಿದೆ. ಆಶೋಕ ಕಮ್ಮಾರ್(45) ಮೃತ ವ್ಯಕ್ತಿ. ಇನ್ನೊಬ್ಬ ಫಕೀರಪ್ಪ(50) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆ ನಡೆದಿದೆ. ಇನ್ನು ಮೃತನ ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆಸ್ತಿಗಾಗಿ ತಮ್ಮನನ್ನೇ ಕೊಂದು ಹಾಕಿದ ಅಣ್ಣ ಮನೆ, …

Read More »

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ ಕೊಪ್ಪಳ, ಫೆ.21: ಕೊಪ್ಪಳ ಜಿಲ್ಲಾ ಆಸ್ಪತ್ರೆ(Koppal District Hospital) ಜಿಲ್ಲೆಯಲ್ಲಿರುವ ಏಕೈಕ ಸರ್ಕಾರಿ ದೊಡ್ಡ ಆಸ್ಪತ್ರೆ. ಕೊಪ್ಪಳ ವೈದ್ಯಕೀಯ ಕಾಲೇಜಿನ ಅಧೀನದಲ್ಲಿರುವ ಈ ಆಸ್ಪತ್ರೆಗೆಕೊಪ್ಪಳ ಜಿಲ್ಲೆಮಾತ್ರವಲ್ಲ, ಸುತ್ತಮುತ್ತಲಿನ ವಿಜಯನಗರ, ರಾಯಚೂರು ಜಿಲ್ಲೆಯ ಅನೇಕ ತಾಲೂಕಿನಿಂದಲೂ ಪ್ರತಿನಿತ್ಯ ನೂರಾರು ರೋಗಿಗಳು ಬರುತ್ತಾರೆ. ಬೇರೆ ಆಸ್ಪತ್ರೆಗೆ ಹೋಲಿಸಿದರೆ ಇಲ್ಲಿ ತಕ್ಕಮಟ್ಟಿನ ಉತ್ತಮ ಚಿಕಿತ್ಸೆ ಸಿಗುತ್ತದೆ. ಹೀಗಾಗಿ ಹೆಚ್ಚಿನ ರೋಗಿಗಳು ತಮ್ಮ ಅನೇಕ ಖಾಯಿಲೆಗಳ ಚಿಕಿತ್ಸೆಗಾಗಿ ಕೊಪ್ಪಳ …

Read More »

ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆಗಳು ಲೋಕಾಯಕ್ತ, ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ

ಬೆಂಗಳೂರು, ಫೆ.21: ಹೈಕೋರ್ಟ್​ನಿಂದ ಭ್ರಷ್ಟಾಚಾರ ನಿಗ್ರಹ ದಳ(ACB) ರದ್ದು ಹಿನ್ನೆಲೆ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರವರ್ಗಾವಣೆಮಾಡಿದೆ. ಎಸಿಬಿಯಲ್ಲಿದ್ದ ಬರೊಬ್ಬರಿ 524 ಹುದ್ದೆಗಳನ್ನ ವಿಂಗಡಿಸಿ, ಎರಡು ಇಲಾಖೆಗೆ ವರ್ಗಾಹಿಸಲಾಗಿದೆ. 2022ರ ಆಗಸ್ಟ್​.11 ರಂದು ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಎಸಿಬಿ ರದ್ದು ಹಿನ್ನೆಲೆ ಅಲ್ಲಿ ಇರುವಂತಹ ಹುದ್ದೆಗಳು ಖಾಲಿಯಾಗಿತ್ತು. ಲೋಕಾಯುಕ್ತಕ್ಕೆ 266, ಪೊಲೀಸ್ ಇಲಾಖೆಗೆ 258 ಹುದ್ದೆಗಳ ವರ್ಗಾವಣೆ ಇದೀಗ ಲೋಕಾಯುಕ್ತ ಸಂಸ್ಥೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ …

Read More »