ಬೆಂಗಳೂರು: ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಆರೋಪಿಸಿ ದಿಲ್ಲಿಯಲ್ಲಿ ಹೋರಾಟ ಕ್ಕಿಳಿಯಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಫೆ. 7ರಂದು ಸಂಸತ್ ಭವನದ ಎದುರು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿದೆ. ಜತೆಗೆ, “ನನ್ನ ತೆರಿಗೆ ನನ್ನ ಹಕ್ಕು” ಅಭಿಯಾನಕ್ಕೂ ಬೆಂಬಲ ಸೂಚಿಸಿದೆ. ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಕೂಗೆಬ್ಬಿಸಿದ ಸಂಸದ ಡಿ.ಕೆ. ಸುರೇಶ್ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಇದರಿಂದ ಪಕ್ಷಕ್ಕಾಗಿರುವ ಮುಜುಗರವನ್ನೂ ತಪ್ಪಿಸಬೇಕಾದ ಅನಿವಾರ್ಯಕ್ಕೆ ಕಾಂಗ್ರೆಸ್ ಸಿಲುಕಿದೆ. ಅಲ್ಲದೆ ಲೋಕ ಸಭೆ …
Read More »42 ಸಿಮ್ಕಾರ್ಡ್ಅಕ್ರಮವಾಗಿ ಖರೀದಿಸಿ ಸಿಕ್ಕಿಬಿದ್ದ ಯುವಕರು
ಕುಟುಂಬದ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್ಕಾರ್ಡ್ಗಳನ್ನು ಸಂಗ್ರಹಿಸಿಕೊಂಡು ಬೆಂಗಳೂರು ಕಡೆ ಪ್ರಯಾಣಿಸುತ್ತಿದ್ದ ಐವರನ್ನು ಧರ್ಮಸ್ಥಳ ಪೊಲೀಸರು ರವಿವಾರ ಪತ್ತೆಹಚ್ಚಿದ್ದಾರೆ. ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಓರ್ವ ಅಪ್ರಾಪ್ತ ವಯಸ್ಕನಾಗಿದ್ದಾನೆ. ಇಷ್ಟು ಸಂಖ್ಯೆಯ ಸಿಮ್ ಪಡೆದುಕೊಂಡಿರುವುದರ ಹಿಂದೆ ದುರುದ್ದೇಶವಿದೆಯೇ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ವೃತ್ತಿಯಲ್ಲಿ ದುಬಾೖಯಲ್ಲಿ ಟ್ರೇಡಿಂಗ್ ಕೆಲಸ ಮಾಡುತ್ತಿದ್ದ ಬಿಕಾಂ ಪದವೀಧರ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ ಅಕ್ಬರ್ ಆಲಿ (24), ಬೆಳ್ತಂಗಡಿಯ ಬಟ್ಟೆ ಅಂಗಡಿಯಲ್ಲಿ ಸೇಲ್ಸ್ಮನ್ ಆಗಿದ್ದ …
Read More »ನನ್ನ ರಾಮನನ್ನು ಬಿಜೆಪಿಗೆ ಬಿಟ್ಟುಕೊಡುವುದಿಲ್ಲ. ಶಶಿ ತರೂರ್
ನವದೆಹಲಿ: ರಾಮ ಮಂದಿರದ ಸಮರ್ಪಣಾ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದರೆ ಕಾಂಗ್ರೆಸ್ ದೇವರನ್ನು ಕೈಬಿಡುತ್ತಿದೆ ಎಂದರ್ಥವಲ್ಲ ಎಂದು ತರೂರ್ ಹೇಳಿದ್ದಾರೆ. ಇಂಡಿಯಾ ಟುಡೆ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತರೂರ್, “ಬಾಲ್ಯದಿಂದಲೂ ರಾಮನನ್ನು ಪ್ರಾರ್ಥಿಸುತ್ತಿರುವವನಾಗಿ ನಾನು ನನ್ನ ರಾಮನನ್ನು ಬಿಜೆಪಿಗೆ ಒಪ್ಪಿಸಲು ಹೋಗುವುದಿಲ್ಲ. ಬಿಜೆಪಿಯು ರಾಮನ ಮೇಲೆ ಯಾವುದೇ ಹಕ್ಕುಸ್ವಾಮ್ಯವನ್ನು ಹೊಂದಿದೆ ಅಥವಾ ದೈವಿಕತೆಯ ಯಾವುದೇ ಅಭಿವ್ಯಕ್ತಿಯನ್ನು …
Read More »“ಕಿತ್ತೂರು ಕೋಟೆ’ಯತ್ತ ನಿರ್ಲಕ್ಷ್ಯ
ಕಿತ್ತೂರು: ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಮಹಿಳೆ ವೀರರಾಣಿ ಚನ್ನಮ್ಮಳ ಕೋಟೆ ಅಭಿವೃದ್ಧಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವಲ್ಲಿ ವಿಫಲವಾಗಿದೆ. ಕೋಟೆ ಪ್ರವೇಶಿಸುತ್ತಿದ್ದಂತೆ ಸಹಿಸಲಾಗದಷ್ಟು ಕೊಳೆತು ನಾರುವ ಕಸದ ವಾಸನೆ ಮೂಗಿಗೆ ಬಡಿಯುತ್ತದೆ. ಸಾರ್ವಜನಿಕರು, ಅಂಗಡಿಕಾರರು ತಾಜ್ಯ ವಸ್ತುಗಳನ್ನು ಕೋಟೆ ಮುಂಭಾಗ ಎಸೆಯುತ್ತಿರುವ ಪರಿಣಾಮ ಗಬ್ಬೆದ್ದು ನಾರುತ್ತಿದೆ. ಇತಿಹಾಸ ಸಾರುವ ಕಂದಕಗಳು ಕಸ ಕಡ್ಡಿ, ಸಾರಾಯಿ ಬಾಟಲಿಗಳಿಂದ ತುಂಬಿ ತುಳುಕುತ್ತಿವೆ. ನನೆಗುದಿಗೆ ಬಿದ್ದ ಧ್ವನಿ-ಬೆಳಕು: 2011ರಲ್ಲಿ ಕೋಟೆಯ ಆವರಣದಲ್ಲಿ ಎರಡು ಕೋಟಿ ರೂ. …
Read More »ಚನ್ಮಮ್ಮನ ಕಿತ್ತೂರು ಶಕ್ತಿ ಕೇಂದ್ರವಾಗಲಿ: ಶ್ರೀಬಸವ ಜಯ ಮೃತ್ಯುಂಜಯ ಸ್ವಾಮಿ
ಕಿತ್ತೂರು: ಐತಿಹಾಸಿಕ ಚನ್ಮಮ್ಮನ ಕಿತ್ತೂರು ಕರ್ನಾಟಕದ ಶಕ್ತಿ ಕೇಂದ್ರವಾಗಬೇಕು. ರಾಣಿ ಕಿತ್ತೂರು ಚನ್ನಮ್ಮನ ಲಿಂಗೈಕ್ಯ ಜ್ಯೋತಿಯು ಕೇವಲ ಲಿಂಗಾಯತ ಸಮಾಜದ ಜ್ಯೋತಿಯಾಗಬಾರದು, ಇಡಿ ರಾಜ್ಯದ 7 ಕೋಟಿ ಕನ್ನಡಿಗರ ಜ್ಯೋತಿಯಾಗಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಹೇಳಿದರು. ವೀರ ಮಹಿಳೆ ಕಿತ್ತೂರ ರಾಣಿ ಚನ್ನಮ್ಮನವರ 195 ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ರಾಣಿ ಚನ್ನಮ್ಮನವರ ತವರು ಮನೆ ಕಾಕತಿಯಿಂದ ಆಗಮಿಸಿದ ಲಿಂಗೈಕ್ಯ ಜ್ಯೋತಿಯನ್ನು …
Read More »ಭರವಸೆಯ ಭವಿಷ್ಯಕ್ಕಾಗಿ ಫೆ. 16ರಂದು ದೂರದೃಷ್ಟಿಯ ಬಜೆಟ್ ಮಂಡನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಜೆ ದಿನ ಭಾನುವಾರ ಕೂಡ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿ ಬಜೆಟ್ ಮಂಡಿಸುವುದಾಗಿ ಸಿಎಂ ತಿಳಿಸಿದ್ದಾರೆ. ಫೆಬ್ರವರಿ 16ರಂದು ಮಂಡಿಸುವ ಬಜೆಟ್ ಹಿನ್ನಲೆಯಲ್ಲಿ ಕಳೆದ ಎರಡು ವಾರದಿಂದ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಭಾನುವಾರ ಕೂಡ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರಗತಿಪರ ಹಾಗೂ ಸದೃಢ ಬಜೆಟ್ ಸಿದ್ದತೆಗೆ ಅಂಕಿ ಅಂಶಗಳ ಆಳಕ್ಕೆ ಇಳಿದಿದ್ದೇನೆ. ಅಧಿಕಾರಿಗಳೊಂದಿಗೆ …
Read More »ಎಸ್ಎಸ್ಎಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ:H.D.KI.
ಬೆಂಗಳೂರು, : ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam 2024 Date Sheet) ವೆಚ್ಚವನ್ನು ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ತೀವ್ರವಾಗಿ ಖಂಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಎಸ್ಎಸ್ಎಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಜತೆಗೆ, ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧ ಸರ್ಕಾರ …
Read More »ಅಡ್ವಾಣಿಯನ್ನು ಮೂಲೆಗುಂಪು ಮಾಡಿದ್ದೂ ಬಿಜೆಪಿ : ರಾಮಲಿಂಗಾರೆಡ್ಡಿ
ಗದಗ: ಎಲ್.ಲೆ.ಅಡ್ವಾಣಿಗೆ (LK Advani) ಭಾರತ ರತ್ನ (Bharatha Rathna) ಸಂದ ಹಿನ್ನೆಲೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalingareddy), ಬಿಜೆಪಿ ಈ ಮಟ್ಟಕ್ಕೆ ಬೆಳೆಯಲು ಅಡ್ವಾಣಿ ಅವರೂ ಕಾರಣ. ಅವರನ್ನು ಮೂಲೆಗುಂಪು ಮಾಡಿದ್ದೂ ಬಿಜೆಪಿನೇ. ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವಂತೆ ಈಗ ಭಾರತ ರತ್ನ ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಎಲ್.ಕೆ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದು ಸಂತೋಷ. ಆದರೆ ಈಗಲಾದರೂ …
Read More »ರಾಜ್ಯದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಾರೆ: ನಿರ್ದೇಶಕ ಅಗ್ನಿ ಶ್ರೀಧರ ಆರೋಪ
ಬೆಂಗಳೂರು, ಫೆಬ್ರವರಿ 03: ನರಬಲಿ (Human sacrifice), ಹೆಣ್ಣು ಮಕ್ಕಳ ಬಲಿ ಈಗಲೂ ಇದೆ. ಕಾಮಾಕ್ಯದಿಂದ ಕೇರಳದವರೆಗೂ (Kerala) ನರಬಲಿ ನಡೆಯುತ್ತದೆ. ಬಡ ಮಕ್ಕಳನ್ನು, ಒಂಟಿ ಹೆಣ್ಣು ಮಕ್ಕಳನ್ನು ಮತ್ತು ಬಿಕ್ಷುಕರನ್ನು ಇದಕ್ಕೆ ಬಳಸಿಕೊಳ್ಳಲಾಗುತ್ತೆ. ಕರ್ನಾಟಕದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಾರೆ. ನೇರವಾಗಿ ಅವರು ಇದರಲ್ಲಿ ಭಾಗಿಯಾಗಲ್ಲ. ಆದರೆ ಈ ಕೆಲಸ ಮಾಡಿಸುತ್ತಾರೆ ಎಂದು ನಿರ್ದೇಶಕಅಗ್ನಿ ಶ್ರೀಧರ್(Agni Sreedhar) ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಂಡುಪಾಳ್ಯ …
Read More »ಬಾಗಲಕೋಟೆಯಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆ
ಕುಸ್ತಿ ಗ್ರಾಮೀಣ ಭಾಗದ ಮಣ್ಣಿನ ಕ್ರೀಡೆ. ಮಣ್ಣಿನ ಅಖಾಡದಲ್ಲಿ ತೊಡೆ ತಟ್ಟಿ ನಿಂತ ಮಲ್ಲರನ್ನು ನೋಡೋದೆ ಒಂದು ಖುಷಿ. ಪಟ್ಟು ಹಾಕಿ ಎದುರಾಳಿಯನ್ನು ಎತ್ತಿ ಬಿಸಾಕುವ ಜಟ್ಟಿಗಳ ಕಾದಾಟ, ನೋಡುಗರನ್ನು ತುದಿಗಾಲ ಮೇಲೆ ನಿಲ್ಲಿಸುತ್ತದೆ. ಇಂದು ಬಾಗಲಕೋಟೆ ತಾಲ್ಲೂಕಿನ ತುಳಸಿಗೇರಿ ಗ್ರಾಮದಲ್ಲಿ ಪೈಲ್ವಾನರು ಭರ್ಜರಿ ಸೆಣಸಾಟ ನಡೆಸಿ ದೂಳೆಬ್ಬಿಸಿದರು. ಅದರ ಝಲಕ್ ಇಲ್ಲಿದೆ.ಹಲಗೆ ಬಾರಿಸುತ್ತಾ ಜಟ್ಟಿಗಳಿಗೆ ಹುರುಪು ನೀಡುತ್ತಿರುವ ಹಲಗೆ ಮೇಳ ಕಲಾವಿದರು.ಮಣ್ಣಿನ ಅಖಾಡದಲ್ಲಿ ಎದುರಾಳಿಯನ್ನು ಎತ್ತಿ ನೆಲಕ್ಕೆ ಬಡಿಯುವ …
Read More »
Laxmi News 24×7