ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ (Congress Guarantee Scheme) ಘೋಷಣೆಯಾಗಿರುವ ʼಯುವ ನಿಧಿʼ (Yuva Nidhi Scheme) ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗಿದೆ. ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ (ಜ. 12) ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಕಾರ್ಯಕ್ರಮ ನಡೆಯಲಿದೆ. ಸುಮಾರು 85 ಸಾವಿರಕ್ಕೂ ಅಧಿಕ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೊಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ …
Read More »ಭಗವಂತ ಖೂಬಾಗೆ ಟಿಕೆಟ್ ವಿರೋಧಸಿದ ಪ್ರಭುಚೌಹಾಣ್; ಗದ್ದಲದ ನಡುವೆ ಬಿಜೆಪಿ ಸಭೆಯಿಂದ ಹೊರನಡೆದ ಖೂಬಾ
ಬೆಂಗಳೂರು, : ಕೊಪ್ಪಳ ಸಂಸದ ಸಂಗಣ್ಣ ಕರಡಿ (Sanganna Karadi) ಹಾಗೂ ಬೀದರ್ ಸಂಸದರೂ ಆಗಿರುವ ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ನಾಯಕರೊಂದಿಗೆ ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಬುಧವಾರ ರಾಜ್ಯಾಧ್ಯಕ್ಷಬಿವೈ ವಿಜಯೇಂದ್ರ(BY Vijayendra) ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಆಂತರಿಕ ಕಲಹ ಸ್ಫೋಟಗೊಂಡು ಭಗವಂತ ಖೂಬಾ ಸಭೆಯಿಂದ ಹೊರನಡೆದ ಘಟನೆ ನಡೆಯಿತು. ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು …
Read More »ಬೆಳಗಾವಿ: ಸುರೇಬಾನ ಗ್ರಾಮದ ಹೊರ ವಲಯದ ಬೆಟ್ಟದಾರಣ್ಯದಲ್ಲೇ ಶಬರಿಗೆ ಶ್ರೀರಾಮನ ದರ್ಶನ
ಬೆಳಗಾವಿ, : ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Mandir) ಲೋಕಾರ್ಪಣೆಗೆ ದಿನಗಣನೆ ಶುರುವಾಗಿದೆ. ಈ ನಡುವೆ ದೇಶದಲ್ಲಿ ಇರುವ ಶ್ರೀರಾಮ, ಸೀತೆ, ಆಂಜನೇಯನಿಗೆಸಂಬಂಧಿಸಿದ ಅನೇಕ ಕುರುಹುಗಳು ಜಗಜ್ಜಾಹಿರವಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಇಂತಹ ಅನೇಕ ನಿರ್ದರ್ಶನಗಳು ಬೆಳಕಿಗೆ ಬಂದಿವೆ. ಇದೀಗ ಶ್ರೀರಾಮನ ದರ್ಶನಕ್ಕಾಗಿ ಜಾತಕ ಪಕ್ಷಿಯಂತೆ ಕಾದುಕುಳಿತಿದ್ದ ಶಬರಿಗೆ (Shabari) ರಾಮನು ದರ್ಶನ ಕೊಟ್ಟಿದ್ದು ಕೂಡ ಕರ್ನಾಟಕದಲ್ಲೇ ಎಂಬುದು ಹೆಮ್ಮೆಯ ಸಂಗತಿ. ಹಾಗಾದರೆ ಆ ಸ್ಥಳ ಯಾವುದು ಎಂಬುದು ಇಲ್ಲಿದೆ. ಶ್ರೀರಾಮನಿಗಾಗಿ ಶಬರಿ ಕಾದುಕುಳಿತದ್ದು ಕರ್ನಾಟಕದ ಬೆಳಗಾವಿ ಜಿಲ್ಲೆಯ …
Read More »ಲೋಕಸಭಾ ಚುನಾವಣೆ: ಬಿಜೆಪಿಯ ಕ್ಲಸ್ಟರ್ ಮಟ್ಟದ ಸಭೆ ಪೂರ್ಣ, ಈಗ ವಿಜಯೇಂದ್ರ ಚಿತ್ತ ದೆಹಲಿಯತ್ತ
ಬೆಂಗಳೂರು,: ಮುಂಬರುವ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ (BJP Karnataka) ಸಿದ್ಧತೆ ನಡೆಸಿದ್ದು, ಮೊದಲ ಹಂತದಲ್ಲಿ ಕ್ಲಸ್ಟರ್ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದ್ದು, ಇಲ್ಲಿ ಪಕ್ಷದ ಕಾರ್ಯತಂತ್ರ ಸೇರಿದಂತೆ ಮುಂದಿನ ನಡೆ ಹೇಗಿರಬೇಕು ಎಂಬುದನ್ನು ಚರ್ಚೆ ಮಾಡಲಾಗಿದೆ. ಇನ್ನು ರಾಜ್ಯದ 8 ಕ್ಲಸ್ಟರ್ಗಳ ವ್ಯಾಪ್ತಿಯಲ್ಲಿ ಬರುವ 28 ಲೋಕಸಭಾ ಕ್ಷೇತ್ರಗಳ ಸಭೆ ಮುಕ್ತಾಯಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಬುಧವಾರ ಮತ್ತು ಗುರುವಾರ ಎರಡು …
Read More »ಹೆಚ್ಚುವರಿ ಡಿಸಿಎಂ ಹುದ್ದೆ ಕೇಳುವವರನ್ನು ಲೋಕಸಭಾ ಚುನಾವಣೆ ಕಣಕ್ಕೆ ಇಳಿಸಲು ಡಿಕೆಶಿ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಮಾಡಬೇಕು ಎಂದು ಒತ್ತಡ ಹೇರುತ್ತಿರುವವರಿಗೆ ಲೋಕಸಭಾ (lokasabha) ಚುನಾವಣೆ (election) ಜವಾಬ್ದಾರಿ ನೀಡಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (d.k. shivakumar) ಅವರು ಕಾಂಗ್ರೆಸ್ (congress) ಹೈಕಮಾಂಡ್ ಗೆ ಸಲಹೆ ನೀಡಿದ್ದಾರೆ. ದಲಿತ ಮತ್ತು ಸಿಎಂ ಆಪ್ತ ಸಚಿವರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಆದರೆ, ಎಐಸಿಸಿ (AICC) …
Read More »ನಿಗಮ ಮಂಡಳಿ ಬೇಡವೆಂದು ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ!
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ ಬೆನ್ನಲ್ಲೇ ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ಅಧ್ಯಕ್ಷ ( corporation board chairman) ನೇಮಕಾತಿ ಪಟ್ಟಿಗೆ ಮರುಜೀವ ಬಂದಿದೆ. ಸುರ್ಜೆವಾಲ ಅವರು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸುದೀರ್ಘವಾಗಿ ಮಾತುಕತೆ ನಡೆಸಿ ನಿಗಮ ಮಂಡಳಿ ಪಟ್ಟಿ ಅಂತಿಮಗೊಳಿಸಿದ್ದಾರೆ. ಇದರ ಮಧ್ಯೆ ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಹೀಗಾಗಿ ನನ್ನನ್ನು ಪರಿಗಣಿಸಬೇಡಿ …
Read More »ರಾಮನನ್ನು ರಾಜಕೀಯ ಪ್ರಚಾರಕ್ಕೆ ಬಳಸಿದ್ದು ಸಮಸ್ತ ಹಿಂದೂಗಳಿಗೆ ಮಾಡಿದ ದ್ರೋಹ: ಸಿಎಂ ಸಿದ್ದು
ಬೆಂಗಳೂರು: ಇದೇ 22ರಂದು ಅಯೋಧ್ಯೆ (Ayodhya) ರಾಮ ಮಂದಿರ (Ram MandiR) ಉದ್ಘಾಟನೆಗೊಳ್ಳಲಿದೆ. ಈ ನಡುವೆ ರಾಮನನ್ನು ಬಿಜೆಪಿ (BJP) ರಾಜಕೀಯ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ (Congress) ನಾಯಕರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಿಜೆಪಿ ವಿರುದ್ಧ ಕಿಡಿಕಾರಿದ್ದು, ‘ಬಿಜೆಪಿ ರಾಮನನ್ನು ರಾಜಕೀಯ ಪ್ರಚಾರಕ್ಕೆ ಬಳಸಿದ್ದು ರಾಮ ಹಾಗೂ ಸಮಸ್ತ ಹಿಂದೂಗಳಿಗೆ ಮಾಡಿದ ದ್ರೋಹ’ ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ (X) …
Read More »3 ಡಿಸಿಎಂ ಡಿಶುಂ ಡಿಶುಂಗೆ ಕೊನೆಗೂ ಬಿತ್ತು ಫುಲ್ ಸ್ಟಾಪ್: ಎಲ್ಲಾ ಗೊಂದಲಗಳಿಗೆ ಸುರ್ಜೆವಾಲ ತೆರೆ
ಬೆಂಗಳೂರು): ಲೋಕಸಭೆ ಚುನಾವಣೆ (Loksabha Elections 2024) ವೇಳೆಯೇ ಕಾಂಗ್ರೆಸ್(Congress) ನಲ್ಲಿ ಮೂರು ಡಿಸಿಎಂ (ಉಪಮುಖ್ಯಮಂತ್ರಿ) ಹುದ್ದೆ ಕೂಗು ಭಾರೀ ಜೋರಾಗಿದೆ. ಕಾಂಗ್ರೆಸ್ನ ಕೆಲ ಹಿರಿಯ ನಾಯಕರೇ 3 ಡಿಸಿಎಂ ಸ್ಥಾನ ಸೃಷ್ಟಿ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಪಕ್ಷದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಧ್ಯೆ ಪ್ರವೇಶಿಸಿ ಮೂರು ಡಿಸಿಎಂ ಗೊಂದಲಗಳಿಗೆ ತೆರೆ …
Read More »ಬೆಳಗಾವಿ ಡಿಸಿ ಕಚೇರಿಯಲ್ಲೇ ವಿಷಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಬೆಳಗಾವಿ, ಜನವರಿ 10: ಡಿಸಿ ಕಚೇರಿಯಲ್ಲೇ ವಿಷ(poison)ಕುಡಿದ ವ್ಯಕ್ತಿ ಆತ್ಮಹತ್ಯೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ್ ಪಟ್ಟಣ ನಿವಾಸಿ ಕುಮಾರ್ ಕೊಪ್ಪದ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಡಿಸಿ ಕಚೇರಿಯಲ್ಲಿ ಇಲ್ಲದಿರುವಾಗ ಆತ್ಮಹತ್ಯೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ ಯಾವುದೇ ಕಾರಣ ತಿಳಿದಿಲ್ಲ. ಪೊಲೀಸರು ಅಸ್ವಸ್ಥನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ ವಿಜಯಪುರ: ಸರ್ಕಾರಿ ಬಸ್ ಡಿಕ್ಕಿಯಾಗಿ …
Read More »ಮರಾಠಿ ಭಾಷಿಕರಿಗೆ ಪರಿಹಾರ ನಿಧಿ ಮಂಜೂರು, ಬೆಳಗಾವಿಯಲ್ಲೇ ಆರೋಗ್ಯ ವಿಮೆ ತೆರೆದ ಮಹಾರಾಷ್ಟ್ರ
ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು. ಕರ್ನಾಟಕದ ಗಡಿಯಲ್ಲಿ ಇರುವ ಮರಾಠಿ ಭಾಷಿಕರಿಗೆ ಮಹಾರಾಷ್ಟ್ರ (Maharashtra) ಸರ್ಕಾರ ಆರೋಗ್ಯ ವಿಮೆ (Health Insurance) ಜಾರಿ ಮಾಡಲಿದೆ ಎಂದಿದ್ದರು. ಈ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸರ್ಕಾರ ಕರ್ನಾಟಕದ ಗಡಿಯೊಳಗಿನ ಮರಾಠಿ ಭಾಷಿಕರಿಗೆ ಆರೋಗ್ಯ ಪರಿಹಾರ ನಿಧಿ ಮಂಜೂರು ಮಾಡಿದೆ. ಪರಿಹಾರ ನಿಧಿ ಜೊತೆಗೆ ಕರ್ನಾಟಕದ 865 ಹಳ್ಳಿ-ಪಟ್ಟಣದ ಜನರಿಗಾಗಿ …
Read More »