Breaking News

ರಾಷ್ಟ್ರೀಯ

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಫಜಲಪುರ : ಅಫಜಲಪುರ ತಾಲೂಕಿನ ಗ್ರಾಮವೊಂದರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಸಂಬಂಧಿಯೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದರಿಂದ ಗರ್ಭಿಣಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಪಾಲಕರಿಗೆ ಮಾಹಿತಿ ಮೂಲಗಳು ತಿಳಿಸಿವೆ. ನಿಂಬರಗಾ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆಳಂದ ತಾಲೂಕಿನ ಗ್ರಾಮವೊಂದಕ್ಕೆ ಸೇರಿದ್ದ ಈ ಬಾಲಕಿ, ವಸತಿ ಶಾಲೆಯಲ್ಲಿ ಇದ್ದಾಗ ಹೊಟ್ಟೆ …

Read More »

ರಾಮಮಂದಿರಕ್ಕೆ ಕರ್ನಾಟಕದಿಂದ 51 ಅಡಿ ಕೇಸರಿ ಧ್ವಜ ಅರ್ಪಣೆ

ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಕನ್ನಡಿಗರು ರಾಮಮಂದಿರಕ್ಕೆ ಅತೀ ದೊಡ್ಡ ಕೇಸರಿ ಧ್ವಜವನ್ನು ಅರ್ಪಣೆ ಮಾಡಿದ್ದಾರೆ. ಕರ್ನಾಟಕದಿಂದ ಅಯೋಧ್ಯೆಗೆ ಜೀಪ್​ನಲ್ಲಿ ತೆರಳಿ 51 ಅಡಿ ಭಗವಾ ಧ್ವಜವನ್ನು ಶ್ರೀರಾಮಜನ್ಮ ಭೂಮಿ ಟ್ರಸ್ಟ್​ಗೆ ನೀಡಿದ್ದಾರೆ.   ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರಕ್ಕೆ ಕರ್ನಾಟಕದ ಕೊಡುಗೆ ಅಧಿಕವಾಗಿದೆ. ಪ್ರಮುಖವಾಗಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹ ಮೈಸೂರಿನಲ್ಲಿ ತಯಾರಾಗಿದೆ. ಅಲ್ಲದೇ ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. …

Read More »

ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಮಂಡ್ಯ, ಜ.19: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್​ಎಸ್​ಎಸ್​ ಮುಖಂಡಕಲ್ಲಡ್ಕ ಪ್ರಭಾಕರ್ ಭಟ್(Kalladka Prabhakar Bhat) ಅವರಿಗೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಪ್ರಭಾಕರ್ ಭಟ್ ಪರ ನ್ಯಾಯಾಲಯದಲ್ಲಿ ವಲಾಕತ್ತು ವಹಿಸಿದ್ದ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ಬಹಿರಂಗವಾಗಿದೆ. ಇದೀಗ ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ ಹೇಳಿಕೆ …

Read More »

ಫೆಬ್ರವರಿಯಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಸೂಚನೆ

ನವದೆಹಲಿ, ಜನವರಿ 19: ಕಾವೇರಿ ನೀರು ವ್ಯಾಜ್ಯ ನ್ಯಾಯಾಧಿಕರಣದ (CWDT) ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಅಂತಿಮ ಆದೇಶದಲ್ಲಿ ಹೇಳಿದ ಪ್ರಮಾಣದಲ್ಲಿ ತಮಿಳುನಾಡಿಗೆ ಜನವರಿಯ ಬಾಕಿ ಉಳಿದಿರುವ ದಿನಗಳು ಹಾಗೂ ಫೆಬ್ರವರಿಯಲ್ಲಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಗುರುವಾರ ಆದೇಶ ನೀಡಿದೆ. ಸಿಡಬ್ಲ್ಯುಆರ್​ಸಿ ಅಧ್ಯಕ್ಷರಾದ ವಿನೀತ್ ಗುಪ್ತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಾವೇರಿ ಜಲಾನಯನ ಪ್ರದೇಶದ ನೀರಿನ ಸ್ಥಿತಿಗತಿ ಮತ್ತು ಬೆಳೆಗಳ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಜನವರಿಯ …

Read More »

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು, 20

ಆನೇಕಲ್, ಜನವರಿ 18: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟು 20 ಜನ ಗಾಯಗೊಂಡ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆ ಆನೇಕಲ್ (Anekal) ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು ಜಾರ್ಖಂಡ್​​ ಮೂಲದ ಮಿನರ್​ ಬಿಸ್ವಾಸ್​​, ಶಾಹೀದ್​ ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ …

Read More »

ಉತ್ತರ ಕನ್ನಡದಲ್ಲಿ ಅರ್ಹರಾದರು ಸಿಗದ ಗೃಹಲಕ್ಷ್ಮಿ ಯೋಜನೆ ಲಾಭ: ಮಾಹಿತಿ ವಿವರ ತಿಳಿಯಿರಿ

ಕಾರವಾರ, ಜನವರಿ 18: ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರು ಕೂಡ ಜಿಲ್ಲೆಯಲ್ಲಿ ಮಾತ್ರ ಗೃಹಲಕ್ಷ್ಮಿ ಯೋಜನೆ ಸೂಕ್ತ ರೀತಿಯಲ್ಲಿ ಅನುಷ್ಠಾನಗೊಂಡಿಲ್ಲ. ಕೆಲ ತಾಂತ್ರಿಕ ಸಮಸ್ಯೆಯಿಂದಾಗಿ ಇನ್ನೂ ಕೂಡ ಕೆಲ ಮಹಿಳೆಯರು ಮೊದಲ ಕಂತಿನ ಹಣವನ್ನೇ ಪಡೆಯಲಾಗದೆ ಪರದಾಡುತ್ತಿದ್ದಾರೆ. ಇನ್ನು ಕೆಲವರು ಅರ್ಹರಾಗಿದ್ದರೂ ಬಿಪಿಎಲ್ ಕಾರ್ಡ್ ಪಡೆಯಲಾಗದೇ ಯೋಜನೆಯ ಲಾಭ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ ತಿಂಗಳಲ್ಲಿ ಚಾಲನೆ ಲಭಿಸಿದೆ. ಯೋಜನೆಯ ಲಾಭ ಪಡೆದುಕೊಳ್ಳಲು ಜಿಲ್ಲೆಯಲ್ಲಿ …

Read More »

ಉತ್ತರ ಕರ್ನಾಟಕ ಭಾಗದ ಬೇಡಿಕೆ; ಬಸವರಾಜ ಹೊರಟ್ಟಿ ಪತ್ರ

ಬೆಳಗಾವಿ, ಜನವರಿ 17: ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಕೆಯ ಕುರಿತು ಸದಾ ಚರ್ಚೆ ನಡೆಯುತ್ತದೆ. ಸರ್ಕಾರಿ ಕಛೇರಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಉತ್ತರ ಕರ್ನಾಟಕ ಭಾಗದ ಜನರು ಸದಾ ಬೇಡಿಕೆ ಮುಂದಿಡುತ್ತಾರೆ. 2023ರ ಡಿಸೆಂಬರ್‌ನಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ಸುವರ್ಣ ವಿಧಾನಸೌಧದಲ್ಲಿ ನಡೆದಿತ್ತು. ಬಳಿಕ ಮತ್ತೆ ವಿಧಾನಸೌಧ ಖಾಲಿಯಾಗಿದೆ. ಸರ್ಕಾರಿ ಕಛೇರಿಗಳನ್ನು ಸ್ಥಳಾಂತರ ಮಾಡುವ ಕುರಿತು ವಿಧಾನ ಪರಿಷತ್ ಸಭಾಪತಿಗಳು ಪತ್ರವನ್ನು ಬರೆದಿದ್ದಾರೆ. ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು …

Read More »

ಕೇಂದ್ರ ಸರ್ಕಾರಿ ಕಛೇರಿಗಳಿಗೆ ಅರ್ಧ ದಿನ ರಜೆ

ಬೆಂಗಳೂರು, : ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರ ಸೋಮವಾರ ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿದೆ. ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕಛೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರ ಜನವರಿ 22ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿದೆ. Ayodhya Ram Mandir: ರಾಮ ಮಂದಿರ ಉದ್ಘಾಟನೆ: ಏಳು ದಿನಗಳ ಆಚರಣೆಗಳು …

Read More »

ಉಡುಪಿ: ಸರ್ವಜ್ಞ ಪೀಠಾರೋಹಣ ಮಾಡಿದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದರು. ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಗುರುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಚತುರ್ಥ ಪರ್ಯಾಯ ಆರಂಭಿಸಿದರು. ಶ್ರೀ ಮಧ್ವಾಚಾರ್ಯರ ದ್ವೈತ ತತ್ವವನ್ನು ವಿಶ್ವದಾದ್ಯಂತ ಪ್ರಚಾರ ಮಾಡುವ ಧ್ಯೇಯ ಹೊಂದಿರುವ ಪ್ರಗತಿಪರ ದೃಷ್ಟಿಗೆ ಹೆಸರಾದ ಉಡುಪಿಯ ಶ್ರೀ ಪುತ್ತಿಗೆ …

Read More »

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ

ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ: ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು …

Read More »