Breaking News

ರಾಷ್ಟ್ರೀಯ

ನವಿಲುಗಳನ್ನು ಕೊಂದು ಮಾರಾಟ ಮಾಡ್ತಿದ್ದ ಆರೋಪಿ ಅರೆಸ್ಟ್

ನವಿಲುಗಳನ್ನು ಕೊಂದು ಮಾರಾಟ ಮಾಡ್ತಿದ್ದ ಆರೋಪಿ ಅರೆಸ್ಟ್   ಸದ್ದಿಲ್ಲದೇ ರಾಷ್ಟ್ರ ಪಕ್ಷಿ ನವಿಲುಗಳನ್ನ (Peacock) ಬೇಟೆಯಾಡುವ ಗ್ಯಾಂಗ್ ಹುಟ್ಟುಕೊಂಡಿದೆ. ನವಿಲಿನ ಮಾಂಸಕ್ಕಾಗಿ ರಾಷ್ಟ್ರ ಪಕ್ಷಿಗೆ ವಿಷ ಉಣಿಸುವ ಕೆಲಸಕ್ಕೆ ಪಾಪಿಗಳು ಮುಂದಾಗಿದ್ದ ಗ್ಯಾಂಗ್​​ನ್ನು ಬಂಧಿಸುವಲ್ಲಿ ಪೊಲೀಸರು (Police) ಯಶಸ್ವಿಯಾಗಿದ್ದಾರೆ. ರೈತರ ಜಮೀನಿಗೆ ಕಾಳು ತಿನ್ನಲು ಬರುತ್ತಿದ್ದ ನವಿಲುಗಳು ಮೃತಪಟ್ಟಿದ್ದನ್ನು ಕಂಡು ಗ್ರಾಮಸ್ಥರು, ಅರಣ್ಯ ಇಲಾಖೆ ಬೆಚ್ಚಿ ಬಿದ್ದಿತ್ತು. ಅಷ್ಟಕ್ಕೂ ಯಾವುದದೂ ಗ್ಯಾಂಗ್, ಅದ್ಯಾವ ರೀತಿ ನವಿಲುಗಳ ಬೇಟೆ ಆಡುತ್ತಿದ್ದರು …

Read More »

ಲೋಕಸಭೆ ಚುನಾವಣೆ: ಮತ್ತೆ ಬೆಳಗಾವಿಯಿಂದಲೇ ಶುರುವಾದ ಗಿಫ್ಟ್​​ ಪಾಲಿಟಿಕ್ಸ್

ಬೆಳಗಾವಿ, ಜನವರಿ : ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಗಿಪ್ಟ್ ಪಾಲಿಟಿಕ್ಸ್(Gift Politics) ಜೋರಾಗಿಯೇ ಸದ್ದು ಮಾಡಿತ್ತು. 2023 ವರ್ಷದ ಆರಂಭದಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮತದಾರರಿಗೆ ಗಿಫ್ಟ್​​ಗಳನ್ನು ನೀಡಿ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಆರಂಭಿಸಿದ್ದರು. ಇದೀಗ ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದು, ಈ ಬಾರಿಯೂ ಗಿಪ್ಟ್ ಪಾಲಿಟಿಕ್ಸ್ ಬೆಳಗಾವಿಯಿಂದಲೇ ಆರಂಭವಾಗಿದೆ. ಹೌದು ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ‌ ಶಾಸಕ ಸಂಜಯ …

Read More »

ಅನಂತಕುಮಾರ ಹೆಗಡೆ ಎಲ್ಲಿ ಸಿಗ್ತಾನೋ ಅಲ್ಲೇ ಹಿಡಿದು ಹೊಡೆಯುತ್ತೇವೆ: ಮಾಜಿ ಶಾಸಕ ಎಸ್.ರಾಮಪ್ಪ

ದಾವಣಗೆರೆ,: ಸಿಎಂ ಸಿದ್ದರಾಮಯ್ಯ ಬಗ್ಗೆ ಇನ್ನೊಮ್ಮೆ ಈ ರೀತಿ ಏಕವಚನದಲ್ಲಿ ಮಾತಾಡಿದರೆ ಸಂಸದ ಅನಂತಕುಮಾರ ಹೆಗಡೆ ಎಲ್ಲಿ ಸಿಗುತ್ತಾರೆ ಅಲ್ಲಿ ಹಿಡಿದು ಹೊಡೆಯಲಾಗುವುದು ಎಂದು ಕಾಂಗ್ರೆಸ್‌ ಮಾಜಿ ಶಾಸಕ ಎಸ್.ರಾಮಪ್ಪವಾರ್ನಿಂಗ್‌ ‌ಮಾಡಿದ್ದಾರೆ. ಜಿಲ್ಲೆಯ ಹರಿಹರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಆರೋಗ್ಯ ಸರಿಯಿಲ್ಲ ಅಂತಾ ಹೆಗಡೆ ಮನೆಯಲ್ಲಿ‌ ಮಲಗಿದ್ದರು. ಚುನಾವಣೆ ಹಿನ್ನೆಲೆ ಕೋಮು‌ಭಾವನೆ ಕೆರಳಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಬಿಜೆಪಿಯ ಹಲವರು ಜೈಲಿಗೆ ಹೋಗಿದ್ದಾರೆ, ಅವರ ಬಗ್ಗೆ …

Read More »

ಲೋಕಸಮರಕ್ಕೆ ʻಕೈʼ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕು

ಬೆಂಗಳೂರು: ಲೋಕಸಭಾ(Loka Saba) ಚುನಾವಣೆಗೆ ಕಾಂಗ್ರೆಸ್‌ನಲ್ಲಿ(INC Karnataka) ತಯಾರಿ ಆರಂಭಗೊಂಡಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ(KPCC) ಚುನಾವಣಾ ಸಮಿತಿ ಸಭೆ ನಡೆಸಲು ಕೈ ನಾಯಕರು ತಯಾರಿ ಮಾಡಿಕೊಂಡಿದ್ದಾರೆ.   ಜ. 19ರಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ಆಯೋಜನೆ ಮಾಡಲಾಗಿದ್ದು, ಸಭೆಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಹರೀಶ್ ಚೌಧರಿ, ಸಿಎಂ ಸಿದ್ದರಾಮಯ್ಯ , ಡಿಸಿಎಂ …

Read More »

ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ‌ ಜಾರಿ: ಕೆಎಲ್‌ಇ, ಅರಿಹಂತ ಆಸ್ಪತ್ರೆಗೆ ನೋಟಿಸ್

ಬೆಳಗಾವಿ, ಜನವರಿ 12: ಮಹಾರಾಷ್ಟ್ರ ಸರ್ಕಾರದ ಆರೋಗ್ಯ ವಿಮೆ‌ ಜಾರಿ‌ (Health Insurance) ವಿಚಾರವಾಗಿ ಬೆಳಗಾವಿಯ ಕೆಎಲ್‌ಇ ಹಾಗೂ ಅರಿಹಂತ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ. ಮಹಾರಾಷ್ಟ್ರ (Maharashtra) ಆರೋಗ್ಯ ‌ವಿಮೆಯನ್ನು ಆರೋಗ್ಯ ಇಲಾಖೆ ಗಮನಕ್ಕೆ ತರದೇ ಅನುಷ್ಠಾನಗೊಳಿಸಿದ್ದಕ್ಕಾಗಿ ಡಿಎಚ್‌ಓ‌ ಡಾ.‌ ಮಹೇಶ್ ಕೋಣಿ ನೋಟಿಸ್ ಜಾರಿ ಮಾಡಿದ್ದಾರೆ. ಯಾವ ಕಾನೂನಿಡಿ ಮಹಾರಾಷ್ಟ್ರ ಆರೋಗ್ಯ ವಿಮೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಂಡಿದ್ದೀರಿ? ಅದರಡಿ ಇಲ್ಲಿಯ ವರೆಗೆ ‌ಚಿಕಿತ್ಸೆ ಪಡೆದವರ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿ ರೋಗಿಗಳ ವಿವಿರ …

Read More »

ಮಗನನ್ನು ಹತ್ಯೆಗೈದ ತಾಯಿ ಸುಚನಾ ಸೇಠ್​ಳ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಟ್ಯಾಕ್ಸಿ ಡ್ರೈವರ್

ಬೆಳಗಾವಿ, ಜನವರಿ 12: ಬೆಂಗಳೂರಿನಲ್ಲಿ ಖಾಸಗಿ ಕಂಪನಿಯ ಸಿಇಒ ಆಗಿದ್ದ ಸುಚನಾ(Suchana Seth)ತನ್ನ ನಾಲ್ಕು ವರ್ಷದ ಮಗನನ್ನೇ ಕೊಂದ ಆರೋಪದಲ್ಲಿ ಗೋವಾ ಪೊಲೀಸರ ವಶವಾಗಿದ್ದಾಳೆ. ಸದ್ಯ ಈ ಕೇಸ್​ಗೆ ಸಂಬಂಧಪಟ್ಟಂತೆ ಟ್ಯಾಕ್ಸಿ ಡ್ರೈವರ್ ರಾಯ್ ಜೋಹಾನ್ ಡಿಸೋಜ​ ಇಂಚಿಂಚೂ ಮಾಹಿತಿ ಬಿಚ್ಚಿಟ್ಟಾರೆ. ಮಗನ ಶವದ ಜತೆಗೆ ಟ್ಯಾಕ್ಸಿಯಲ್ಲಿ ಸುಚನಾ ಸೇಠ್ ಬೆಂಗಳೂರಿಗೆ ಹೊರಟ್ಟಿದ್ದಳು. ವಾಹನ ಚಾಲನೆ ವೇಳೆ ಪೊಲೀಸರು ನನಗೆ ಕರೆ ಮಾಡಿ ಮಾಹಿತಿ ಹೇಳಿದ್ದರು. ಪೊಲೀಸರ ಪೋನ್ ಬಂದ ಬಳಿಕ …

Read More »

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು; ಸಿಎಂ ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗ: ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು (Allama Prabhu) ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ (Freedom Park) ಅಲ್ಲಮ ಪ್ರಭು (Allama Prabhu) ಎಂದು ನಾಮಕರಣ ಮಾಡಲು ನಾನು ಸಿದ್ಧ …

Read More »

ಹಾವೇರಿ ನೈತಿಕ ಪೊಲೀಸ್ ಗಿರಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್

ಬೆಂಗಳೂರು: ಹಾವೇರಿಯಲ್ಲಿ (haveri) ನಡೆದ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ (home minister) ಡಾ. ಜಿ. ಪರಮೇಶ್ವರ್ (dr. g. parameshwar) ಹೇಳಿದರು. ಬೆಂಗಳೂರಿನಲ್ಲಿ (bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆ ಮೇಲೆ ಗ್ಯಾಂಗ್ ರೇಪ್ ಆಗಿದೆ ಎನ್ನುವ ಕುರಿತು ಮೊದಲು ದೂರು ಕೊಟ್ಟಿರಲಿಲ್ಲ. ಬಳಿಕ ಆಕೆ ರೇಪ್ ಆಗಿದೆ ಎಂದು ದೂರು ನೀಡಿದ್ದಾರೆ. ಪ್ರಕರಣಕ್ಕೆ …

Read More »

ಯುವಕರ ಭವಿಷ್ಯಕ್ಕೆ ಶಕ್ತಿ ತುಂಬುವ ಯೋಜನೆ ಇದು: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂತಹ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ (Yuva Nidhi Scheme) ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನುಡಿದರು.   ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ ‘ಯುವನಿಧಿ’ ಯೋಜನೆಯನ್ನು ಉದ್ಘಾಟಿಸಿ …

Read More »

ಯುವ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ ವಿ.ಎಸ್‌. ಅಭಿಷೇಕ್‌ ಆಯ್ಕೆ

ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ನ (India Youth Congress) ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ (national media coordinator) ವಿ.ಎಸ್‌. ಅಭಿಷೇಕ್‌ (v.s. abhishek) ಅವರನ್ನು ನೇಮಿಸಲಾಗಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಉಸ್ತುವಾರಿ ಮಾಧ್ಯಮ ವಿಭಾಗದ ವರುಣ್‌ ಪಾಂಡೆ (varun pande), ಭಾರತೀಯ ಯುವ ಕಾಂಗ್ರೆಸ್‌ ವಿ.ಎಸ್‌. ಅಭಿಷೇಕ್‌ ಅವರನ್ನು ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.   …

Read More »