ತಿರುವನಂತಪುರಂ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯಕೀಯ ಕಾಲೇಜು ಬಳಿಯ ವ್ಯಾನ್ನಿಂದ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಸ್ಫೋಟಕ ತುಂಬಿದ 100ಕ್ಕೂ ಹೆಚ್ಚು ಬಾಕ್ಸ್ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಸ್ಫೋಟಕ ತಿಂಬಿದ ಪೆಟ್ಟಿಗೆಗಳನ್ನ ಪಿಕಪ್ ವಾಹನದಲ್ಲಿ ರಹಸ್ಯವಾಗಿ ಸಾಗಿಸಲಾಗುತ್ತಿತ್ತು. ಆದ್ರೆ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಸಿಕ್ಕಿಬಿದ್ದಿದ್ದು, ಇಡೀ ಕೇರಳದಾದ್ಯಂತ ಕಳವಳಕ್ಕೆ ಕಾರಣವಾಗಿದೆ. ಪಾಲಕ್ಕಾಡ್ ಟೌನ್ ಸೌತ್ ಪೊಲೀಸ್ ಠಾಣೆಯ ಅಧಿಕಾರಿಗಳ ಪ್ರಕಾರ, ಪಾಲಕ್ಕಾಡ್ ವೈದ್ಯಕೀಯ ಕಾಲೇಜು …
Read More »ಕರ್ನಾಟಕ ರಾಜ್ಯಪಾಲರ ಸಹಿ ದುರ್ಬಳಕೆ, ಸುಳ್ಳು ನೇಮಕಾತಿ ಆದೇಶ!
ಬೆಂಗಳೂರು: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಸಹಿ ನಕಲು ಮಾಡಿ ಖೊಟ್ಟಿ ಲೆಟರ್ಹೆಡ್ ಬಳಸುತ್ತಿದ್ದ ನಕಲಿ ಐಪಿಎಸ್, ಐಎಎಸ್ ಅಧಿಕಾರಿ ಎಚ್.ಎನ್. ಸುಜಯೇಂದ್ರ (45) ಎಂಬಾತನ ವಿರುದ್ಧ ವಿಜಯನಗರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ನೀಡಿದ ದೂರಿನನ್ವಯ ಸುಜಯೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ರಾಜ್ಯಪಾಲರ ಹೆಸರಿನ ಲೆಟರ್ಹೆಡ್ ಬಳಸಿರುವ ಸುಜಯೇಂದ್ರ, ರಾಜ್ಯಪಾಲರ ಸಹಿ ನಕಲು ಮಾಡಿ ವೆಲ್ಲೂರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ …
Read More »ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್ಡಿಡಿ
ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು. ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು. ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ …
Read More »ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಹೆಚ್ಡಿಕೆ
ನವದೆಹಲಿ: ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಂಸತ್ತಿನಲ್ಲಿ ಕೇಂದ್ರದ ಹಣಕಾಸು ಸಚಿವರ ಕಚೇರಿಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಪ್ರಮುಖ ಅಭಿವೃದ್ಧಿ ಆದ್ಯತೆಗಳ ಕುರಿತು ವಿವರವಾದ ಚರ್ಚೆಗಳನ್ನು ನಡೆಸಿದರು. ಉಕ್ಕು …
Read More »ಎಸ್ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ
ನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಇಂದು ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಲು ಕೋರ್ಟ್ಗೆ ತೆರಳಿರುವ ವಿಡಿಯೋ ವೈರಲ್ ಆಗಿದೆ. ಬಿಳಿ ಸೀರೆ ಜತೆ ಕಪ್ಪು ದುಪಟ್ಟಾ ಧರಿಸಿ ಅವರು ಕೋರ್ಟ್ಗೆ ತೆರಳಿದ್ದರು. ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ …
Read More »ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ
ನವದೆಹಲಿ: 15ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕಕ್ಕೆ ಮೀಸಲಾದ 8,000 ಕೋಟಿಗೂ ಹೆಚ್ಚು ಅನುದಾನವನ್ನ ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಈ ವಿಚಾರವನ್ನ ರಾಜ್ಯಸಭೆಯಲ್ಲಿ ಸಂಸದ ಸಯ್ಯದ್ ನಾಸೀರ್ ಹುಸೇನ್ ಪ್ರಸ್ತಾಪಿಸಿದರು. ಶೂನ್ಯವೇಳೆಯಲ್ಲಿ ಮಾತನಾಡಿದ ನಾಸೀರ್ ಹುಸೇನ್, 15ನೇ ಹಣಕಾಸು ಆಯೋಗದ ಅಡಿಯಲ್ಲಿ ನೀಡಬೇಕಿದ್ದ ಹಣ ಬಾಕಿ ಉಳಿಸಿಕೊಂಡ ವಿಚಾರ ಪ್ರಸ್ತಾಪಿಸಿ ಮಾತನಾಡಿದರು. 6,000 ಗ್ರಾಮ ಪಂಚಾಯಿತಿಗಳಿಗೆ ಮೀಸಲಾದ 2,133 ಕೋಟಿ ರೂ., ನರೇಗಾ ಯೋಜನೆ ಅಡಿಯಲ್ಲಿ 1,066 ಕೋಟಿ …
Read More »ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್ ಗೋಯಲ್
ನವದೆಹಲಿ: ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಮೋದಿ ಸರ್ಕಾರ ಕೃಷಿ ಮತ್ತು ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಸ್ಪಷ್ಟನೆ ನೀಡಿದ್ದಾರೆ. ಅಮೆರಿಕದ ಕೃಷಿ ಉತ್ಪನ್ನಗಳು ಭಾರತದ ಮಾರುಕಟ್ಟೆ ಪ್ರವೇಶಿಸಲಿದೆ ಎಂದು ಡೊನಾಲ್ಡ್ ಟ್ರಂಪ್ ಅವರ ಪ್ರಕಟಣೆಯ ಬೆನ್ನಲ್ಲೇ ಇಂದು ಲೋಕಸಭೆಯಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು. ಈ ಸಂದರ್ಭದಲ್ಲಿ ಪಿಯುಷ್ ಗೋಯಲ್ ಒಪ್ಪಂದದ ಬಗ್ಗೆ …
Read More »ಭಾರತ-ಯುಎಸ್ ವಾಣಿಜ್ಯ ಒಪ್ಪಂದ ಫೈನಲ್: ಚಿನ್ನ, ಬೆಳ್ಳಿ ದರದಲ್ಲಿ ಚೇತರಿಕೆ
ನವದೆಹಲಿ: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಳಿಕ, ಐದು ದಿನಗಳ ಸತತ ಕುಸಿತಕ್ಕೆ ತೆರೆ ಎಳೆದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರ ಚೇತರಿಕೆ ಕಂಡಿವೆ. ಭಾರತೀಯ ಸರಕುಗಳ ಮೇಲಿನ ಅಮೆರಿಕದ ಪರಸ್ಪರ ಸುಂಕವನ್ನು ಶೇ.25 ರಿಂದ 18 ಕ್ಕೆ ಇಳಿಸುವ ಒಪ್ಪಂದವು ರತ್ನಗಳು ಮತ್ತು ಆಭರಣಗಳಂತಹ ರಫ್ತು-ಆಧಾರಿತ ವಲಯಗಳಲ್ಲಿ ವಿಶ್ವಾಸವನ್ನು ಮೂಡಿಸಿತು. ಸೋಮವಾರಕ್ಕೆ ಹೋಲಿಸಿದರೆ ಭೌತಿಕ ಬುಲಿಯನ್ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾಗಿ ಸ್ಥಿರವಾಗಿವೆ. 24 ಕ್ಯಾರೆಟ್ ಚಿನ್ನದ ಬೆಲೆ 10 …
Read More »ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್
ಪಾಟ್ನಾ: ಕೋರ್ಟ್ ಅನುಮತಿಯೊಂದಿಗೆ ಜೈಲಿನಿಂದ ಬಂದು ಜೆಡಿಯು ಮುಖಂಡ ಮೊಕಾಮಾ ಅನಂತ್ ಸಿಂಗ್ ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಬಳಿಕ ಸಿಎಂ ನಿತೀಶ್ ಕುಮಾರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ದುಲಾರ್ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಸಿಂಗ್ ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೆ ಮಾತ್ರ ಪಾಟ್ನಾ ಸಿವಿಲ್ ನ್ಯಾಯಾಲಯ ಸಿಂಗ್ ಅವರಿಗೆ ಅನುಮತಿ ನೀಡಿತ್ತು. ಜಾಮೀನು ಇನ್ನೂ ಅನುಮೋದನೆಯಾಗದ ಕಾರಣ, ವಿಧಾನಸಭಾ ಕಲಾಪ ಮುಗಿದ …
Read More »ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ
ನವದೆಹಲಿ: ಚಿತ್ರದುರ್ಗ ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಸಂಸದ ಗೋವಿಂದ ಕಾರಜೋಳ (ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ …
Read More »
Laxmi News 24×7