Breaking News
Home / ರಾಷ್ಟ್ರೀಯ (page 30)

ರಾಷ್ಟ್ರೀಯ

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದಾವಣಗೆರೆ : 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಗಳೂರು ರಾಗಿ ಖರೀದಿ ಕೇಂದ್ರಕ್ಕೆ ರಾಗಿಯನ್ನು ನೀಡಿರುವ ಹೊರ ತಾಲ್ಲೂಕು, ಹೊರ ಜಿಲ್ಲೆಯಲ್ಲಿನ ಪಟ್ಟಿಯಲ್ಲಿರುವ ರೈತರು ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ರೈತರಿಂದ ಅರ್ಹ ದಾಖಲೆಗಳನ್ನು ಸಂಗ್ರಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರೈತರು ಜಗಳೂರು ತಾಲ್ಲೂಕು ಕಚೇರಿಯ ಆಹಾರ ಶಾಖೆಯನ್ನು ಸಂಪರ್ಕಿಸಿ 7 ದಿನಗಳ ಒಳಗಾಗಿ ಸಂಬಂಧಪಟ್ಟ ದಾಖಲೆಗಳ ಜೆರಾಕ್ಸ್ ಪ್ರತಿ, 2022-23 ನೇ ಸಾಲಿನ ಮುಂಗಾರಿನ …

Read More »

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವಾಸಿಸುವ ಮರಾಠಿಗರಿಗಾಗಿ 2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ

ಬೆಳಗಾವಿ. ಮಾರ್ಚ್​.21: ಈ ಹಿಂದೆ ಆರೋಗ್ಯ ವಿಮಾ ಯೋಜನೆ ವಿಚಾರದಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಮಹಾರಾಷ್ಟ್ರ ಸರ್ಕಾರ ಅಂತಹದ್ದೇ ಮತ್ತೊಂದು ವಿವಾದಕ್ಕೆ ಕೈ ಹಾಕಿದೆ. ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮಹಾರಾಷ್ಟ್ರ ಸರ್ಕಾರ (Maharashtra Government) 2 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿದು ಬಂದಿದೆ. ಈ ಹಿಂದೆ, ಮಹಾರಾಷ್ಟ್ರ ಸರ್ಕಾರವು ತನ್ನ ಆರೋಗ್ಯ ವಿಮಾ ಯೋಜನೆಗೆ ನಿರ್ದಿಷ್ಟವಾಗಿ ಮರಾಠಿ ಮಾತನಾಡುವ ಜನಸಂಖ್ಯೆಯನ್ನು …

Read More »

ಶ್ರೀರಾಮ ಸರ್ವರಿಗೂ ಸೇರಿದವನು; ನನ್ನ ಹೆಸರಲ್ಲೇ ರಾಮನಿದ್ದಾನೆ;C.M.

ಚಾಮರಾಜನಗರ: ಇಂದು ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ …

Read More »

ಸುತ್ತಲೂ ನದಿ: ಕಳಸದಲ್ಲಿ ನೀರಿಗೆ ಕೊರತೆ

ಕಳಸ: ಪಟ್ಟಣದ ಸುತ್ತಲೂ ಕಲಶದ ಆಕಾರದಲ್ಲಿ ಭದ್ರಾ ನದಿ ಹರಿಯುವುದರಿಂದಲೇ ಕಳಸ ಎಂಬ ಹೆಸರು ಬಂದಿದೆ. ಆದರೆ, ಪ್ರತಿ ಬೇಸಿಗೆಯಲ್ಲೂ ಕಳಸ ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜಿನಲ್ಲಿ ತೀವ್ರ ವ್ಯತ್ಯಯ ಆಗುತ್ತಲೇ ಇದೆ. ಕಳಸ ಗ್ರಾಮ ಪಂಚಾಯಿತಿಯು ಗಣಪತಿ ಕಟ್ಟೆಯ ನೀರಿನ ಟ್ಯಾಂಕ್ ತುಂಬಿಸಲು 3 ದಶಕದ ಹಿಂದೆಯೇ ವಿದ್ಯುತ್ ಚಾಲಿತ ಪಂಪ್ ಅಳವಡಿಸಿದೆ. ಈ ಬಿಳಿಯಾನೆ ಸಾಕಲಾರದೆ ಹೊನ್ನೆಕಾಡು ನೈಸರ್ಗಿಕ ನೀರಿನ ಯೋಜನೆಯನ್ನು ಕಳೆದ ದಶಕದಲ್ಲೇ ಕೋಟ್ಯಂತರ ವೆಚ್ಚದಲ್ಲಿ …

Read More »

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ; ಶೆಟ್ಟರ್

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ನಾವು ಏನೂ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.   ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂಬುದಕ್ಕೆ ಗುಪ್ಪಿ ಶಾಸಕರ ಬಹಿರಂಗ …

Read More »

ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ವರಿಷ್ಠರು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು ಅದು ಸಿಕ್ಕೇ ಸಿಗುತ್ತದೆ ಎಂಬ ಅತೀವ ಆತ್ಮವಿಶ್ವಾಸದಲ್ಲಿದ್ದ ಸುಮಲತಾ ಅಂಬರೀಶ್(Sumalatha Ambareesh) ಅವರಿಗೆ ಭಾರೀ ನಿರಾಸೆಯಾಗಿದೆ. ತಮ್ಮ ಮುಂದಿನ ನಡೆ ಬಗ್ಗೆ ಅವರು ಇದುವರೆಗೆ ಏನೂ ಹೇಳಿಲ್ಲ, ಅವರ ಆಪ್ತರಾಗಿರುವ ಶಶಿಕುಮಾರ್ ಹನಕೆರೆ ಮಾತಾಡಿದ್ದಾರೆ. ಪಕ್ಷೇತರ ಸಂಸದೆಯಾಗಿರುವ ಸುಮಲತಾ ಅವರು ಬಿಜೆಪಿಗೆ ಬೇಷರತ್ ಬೆಂಬಲ (unconditional support) ಘೋಷಿಸಿದಾಗ ಜೆಡಿಎಸ್ ಪಕ್ಷವು ಎನ್ ಡಿಎ ಮೈತ್ರಿಕೂಟದ ಭಾಗವಾಗಿರಲಿಲ್ಲ. ಬಿಜೆಪಿ ನಾಯಕರಿಗೆ …

Read More »

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಫಿಕ್ಸ್

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನಾಳೆ ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.   ಯಾವುದೇ ಷರತ್ತು ಇಲ್ಲದೆ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಜನಾರ್ದನ ರೆಡ್ಡಿ ಸಮಾಲೋಚನೆ ನಡೆಸಿದ್ದರು.

Read More »

ಸಿದ್ದರಾಮಯ್ಯ ಇಳಿಸುವವರು ಕಾಂಗ್ರೆಸ್‌ನಲ್ಲೇ ಇದ್ದಾರೆ: ಆರ್‌.ಅಶೋಕ

ಬೆಂಗಳೂರು: ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವವರು ಕಾಂಗ್ರೆಸ್‌ ಪಕ್ಷದಲ್ಲೇ ಇದ್ದಾರೆ. ಅಲ್ಲಿ ಐವರು ಛಾಯಾ ಮುಖ್ಯಮಂತ್ರಿಗಳಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು. ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗಳಿಸದಿದ್ದರೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕಾಗುತ್ತದೆ’ ಎಂಬ ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್ ಹೇಳಿಕೆ ಕುರಿತು ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕರ್ನಾಟಕದ ಕಾಂಗ್ರೆಸ್ ಒಡೆದ ಮನೆಯಾಗಿದೆ’ ಎಂದರು.   ‘ಮುಖ್ಯಮಂತ್ರಿಯವರ ಕಾಲೆಳೆಯಲು ಬೇರೆಯವರು …

Read More »

ಜಿಲ್ಲಾಧಿಕಾರಿ ವಿರುದ್ಧ ಚುನಾವಣಾ ಆಯೋಗಕ್ಕೆ ಎಚ್​​ಡಿಡಿ ದೂರು;

ಹಾಸನ: ಗಂಭೀರ ಸ್ವರೂಪದ ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ (Election Commission) ಹಾಸನ ಜಿಲ್ಲಾಧಿಕಾರಿ (Hassan DC ) ಹಾಗೂ ಚುನಾವಣಾಧಿಕಾರಿ ಸತ್ಯಭಾಮಾ (Sathyabhama) ವಿರುದ್ಧ ಮಾರ್ಚ್ 20ರಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ (HD Deve gowda) ಅವರು ದೂರು ನೀಡಿದ್ದಾರೆ.ಉಸ್ತುವಾರಿ ಸಚಿವರ (Minister Rajanna) ಅಣತಿಯಂತೆ ಮಾತ್ರ ಸತ್ಯಭಾಮಾ ಕೆಲಸ ಮಾಡುತ್ತಾರೆ. ಜನರ ಜತೆ ಡಿಸಿ ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.   ಜಿಲ್ಲಾಧಿಕಾರಿಗಳ ವಿರುದ್ಧ …

Read More »

ಮಳೆ ಪ್ರಮಾಣ ಕಡಿಮೆ ಬತ್ತಿದ ಮಲಪ್ರಭೆ; ಬಾಯಾರಿದ ಜನತೆ

ರಾಮದುರ್ಗ: ಈ ಬಾರಿ ಮಳೆ ಪ್ರಮಾಣ ಕಡಿಮೆಯಾಗಿರುವ ಕಾರಣ ಮಲಪ್ರಭಾ ನದಿ ಬತ್ತಿದೆ. ಅಂತರ್ಜಲ ಮಟ್ಟ ಕಡಿಮೆಯಾಗಿ ಕೊಳವೆ ಬಾವಿಯಲ್ಲಿ ನೀರು ಆಳಕ್ಕೆ ಇಳಿದಿದೆ. ಇದರಿಂದ ತಾಲ್ಲೂಕಿನ ಕೆಲವು ಕಡೆಗಳಲ್ಲಿ ಈಗಾಗಲೇ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಏಪ್ರಿಲ್‌ ಕೊನೆಯ ವಾರಕ್ಕೆ ಸಮಸ್ಯೆ ಇನ್ನೂ ಬಿಗಡಾಯಿಸುವ ಸಾಧ್ಯತೆ ಇದೆ.   ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲವಾದ ಮಲಪ್ರಭೆ ಪೂರ್ಣ ಬತ್ತಿರುವ ಹಿನ್ನೆಲೆಯಲ್ಲಿ ಯೋಜನೆ ಸ್ಥಗಿತಗೊಂಡಿದೆ. ಈ ಯೋಜನೆಯಡಿ ಒಳಪಡುವ ಒಟ್ಟು …

Read More »