Breaking News

ರಾಷ್ಟ್ರೀಯ

ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ.:ಅನಂತ್​ ಕುಮಾರ್​ ಹೆಗಡೆ

ಸಿದ್ದರಾಮಯ್ಯನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಸಿದ್ದರಾಮಯ್ಯನವರ ದುರಂಹಕಾರಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದು ವಿರೋಧಿ ಸರ್ಕಾರ ಇರಲು ಸಾಧ್ಯವೇ ಇಲ್ಲ. ಕಾಂಗ್ರೆಸ್​ನವರು ಬದುಕಬೇಕು ಎಂದರೇ ಮುಸ್ಲಿಂರ ಹಿಜಾಬನ್ನು ಹಿಡಿದುಕೊಂಡೇ ಓಟು ತಗೋಬೇಕು ಎಂದು ಸಂಸದ ಅನಂತ್​ ಕುಮಾರ್​ ಹೆಗಡೆ ಕಿಡಿಕಾರಿದ್ದಾರೆ. ಉತ್ತರ ಕನ್ನಡ, ಡಿ.24: ಸಿದ್ದರಾಮಯ್ಯ(Siddaramaiah)ನವರಿಗೆ ದಮ್ಮ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ ಎಂದು ಬಿಜೆಪಿ ಸಂಸದ ಅನಂತ್​ ಕುಮಾರ್​ ಹೆಗಡೆ …

Read More »

ಕಳ್ಳರ‌ ಕೈಯಲ್ಲಿ ಕೀಲಿ ಕೈʼ.ಬಿಎಸ್‌ವೈ-ವಿಜಯೇಂದ್ರ ವಿರುದ್ಧ ಯತ್ನಾಳ ಮತ್ತೆ ವಾಗ್ದಾಳಿ

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಗು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ಮುಂದುವರೆಸಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯಾಧ್ಯಕ್ಷನ ಸ್ಥಾನ ಬದಲಾಗಬಹುದು ಎನ್ನುವ ಸುಳಿವು ನೀಡಿದ್ದಾರೆ.   ವಿಜಯೇಂದ್ರನ ಆಪ್ತರನ್ನು ಪದಾಧಿಕಾರಿಗಳನ್ನಾಗಿ ಮಾಡಿರುವ ವಿಚಾರಕ್ಕೆ ಮಾಧ್ಯಮಗಳಿಗೆ ಮಾತನಾಡಿರುವ ಅವರು, ಯಡಿಯೂರಪ್ಪ‌ ಕೇಂದ್ರದವರನ್ನ ಅಂಜಿಸಿದ್ದಾರೆ. ನನ್ನ ಮಗನ ಉದ್ಧಾರ ಮಾಡದೇ ಇದ್ದರೆ ಲೋಕಸಭೆಯಲ್ಲಿ ಕೆಲಸ ಮಾಡಲ್ಲ ಎಂದು …

Read More »

ರಾಜಕಾರಣದಿಂದ (Politics) ನಿವೃತ್ತಿ ಸೂಚನೆ ನೀಡಿದ ಯತ್ನಾಳ್‌

ವಿಜಯಪುರ: ರಾಜಕಾರಣದಿಂದ (Politics) ನಿವೃತ್ತಿಯಾಗುವ ಸೂಚನೆಯನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಅವರು ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ (BJP) ಬಿಎಸ್‌ವೈ (BSY) ಕುಟುಂಬದ ಪ್ರಭಾವದ ಬಗ್ಗೆ ಅಸಮಾಧಾನ ಹೊರ ಹಾಕಿರುವ ಯತ್ನಾಳ್‌, ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣ ಅಸಾಧ್ಯವಾಗಿದೆ. ಅಪ್ಪಾಜಿ ಎನ್ನಬೇಕು, ಹಣ ಬಲ ಬೇಕು, ಮೇಲಿನವರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸಬೇಕು. ಇಂತವೆಲ್ಲ ಮಾಡಲಾಗದಿದ್ದರೆ ರಾಜಕಾರಣ ಮಾಡಲಾಗಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ 2028 ರ ವಿಧಾನಸಭೆ (Assemby …

Read More »

ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ: ಬಿ.ವೈ ವಿಜಯೇಂದ್ರ ಆರೋಪ

ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ. ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ-ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವುದನ್ನು ನಿಷೇಧಿಸಿದ್ದನ್ನು ವಾಪಸ್ ಪಡೆಯಲು ಸೂಚಿಸಿದ್ದೇನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ …

Read More »

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಪಾಠ ಕಲಿಸಲಿದ್ದಾರೆ: ಡಿ.ಕೆ .ಶಿ

ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಬೆಂಗಳೂರು: ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ …

Read More »

ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಕರಡು ಸಮಿತಿಯಲ್ಲಿ ಸ್ಥಾನ ನೀಡಿದ್ದಕ್ಕೆ ಖರ್ಗೆಗೆ ಸಿದ್ದರಾಮಯ್ಯ ಧನ್ಯವಾದ

ಬೆಂಗಳೂರು, ಡಿಸೆಂಬರ್ 23: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಕಾಂಗ್ರೆಸ್ (Congress) ಪಕ್ಷದ ಪ್ರಣಾಳಿಕೆ ಕರಡು ಸಮಿತಿಯ ಸದ್ಯರ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೂ ಸ್ಥಾನ ನೀಡಲಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಇದು ಕಾಂಗ್ರೆಸ್ ಸರ್ಕಾರದ ‘ಕರ್ನಾಟಕ ಮಾದರಿ’ಗೆ ಸಂದ ಗೌರವ ಎಂದು ಉಲ್ಲೇಖಿಸಿದ್ದಾರೆ. ‘ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ …

Read More »

ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ: ಸಿಎಂ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ನಿಷೇಧ ಆದೇಶ ವಾಪಸ್​ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.ಮೈಸೂರು, ಡಿಸೆಂಬರ್​ 23: ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ರಾಜಕೀಯ ನಾಯಕರು ಸಾಕಷ್ಟು …

Read More »

ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರ ಸಮಾವೇಶದಲ್ಲಿ ಘೋಷಣೆ: ಜನಾರ್ಧನ ರೆಡ್ಡಿ

ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ: ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ …

Read More »

ವಾರಕರಿ ನೃತ್ಯ ಮಾಡಿದ ಶಾಸಕ: ಯತ್ನಾಳ್​

ವಿಜಯಪುರ, ಡಿಸೆಂಬರ್​ 22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಇಂದು ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್(Basangouda Patil Yatnal)​ ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ. ಕೈ ಕೈ ಹಿಡಿದು ವಾರಕರಿ ನೃತ್ಯ ಮಾಡಿದ ಯತ್ನಾಳ್​ ಕುಣಿತಕ್ಕೆ ರಾಮ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಸಕ ಯತ್ನಾಳ್​ ಡ್ಯಾನ್ಸ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ …

Read More »

ಮೋದಿ ಯಾವ ಫ್ಲೈಟ್‌ನಲ್ಲಿ ಓಡಾಡುತ್ತಾರೆ?: ಬಿಜೆಪಿಗೆ C.M. ತಿರುಗೇಟು

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಯಾವ ಫ್ಲೈಟ್‍ನಲ್ಲಿ ಓಡಾಡುತ್ತಾರೆ..? ಅದು ಐಷಾರಾಮಿ ಫ್ಲೈಟ್ ಅಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದರು. ಜಮೀರ್ ಜೊತೆ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು?. ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಗರಂ ಆದರು. ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಮುಖ್ಯಮಂತ್ರಿ …

Read More »