ವಿಜಯಪುರ, (ಡಿಸೆಂಬರ್ 22): ಬರ ಪರಿಹಾರದ ಚರ್ಚೆಗಾಗಿ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmad Khan) ಅವರು ಐಷಾರಾಮಿ ವಿಮಾನದಲ್ಲಿ (Luxurious flight) ಮರಳಿ ಬೆಂಗಳೂರಿಗೆ ಬಂದಿದ್ದಾರೆ. ಆದ್ರೆ, ವಿಶೇಷತೆ ವಿಮಾನದಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರು ಸಮಾಜವಾದ ಬಡವರ ಪರವಾಗಿ ಏನೇನೋ …
Read More »ಶೀಘ್ರದಲ್ಲೇ ಹಿಜಾಬ್ ನಿಷೇಧ ವಾಪಸ್? ಸಿದ್ದರಾಮಯ್ಯ
ಮೈಸೂರು: ವಿರೋಧದ ನಡುವೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್ (Hijab Row) ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಊಟ, ಉಡುಪು ಅವರವರ ಇಷ್ಟ. ಹೀಗಾಗಿ ಹಿಜಾಬ್ ನಿಷೇಧ ಆದೇಶ ವಾಪಸ್ ತೆಗೆದುಕೊಳ್ಳಲು ಹೇಳಿರುವುದಾಗಿ ಸಿಎಂ ತಿಳಿಸಿದ್ದಾರೆ. ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ …
Read More »ಮೋಹನ್ ಕುಮಾರ್ ದಾನಪ್ಪರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಸಚಿವ ರಹೀಂ ಖಾನ್
ಬಳ್ಳಾರಿ: ದೇಶದ ಯುವಕರು ಸೇನೆ (Army) ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ನ ಕಾರ್ಗಿಲ್ನಲ್ಲಿ (Kargil) ಮ್ಯಾರಥಾನ್ (Marathon) ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ, ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲ ಮೋಹನ್ ಕುಮಾರ್ ದಾನಪ್ಪ ಅವರಿಗೆ ರಾಜ್ಯದ ಪೌರಾಡಳಿತ ಮತ್ತು ಹಜ್ ಇಲಾಖೆಯ ಸಚಿವ ರಹೀಂ ಖಾನ್ ಅವರು ಪತ್ರದ ಮುಖಾಂತರ ಅಭಿನಂದಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರ ನಿವಾಸಿ ಕರ್ನಾಟಕ …
Read More »ಜನವರಿ ಅಂತ್ಯದೊಳಗೆ ‘ಬಿಜೆಪಿ-ಜೆಡಿಎಸ್’ ಸೀಟು ಹಂಚಿಕೆ ಫೈನಲ್ – ಮಾಜಿ ಸಿಎಂ HDK
ನವದೆಹಲಿ: ಜನವರಿ ಅಂತ್ಯದೊಳಗೆ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಫೈನಲ್ ಆಗಲಿದೆ. ಆ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಗುರುವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ಸಂಸತ್ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿರುವಂತೆ; ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ …
Read More »ಗ್ರಾಹಕರ ಗಮನಕ್ಕೆ: ಇಲ್ಲಿದೆ ʻಜನವರಿʼ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿ
ನವದೆಹಲಿ: ದೇಶದಲ್ಲಿ ಹಣಕಾಸಿನ ವಹಿವಾಟುಗಳು ಮತ್ತು ಸೇವೆಗಳ ಲಯವನ್ನು ರೂಪಿಸುವಲ್ಲಿ ಬ್ಯಾಂಕ್ ರಜಾದಿನಗಳು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI), ಸಾಮಾನ್ಯವಾಗಿ ಸೆಂಟ್ರಲ್ ಬ್ಯಾಂಕ್ ಎಂದು ಕರೆಯಲ್ಪಡುತ್ತದೆ, ದೇಶಾದ್ಯಂತ ಎಲ್ಲಾ ಬ್ಯಾಂಕುಗಳು ಆಚರಿಸುವ ರಾಷ್ಟ್ರೀಯ ಮತ್ತು ಸರ್ಕಾರಿ ರಜಾದಿನಗಳ ವೇಳಾಪಟ್ಟಿಯನ್ನು ಸ್ಥಾಪಿಸುತ್ತದೆ. ಭಾರತದಲ್ಲಿ ಸಹಕಾರಿ ಬ್ಯಾಂಕ್ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು (RRB), ಸಣ್ಣ ಹಣಕಾಸು ಬ್ಯಾಂಕ್ಗಳು (SMB), ಸ್ಥಳೀಯ ಪ್ರದೇಶ ಬ್ಯಾಂಕ್ಗಳು (LAB) ಮತ್ತು …
Read More »ಬಳ್ಳಾರಿಯ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢ
ಬಳ್ಳಾರಿ: ಜಿಲ್ಲೆಯಲ್ಲಿರುವಂತ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಕಾರ್ಖಾನೆಯ ಇತರೆ ಸಿಬ್ಬಂದಿಗಳಿಗೆ ಕೊರೋನಾ ಸೋಂಕಿನ ಭೀತಿ ಎದುರಾಗಿದೆ. ಬಳ್ಳಾರಿ ತಾಲೂಕಿನ ತೋರಣಗಲ್ ನಲ್ಲಿರುವಂತ ಜಿಂದಾಲ್ ಕಾರ್ಖಾನೆಯಲ್ಲಿನ ಇಬ್ಬರು ಉದ್ಯೋಗಿಗಳಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅವರನ್ನು ಹೋಂ ಕ್ವಾರಂಟೈನ್ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಜಿಂದಾಲ್ ಕಾರ್ಖಾನೆಯಲ್ಲಿ 35 ಸಾವಿರ ಉದ್ಯೋಗಿಗಳಿದ್ದಾರೆ. ಇವರಲ್ಲಿ ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಆರೋಗ್ಯ ಇಲಾಖೆಯಿಂದ ಕೊರೋನಾ ಪರೀಕ್ಷೆ ಮಾಡೋದಕ್ಕೆ …
Read More »ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಚಂದ್ರು ಸಂತಸ
ಬೆಂಗಳೂರು: ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿದ್ದಕ್ಕೆ ಆಮ್ ಆದ್ಮಿ ಪಕ್ಷದ ಕರ್ನಾಟಕ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಚಂದ್ರು ನೇರವಾಗಿ ಖರ್ಗೆ ಅವರ ಜೊತೆಗೆ ಬುಧವಾರ ದೂರವಾಣಿಯಲ್ಲಿ ಮಾತನಾಡಿ ಶುಭಾಶಯಗಳು ತಿಳಿಸಿ ಹಾಗೂ ಖುದ್ದಾಗಿ ಪತ್ರವನ್ನು ಬರೆದಿರುವ …
Read More »ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೆ ಪ್ರೀಮಿಯಂ ರಹಿತ ವಿಮಾ ಯೋಜನೆ
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ ರೂ.1.20 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಉಪಸ್ಥಿತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ, ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ರವರೊಂದಿಗೆ ಒಡಂಬಡಿಕೆ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ …
Read More »Covid 19 ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆಯಿಂದಿದ್ದರೆ ಸಾಕು: C.M.
ಬೆಂಗಳೂರು: ಕೋವಿಡ್ ಹೊಸ ಉಪತಳಿಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಆದರೆ ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು. ಈಗಿನ ಉಪತಳಿ JN.1 ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 …
Read More »ಡಿ.ಕೆ. ಸುರೇಶ್ ಸೇರಿ ಮೂವರು ಸಂಸದರು ಅಮಾನತು:ಸಂಖ್ಯೆ 146ಕ್ಕೇರಿಕೆ
ಹೊಸದಿಲ್ಲಿ: ಡಿ.ಕೆ. ಸುರೇಶ್ ಸೇರಿ ಕಾಂಗ್ರೆಸ್ ನ ಮೂವರು ಸಂಸದರನ್ನು ಗುರುವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.ದೀಪಕ್ ಬೈಜ್, ನಕುಲ್ ನಾಥ್ ಅವರನ್ನೂ ಅಮಾನತು ಮಾಡಲಾಗಿದ್ದು, ಅಮಾನತುಗೊಂಡಿರುವ ಪ್ರತಿಪಕ್ಷಗಳ ಒಟ್ಟು ಸದಸ್ಯರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿ ಮತ್ತು ಘೋಷಣೆಗಳನ್ನು ಕೂಗಿದ ಕಾರಣಕ್ಕೆ ವಿಪಕ್ಷಗಳ ಸಂಸದರನ್ನು …
Read More »
Laxmi News 24×7