ಬೆಂಗಳೂರು: ಲಿಡ್ಕರ್ ಉತ್ಪನ್ನಗಳ ರಾಯಭಾರಿಯಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ನೇಮಕ ಮಾಡಲಾಗಿದ್ದು, ಅವರು ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 67ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭ ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂಬುದನ್ನು ಸಿಎಂ ಘೋಷಿಸಿದರು. …
Read More »ಹಾವೇರಿ: ಕಲ್ಯಾಣಿ ಚಾಲುಕ್ಯರ ಕಾಲದ ಶಿಲ್ಪಕಲೆಗೆ ಪ್ರಸಿದ್ಧಿ ‘ಮುಕ್ತೇಶ್ವರ ದೇವಸ್ಥಾನ’
ಹಾವೇರಿ: ಹಾವೇರಿ ಹಲವು ರಾಜಕುಟುಂಬಗಳ ಆಡಳಿತಕ್ಕೆ ಒಳಗಾದ ಜಿಲ್ಲೆ. ಇಲ್ಲಿ ಕದಂಬರಿಂದ ಹಿಡಿದು ಇತ್ತಿಚೀನ ಮೈಸೂರು ಅರಸರ ಆಳ್ವಿಕೆಯ ಕುರುಹುಗಳಿವೆ. ಅಷ್ಟೇ ಅಲ್ಲದೆ ಅನೇಕ ಸಾಮಂತರು ಸವಣೂರು ನವಾಬರು ಸಹ ಇಲ್ಲಿ ಆಡಳಿತ ಮಾಡಿದ್ದಾರೆ. ಈ ರೀತಿ ಆಡಳಿತ ನಡೆಸಿದ ರಾಜಮನೆತನಗಳು ಸಾಮಂತರು ಹಲವು ಸ್ಮಾರಕಗಳನ್ನು ಕಟ್ಟಿಸಿದ್ದಾರೆ. ಅಂತಹ ಪುರಾತನ ಸ್ಮಾರಕದಲ್ಲೊಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚೌಡಯ್ಯದಾನಪುರದ ಮುಕ್ತೇಶ್ವರ ದೇವಾಲಯ. ಮುಕ್ತೇಶ್ವರ ದೇವಾಲಯ ಈ ಗ್ರಾಮದಲ್ಲಿ ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ …
Read More »ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸಮುದಾಯದ ಬಗ್ಗೆ ಮಾತನಾಡುವಾಗ ಎಚ್ಚರ ವಹಿಸಲಿ ಎಂದ :B.S.Y.
ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕೆ ಅನುದಾನ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಟೀಕಿಸಿದ್ದಾರೆ. ಅವರು ರಾಜ್ಯದ ಸಿಎಂ ಆಗಿದ್ದುಕೊಂಡು ಒಂದು ಸಮುದಾಯವನ್ನು ಓಲೈಕೆ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು. ನಗರದಲ್ಲಿನ ಅವರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರರಿಗೆ ಹಣ ಕೊಡಲು ಅಭ್ಯಂತರವಿಲ್ಲ. ಆದರೆ, ಹಣದ ಹೆಸರಲ್ಲಿ ಅಲ್ಪಸಂಖ್ಯಾತರ ಓಲೈಕೆ ಮಾಡ್ತಿರೋದು ತರವಲ್ಲ. ಈ …
Read More »‘ನಾನಾಗಿ ದೆಹಲಿಗೆ ಹೋಗುತ್ತಿಲ್ಲ. ದೆಹಲಿ ಕರೆ ಬಂದ ಬಳಿಕ ಹೋಗುತ್ತೇನೆ.: ಯತ್ನಾಳ್
ಬೆಳಗಾವಿ: ”ನಾನಾಗಿ ದೆಹಲಿಗೆ ಹೋಗುತ್ತಿಲ್ಲ. ದೆಹಲಿ ಕರೆ ಬಂದ ಬಳಿಕ ಹೋಗುತ್ತೇನೆ. ಆಗ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವರನ್ನು ಭೇಟಿಯಾಗಲು ತೆರಳುತ್ತೇನೆ. ಪಕ್ಷದ ಕಚೇರಿಯಿಂದ ಕರೆ ಬಂದಿದೆ. ವಿ. ಸೋಮಣ್ಣ, ರಮೇಶ್ ಜಾರಕಿಹೊಳಿಗೂ ಹೇಳಿರಬಹದು. ಆದರೆ, ದೆಹಲಿಗೆ ಹೋಗುವುದಂತೂ ನಿಶ್ಚಿತ, ಖಚಿತ” ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ”ಸೋಮಣ್ಣ ಕಾರಣಾಂತರಗಳಿಂದ ಅವರು ಅವರ ತೀರ್ಮಾನವನ್ನು ಮುಂದೂಡಿದ್ದಾರೆ. ಭೇಟಿಯಾದಾಗ ಕರ್ನಾಟಕದ ಪರಿಸ್ಥಿತಿಯನ್ನು ಹೇಳುತ್ತೇನೆ. ಕರ್ನಾಟಕದಲ್ಲಿ ಏನು …
Read More »ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚನೆಗೆ ಸಿಎಂ ಸೂಚನೆ
ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಸಿಎಂ ಸಿದ್ದರಾಮಯ್ಯ ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಎರಡೂ ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಸಿ ವರ್ಷಗಳು ಕಳೆದರೂ ನ್ಯಾಯಾಲಯಗಳಲ್ಲಿ ನಿಧಾನಗತಿಯಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಮೃತರ ಸಂಬಂಧಿಕರು ತಮ್ಮ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಪ್ರಕರಣ ಸಂಬಂಧ ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ …
Read More »ಬೆಳೆಹಾನಿಗೆ2 ಸಾವಿರ ರೂ.ಗಳ ಮೊದಲ ಕಂತನ್ನು ಮುಂದಿನ ವಾರ ರೈತರ ಖಾತೆಗೆ ಜಮೆ
ಬೆಳಗಾವಿ/ಬೆಂಗಳೂರು: ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆಯಾಗುತ್ತಿದ್ದಂತೆ ರೈತರಿಗೆ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಭಾಗಶಃ ಪರಿಹಾರದ ಭಾಗವಾಗಿ 2 ಸಾವಿರ ರೂ.ಗಳ ಮೊದಲ ಕಂತನ್ನು ಮುಂದಿನ ವಾರ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವರ್ಷ ಬರ ಜನರಿಗೆ ಬಾಧೆಯಾಗುತ್ತಿದೆ, ಸರ್ಕಾರ ಏನೆಲ್ಲಾ ಮಾಡಬೇಕೋ …
Read More »ಸಮಾನತೆಯ ಹರಿಕಾರ ಡಾ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮನಗಳನ್ನು ಅರ್ಪಿಸಿದ್ದಾರೆ. ಅಂಬೇಡ್ಕರ್ ಅವರು ಸಮಾನತೆ ಮತ್ತು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದರು. ಮಾನವ ಹಕ್ಕುಗಳನ್ನು ಕಾಯ್ದಿಸಿರಲು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟಿದ್ದರು. ಕೇವಲ ದಲಿತ ಸಮುದಾಯದ ಗುರಿಯಾಗಿರದೇ ಎಲ್ಲ ಜಾತಿ- ಜನಾಂಗದ ಬಗ್ಗೆ ಅಂಬೇಡ್ಕರ್ ಅವರು ಕಾಳಜಿಯನ್ನು ಹೊಂದಿದ್ದರು. ನಮ್ಮ ದೇಶಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ …
Read More »ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ಮನೆ ಇರಲ್ಲ:H.D.K.
ಬೆಳಗಾವಿ/ಬೆಂಗಳೂರು : ವರ್ಗಾವಣೆ ದಂಧೆ ಸೇರಿ ಬೇರೆ ಬೇರೆ ವಿಚಾರಗಳ ಬಗ್ಗೆ ಮುಂದಿನ ಜಂಟಿ ಅಧಿವೇಶನದಲ್ಲಿ ಮಾತನಾಡುತ್ತೇನೆ. ಒಂದು ವೇಳೆ ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ನೆ ಇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಅಧಿವೇಶನಕ್ಕೆ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬರ ನಿರ್ವಹಣೆ, ಉತ್ತರ ಕರ್ನಾಟಕ ಅಭಿವೃದ್ಧಿ ನನ್ನ ಆದ್ಯತೆ. ಈ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾತನಾಡುತ್ತೇನೆ. ಈ ಭಾಗದ …
Read More »13 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ!
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿರುವ ಗಂಭೀರ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಸಂಬಂಧಿಕರ ನಿವಾಸಗಳು ಸೇರಿದಂತೆ ಒಟ್ಟು 68 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚರ, ಸ್ಥಿರಾಸ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿತರ ವಿರುದ್ಧ ಪ್ರತ್ಯೇಕವಾಗಿ 13 ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 68 ಕಡೆ ಲೋಕಾ …
Read More »ಚಿಕ್ಕಮಗಳೂರು ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ ಸಿಐಡಿಗೆ ಹಸ್ತಾಂತರ
ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಅವರ ಮೇಲಿನ ಪೊಲೀಸರ ಹಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮಾಹಿತಿ ನೀಡಿದರು. ವಿಚಾರಣೆ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು …
Read More »
Laxmi News 24×7