ಚಿಕ್ಕೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ನೀಡುವ ಪ್ರಮಾಣದಲ್ಲಿ ಕಡಿತ ಮಾಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಐದು ಕೆಜಿ ಅಕ್ಕಿ ಬದಲು ನಾಲ್ಕೂವರೆ ಕೆಜಿ ಅಕ್ಕಿ ವಿತರಣೆ ಮಾಡಿದ್ದು, ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಪಡಿತರ ಚೀಟಿದಾರರಿಗೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ, ಇಲ್ಲಿ ಪ್ರತಿ ಒಂದು ಕಾರ್ಡಿಗೆ ಅರ್ಧ ಕೆಜಿ …
Read More »ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 71 ‘ಪೊಲೀಸ್ ಇನ್ಸ್ ಪೆಕ್ಟರ್’ ಗಳ ವರ್ಗಾವಣೆ
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದು ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ …
Read More »ಹೋರಿ ಬೆದರಿಸುವ ಸ್ಪರ್ಧೆ ವೇಳೆ ಗಲಾಟೆ ಯುವಕನ ಮೇಲೆ ಹಲ್ಲೆ
ಹಾವೇರಿ: ತಾಲೂಕಿನ ಕೋಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ದೀಪಾವಳಿ ನಿಮಿತ್ತ ಕೋಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ನವೆಂಬರ್ 14ರಂದು ನಡೆದ ಸ್ಪರ್ಧೆ ವೇಳೆ ಯುವಕನೊಬ್ಬ ಬಿಟ್ಟ ಹೋರಿಯನ್ನು ಮತ್ತೊಂದು ಗುಂಪಿನ ಯುವಕ ಹಿಡಿದಿರುವುದೇ ಗಲಾಟೆಗೆ ಕಾರಣವಾಗಿದೆ. ಯುವಕ ಕುಮಾರ್ ಹೋರಿ ಹಿಡಿದಿದ್ದರಿಂದ ಆಕ್ರೋಶಗೊಂಡ ಮತ್ತೋರ್ವ ಯುವಕ, ನ.16 ರಂದು ತನ್ನ ಸ್ನೇಹಿತರನ್ನು ಕರೆದುಕೊಂಡು ಬಂದು ಮನಬಂದಂತೆ ಥಳಿಸಿದ್ದರು. …
Read More »14 ದಿನಗಳ ಕಾಲ ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ 8 ಕೋಟಿ 72 ಲಕ್ಷ ರೂ ಆದಾಯ
ಹಾಸನ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು ತೆರೆದಿದ್ದು, 14 ದಿವಸಗಳ ಕಾಲ ದರ್ಶನದ ಭಾಗ್ಯ ಇರುವುದರಿಂದ ಭಕ್ತರಿಂದ ಟಿಕೆಟ್, ಲಾಡು ಮಾರಾಟ, ಕಾಣಿಕೆ ಮತ್ತು ಇ-ಹುಂಡಿಯಿಂದ ಸುಮಾರು 8 ಕೋಟಿ 72 ಲಕ್ಷದ 41 ಸಾವಿರದ 531 ರೂ. ಆದಾಯ ಸಂಗ್ರಹ ಆಗುವ ಮೂಲಕ ಹಾಸನಾಂಬೆ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಇತಿಹಾಸ ಸೃಷ್ಟಿಸಿದೆ. ಹಾಸನಾಂಬೆ ದೇವಿ ಮತ್ತು ಶ್ರೀ ಸಿದ್ದೇಶ್ವರ ದೇವಾಲಯದ …
Read More »ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ!
ಬೆಂಗಳೂರು: ಈವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ಮಾಡಿ ಕಾಂಗ್ರೆಸ್ ಟೀಕೆ ಗುರಿಯಾಗಿದ್ದ ಬಿಜೆಪಿ ಕೊನೆಗೂ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರಿಗೆ ವಿಪಕ್ಷ ನಾಯಕನಾಗಿ ಪ್ರಮುಖ ಜವಾಬ್ದಾರಿ ನೀಡಿದೆ. ಆದ್ರೆ ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ವಿಪಕ್ಷ ನಾಯಕ ಸಂಬಂಧ ಸರಣಿ ಎಕ್ಸ್ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ವಿರೋಧ …
Read More »ಬ್ಲ್ಯಾಕ್ಮೇಲ್ ಮಾಡುವವರಿಗೆ ನಾನು ಹೆದರಲ್ಲ – ವಿಜಯೇಂದ್ರ, ಬಿಎಸ್ವೈ ಬಗ್ಗೆ ಮಾತಾಡಲ್ಲ: ಯತ್ನಾಳ್
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಹೊಂದಾಣಿಕೆ ರಾಜಕಾರಣ, ಕುಟುಂಬದ ಹಿಡಿತ, ಬ್ಲ್ಯಾಕ್ಮೇಲ್ ರಾಜಕಾರಣವನ್ನೆಲ್ಲಾ ಹೈಕಮಾಂಡ್ ಪ್ರತಿನಿಧಿಗಳ ಮುಂದೆ ಬಯಲು ಮಾಡಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ನಾನು ಧೈರ್ಯವಾಗಿ ಇರುವ ಸತ್ಯವನ್ನೇ ಹೇಳುತ್ತೇನೆ. ಪ್ರತಿಪಕ್ಷ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ಕೊಡುವಂತೆ ಕೇಳುತ್ತೇನೆ. ಒಂದು ವೇಳೆ ಉತ್ತರ ಕರ್ನಾಟಕಕ್ಕೆ ಅವಕಾಶ ನೀಡದಿದ್ದಲ್ಲಿ ಜನರು ಮುಂದೆ ಉತ್ತರ ನೀಡಲಿದ್ದಾರೆ. ನಾನೂ ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ …
Read More »ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆ ಸಿ ಎಂ ಇಬ್ರಾಹಿಂ ಅವರನ್ನು ಕೂಡಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಅಮಾನತು ಆದೇಶಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ), ಹಿಂದಿನ ಮಹಾಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಬೋಜೇಗೌಡ ಅವರು ದಿನಾಂಕ: 19-10-2023ರ ವರದಿಯಲ್ಲಿ ಕರ್ನಾಟಕ ರಾಜ್ಯ ಪರಿಷತ್ ಪ್ರಸ್ತುತ ಕಾರ್ಯಕಾರಿ ಸಮಿತಿ, …
Read More »ನರೇಗಾ ಯೋಜನೆಯಲ್ಲಿ ಮಾನವ ದಿನಗಳನ್ನ ಹೆಚ್ಚಿಸಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: “ಬರಗಾಲವಿರುವ ಕಾರಣ ನರೇಗಾ ಯೋಜನೆಯ ಮಾನವ ದಿನಗಳನ್ನು 100 ದಿನಗಳ ಬದಲು 150 ದಿನಗಳಿಗೆ ಏರಿಕೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಜಿಕೆವಿಕೆ ಆವರಣದಲ್ಲಿ ನಡೆದ ಕೃಷಿಮೇಳ- 2023ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕನಕಪುರ ತಾಲೂಕಿನಲ್ಲಿ ಪ್ರತಿ ರೈತರಿಗೂ ನರೇಗಾ ಯೋಜನೆಯ ಲಾಭ ದೊರೆಯುವಂತೆ ಮಾಡಿದ್ದೇನೆ. ಸಾಕಷ್ಟು ಜನ ರೈತರು ಕೊಟ್ಟಿಗೆ ಸೇರಿದಂತೆ ಸಾಕಷ್ಟು ಅನುಕೂಲ ಮಾಡಿಕೊಂಡಿದ್ದಾರೆ. ಇದರಿಂದ …
Read More »ಗರ್ಭಿಣಿ ವಕೀಲೆಗೆ ಮನೆ ಬಳಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹೈಕೋರ್ಟ್
ಬೆಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಮನೆ ಬಳಿಯೇ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ನ ಬೆಂಗಳೂರು ಪೀಠದಲ್ಲಿ ಮುಖ್ಯ ಪರೀಕ್ಷೆ ನಡೆಯುತ್ತಿದೆ. ಆದರೂ ಗರ್ಭಿಣಿಯಾಗಿರುವ ವಕೀಲೆ ನೇತ್ರಾವತಿ ಎಂಬುವವರು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ನವೆಂಬರ್ 18 ಮತ್ತು 19ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಅವಕಾಶ …
Read More »ಆಹಾರ ಸರಬರಾಜಿನಲ್ಲಿ ಗೋಲ್ಮಾಲ್ ಆರೋಪ: ಲೋಕಾಯುಕ್ತಕ್ಕೆ ದೂರು
ಬೆಂಗಳೂರು : ಮಕ್ಕಳು ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ಅನರ್ಹ ಸಂಸ್ಥೆಗಳಿಗೆ ನೀಡಿದ ಗುತ್ತಿಗೆಯಲ್ಲಿ ಸುಮಾರು 600 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಸ್ ನಟರಾಜ ಶರ್ಮಾ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇಲಾಖೆಯಲ್ಲಿ ಜವಾಬ್ದಾರಿ ಹೊತ್ತ ಮೂವರ ವಿರುದ್ಧ ದೂರು ನೀಡಲಾಗಿದೆ. ಇಲಾಖೆಯು ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ನೀಡಿರುವ ಟೆಂಡರ್ ವಿಚಾರದಲ್ಲಿ ಗೋಲ್ಮಾಲ್ ನಡೆದಿದೆ …
Read More »