Breaking News

ರಾಷ್ಟ್ರೀಯ

ಬಿಜೆಪಿಯ ಹಲವು ಶಾಸಕರು‌ ಕಾಂಗ್ರೆಸ್ ಸೇರಲು ಸಿದ್ದ:ಸಲೀಂ ಅಹ್ಮದ್

ಕೆಪಿಸಿಸಿ ಕಾರ್ಯಾಧ್ಯಕ್ಷರ ಹೊಸ ಬಾಂಬ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆ. ಕಾಂಗ್ರೆಸ್ ಸೇರಲು ಹಲವಾರು ಬಿಜೆಪಿ ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ. ಹಲವು ಶಾಸಕರು‌ ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಬೆಳಗಾವಿ ಅಧಿವೇಶನ ಮುಗಿಯಲಿ ಎಂದು ಸಲೀಂ ಅಹ್ಮದ್ ಹೇಳಿದರು. ಬೆಳಗಾವಿ ಅಧಿವೇಶನದ ಬಳಿಕ ಸಾಕಷ್ಟು ಜನರು ಸೇರಬೇಕು ಅಂತಿದ್ದಾರೆ. ಸೂಕ್ತ‌ ಸಮಯದಲ್ಲಿ ಅದನ್ನ ಹೇಳುತ್ತೇವೆ. ಬಿಜೆಪಿಯ ಪಾಪದ ಕೊಡ ತುಂಬಿತ್ತು. ಕಾಂಗ್ರೆಸ್ ಗೆ ಜನರು ಆಶೀರ್ವಾದ …

Read More »

ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಕನಕಪುರ: ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ ದೂರು ನೀಡಲು ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಸಂಖ್ಯೆಯನ್ನು ಶೀಘ್ರದಲ್ಲೇ ಹಾಕಲಿದ್ದೇವೆ” ಎಂದು ತಿಳಿಸಿದರು. ಕನಕಪುರದಲ್ಲಿ ನಡೆದ ಜನಸಂಪರ್ಕ ಸಭೆಗೂ ಮುಂಚಿತವಾಗಿ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; “ಕಂದಾಯ, ಪಂಚಾಯಿತಿ ಅಧಿಕಾರಿ ಸೇರಿದಂತೆ ಯಾವುದೇ ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ …

Read More »

ಕೇಂದ್ರದಿಂದ ಬಾರದಿರುವ ಅನುದಾನ ಕೇಳುವ ಪೌರುಷ ಬಿಜೆಪಿ ಸಂಸದರಿಗೆ ಇಲ್ಲವೇ? -ರಮೇಶ್ ಬಾಬು

ಕೇಂದ್ರದಿಂದ ಬಾರದಿರುವ ಅನುದಾನ ಕೇಳುವ ಪೌರುಷ ಬಿಜೆಪಿ ಸಂಸದರಿಗೆ ಇಲ್ಲವೇ? -ರಮೇಶ್ ಬಾಬು ಕೇಂದ್ರದಿಂದ ಬಾರದಿರುವ ಅನುದಾನ ಕೇಳುವ ಪೌರುಷ ಅವರಿಗೆ ಇಲ್ಲವೇ? ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡೋ ನೀವು ಇದಕ್ಕೆ ಉತ್ತರಿಸಿ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಅವರು ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.   ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಅವರ ಮಾಧ್ಯಮಗೊಷ್ಟಿಯ ಮುಖ್ಯಾಂಶಗಳು: ಕರ್ನಾಟಕದಲ್ಲಿ …

Read More »

ರೈಲಿನಲ್ಲಿ ಮಹಿಳೆಯ ಬೆಲ್ಲಿ ಡ್ಯಾನ್ಸ್‌:

ಇತ್ತೀಚಿನ ದಿನಗಳಲ್ಲಿ ರೈಲುಗಳು ಕೇವಲ ಸಾರಿಗೆ ವಿಧಾನಕ್ಕಿಂತ ಹೆಚ್ಚು ರೂಪಾಂತರಗೊಂಡಿದ್ದು, ಅವು ಮನರಂಜನೆಯ ಕೇಂದ್ರಗಳಾಗಿ ವಿಕಸನಗೊಂಡಿದೆ. ಫೈಟ್‌ಗಳು ಮತ್ತು ಫ್ಯಾಶನ್ ಶೋಗಳಿಂದ ಹಿಡಿದು, ಯಾವುದೇ ಪೂರ್ವಸಿದ್ಧತೆಯಿಲ್ಲದ ನೃತ್ಯ ಪ್ರದರ್ಶನಗಳಿಗೂ ಸಹ ಬಳಸಲಾಗುತ್ತಿದೆ. ಈ ವಿಲಕ್ಷಣ ಪ್ರವೃತ್ತಿಯು ಆವೇಗವನ್ನು ಪಡೆದಾಗ ವಿಷಯದ ಸಮೃದ್ಧಿ, ಸೌಕರ್ಯದ ವೆಚ್ಚದಲ್ಲಾದರೂ ನಿರಾಕರಿಸಲಾಗದು. ಇದೀಗ ಚಲಿಸುತ್ತಿರುವ ರೈಲಿನಲ್ಲಿ ಒಬ್‌ ಮಹಿಳೆಯು ಪೋಲ್ ಅಥವಾ ಬೆಲ್ಲಿ ಡ್ಯಾನ್ಸ್‌ನಲ್ಲಿ ತೊಡಗಿರುವ ಇತ್ತೀಚಿನ ವೀಡಿಯೊ ಇಂಟರ್ನೆಟ್‌ನಲ್ಲಿ ಹೊರಹೊಮ್ಮಿದೆ. ಕಪ್ಪು ಕ್ರಾಪ್ ಟಾಪ್ …

Read More »

6 ವರ್ಷದ ಜಗಳ ಬಿಟ್ಟು ಒಂದಾದ ʼಸ್ನೇಹಿತರುʼ..! ಹೊಸ ಶೋ ಘೋಷಿಸಿದ ಕಪಿಲ್‌-ಸುನಿಲ್ ಗ್ರೋವರ್

ಸುಮಾರು ಆರು ವರ್ಷಗಳ ನಂತರ ಹಾಸ್ಯನಟರಾದ ಕಪಿಲ್ ಶರ್ಮಾ ಮತ್ತು ಸುನಿಲ್ ಗ್ರೋವರ್ ಕೊನೆಗೂ ಒಂದಾಗಿದ್ದಾರೆ. ಕಪಿಲ್‌ ಶರ್ಮಾ ಶೋದಲ್ಲಿ ಇಬ್ಬರನ್ನು ವೇದಿಕೆಯ ಮೇಲೆ ನೋಡಿ ಬಹಳ ದಿನವಾಗಿದ್ದ ಪ್ರೇಕ್ಷಕರಿಗೆ ಕೊನೆಗೂ ಈ ಸ್ನೇಹಿತರು ತಮ್ಮ ಕೋಪವನ್ನು ಬದಿಗಿಟ್ಟು, ಒಂದಾಗಿ ಮತ್ತೇ ನಗಿಸಲು ವೇದಿಕೆಯ ಮೇಲೆ ಬರಲಿದ್ದಾರೆ.   ಹೌದು.. ಕಪಿಲ್‌ ಮತ್ತು ಸುನೀಲ್‌ ಅಂತಿಮವಾಗಿ ತಮ್ಮ ಹಠವನ್ನು ಬಿಟ್ಟು, ನೆಟ್‌ಫ್ಲಿಕ್ಸ್ ಶೋನ ಪ್ರೋಮೋದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಮತ್ತೇ …

Read More »

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ವಸಿಷ್ಠ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧವು ಸಿಬಿಐ ತನಿಖೆಗೆ ಅದೇಶಿಸಿದ್ದು, ಎರಡು ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಹಣ ಅವ್ಯವಹಾರ ನಡೆದಿತ್ತು.   ಎರಡು ಬ್ಯಾಂಕಗಳಲ್ಲಿ ನೀಯಮ ಬಾಹಿರವಾಗಿ ಸಾಲ ನೀಡಿದ್ದ ಆರೋಪದ ಹಿನ್ನೆಲೆಯಿದ್ದು ಬ್ಯಾಂಕ್ ಹಣವನ್ನು ಖಾಸಗಿಯಾಗಿಯೂ ಸಾಲ ನೀಡಿದ್ದ ಆರೋಪದ ಹಿನ್ನೆಲೆ ಈ …

Read More »

ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ. ಗೃಹ ಲಕ್ಷ್ಮಿಯರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ:ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಬಜೆಟ್​ನಲ್ಲಿ ಘೊಷಿಸಿರುವ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಾಹಿತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಮಾಧ್ಯಮಗಳ ಎದುರು ಮಾತನಾಡಿದ ಅವರು, ಈ ಸರ್ಕಾರ ಬಂದು ಆರು ತಿಂಗಳಾಯಿತು. ಈ ಸರ್ಕಾರದ ಬಗ್ಗೆ ಜನರು ಭ್ರಮ ನಿರಸನಗೊಂಡಿದ್ದಾರೆ‌. ಇವರು ಪದೇ ಪದೆ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ‌. ವಾಸ್ತವದಲ್ಲಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ ಎಂದು ಆರೋಪಿಸಿದರು. …

Read More »

ರಾಯಬಾಗ: ₹45.85 ಲಕ್ಷ ಅನುದಾನದ ಕೊಠಡಿಗಳ ಉದ್ಘಾಟನೆ

ರಾಯಬಾಗ: ತಾಲ್ಲೂಕಿನ ಕಂಕಣವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾನಂದ ನಗರ, ಮೊಳವಾಡ ತೋಟ ಹಾಗೂ ಖನದಾಳೆ ತೋಟದಲ್ಲಿ ₹45.85 ಲಕ್ಷ ಅನುದಾನದಲ್ಲಿ ವಿವೇಕ ಯೋಜನೆಯಡಿ ನಿರ್ಮಾಣವಾಗಿದ್ದ ನೂತನ ಕೊಠಡಿಗಳನ್ನು ಶುಕ್ರವಾರ ಶಾಸಕ ಡಿ.ಎಂ. ಐಹೊಳೆ ಉದ್ಘಾಟಿಸಿದರು.   ಬಳಿಕ ಮಾತನಾಡಿದ ಅವರು, ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದ ಮಾತ್ರಕ್ಕೆ ನಿಮ್ಮ ಜವಾಬ್ಧಾರಿ ಕೊನೆಗೊಳ್ಳುವುದಿಲ್ಲ. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪಾಲಕ-ಪೋಷಕರಿಗೂ ಇರುತ್ತದೆ ಎಂದು ಹೇಳಿದರು. ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುವ …

Read More »

ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿ

ಮೂಡಲಗಿ: ‘ಮನಸ್ಸಿದ್ದರೆ ಏನೆಲ್ಲ ಮಾಡಬಹುದು, ಛಲವಿದ್ದರೆ ಏನೆಲ್ಲ ಸಾಧಿಸಬಹುದು’ ಎನ್ನುವುದಕ್ಕೆ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದ ಯುವ ರೈತ ಹೊನ್ನಪ್ಪ ಸಾವಳಗೆಪ್ಪ ಬೂದಿಹಾಳ ಮಾದರಿಯಾಗಿದ್ದಾರೆ. 2008ರಲ್ಲಿ ಬಿಎ ಪದವಿ ಮುಗಿಸಿ ನೌಕರಿ ದೊರೆಯದಿದ್ದಾಗ ಒಂದೇ ಆಕಳು ಸಾಕಿ ಹೈನುಗಾರಿಕೆ ಆರಂಭಿಸಿ ಹೊನ್ನಪ್ಪ ಅವರ ಹೊಲದಲ್ಲಿ ಇಂದು 20ಕ್ಕೂ ಅಧಿಕ ಎಚ್‌ಎಫ್‌ ತಳಿಯ ಹಸುಗಳು ಇವೆ. ಪ್ರತಿ ದಿನ ಬೆಳಿಗ್ಗೆ 100 ಲೀಟರ್‌, ಸಂಜೆ 100 ಲೀಟರ್‌ ಹೀಗೆ ನಿತ್ಯ 200 …

Read More »

ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು. ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ

ಶಿರಸಿ(ಉತ್ತರ ಕನ್ನಡ): ರಾಜ್ಯದಲ್ಲಿ ದಲಿತ ಸಿಎಂ ಆಗಲೂ ಇನ್ನೂ ಕಾಲ ಕೂಡಿ ಬಂದಿಲ್ಲ, ಕಾಲ ಕೂಡಿ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಾರ್ಯಕ್ರಮವೊಂದರ ನಿಮಿತ್ತ ಶಿರಸಿಗೆ ಶನಿವಾರ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು, ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ದಲಿತ ಸಿಎಂ ವಿಚಾರ ಇಲ್ಲ ಎಂದರು. ಪಕ್ಷದ ಮುಖಂಡ ಬಿ ಕೆ ಹರಿಪ್ರಸಾದ್ ಅವರನ್ನು …

Read More »