ಬೆಂಗಳೂರು: ಬರ, ಗ್ಯಾರಂಟಿ ಯೋಜನೆಗಳಿಂದ ತೀವ್ರ ಆರ್ಥಿಕ ಹೊರೆ ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಇದೀಗ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ. ಕೇಂದ್ರ ಸರ್ಕಾರ ಕರ್ನಾಟಕದ ಐಜಿಎಸ್ಟಿ ಸಂಗ್ರಹದಿಂದ 798 ಕೋಟಿ ರೂ. ಕಡಿತಗೊಳಿಸಿದೆ. IGST ಅಂದರೆ ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಆಗಿದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸರಕು ಮತ್ತು ಸೇವೆಗಳು ಚಲಿಸಿದಾಗ ಐಜಿಎಸ್ಟಿ ವಿಧಿಸಲ್ಪಡುತ್ತದೆ. ಐಜಿಎಸ್ಟಿ ಹಂತದಲ್ಲಿ ಬರುವ ಆದಾಯವನ್ನು ಕೇಂದ್ರ ಹಾಗೂ …
Read More »ವಾಟರ್ ಪ್ರೂಫ್ ಟೆಂಟ್, ಮಳೆ ಬಂದರೂ ಯಾವುದೇ ಸಮಸ್ಯೆಯಾವುಗುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ನಿನ್ನೆ ಚಳಿಗೆ ಟೆಂಟ್ ಒಳಗೆ ಪೊಲೀಸರು ತತ್ತರಿಸಿ ಹೋಗಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ
ಬೆಳಗಾವಿ: ಡಿ.4ರಿಂದ 15ರ ವರೆಗೆ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದ ಬಂದೋಬಸ್ತ್ಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಸಿಬ್ಬಂದಿ ಉಳಿದುಕೊಳ್ಳಲು ಬೃಹದಾಕಾರದ ಜರ್ಮನ್ ಟೆಂಟ್ಗಳಿಂದ ಟೌನ್ಶಿಪ್ಗಳನ್ನು ನಿರ್ಮಿಸಲಾಗಿದೆ. ಪೊಲೀಸ್ ಸಿಬ್ಬಂದಿಗೆ ನಿರ್ಮಿಸಲಾಗಿರುವ ಜರ್ಮನ್ ಟೆಂಟ್ ವ್ಯವಸ್ಥೆ ಹೇಗಿದೆ, ಪೊಲೀಸರು ಏನಂತಾರೆ. ಇಲ್ಲಿದೆ ಮಾಹಿತಿ. ಹೌದು, ಸುವರ್ಣ ವಿಧಾನಸೌಧ ಸಮೀಪದ ಅಲಾರವಾಡ ಗ್ರಾಮದ ಹೊರವಲಯದಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಟೌನ್ಶಿಪ್ ನಿರ್ಮಾಣ ಮಾಡಲಾಗಿದೆ. ಇಲ್ಲಿ ನಾಲ್ಕು ದೊಡ್ಡ ದೊಡ್ಡ ಜರ್ಮನ್ …
Read More »ಇಂದಿನಿಂದ ಮಲ್ಲೇಶ್ವರಂನ ‘ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯ’ದಲ್ಲಿ ‘ಕಡಲೆಕಾಯಿ ಪರಿಷೆ’
ಬೆಂಗಳೂರು: ಇಲ್ಲಿನ ಮಲ್ಲೇಶ್ವರಂನಲ್ಲಿರುವ ಶ್ರೀ ಭ್ರಮರಾಂಭ ಸಮೇತ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.2ರ ಇಂದಿನಿಂದ ಡಿ.4ರವರೆಗೂ 7ನೇ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಡಲೆಕಾಯಿ ಪರಿಷೆ ಹಾಗೂ ಹಸಿರು ಚೈತನ್ಯೋತ್ಸವ ಕಾರ್ಯಕ್ರಮದ ಆಡಿಯಲ್ಲಿ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇಂದಿನ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಚಾಲನಾ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಬಿ.ಕೆ …
Read More »ಕೊಪ್ಪಳದಲ್ಲಿ ‘ಜೈ ಶ್ರೀರಾಮ್’ ಹೇಳುವಂತೆ ಅಂಧ ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ
ಕೊಪ್ಪಳ:ಇತ್ತೀಚೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ‘ಜೈ ಶ್ರೀರಾಮ’ ಎಂದು ಪಠಿಸುವಂತೆ ಒತ್ತಾಯಿಸಿ 62 ವರ್ಷದ ಅಂಧ ಮುಸ್ಲಿಂ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಗಾವತಿ ಪಟ್ಟಣ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಸಂತ್ರಸ್ತ ಹುಸೇನ್ ಸಾಬ್ ಅವರು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ತನಗೆ ಬಲವಂತವಾಗಿ ಬೈಕ್ ಹತ್ತಿಸಿ, ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ನವೆಂಬರ್ 25 ರ ಮಧ್ಯರಾತ್ರಿ ತನ್ನ ಮೇಲೆ …
Read More »ಚೀನಾದ ಮಕ್ಕಳಲ್ಲಿ ಆರ್ಭಟಿಸುತ್ತಿರುವಂತ ಹೊಸ ಮಾದರಿಯ ವೈರಸ್ ರಾಜ್ಯಕ್ಕೆ ಕಾಲಿಡೋ ಮುನ್ನವೇ ತಡೆಗಟ್ಟೋ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ.:D.C.
ಬೆಳಗಾವಿ: ಚೀನಾದ ಮಕ್ಕಳಲ್ಲಿ ಆರ್ಭಟಿಸುತ್ತಿರುವಂತ ಹೊಸ ಮಾದರಿಯ ವೈರಸ್ ರಾಜ್ಯಕ್ಕೆ ಕಾಲಿಡೋ ಮುನ್ನವೇ ತಡೆಗಟ್ಟೋ ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ. ಅದರಲ್ಲಿ ಡಿ.4ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಈ ವೇಳೆ ವೈರಸ್ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಕಂಟ್ರೋಲ್ ರೂಂ ತೆರೆಯಲಾಗಿದೆ. ಇಂದು ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ಅಧಿವೇಶನದಲ್ಲಿ ಪೊಲೀಸ್ ಕಂಟ್ರೋಲ್ ರೂಂ ಅನ್ನು ಚೀನಾ ಹೊಸ ಮಾದರಿಯ ವೈರಸ್ ವಿಚಾರವಾಗಿ …
Read More »ರಾಜ್ಯ ಸರ್ಕಾರದಿಂದ ‘ಬರ ಪರಿಹಾರ’ಕ್ಕೆ ಅರ್ಹ ‘ರೈತ’ರ ಪಟ್ಟಿ ಬಿಡುಗಡೆ: ನಿಮ್ಮ ಹೆಸರಿದ್ಯಾ? ಹೀಗೆ ಚೆಕ್ ಮಾಡಿ
ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟ ನಂತ್ರ, ರೈತರ ಫಸಲು ಹಾನಿಯಾಗಿತ್ತು. ಹೀಗಾಗಿ ರಾಜ್ಯದ ಅನೇಕ ತಾಲೂಕುಗಳನ್ನು ಬರಪೀಡಿತ ತಾಲೂಕು ಅಂತ ಸರ್ಕಾರ ಘೋಷಣೆ ಮಾಡಿದೆ. ಈಗ ಬರ ಪರಿಹಾರ ಪಡೆಯಲು ಅರ್ಹರಿರುವಂತ ಪಟ್ಟಿಯನ್ನು ಪ್ರಕಟಿಸಿದ್ದು, ಅದರಲ್ಲಿ ಹೆಸರಿರೋರಿಗೆ ಮಾತ್ರ ಪರಿಹಾರ ಸಿಗಲಿದೆ. ಹಾಗಾದ್ರೇ ನಿಮ್ಮ ಹೆಸರು ಇದ್ಯಾ ಅಂತ ಹೇಗೆ ಚೆಕ್ ಮಾಡೋದು ಅನ್ನೋ ಬಗ್ಗೆ ಮುಂದೆ ಓದಿ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ನಂತ್ರ, ಹಲವು ತಾಲ್ಲೂಕುಗಳನ್ನು ಸರ್ಕಾರ …
Read More »ಡಿ.23ರಂದು ‘545 ಪಿಎಸ್ಐ ನೇಮಕಾತಿ’ಗೆ ಮರು ಪರೀಕ್ಷೆ: ಮುಂದೂಡಲು ‘ಶಾಸಕ’ರು ಆಗ್ರಹ
ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ನಂತ್ರ, ಪರೀಕ್ಷೆಯನ್ನು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರದ್ದುಪಡಿಸಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರವು ಡಿ.23ರಂದು ಮರು ಪರೀಕ್ಷೆ ನಡೆಸೋದಕ್ಕೆ ದಿನಾಂಕ ನಿಗದಿ ಪಡಿಸಿದೆ. ಇಂತಹ ಮರು ನಿಗದಿ ಪರೀಕ್ಷೆಯನ್ನು ಮುಂದೂಡುವಂತೆ ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಗೆ ಪತ್ರ ಬರೆದು ಶಾಸಕರು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಸೇರಿದಂತೆ ಹಲವರಿಗೆ ಶಾಸಕರಾದಂತ …
Read More »ಕಲಾಪದಲ್ಲಿ ಜಂಟಿ ಸಮರ; ಬಿಜೆಪಿ-ಜೆಡಿಎಸ್ ನಾಯಕರಿಂದ ರಹಸ್ಯ ಸಮಾಲೋಚನೆ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.4ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ವಿರುದ್ಧ ಪಟ್ಟಾಗಿ ಕುಸ್ತಿಗೆ ಇಳಿಯಲು ದೋಸ್ತಿಗಳು ಸಜ್ಜಾಗಿದ್ದಾರೆ. ರೇಸ್ಕೋರ್ಸ್ ರಸ್ತೆಯಲ್ಲಿನ ಅಪಾರ್ಟ್ವೆುಂಟ್ವೊಂದರಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ರಹಸ್ಯ ಸಮಾಲೋಚನೆ ನಡೆಸಿ, ಸದನದಲ್ಲಿ ಹೂಡಲಿರುವ ಜಂಟಿ ಸಮರದ ತಂತ್ರಗಳಿಗೆ ಅಂತಿಮ ಸ್ಪರ್ಶ ನೀಡಿದರು. ರಾಜ್ಯದ ಹಿತ, ರಚನಾತ್ಮಕವಾಗಿ ಜವಾಬ್ದಾರಿ ನಿರ್ವಹಣೆ, ಸದನದ ಅಮೂಲ್ಯ ಸಮಯ ವ್ಯರ್ಥವಾಗದಂತೆ ನೋಡಿಕೊಳ್ಳುವ ವಿಚಾರದಲ್ಲಿ ಉಭಯ ಪಕ್ಷಗಳು ಬದ್ಧವಾಗಿರಲು ಸಮ್ಮತಿಸಿವೆ. ವೈಫಲ್ಯಗಳನ್ನು ಎತ್ತಿ ಹಿಡಿಯುವ, ಕಟ್ಟಿಹಾಕುವ …
Read More »ತೆರಿಗೆ ಸಂಗ್ರಹ ಕುಸಿತ: ಗುರಿ ಮುಟ್ಟಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಬರ ಮತ್ತು ಜಾಗತಿಕ ಮಾರುಕಟ್ಟೆಯ ಏರಿಳಿತದಿಂದ ತೆರಿಗೆ ಸಂಗ್ರಹದಲ್ಲಿ ತೀವ್ರ ಕುಸಿತವಾಗುವ ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪಲು ಕಠಿಣ ಪರಿಶ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ತೆರಿಗೆ ಸಂಗ್ರಹದ ಪ್ರಗತಿ ಪರಿಶೀಲನೆಯನ್ನು ಸಿದ್ದರಾಮಯ್ಯ ಶುಕ್ರವಾರ ನಡೆಸಿದರು. 2023-24 ರ ಸಾಲಿಗೆ ರಾಜ್ಯ ಸರ್ಕಾರ ₹1.82 ಲಕ್ಷ ಕೋಟಿ ತೆರಿಗೆ ಸಂಗ್ರಹದ ಗುರಿ ನಿಗದಿ ಮಾಡಿದೆ. ವಾಣಿಜ್ಯ …
Read More »ನರೇಗಾ ಯೋಜನೆ ಬರಗಾಲದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ನೆರವಾಗುತ್ತ
ಬೆಳಗಾವಿ: ನರೇಗಾ ಯೋಜನೆ ಬರಗಾಲದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ನೆರವಾಗುತ್ತದೆ. ಆದರೆ ಇದೇ ಈಗ ರೈತರಿಗೆ ಸಂಕಷ್ಟ ತಂದೊಡ್ಡಿದ್ದು, ಬೆಳೆದು ನಿಂತಿರುವ ಭತ್ತದ ಕಟಾವಿಗೆ ಕೂಲಿ ಕಾರ್ಮಿಕರು ಸಿಗದೇ ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಅನ್ನದಾತರು ಪರದಾಡುತ್ತಿದ್ದಾರೆ. ಸುಗ್ಗಿ ಕಾಲದಲ್ಲಿ ಕೂಲಿ ಕೊಡಬೇಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹೌದು, ಮೊದಲೇ ಬರಗಾಲದಿಂದ ತತ್ತರಿಸಿ ಹೋಗಿದ್ದ ಕಡೋಲಿ ಗ್ರಾಮದ ರೈತರು ಕಷ್ಟಪಟ್ಟು ಭತ್ತ ಬೆಳೆದಿದ್ದರು. ಈಗ ಅದು ಕಟಾವಿಗೆ ಬಂದಿದೆ. ಆದರೆ, …
Read More »
Laxmi News 24×7