ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗಡಿ ಅಂಚಿನಲ್ಲಿರುವ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯಿತು. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷತೆ. ಗೊರೆ ಹಬ್ಬ ಅಚ್ಚ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷ ಇಲ್ಲಿ ಬಲಿಪಾಡ್ಯಮಿಯ ಮಾರನೇ ದಿನ ಗೊರೆ ಹಬ್ಬ ಆಚರಿಸಲಾಗುತ್ತದೆ. ಅದರಂತೆ ಹಬ್ಬದ ದಿನ ಬೆಳಿಗ್ಗೆ ಗ್ರಾಮದ ಎಲ್ಲರ ಮನೆಯ ಕೊಟ್ಟಿಗೆಗಳಿಂದ ಸಗಣಿಯನ್ನು ಎತ್ತಿನ …
Read More »ಜನರಿಗೆ ಹೊರೆಯಾದ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ
ಬೆಳಗಾವಿ: ರಾಜ್ಯ ಸರ್ಕಾರ ಅಕ್ಟೋಬರ್ 1ರಿಂದ ಸ್ಥಿರಾಸ್ತಿಗಳ ನೋಂದಣಿ ಶುಲ್ಕವನ್ನು ಶೇ.25 ರಿಂದ 30ರವರೆಗೂ ಹೆಚ್ಚಳ ಮಾಡಿದ್ದು, ಜಿಲ್ಲೆಯ ಮಧ್ಯಮ ವರ್ಗ ತೊಂದರೆ ಅನುಭವಿಸುವಂತೆ ಮಾಡಿದೆ. ಅಲ್ಲದೇ ಆಸ್ತಿ ಖರೀದಿಸಲು ಜನ ಪರದಾಡುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಭೀಕರ ಬರಗಾಲದಿಂದ ಕಂಗೆಟ್ಟಿರುವ ಜನರಿಗೆ ಸರ್ಕಾರ ಈ ಶುಲ್ಕ ಹೆಚ್ಚಿಸಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಸ್ವಂತ ಮನೆ ಹೊಂದಬೇಕು ಎಂಬ ಮಧ್ಯಮ ವರ್ಗ, ಕೂಲಿಕಾರರ ಕನಸು ಕನಸಾಗಿಯೇ ಉಳಿಯುವಂತೆ ಮಾಡಿದೆ …
Read More »ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಆರೋಪಿ ಬಂಧನ
ಉಡುಪಿ: ಇಲ್ಲಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು, ಬೆಳಗಾವಿ ಪೊಲೀಸರ ಸಹಕಾರದಿಂದ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರವೀಣ್ ಅರುಣ್ ಚೌಗಲೆ(35) ಬಂಧಿತ ಆರೋಪಿ. ಬೆಳಗಾವಿಯ ಕುಡುಚಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಪ್ರವೀಣ್, ಮಂಗಳೂರು ಏರ್ಪೋರ್ಟ್ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಸದ್ಯಕ್ಕೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದವನಾಗಿದ್ದಾನೆ ಎಂದು ತಿಳಿದು ಬಂದಿದೆ. ಕುಡಚಿಯಲ್ಲಿರುವ …
Read More »ವಿಶ್ವಕಪ್ ಕ್ರಿಕೆಟ್: ಭಾರತ-ನ್ಯೂಜಿಲೆಂಡ್ ಹೈವೋಲ್ಟೇಜ್ ಸೆಮಿ ಫೈನಲ್ ವೀಕ್ಷಿಸಲಿರುವ ರಜಿನಿಕಾಂತ್
ಮುಂಬೈ: ಏಕದಿನ ವಿಶ್ವಕಪ್ ಕ್ರಿಕೆಟ್ನಲ್ಲಿಂದು ಭಾರತ-ನ್ಯೂಜಿಲೆಂಡ್ ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯ ನಡೆಯಲಿದೆ. ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣ ಈ ರೋಚಕ ಹಣಾಹಣಿಗೆ ಆತಿಥ್ಯ ವಹಿಸುತ್ತಿದೆ. ಜಗತ್ತಿನೆಲ್ಲೆಡೆಯ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯವನ್ನು ಎದುರು ನೋಡುತ್ತಿದ್ದು, ಭಾರತದ ಗೆಲುವಿಗಾಗಿ ಪೂಜೆ-ಪ್ರಾರ್ಥನೆಯಲ್ಲಿ ನಿರತರಾಗಿದ್ದಾರೆ. ಇನ್ನೊಂದೆಡೆ ಸಾವಿರಾರು ಪ್ರೇಕ್ಷಕರೊಂದಿಗೆ ಕ್ರೀಡಾಂಗಣದಲ್ಲೇ ಕುಳಿತು ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ತಮಿಳಿನ ಖ್ಯಾತ ನಟ ರಜಿನಿಕಾಂತ್ ಕೂಡಾ ಉತ್ಸುಕರಾಗಿದ್ದಾರೆ. ರಜಿನಿಕಾಂತ್ ಮಾತ್ರವಲ್ಲ, ಪ್ರಸಿದ್ಧ ಮಾಜಿ ಫುಟ್ಬಾಲ್ …
Read More »ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಸ್ವೀಕರಿಸಿ ಅಧಿಕೃತವಾಗಿ ಬಿ.ವೈ.ವಿಜಯೇಂದ್ರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದರು.
ಬೆಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಹಾಗು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯ ಬಿಜೆಪಿಗೆ ಯುವ ನೇತಾರನ ಸಾರಥ್ಯ ಸಿಕ್ಕಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಹಿರಿಯರ ಆಶೀರ್ವಾದ ಪಡೆದು, ನಳೀನ್ ಕುಮಾರ್ ಕಟೀಲ್ ಅವರಿಂದ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಸಮಾರಂಭದಲ್ಲಿ ಭಾಗವಹಿಸಿ ಬಿ.ಎಸ್.ಯಡಿಯೂರಪ್ಪ …
Read More »ಎಂಎ ಪದವಿ ಪರೀಕ್ಷೆ ಬರೆಯುವ ಮೂಲಕ ಪ್ರೇರಣೆಯಾದ ತೃತೀಯ ಲಿಂಗಿ ದಿವ್ಯಾ
ಕಲಬುರಗಿ: ತೃತೀಯ ಲಿಂಗಿಯೊಬ್ಬರು ಎಂಎ ಪದವಿ ಪರೀಕ್ಷೆ ಬರೆಯುವ ಮೂಲಕ ತಮ್ಮ ಸಮುದಾಯಕ್ಕೆ ಪ್ರೇರಣೆಯಾಗಿದ್ದಾರೆ. ಹೌದು ಸುಪ್ರೀಂ ಕೋರ್ಟ್ ತೃತೀಯ ಲಿಂಗಿ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದ ಬಳಿಕ ದೇಶದಲ್ಲಿ ಮಂಗಳಮುಖಿ ಮಹಿಳೆಯರ ಶಿಕ್ಷಣದಲ್ಲಿ ಧನಾತ್ಮಕ ಅಭಿವೃದ್ಧಿಯಾಗಿದೆ. ತನ್ನ ಪರೀಕ್ಷೆಯಲ್ಲಿ ನಿರತರಾಗಿರುವ ದಿವ್ಯಾಕಲಬುರಗಿಯ ಡಾ.ಅಂಬೇಡ್ಕರ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ತೃತೀಯ ಲಿಂಗಿ ದಿವ್ಯಾ ಅವರು ಎಂಎ ರಾಜ್ಯಶಾಸ್ತ್ರದ ಅಂತಿಮ ಪರೀಕ್ಷೆ ಬರೆದು …
Read More »ಪೋಷಕರ ಬುದ್ಧಿವಾದಕ್ಕೆ ಮನನೊಂದು 14 ವರ್ಷದ ಬಾಲಕ ಆತ್ಮಹತ್ಯೆ
ಬೆಳಗಾವಿ: ದೀಪಾವಳಿ ಹಬ್ಬದ ರಜೆ ಇದೆ ಎಂದು ಸುಮ್ಮನೆ ಹೊರಗಡೆ ತಿರುಗಾಡಬೇಡ, ಓದಿನ ಕಡೆಯೂ ಗಮನ ಹರಿಸುವಂತೆ ಪೋಷಕರು ಬುದ್ಧಿವಾದ ಹೇಳಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದದಲ್ಲಿ ಸೋಮವಾರ ನಡೆದಿದೆ. ತಮ್ಮ ಮನೆಯ ಮಹಡಿಯ ಮೇಲಿನ ರೂಮಿನಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಬಾಲಕ ಮೂಡಲಗಿಯ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಇನ್ನು ಒಂದು ದಿನದಲ್ಲಿ ಶಾಲೆ …
Read More »ರಾಯಚೂರು: ಹಣಕ್ಕಾಗಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಹತ್ಯೆಗೈದ ಆರೋಪಿಗಳಿಬ್ಬರ ಬಂಧನ
ರಾಯಚೂರು: ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಟ್ಟಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ (ಚಿನ್ನದಗಣಿ) ಕಳೆದ ಅ.26 ರಂದು ಕೆಮಿಕಲ್ ಹಾಗೂ ಮಾರಕಾಸ್ತ್ರಗಳಿಂದ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಮೃತ ಲ್ಯಾಬ್ ಟೆಕ್ನಿಷಿಯನ್ ಮಂಜುಳಾ ಅವರ ಮಗ ಸಚಿನ್ ಪಾಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ …
Read More »ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಸಿ. ಸುಮಲತಾ ಅವರನ್ನು ಕರ್ನಾಟಕ ಹೈಕೋರ್ಟ್ಗೆ ವರ್ಗಾವಣೆ
ಬೆಂಗಳೂರು : ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಸಿ ಸುಮಲತಾ ಅವರನ್ನು ಕರ್ನಾಟಕ ಹೈಕೋರ್ಟ್ಗೆ ವರ್ಗಾವಣೆ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ವರ್ಗಾವಣೆ ಮಾಡಿರುವುದಾಗಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಂದ್ರ ಕಶ್ಯಪ್ ಅವರು ತಿಳಿಸಿದ್ದಾರೆ. ನ್ಯಾಯಮೂರ್ತಿ ಸುಮಲತಾ ಅವರನ್ನು ಈ ಹಿಂದೆ ಗುಜರಾತ್ ಹೈಕೋರ್ಟ್ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರು ಸುಪ್ರೀಂಕೋರ್ಟ್ ಕೊಲಿಜಿಯಂಗೆ …
Read More »ಮನೆಗೆ ವಿದ್ಯುತ್ ಕಂಬದಿಂದ ಅಕ್ರಮ ಕರೆಂಟ್ ಸಂಪರ್ಕ ಪಡೆದ :H.D.K.
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ …
Read More »