Breaking News

ರಾಷ್ಟ್ರೀಯ

ಅರಣ್ಯ ಸಿಬ್ಬಂದಿ ಗಾಯಗೊಳಿಸಿ ಪರಾರಿಯಾಗಿದ್ದ ಚಿರತೆ ಕೊನೆಗೂ ಸೆರೆ

ಬೆಂಗಳೂರು: ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಬೊಮ್ಮನಹಳ್ಳಿ ಕೃಷ್ಣಾರೆಡ್ಡಿ ಬಡಾವಣೆ ಸುತ್ತಮುತ್ತ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಬೋನಿನಲ್ಲಿ ಬಂಧಿಯಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆ ಸೆರೆಹಿಡಿಯಲು ಟಾಸ್ಕ್​ ಫೋರ್ಸ್​ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಟಾಸ್ಕ್​ ಫೋರ್ಸ್​ ಸಿಬ್ಬಂದಿ ಧನರಾಜ್​ ಎಂಬುವರು ಚಿರತೆ ದಾಳಿಯಿಂದ ಗಾಯಗೊಂಡಿದ್ದರು. ಚಿರತೆ ದಾಳಿಯಿಂದ ಧನರಾಜ್​ ಕಾಲು, ಹೊಟ್ಟೆ ಭಾಗಕ್ಕೆ ಗಾಯವಾಗಿದ್ದು, ಅವರನ್ನು …

Read More »

ಪ್ರಸ್ತುತ ನಾವು ಬಳಕೆ ಮಾಡುತ್ತಿರುವ ಧ್ವಜ ಬೇರೊಂದು ಪಕ್ಷದ ಧ್ವಜವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಕರ್ನಾಟಕದ ಹೆಸರಿಗೆ ಇಂದು 50ರ ಸಂಭ್ರಮ. ನಾಡಿನೆಲ್ಲೆಡೆ ಸಡಗರ ಸಂಭ್ರಮದಿಂದ ಹಳದಿ ಮತ್ತು ಕೆಂಪು ಬಣ್ಣದ ನಾಡಧ್ವಜಗಳು ಹಾರಾಡುತ್ತಿವೆ. ಆದರೆ ಈ ಧ್ವಜ ಅಧಿಕೃತ ನಾಡಧ್ವಜವಾ? ಈ ಧ್ವಜವನ್ನು ಯಾರು ರಚಿಸಿದ್ದು, ಸರ್ಕಾರ ನಾಡಧ್ವಜದ ವಿಚಾರದಲ್ಲಿ ಏನೆಲ್ಲಾ ಮಾಡಿದೆ. ನಾಡಧ್ವಜ ಹೊಂದಲು ಸಾಂವಿಧಾನಿಕ ಮಾನ್ಯತೆ ಇದೆಯಾ ಎನ್ನುವ ಕುರಿತ ವರದಿ ಇಲ್ಲಿದೆ. 1956ರಲ್ಲಿಯೇ ಕನ್ನಡಿಗರ ವಾಸಿಸುವ ಪ್ರದೇಶಗಳನ್ನು ಒಳಗೊಂಡು ರಾಜ್ಯ ಏಕೀಕರಣಗೊಂಡರೂ ಕರ್ನಾಟಕದ ಹೆಸರು ಪಡೆಯಲು 17 ವರ್ಷ ಹೋರಾಟ …

Read More »

ರಾಜ್ಯದಲ್ಲಿ ಸೈಬರ್ ಪ್ರಕರಣ ಹೆಚ್ಚಳ, ಸೈಬರ್ ಕ್ರೈಂ ತಡೆಗೆ ಹೊಸ ನಿಯಮ ತರಲು ಕ್ರಮ: ಡಾ. ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ ಒಂದು ಹೊಸ ಸಮಿತಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಯಂಟಿ ಸೈಬರ್ ಕಾನೂನು ಜಾರಿಗೆ ತರಲು ಒಂದು ಅಜೆಂಡಾ ರೂಪಿಸಲು ಜವಾಬ್ದಾರಿ ಕೊಟ್ಟಿದ್ದಾರೆ.ನಾವು ಸದ್ಯದಲ್ಲೇ ಅದನ್ನ ಪ್ರಕಟಣೆ ಮಾಡ್ತೀವಿ. ಸೈಬರ್ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ …

Read More »

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕುರಿತು ಸರ್ಕಾರ ಸರ್ವಪಕ್ಷ ಸಭೆ

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂದು ರಾಜಧಾನಿ ಮುಂಬೈನಲ್ಲಿ ಸರ್ವಪಕ್ಷ ಸಭೆ ನಡೆಸಿದೆ. ಮರಾಠ ಮೀಸಲಾತಿ ನೀಡಲು ಎಲ್ಲ ಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಭೆ ಬಳಿಕ ತಿಳಿಸಿದ್ದಾರೆ. ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷ ಸಭೆಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅದು …

Read More »

ಬೆಳಗಾವಿಯಲ್ಲಿ ಸಚಿವ ಜಾರಕಿಹೊಳಿ ಧ್ವಜಾರೋಹಣ; ಕರ್ನಾಟಕ ಭಾವೈಕ್ಯತೆ ತವರು ಮನೆ ಎಂದು ಬಣ್ಣನೆ

ಬೆಳಗಾವಿ : ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಭುವನೇಶ್ವರಿ ದೇವಿ ಮೂರ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪೂಜೆ ಸಲ್ಲಿಸಿದರು. ಬಳಿಕ ಹಳದಿ-ಕೆಂಪು ಬಣ್ಣದ ಬಲೂನ್​ಗಳನ್ನು ಹಾರಿಸುವ ಮೂಲಕ‌ ಚಾಲನೆ ನೀಡಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕನ್ನಡ ನಾಡು ವಿವಿಧ ಧರ್ಮ ಮತ್ತು ಸಂಸ್ಕೃತಿಗಳ ಸಂಗಮವಾಗಿದೆ. ಪ್ರಾಚೀನ ಕಾಲದಿಂದಲೂ ತನ್ನದೇ ಆದ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸಿಕೊಂಡು ಬಂದಿದೆ. ಸಾಮರಸ್ಯವೇ ಕನ್ನಡ ಸಂಸ್ಕೃತಿಯ ಜೀವಾಳ. ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲು …

Read More »

ಭಾರತೀಯ ನಾಗರಿಕರು ಇದೇ ನವೆಂಬರ್ 10ರಿಂದ ತನ್ನ ದೇಶಕ್ಕೆ ವೀಸಾ ಇಲ್ಲದೆ ಪ್ರಯಾಣಿಸಬಹುದು

ನವದೆಹಲಿ: ಭಾರತೀಯರು ವೀಸಾ ಇಲ್ಲದೆ ತನ್ನ ದೇಶಕ್ಕೆ ಭೇಟಿ ನೀಡಬಹುದು ಎಂದು ಥಾಯ್ಲೆಂಡ್ ಹೇಳಿದೆ. ಭಾರತೀಯರು ನವೆಂಬರ್ 10, 2023 ರಿಂದ ಮೇ 10, 2024 ರವರೆಗೆ ವೀಸಾ ಇಲ್ಲದೆ ಥಾಯ್ಲೆಂಡ್‌ಗೆ ಪ್ರವಾಸ ಕೈಗೊಳ್ಳಬಹುದು ಮತ್ತು ಅಲ್ಲಿ 30 ದಿನಗಳವರೆಗೆ ಉಳಿಯಬಹುದು ಎಂದು ಥಾಯ್ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.   ತನ್ನ ದೇಶಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಥಾಯ್ಲೆಂಡ್ ಈಗ ಭಾರತ ಮತ್ತು ತೈವಾನ್ ನಾಗರಿಕರಿಗೆ ವೀಸಾರಹಿತ ಪ್ರವಾಸದ ಸೌಲಭ್ಯ …

Read More »

ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಮುಂದುವರೆದ ಕಾರ್ಯಾಚರಣೆ

ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಸೋಮವಾರ ಕಾಣಿಸಿಕೊಂಡ ಚಿರತೆ, ಈವರೆಗೆ ಅಧಿಕಾರಿಗಳ ಕಣ್ಣಿಗೆ ಬಿದ್ದಿಲ್ಲ. ಪರಿಣಾಮ ಜನರು ಭಯದಲ್ಲಿಯೇ ಓಡಾಡುಂತಾಗಿದೆ. ಸೆರೆಗಾಗಿ ಎರಡು ಬೋನುಗಳನ್ನು ಇಟ್ಟಿರುವ ಅರಣ್ಯ ಇಲಾಖೆ ಐದು ತಂಡಗಳನ್ನು ನಿಯೋಜಿಸಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಕಡೆಂಜಾ ಅಪಾರ್ಟ್​ಮೆಂಟ್​ ಸಮೀಪ ಚಿರತೆ ಓಡಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಆದರೆ, ಚಿರತೆ ಮಾತ್ರ ಅಧಿಕಾರಿಗಳ ತಪ್ಪಿಸಿಕೊಂಡು ಓಡಾಡುತ್ತಿದೆ. ಮೈಸೂರಿನಿಂದ ವಿಶೇಷ ತಂಡ ಸೇರಿದಂತೆ ಬನ್ನೇರುಘಟ್ಟದ ಅರವಳಿಕೆ …

Read More »

ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಉಚಿತವಾಗಿ ವಿದ್ಯುತ್ ಹಾಗು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಓದಬೇಕು, ಕನಿಷ್ಠ ಎಸ್‌ಎಸ್‌ಎಲ್​ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಓದಬೇಕು ಎಂದು ಕರೆ ನೀಡಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿಂದು ಶಿಕ್ಷಣ ಇಲಾಖೆ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ರಾಜ್ಯ ಏಕೀಕರಣವಾದಾಗ ಮೈಸೂರು ರಾಜ್ಯ ಎಂದು ಕರೆಯಲಾಯಿತು. …

Read More »

ಕರ್ನಾಟಕ‌ ರಾಜ್ಯೋತ್ಸವ ಆಚರಣೆಗೆ ಬೆಳಗಾವಿಯಲ್ಲಿ ಸಕಲ ಸಿದ್ಧತೆ ನಡೆದಿದೆ. ಕರಾಳ ದಿನಾಚರಣೆಗೆ ಯಾವುದೇ ರೀತಿಯ ಅನುಮತಿ ಇಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ

ಬೆಳಗಾವಿ: ಕರ್ನಾಟಕ‌ ರಾಜ್ಯೋತ್ಸವಕ್ಕೆ ಕುಂದಾನಗರಿ ಬೆಳಗಾವಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಎಲ್ಲೆಲ್ಲೂ ಹಳದಿ, ಕೆಂಪು ಬಣ್ಣದ ಧ್ವಜಗಳೇ ರಾರಾಜಿಸುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಲಕ್ಷಾಂತರ ಕನ್ನಡಿಗರ ಸಮಾಗಮಕ್ಕೆ ರಾಣಿ ಚನ್ನಮ್ಮ ವೃತ್ತ ಸಾಕ್ಷಿಯಾಗಲಿದೆ. ಇಡೀ ರಾಜ್ಯದಲ್ಲೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇಲ್ಲಿನ ಗಲ್ಲಿ ಗಲ್ಲಿಯಲ್ಲಿ ಕನ್ನಡದ ಝೇಂಕಾರ ಮೊಳಗುತ್ತಿದ್ದು, ಕನ್ನಡಮ್ಮನ ಹಬ್ಬಕ್ಕೆ ಕುಂದಾನಗರಿಯಲ್ಲಿ ಸಕಲ ತಯಾರಿ‌ ನಡೆದಿದೆ. ರಾಣಿ ಚನ್ನಮ್ಮ ವೃತ್ತವಂತೂ ಅಕ್ಷರಶಃ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಚನ್ನಮ್ಮ …

Read More »

ರಾಜ್ಯೋತ್ಸವಕ್ಕೆ ರಜೆ ಹಾಕಿ ಬೆಂಗಳೂರಿನಿಂದ ಬಂದ ಪೊಲೀಸ್

ಬೆಳಗಾವಿ : ನವೆಂಬರ್ 1 ರಂದು ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡದ ಝೇಂಕಾರ ಮೊಳಗುತ್ತದೆ. ಇಲ್ಲಿನ ರಾಜ್ಯೋತ್ಸವ ಕಣ್ತುಂಬಿಕೊಳ್ಳಲು ಜಿಲ್ಲೆ ಸೇರಿ ರಾಜ್ಯದ ನಾನಾ ಮೂಲೆಗಳಿಂದ‌ ಕನ್ನಡಿಗರು ಬರುತ್ತಿದ್ದಾರೆ. ಅದರಂತೆ ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಬೆಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್​ ಅಧಿಕಾರಿಯೊಬ್ಬರು ರಜೆ ಹಾಕಿ ಬಂದಿರುವುದು ವಿಶೇಷವಾಗಿದೆ. ಕಳೆದ 10 ವರ್ಷಗಳಿಂದ ತಪ್ಪದೇ ಕನ್ನಡ ರಾಜ್ಯೋತ್ಸವಕ್ಕೆ ಆಗಮಿಸುತ್ತಿರುವ ಈ ವಿಶೇಷ ಕನ್ನಡ ಅಭಿಮಾನಿ ಅಮಿತ್ ರಾಮಚಂದ್ರ ಮಿರಜಕರ್ ಎಂಬುವವರು …

Read More »