Breaking News

ರಾಷ್ಟ್ರೀಯ

ಪತ್ರಕರ್ತರ ಬಗ್ಗೆ ಸಚಿವೆ ಹೆಬ್ಬಾಳ್ಕರ ಅವಮಾನಕರ ಹೇಳಿಕೆ: ಎಐಸಿಸಿ ಹಾಗೂ ಸಿಎಂಗೆ ದೂರು ನೀಡಲು ಪತ್ರಕರ್ತರ ನಿರ್ಧಾರ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಪತ್ರಕರ್ತರು ಅಪ್ರಭುದ್ಧರು ಎನ್ನುವ ಅರ್ಥದಲ್ಲಿ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಇವತ್ತು ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಕರ್ತರಿಂದ ಖಂಡನಾ ಸಭೆ ನಡೆಸಲಾಯಿತು. ಸಭೆಯಲ್ಲಿ 42 ಕ್ಕೂ ಅಧಿಕ ಹಿರಿಯ ಪತ್ರಕರ್ತರು ಭಾಗಿಯಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆಯನ್ನ ತೀವ್ರವಾಗಿ ಖಂಡಿಸಲಾಯಿತು. ಸಚಿವೆ ಹೆಬ್ಬಾಳ್ಕರ ಅವರು ಇತ್ತೀಚೆಗೆ ಪತ್ರಕರ್ತರ ಜೊತೆ ನಡೆದುಕೊಳ್ಳುತ್ತಿರುವ ನಡುವಳಿಕೆ ಬಗ್ಗೆ ಹಿರಿಯ ಪತ್ರಕರ್ತರು …

Read More »

ಪಿಚ್ ಬದಲಾವಣೆ ವಿವಾದ ತಳ್ಳಿಹಾಕಿದ ಕಿವೀಸ್​ ನಾಯಕ; ಭಾರತ ತಂಡಕ್ಕೆ ಅಭಿನಂದಿಸಿದ ಕೇನ್ ವಿಲಿಯಮ್ಸನ್

ಮುಂಬೈ(ಮಹಾರಾಷ್ಟ್ರ): ಏಕದಿನ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದ ವೇಳೆ ಬಿಸಿಸಿಐ ಕೊನೆಯ ಕ್ಷಣದಲ್ಲಿ ಪಿಚ್ ಬದಲಾಯಿಸಿದೆ ಎಂದು ಕೆಲ ಆಂಗ್ಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಬಗ್ಗೆ ಐಸಿಸಿ ಈಗಾಗಲೇ ವಿವರಣೆ ನೀಡಿದೆ. ಇತ್ತೀಚೆಗೆ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಕೂಡ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ಭಾರತ ಮತ್ತು ಕಿವೀಸ್ ನಡುವೆ ಮೊದಲ ಸೆಮಿಫೈನಲ್ ನಡೆಯಿತು. ಪಂದ್ಯದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ …

Read More »

ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಹಸೆಮಣೆ ಏರಿದ ವಾಸುಕಿ ವೈಭವ್

 ಸಂಗೀತ ನಿರ್ದೇಶಕ ವಾಸುಕಿ ವೈಭವ್ ಅವರಿಂದು ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಅವರ ಕೈ ಹಿಡಿದಿದ್ದಾರೆ. ‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಸಂಗೀತ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವಾಸುಕಿ ವೈಭವ್ ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಹಸೆಮಣೆ ಏರಿದ್ದಾರೆ. ರಾಮಾ ರಾಮಾ ರೇ ಸಿನಿಮಾದ ಸಕ್ಸಸ್ ಜೊತೆ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ವಾಸುಕಿ ವೈಭವ್ ಅವರೀಗ ದಾಂಪತ್ಯ …

Read More »

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ನಾನೂ ಆಕಾಂಕ್ಷಿ, ನಾಳೆಯೇ ಹೆಸರು ಪ್ರಕಟವಾಗಲಿದೆ: ಆರ್ ಅಶೋಕ್

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಆಯ್ಕೆ ಆಗಿ ಒಂದು ವಾರ ಕಳೆದಿದೆ. ಇದರ ಬೆನ್ನಲ್ಲೇ ಈವರೆಗೆ ಖಾಲಿ ಉಳಿದಿರುವ ಪ್ರತಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ನಡೆದಿದೆ.”ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ನಾಳೆ ಪ್ರತಿಪಕ್ಷ ನಾಯಕರ ಆಯ್ಕೆಯಾಗಲಿದೆ. ನನ್ನನ್ನೂ ಸೇರಿ ನಾಲ್ಕೈದು ಜನ ಆಕಾಂಕ್ಷಿಗಳಿದ್ದೇವೆ. ಪಕ್ಷ ಯಾರಿಗೇ ಅವಕಾಶ ನೀಡಿದರೂ ನಾನು ಸ್ವಾಗತ ಮಾಡುತ್ತೇನೆ. ಅವರಿಗೆ ಸಂಪೂರ್ಣ ಸಹಕಾರವನ್ನೂ …

Read More »

ನನ್ನ ರಾಜಕೀಯ ಜೀವನದಲ್ಲಿ ಹಣಕ್ಕಾಗಿ ಒಂದೇ ಒಂದು ವರ್ಗಾವಣೆಯನ್ನು ಮಾಡಿರುವುದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ- ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ನನ್ನ ರಾಜಕೀಯ ಜೀವನದಲ್ಲಿ ಹಣಕ್ಕಾಗಿ ಒಂದೇ ಒಂದು ವರ್ಗಾವಣೆಯನ್ನು ಮಾಡಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಕುರಿತಂತೆ ಸಿಎಂ ಪ್ರತಿಕ್ರಿಯೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಶಾಲಾ ಕಟ್ಟಡಗಳನ್ನು ಸಿ.ಎಸ್.ಆರ್. ನಿಧಿಯಿಂದ ನಿರ್ಮಿಸಲಾಗುತ್ತಿದೆ. ಸಚಿವ ಹೆಚ್.ಸಿ.ಮಹದೇವಪ್ಪ ಅವರು ಅದನ್ನು ಪಟ್ಟಿಯಲ್ಲಿ ನೀಡಿದ್ದಾರೆ. ಪಟ್ಟಿಯಲ್ಲಿ ಐದು ಹೆಸರು ಇದ್ದರೆ ಅದು ವರ್ಗಾವಣೆಯಾಗುತ್ತದೆಯೇ ಎಂದು …

Read More »

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷದ ಡಿಸೆಂಬರ್​ನಿಂದ ಶ್ರೀಗಳು ಚಿತ್ರದುರ್ಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ನವೆಂಬರ್ 8ರಂದು ಒಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ನೀಡಿದ್ದರೂ, ಇನ್ನೊಂದು ಪ್ರಕರಣದ ವಿಚಾರಣೆ ಬಾಕಿ ಉಳಿದಿದ್ದ ಕಾರಣ ಮುರುಘಾ ಶರಣರ ಬಿಡುಗಡೆಯಾಗಿರಲಿಲ್ಲ. ಇದೀಗ ಚಿತ್ರದುರ್ಗದ …

Read More »

ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಜಾತಿನಿಂದನೆ ದೂರು ದಾಖಲ

ಬಿಗ್ ಬಾಸ್ (Bigg Boss Kannada 10) ಸ್ಪರ್ಧಿ ತನಿಷಾ (Tanisha Kuppanda) ವಿರುದ್ಧ ಜಾತಿನಿಂದನೆ ದೂರು ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸ್ಟುಡಿಯೋಗೆ ಕುಂಬಳಗೋಡು ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ತನಿಷಾ ಕುಪ್ಪಂಡ- ಪ್ರತಾಪ್ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸೆಟ್‌ಗೆ ತೆರಳಿ ಕುಂಬಳಗೋಡು ಪೊಲೀಸರಿಂದ ವಿಚಾರಣೆ ಮಾಡಲಾಗಿದ್ದು, ತನಿಷಾ ಧ್ವನಿ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ. …

Read More »

ಆಹಾರ ಉದ್ಯಮಗಳ ಮೇಲೆ ಐಟಿ ದಾಳಿ

ಬೆಂಗಳೂರು: ಜ್ಯುವೆಲ್ಲರಿ‌ ಅಂಗಡಿ ಮಾಲೀಕರು, ಗುತ್ತಿಗೆದಾರರ ಮನೆ-ಕಚೇರಿಗಳ‌ ಮೇಲೆ‌ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ನಡೆಸಿತ್ತು. ಇಂದು ಆಹಾರ ಉದ್ಯಮಗಳ‌ ಮೇಲೆ ದಾಳಿ‌ ನಡೆಸಿ‌, ಕಡತಗಳ ಪರಿಶೀಲನೆ ನಡೆಸುತ್ತಿದೆ. ರಾಜಾಜಿನಗರದ ಇಂಡಸ್ಟ್ರಿಯಲ್‌ ಎಸ್ಟೇಟ್ ಬಳಿಯಿರುವ ಪಿ.ಎಸ್.ಆಗ್ರೋ ಫುಡ್ ಎಲ್​ಎಲ್​ಪಿ ಕಾರ್ಖಾನೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆಯಲ್ಲಿರುವ ಮಾಣಿಕ್ ಮೇವಾ ಸ್ಟೋರ್ ಮೇಲೆ ದಾಳಿ ನಡೆದಿದೆ. ಈ ಎರಡು ಆಹಾರ ಕಂಪನಿಗಳು ಒಣ ಹಣ್ಣುಗಳ ವ್ಯಾಪಾರ ನಡೆಸುತ್ತಿವೆ‌. ಆದಾಯಕ್ಕೆ ಪ್ರತಿಯಾಗಿ ತೆರಿಗೆ ಪಾವತಿಸದ …

Read More »

ಆಸ್ತಿಗಾಗಿ ಪತ್ನಿಯನ್ನೇ ಕೊಲೆಗೈದ ಪತಿ,

ಮಂಡ್ಯ: ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರ ರೂ. ವೌಲ್ಯದ ಆಸ್ತಿಗಾಗಿ ಮಲಗಿದ್ದ ಸಮಯದಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಪತಿಯೇ ಹತ್ಯೆಗೈದಿರುವ ಘಟನೆ ನಗರದ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಎಸ್. ಶೃತಿ (32) ಕೊಲೆಯಾದವರು. ಟಿ.ಎನ್. ಸೋಮಶೇಖರ್ (41) ಕೊಲೆ ಮಾಡಿದ ಪತಿ. ಕೊಲೆಯಾದ ಎಸ್ ಶೃತಿ ಹೆಸರಿನಲ್ಲಿ ಮೈಸೂರಿನಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಸ್ತಿ ಇದ್ದು, ಈ ಆಸ್ತಿಯಲ್ಲಿ ಒಂದನ್ನು ಮಾರಾಟ ಮಾಡಲು ಅವರು ಪ್ರಯತ್ನಿಸುತ್ತಿದ್ದರು. ಒಪ್ಪದ ಪತಿ ಸೋಮಶೇಖರ್ ಎಲ್ಲಾ ಆಸ್ತಿಯನ್ನು …

Read More »

ತುಮಕೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಆಸೆ ಇದೆ: ಸಚಿವ ರಾಜಣ್ಣ

ತುಮಕೂರು: “ನನಗೆ ತುಮಕೂರು ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಆಸೆ ಇದೆ. ಹೈಕಮಾಂಡ್​ನವರು ಸ್ಪರ್ಧೆಗೆ ಅವಕಾಶ ನೀಡಿದರೆ ನಿಲ್ಲುತ್ತೇನೆ. ಇಲ್ಲ ಎಂದರೆ ಸುಮ್ಮನ್ನೇ ಇರ್ತೇನಿ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ಮುಂದೆ ರಾಜ್ಯ ವಿಧಾನಸಭೆ ಸೇರಿದಂತೆ ಯಾವ ಚುನಾವಣೆಗೂ ನಿಲ್ಲಲ್ಲ, ಈಗ ಲೋಕಸಭೆಯ ಅನುಭವಕ್ಕಾಗಿ ಚುನಾವಣೆ ಸ್ಪರ್ಧಿಸಲು ಬಯಸಿದ್ದೇನೆ” ಎಂದು ತಿಳಿಸಿದರು. “ರಾಜ್ಯದಲ್ಲಿ ಬಹಳ ದಿನದಿಂದ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು …

Read More »