Breaking News

ರಾಷ್ಟ್ರೀಯ

ಟಗರು ಪಲ್ಯ’ಗೆ ಫುಲ್​ ಡಿಮ್ಯಾಂಡ್​​; ಸಿನಿಮಾ ರಿಮೇಕ್​ಗೂ ಹೆಚ್ಚಾಯ್ತು ಬೇಡಿಕೆ

ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿರುವ ಡಾಲಿ ಧನಂಜಯ್​ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾದ ರಿಮೇಕ್​ಗೂ ಬೇಡಿಕೆ ಹೆಚ್ಚಿದೆ. ಕನ್ನಡ ಚಿತ್ರರಂಗದಲ್ಲಿ ಕರ್ಮಷಿಯಲ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರದ ನಡುವೆ ಈ ವಾರ ತೆರೆಗೆ ಬಂದ ಹಳ್ಳಿ ಸೊಗಡಿನ ‘ಟಗರು ಪಲ್ಯ’ವನ್ನು ಪ್ರೇಕ್ಷಕರು ಚಪ್ಪರಿಸಿಕೊಂಡು ಸವಿಯುತ್ತಿದ್ದಾರೆ. ಕಳೆದ ಶುಕ್ರವಾರ (ಅ.27) ರಾಜ್ಯಾದ್ಯಂತ ಬಿಡುಗಡೆಯಾದ ಚಿತ್ರ ಎಲ್ಲೆಡೆ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ದಿನದಿಂದ ದಿನಕ್ಕೆ ಶೋಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಸಂಬಂಧ, …

Read More »

ಕ್ರಾಸಿಂಗ್​ ವೇಳೆ ಎರಡು ಪ್ಯಾಸೆಂಜರ್ ​ರೈಲುಗಳ ಡಿಕ್ಕಿ

ವಿಜಯನಗರ (ಆಂಧ್ರಪ್ರದೇಶ): ರಾಜ್ಯದ ವಿಜಯನಗರ ಜಿಲ್ಲೆಯ ಕೊತ್ತವಲಸ ಮಂಡಲದ ಕಂಟಕಪಲ್ಲಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕ್ರಾಸಿಂಗ್​ ಸಂದರ್ಭದಲ್ಲಿ 2 ಪ್ಯಾಸೆಂಜರ್​ ರೈಲು ಮುಖಾಮುಖಿ ಡಿಕ್ಕಿ ಹೊಡೆದಿವೆ. ಹಳಿ ದಾಟುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.     ಅಪಘಾತದ ಪರಿಣಾಮ ರಾಯಗಡ ಪ್ಯಾಸೆಂಜರ್ ರೈಲಿನ 3 ಬೋಗಿಗಳು ಹಳಿ ತಪ್ಪಿವೆ. ಇನ್ನು ವಿದ್ಯುತ್​ ತಂತಿಗಳು ತುಂಡಾಗಿ ಬಿದ್ದು ಘಟನಾ …

Read More »

ವಿಶ್ವಕಪ್ ಬಿಗ್​ ಫೈಟ್: ಟಾಸ್​ ಗೆದ್ದ ಇಂಗ್ಲೆಂಡ್ ಬೌಲಿಂಗ್​ ಆಯ್ಕೆ,​ ನಾಯಕನಾಗಿ ರೋಹಿತ್​ಗೆ 100ನೇ ಪಂದ್ಯ​

ಲಖನೌ (ಉತ್ತರಪ್ರದೇಶ): ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ವಿಶ್ವಕಪ್​ ಕ್ರಿಕೆಟ್‌ನ ಮಹತ್ವದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ​ ಇಂಗ್ಲೆಂಡ್ ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡಿತು. ಟೂರ್ನಿಯ 29ನೇ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್​ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಪಂದ್ಯದಲ್ಲಿ ಸೋತರೆ ಇಂಗ್ಲೆಂಡ್​ ತಂಡ ವಿಶ್ವಕಪ್​ನಿಂದ ಬಹುತೇಕ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.     ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್​ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಸತತ ಐದನೇ …

Read More »

ಕೆಇಎ ಪರೀಕ್ಷೆ ಅಕ್ರಮದಲ್ಲಿ ಮತ್ತೆ ಮುನ್ನೆಲೆಗೆ ಬಂದ ಆರ್ ಡಿ‌ ಪಾಟೀಲ್ ಹೆಸರು

ಕಲಬುರಗಿ: ರಾಜ್ಯದ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಕೆಇಎ ಇಂದು ನಡೆಸಿದ ಪರಿಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಮುಖಾಂತರ ಅಕ್ರಮ ಎಸಗಿರುವ ಪ್ರಕರಣದಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ಮಾಸ್ಟರ್ ಮೈಂಡ್ ಆರ್. ಡಿ. ಪಾಟೀಲ್ ಹೆಸರು ಮತ್ತೆ ಮುಂಚೂಣಿಗೆ ಬಂದಿದೆ. ಹೌದು, ಕರ್ನಾಟಕ ಪರಿಕ್ಷಾ ಪ್ರಾಧಿಕಾರದಿಂದ ಇಂದು ವಿವಿಧ ನಿಗಮ ಮಂಡಳಿಗಳ ಖಾಳಿ ಇರುವ ಹುದ್ದೆಗಳ ನೇಮಕಾತಿಗೆ ಕನ್ನಡ ಇಂಗ್ಲಿಷ್ ಕಮ್ಯುನಿಕೇಶನ್ ಪರೀಕ್ಷೆ ನಡೆಸಿದೆ. ಕಲಬುರಗಿ ನಗರದ ಶರಣಬಸವೇಶ್ವರ …

Read More »

ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷ

ಕನ್ನಡದ ಹೆಸರಾಂತ ನಟ ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷವಾಗುತ್ತಿದೆ. ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಅವರು ನಟಿಸಿರುವ ಸಾಮಾಜಿಕ ಸಂದೇಶ ಸಾರುವ ಕೆಲವು ಚಿತ್ರಗಳಿಲ್ಲಿವೆ. ಕನ್ನಡ ಚಿತ್ರರಂಗದ ರಾಜಕುಮಾರ, ನಗುಮೊಗದ ಒಡೆಯ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮೃತಪಟ್ಟು ಎರಡು ವರ್ಷ ಕಳೆಯುತ್ತಿದೆ. ಬಾಲ್ಯದಲ್ಲೇ ಸಿನಿಮಾ ಲೋಕ ಪ್ರವೇಶಿಸಿದ ಅಪ್ಪು, ಜನರಿಗೆ ಮನರಂಜನೆಯ ಔತಣವನ್ನೇ ಉಣಬಡಿಸಿದ್ದರು. ಎರಡನೇ ವರುಷದ ಪುಣ್ಯಸ್ಮರಣೆಯ ಈ ಸಂದರ್ಭದಲ್ಲಿ ಸಾಮಾಜಿಕ ಸಂದೇಶ ಸಾರುವ ಅವರ …

Read More »

ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ.: R.V.ದೇಶಪಾಂಡೆ

ಕಾರವಾರ: “ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ, ಅದರರ್ಥ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಾರೆ ಎಂದಲ್ಲ” ಎಂದು ಕಾಂಗ್ರೆಸ್​ನ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಸಿಎಂ ಬದಲಾವಣೆ ಕುರಿತು ಕೆಲವು ಕಾಂಗ್ರೆಸ್​ ಶಾಸಕರು ನೀಡಿರುವ ಹೇಳಿಕೆಗೆ ಶನಿವಾರ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಮನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಾ.ಹೆಚ್​.ಸಿ.ಮಹದೇವಪ್ಪ ಭೇಟಿ ನೀಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಕುರಿತು …

Read More »

ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗುವುದರಲ್ಲಿ ತಪ್ಪೇನು? ಅವರು ಯೂತ್ ಐಕಾನ್: ವಿಜಯೇಂದ್ರ ಪರ ರೇಣುಕಾಚಾರ್ಯ ಬ್ಯಾಟಿಂಗ್

ಬೆಂಗಳೂರು: ಪಕ್ಷ ಸಂಘಟನೆ ಗಟ್ಟಿಯಾಗಲು ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಬೇಕೆಂದು ಜನ ಮಾತಾಡುತ್ತಿದ್ದಾರೆ. ಮಾಜಿ ಸಿಎಂ ಅವರ ಯಡಿಯೂರಪ್ಪ ಮಗ ಅಂತ ರಾಜ್ಯಾಧ್ಯಕ್ಷ ಸ್ಥಾನ ಕೊಡಬೇಡಿ. ಸ್ವಂತ ವರ್ಚಸ್ಸಿನ ಯುವ ನಾಯಕ ಎಂದು ನೀಡಿ ಎನ್ನುವ ಮೂಲಕ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ವಿಜಯೇಂದ್ರ ಪರ ಬ್ಯಾಟ್ ಬೀಸಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ಕ್ಷೇಮ ವಿಚಾರಿಸಿದ …

Read More »

ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್​​ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್​​ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ …

Read More »

ಮಲೆನಾಡಲ್ಲಿ ಹುಲಿ ಉಗುರು, ಚರ್ಮ ಇರುವುದು ಸಾಮಾನ್ಯ, ಇದನ್ನು ಸರ್ಕಾರ ಇಲ್ಲಿಗೆ ಅಂತ್ಯ ಮಾಡಲಿ: ಎಂ ಪಿ ಕುಮಾರಸ್ವಾಮಿ

ಬೆಂಗಳೂರು : ಪಶ್ಚಿಮ ಘಟ್ಟದ ಎಲ್ಲಾ ಮನೆಗಳಲ್ಲಿ ಹುಲಿ ಉಗುರು, ಪ್ರಾಣಿಗಳ ಚರ್ಮ, ಕೊಂಬು ಇರೋದು ಸಾಮಾನ್ಯ. ಈಗ ಅವರನ್ನು ವಿಲನ್ ಮಾಡುವುದಕ್ಕೆ ಹೊರಟಿರುವುದು ತಪ್ಪು ಎಂದು ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೂರು ನಾಲ್ಕು ದಿನದಿಂದ ಹುಲಿ ಉಗುರು ವಿಚಾರ ಚರ್ಚೆಯಾಗ್ತಿದೆ. ನಾನು ಮಲೆನಾಡಿನವನಾಗಿದ್ದೇನೆ. ಮಾನವ ಆದಿಕಾಲದಿಂದ ಬೇಟೆ ಮಾಡಿ ಬದುಕಿದ್ದ. 25 ವರ್ಷಗಳಿಂದ ಯಾವುದೇ ಶಿಕಾರಿ ಮಾಡುತ್ತಿಲ್ಲ. ಕಾನೂನು ಪ್ರಕಾರ …

Read More »

ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್.. ಅರಣ್ಯಾಧಿಕಾರಿಗಳಿಂದ ತನಿಖೆ

ಸುಳ್ಯ (ದಕ್ಷಿಣ ಕನ್ನಡ): ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿರುವ ಪ್ರಕರಣಗಳು ಸದ್ಯ ಸದ್ದು ಮಾಡುತ್ತಿವೆ. ಸುಳ್ಯ ನಗರ ಪಂಚಾಯತ್ ಸಿಬ್ಬಂದಿಯೊಬ್ಬರು ಇದೇ ಮಾದರಿಯ ಪೆಂಡೆಂಟ್ ಧರಿಸಿರುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಅರಣ್ಯ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ಅವರು ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗುತ್ತಿದ್ದು, ಅರಣ್ಯಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಈಟಿವಿ ಭಾರತದ …

Read More »