ನವದೆಹಲಿ: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸಿಬ್ಬಂದಿಯನ್ನು ಒಳಗೊಂಡಿರುವ ‘ಝೆಡ್’ ಶ್ರೇಣಿಯ ಭದ್ರತೆ ಕಲ್ಪಿಸಿ ಕೇಂದ್ರ ಗೃಹ ಸಚಿವಾಲಯ ಗುರುವಾರ ಆದೇಶಿಸಿದೆ. ಕರ್ನಾಟಕದಲ್ಲಿ ಮಾತ್ರವೇ ಉನ್ನತ ಭದ್ರತೆಯ ಸೌಲಭ್ಯವನ್ನು ಬಿಎಸ್ವೈ ಹೊಂದಿರಲಿದ್ದು, ಸಿಆರ್ಪಿಎಫ್ ಸಿಬ್ಬಂದಿ ಶೀಘ್ರವೇ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಬಿ.ಎಸ್.ಯಡಿಯೂರಪ್ಪನವರಿಗೆ ಬೆದರಿಕೆ ಇರುವ ಕುರಿತ ಮಾಹಿತಿಯನ್ನು ಗುಪ್ತಚರ ವಿಭಾಗವು ಕೇಂದ್ರ ಗೃಹ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರ …
Read More »ಕುಮಾರಸ್ವಾಮಿ ಸವಾಲು ಸ್ವೀಕರಿಸುತ್ತೇನೆ, ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಡಿ.ಕೆ.ಶಿವಕುಮಾರ್
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸವಾಲು ಸ್ವೀಕರಿಸಿದ್ದು, ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ಸಿದ್ಧನಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಮಾತಮಾಡಿದ ಅವರು, ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ಅಧಿವೇಶನದಲ್ಲಿ ದಾಖಲೆ ಸಮೇತ ಚರ್ಚೆ ಮಾಡೋಣ ಎಂದರು. ಕುಮಾರಸ್ವಾಮಿ ಅವರು ನನ್ನ ಸವಾಲು ಸ್ವೀಕರಿಸಿರುವುದು ಬಹಳ ಸಂತೋಷ. ಅವರ ಪ್ರತೀ ಸವಾಲನ್ನೂ ನಾನು ಸ್ವೀಕರಿಸುತ್ತೇನೆ. …
Read More »ನಿಂತ ಮಿಡಿತ..ಇದು ಅಪರೂಪದ ‘ಹೃದಯ’ ಬಡಿತ: ಬ್ಯಾಟರಿಯೇ ಈ ಮಹಿಳೆಯ ‘ನಾಡಿಮಿಡಿತ’ಕ್ಕೆ ಆಸರೆ..
ನ್ಯೂಯಾರ್ಕ್( ವಾಷಿಂಗ್ಟನ್): ಅಪರೂಪದ ಆನುವಂಶಿಕ ಹೃದಯ ಕಾಯಿಲೆಯಿಂದ ಬಳಲುತ್ತಿರುವ 30 ವರ್ಷದ ಅಮೆರಿಕದ ಮಹಿಳೆ, ನಾಡಿಮಿತವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಅವರಿಗೆ ಬ್ಯಾಟರಿಯೇ ಉಸಿರಾಟಕ್ಕೆ ಆಸರೆ ಆಗಿದೆ. ಬೋಸ್ಟನ್ನ ಟಿಕ್ಟಾಕರ್ ಸೋಫಿಯಾ ಹಾರ್ಟ್ ಎಂಬುವವರ ಹೃದಯ ಹಿಗ್ಗಿದ ಕಾರ್ಡಿಯೊಮಿಯೊಪತಿ ಸಮಸ್ಯೆಯಿಂದ ಬಳಲುತ್ತಿದೆ. ಅಂದರೆ ಡಿಲೇಟೆಡ್ ಕಾರ್ಡಿಯೊಮಿಯೋಪತಿ, ಅಥವಾ ಡಿಸಿಎಂ, ಹೃದಯದ ಕೋಣೆಗಳು ಹಿಗ್ಗಿದಾಗ ಮತ್ತು ಸಂಕುಚಿತಗೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತವೆ. ಇದು ಹೆಚ್ಚಾಗಿ ಎಡ ಕುಹರದಲ್ಲಿ ( ಅಂದರೆ ಹೃದಯದ ಕೆಳಗಿನ ಕೋಣೆ) …
Read More »ಚಿಕ್ಕಮಗಳೂರು: ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ
ಚಿಕ್ಕಮಗಳೂರು : ಹುಲಿ ಉಗುರಿನಿಂದ ಡಾಲರ್ ಮಾಡಿ ಕತ್ತಿಗೆ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಇಬ್ಬರು ಅರ್ಚಕರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದೆ. ಬಂಧಿತರಿಗೆ ಚಿಕ್ಕಮಗಳೂರು ಜೆಎಂಎಫ್ಸಿ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಬಾಳೆಹೊನ್ನೂರು ಸಮೀಪದ ಖಾಂಡ್ಯಾದ ಪ್ರಸಿದ್ಧ ಮಾರ್ಕಂಡೇಶ್ವರ ಸ್ವಾಮಿ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಮೂರು ಹುಲಿ ಉಗುರು ವಶಕ್ಕೆ ಪಡೆಯಲಾಗಿದೆ. ಇಬ್ಬರನ್ನು …
Read More »ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್ ತಯಾರಿಕೆ,
ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ಮಹಿಳೆಯರು ಮಾದರಿಯಾಗಿದ್ದಾರೆ. ಇವರ ಸಾಧನೆಯ ಫಲ ಎಂಬಂತೆ ಇದೀಗ ಕೇಂದ್ರ ಸರ್ಕಾರ 5 ಕೋಟಿ ರೂಪಾಯಿ ಅನುದಾನ ನೀಡಿ ಬೃಹತ್ ಕಾರ್ಖಾನೆ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಹೌದು.. ಪರಿಸರಸ್ನೇಹಿ ಬ್ಯಾಗ್ ತಯಾರಿಕೆ ಮೂಲಕ ಬಾಗಲಕೋಟೆ ವನಿತೆಯರು ರಾಜ್ಯವಲ್ಲದೇ ಕೇಂದ್ರ ಸರ್ಕಾರದ ಗಮನ ಸೆಳೆಯುವಲ್ಲೂ ಯಶಸ್ವಿಯಾಗಿದ್ದಾರೆ. ಕಟಗೇರಿ ಗ್ರಾಮದಲ್ಲಿರುವ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ …
Read More »ನವಿಲು ಭೇಟೆಯಾಡಿ ಮಾಂಸ ಭಕ್ಷಣೆ; ಒಡಿಶಾ ಮೂಲದ ಮೂವರ ಬಂಧನ
ತುಮಕೂರು: ರಾಜ್ಯಾದ್ಯಂತ ಹುಲಿ ಉಗುರಿನ ಪೆಂಡೆಂಟ್ ಪ್ರಕರಣದ ಸದ್ದು ಜೋರಾಗಿರುವ ಬೆನ್ನಲ್ಲೇ ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರನಾಯಕನಪಾಳ್ಯದ ಬಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ದಾವು, ದುಬಾ ಕಾಪತ್ ಬಂಧಿತರು. ಇವರು ಅನೇಕ ದಿನಗಳಿಂದ ನವಿಲುಗಳನ್ನು ಕೊಂದು ಭಕ್ಷಿಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು, 1.5 …
Read More »ನ.1ರ ಬಳಿಕ ಯಾವ ದಿನವಾದರೂ ಸರಿ, ಬಹಿರಂಗ ಚರ್ಚೆಗೆ ಸಮಯ ಫಿಕ್ಸ್ ಮಾಡಿ; ಡಿ ಕೆ ಶಿವಕುಮಾರ್
ಬೆಂಗಳೂರು: ಯಾವಾಗಾದ್ರೂ ಸರಿ. ಚರ್ಚೆಗೆ ಸಮಯ ಫಿಕ್ಸ್ ಮಾಡಿ. ನವೆಂಬರ್ 1ರ ನಂತರ ಯಾವ ದಿನಾಂಕವಾದ್ರೂ ನಿಗದಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚರ್ಚೆಗೆ ಒಪ್ಪಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಬಹಿರಂಗ ಚರ್ಚೆಗೆ ಒಪ್ಪಿಗೆ ಸೂಚಿಸಿ ಸಮಯ ನಿಗದಿಪಡಿಸುವಂತೆ ಹೇಳಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್ ಪಟಾಲಮ್ನಿಂದ ರೈತರ ಪರಿಹಾರದಲ್ಲಿ ಲೂಟಿ ಎಂಬ ಹೆಚ್ಡಿಕೆ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದರು. …
Read More »ಬೀದರ್: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತನ ಬಂಧನ, 25.54 ಲಕ್ಷ ರೂ. ಮೌಲ್ಯದ ಗಿಡಗಳು ವಶಕ್ಕೆ!
ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಬೀದರ್: ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ …
Read More »ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಅತಿದೊಡ್ಡ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ! ನೆದರ್ಲೆಂಡ್ಸ್ ವಿರುದ್ಧ 309 ರನ್ಗಳ ಜಯಭೇರಿ
ಆಸ್ಟ್ರೇಲಿಯಾ ನೀಡಿರುವ 400 ರನ್ಗಳ ಗುರಿ ಬೆನ್ನತ್ತುವಲ್ಲಿ ವಿಫಲವಾದ ನೆದರ್ಲೆಂಡ್ಸ್ 309 ರನ್ಗಳ ಭಾರಿ ಅಂತರದ ಸೋಲು ಕಂಡಿತು. ನವದೆಹಲಿ: ಐದು ಬಾರಿ ಏಕದಿನ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ಇಂದು ತಮ್ಮ ಹಳೆಯ ಚಾರ್ಮ್ ಪ್ರದರ್ಶಿಸಿತು. ನೆದರ್ಲೆಂಡ್ಸ್ ವಿರುದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಚಾಂಪಿಯನ್ ರೀತಿಯ ಪ್ರದರ್ಶನ ನೀಡಿ 29 ಓವರ್ ಮತ್ತು 309 ರನ್ಗಳಿಂದ ಪಂದ್ಯ ಗೆದ್ದುಕೊಂಡಿತು. ಆಸ್ಟ್ರೇಲಿಯಾ ನೀಡಿದ 400 ರನ್ಗಳ ಬೃಹತ್ ಗುರಿ ಬೆನ್ನತ್ತಿದ ಡಚ್ಚರು 21 …
Read More »ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ.. ಆಲೆಮನೆಯನ್ನೇ ಸ್ಕ್ಯಾನಿಂಗ್ ಸೆಂಟರ್ ಆಗಿ ಪರಿವರ್ತಿಸಿದ್ದ ನಾಲ್ವರ ಸೆರೆ
ಬೆಂಗಳೂರು : ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ದಂಧೆಯನ್ನು ಪತ್ತೆ ಹಚ್ಚಿರುವ ಬೈಯಪ್ಪನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವೀರೇಶ್ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್ 15ರಂದು ಪಿಎಸ್ಐ ಮಂಜುನಾಥ್ ನೇತೃತ್ವದ ತಂಡ ರಾತ್ರಿ ಹೊತ್ತು ಗಸ್ತು ತಿರುಗುತ್ತಿತ್ತು. ಈ ವೇಳೆ ಅನುಮಾನಾಸ್ಪದವಾಗಿ ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿಗೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು …
Read More »