೪೦ ವರ್ಷಗಳ ಅನುಭವ ಹೊಂದಿದ್ದ ಭಾರತ ವಾಹನ ತರಬೇತಿ ಶಾಲೆ ಸಮಾಜಮುಖಿ ಕೆಲಸ ಮಾಡುತ್ತಿದೆ ಮುಂಚೆ ದೇಶಸೇವೆ ಮಾಡಿದ್ದೇನೆ ಈ ವೃತ್ತಿಯಲ್ಲಿ ಅನೇಕ ಏರಳಿತಗಳನ್ನು ನೋಡಿದ್ದೇನೆ ಅಪಘಾತ ರಹಿತ ತರಬೇತಿ ನೀಡುವ ಮುಖ್ಯ ಉದ್ದೇಶವನ್ನು ಇಟ್ಟುಕೊಂಡಿದ್ದೇನೆ ಎಂದು ಭಾರತ ವಾಹನ ತರಬೇತಿ ಮಾಲೀಕ ಬಸವರಾಜ ಕಡ್ಲಿ ಹೇಳಿದರು . ಬೆಳಗಾವಿ ನೆಹರು ನಗರದ ೨ ನೇ ಕ್ರಾಸನಲ್ಲಿ ಭಾರತ ವಾಹನ ತರಬೇತಿ ಶಾಲೆಯ ಭವ್ಯ ಉದ್ಘಾಟನೆಯನ್ನು ಬೆಳಗಾವಿ ನಾಗನೂರ ಮಠದ …
Read More »ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಡಾ. ಸಿದ್ಧರಾಮ ಮಹಾಸ್ವಾಮಿಗಳು ಸೇರಿದಂತೆ ಅನೇಕ ಶ್ರೀಗಳು ಭಾಗಿ. ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ ಘಟಪ್ರಭಾ : ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ …
Read More »50 ಶಾಸಕರು BJP ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ – ಕಾಂಗ್ರೆಸ್ ಸರ್ಕಾರದ ಪತನ ಗ್ಯಾರಂಟಿ: ನಿರಾಣಿ ಬಾಂಬ್
ವಿಜಯಪುರ: ಕಾಂಗ್ರೆಸ್ (Congress) ಹೇಳುವುದು ಒಂದು ಮಾಡುವುದು ಇನ್ನೊಂದು, ಈ ಸರ್ಕಾರ 5 ವರ್ಷ ಉಳಿಯಲ್ಲ. ಈಗಾಗಲೇ 50 ಕಾಂಗ್ರೆಸ್ ಶಾಸಕರು ಬಿಜೆಪಿ ಹೈಕಮಾಂಡ್ (BJP HighCommand) ಸಂಪರ್ಕದಲ್ಲಿದ್ದು, ಪತನ ಆಗೋದು ಗ್ಯಾರಂಟಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಹೊಸ ಬಾಂಬ್ ಸಿಡಿಸಿದ್ದಾರೆ.ವಿಜಯಪುರದ ಜುಮನಾಳ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಕಾಂಗ್ರೆಸ್ನಲ್ಲಿ ಮೇಲ್ನೋಟಕ್ಕೆ ಎರಡು ಬಣವಿದ್ದರೂ, ಒಳಗೆ ನಾಲ್ಕು …
Read More »ಜಾಲತಾಣದಲ್ಲಿ ಜಾತಿ ನಿಂದನೆ ಪ್ರಕರಣ : ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು : ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಜಾತಿ ನಿಂದನೆ ಮಾಡಿರುವ ಆರೋಪ ಸಂಬಂಧ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನನ್ವಯ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆ ಶುಕ್ರವಾರ ಸಂಜೆ ಸಂಪಿಗೆಹಳ್ಳಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂಪರ ಕಾರ್ಯಕರ್ತನಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚಿಗೆ ರೌಡಿಪಟ್ಟಿ ತೆರೆದು ಬಂಧಿಸಲಾಗಿತ್ತು. ಆ …
Read More »ರಾಯಚೂರು: ಜಲ ಜೀವನ್ ಮಿಷನ್ ಕಾಮಗಾರಿಗೆ ತಂದಿದ್ದ ಪೈಪ್ ಬಂಡಲ್ಗಳಿಗೆ ಬೆಂಕಿ
ರಾಯಚೂರು: ಜಲ ಜೀವನ್ ಮೀಷನ್ (ಜೆಎಂಎಂ) ಕಾಮಗಾರಿಗಾಗಿ ತಂದು ಹಾಕಿದ್ದ ಪೈಪ್ಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ರಾಯಚೂರಿನ ದೇವಸೂಗೂರು ಗ್ರಾಮದಲ್ಲಿ ಬುಧವಾರ ಜರುಗಿದೆ. ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿ ಹತೋಟಿಗೆ ತಂದರು. ಜಿಲ್ಲೆಯ ಮನೆ ಮನೆಗೆ ನೀರು ಪೂರೈಕೆ ಮಾಡಲು ಜೆಎಂಎಂ ಕಾಮಗಾರಿ ನಡೆಯುತ್ತಿದೆ. ದೇವಸೂಗೂರು ಗ್ರಾಮ ಪಂಚಾಯತಿ ಕಚೇರಿಯ ಹತ್ತಿರದ ಹಿಂಬದಿಯ ಖಾಲಿ ಜಾಗದಲ್ಲಿ …
Read More »ಹಟಕಿನಾಳ ಗ್ರಾಮದಲ್ಲಿ ಚಿರತೆ ದಾಳಿಗೆ ಎತ್ತು ಬಲಿ
ಹುಬ್ಬಳ್ಳಿ: ಕಲಘಟಗಿ ತಾಲೂಕಿನಲ್ಲಿ ದಿನದಿನಕ್ಕೆ ಕಾಡು ಪ್ರಾಣಿಗಳ ಹಾವಳಿ ಜೋರಾಗಿದೆ. ತಾಲೂಕಿನ ಹಟಕಿನಾಳ ಗ್ರಾಮದಲ್ಲಿ ಚಿರತೆಗಳ ಗುಂಪು ದಾಳಿ ಮಾಡಿ ಎತ್ತನ್ನು ತಿಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ಮಲ್ಲಯ್ಯ ಶರಣಯ್ಯ ಗೋಡಿಮನಿ ಎಂಬವರು ಎತ್ತು ಕಳೆದುಕೊಂಡಿದ್ದಾರೆ. ರಾತ್ರಿ ಹೊಲದ ಮನೆಯಲ್ಲಿ ಎರಡು ಎತ್ತುಗಳನ್ನು ಕಟ್ಟಿ ಹಾಕಿದ್ದರು. ಈ ಪೈಕಿ ಒಂದು ಕಾಣೆಯಾಗಿತ್ತು. ಬೆಳಿಗ್ಗೆ ತಾನಾಗಿಯೇ ಒಂದು ಎತ್ತು ಮನೆಯತ್ತ ಮರಳಿದೆ. ಆದ್ರೆ ಇನ್ನೊಂದು ಕಾಣದೇ ಇದ್ದಾಗ ರೈತ ಕಬ್ಬಿನ ಗದ್ದೆಯಲ್ಲಿ …
Read More »ಹುಬ್ಬಳ್ಳಿಯಲ್ಲಿ ರೈತ ಆತ್ಮಹತ್ಯೆ: ಸಾಲ ಮರುಪಾವತಿಗೆ ಕಿರುಕುಳ ಆರೋಪ
ಹುಬ್ಬಳ್ಳಿ: ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ನಡೆದಿದೆ. ರಾಜ್ಯದಲ್ಲಿ ಬರ ತಾಂಡವಾಡುತ್ತಿದ್ದು, ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಳೆ ಸಾಲ ವಸೂಲಿ ಮಾಡಲು ಬ್ಯಾಂಕ್ವೊಂದರ ಮ್ಯಾನೇಜರ್ ರೈತನಿಗೆ ನಿರಂತರ ಕಿರುಕುಳ ನೀಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಮಹಾದೇವಪ್ಪ ಫಕೀರಪ್ಪ ಜಾವೂರ್ (75) ಎಂಬಾತ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಈತ ನಿನ್ನೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ …
Read More »ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಮಹತ್ವದ ಸಭೆ
ಬೆಂಗಳೂರು: ರಾಜ್ಯದಲ್ಲಿ ಬರ ಅಧ್ಯಯನಕ್ಕಾಗಿ ಬಿಜೆಪಿ ಮಾದರಿಯಲ್ಲಿಯೇ ತಂಡ ರಚಿಸಿಕೊಂಡು ಜೆಡಿಎಸ್ ಸಹ ಅಧ್ಯಯನ ನಡೆಸಲು ತೀರ್ಮಾನಿಸಿದ್ದು, ಈ ಸಂಬಂಧ ಇಂದು ಸಭೆ ನಡೆಸಲಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಸಿಎಂ, ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜಿಲ್ಲಾವಾರು, ವಿಭಾಗವಾರು ಸಭೆ ನಡೆಯಲಿದೆ. ರಾಜ್ಯದಲ್ಲಿನ ಬರ ಅಧ್ಯಯನಕ್ಕೆ ಬಿಜೆಪಿ ನಿರ್ಧರಿಸಿ ತಂಡ ರಚಿಸಿದೆ. ಈ ಬೆನ್ನಲ್ಲೇ ಜೆಡಿಎಸ್ ಸಹ ಬರ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ …
Read More »ಹಾವೇರಿಯಲ್ಲಿ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ
ಹಾವೇರಿ : ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಮೈದುನ ಪರಾರಿಯಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಗೀತಾ ಮರಿಗೌಡ್ರು(32) ಅಕುಲ್(10) ಮತ್ತು ಅಂಕಿತಾ(7) ಎಂದು ಗುರುತಿಸಲಾಗಿದೆ. ಕುಮಾರಗೌಡ್ ಮರಿಗೌಡ್ರು ಕೊಲೆಗೈದ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಕುಮಾರ್ಗೌಡ್ ತನ್ನ ಸ್ವಂತ ಅಣ್ಣ ಹೊನ್ನೇಗೌಡರ ಹೆಂಡತಿ ಮತ್ತು ಮಕ್ಕಳ ಹತ್ಯೆಗೈದು ಪರಾರಿಯಾಗಿದ್ದಾನೆ. ಕೊಲೆಯಾದ ಗೀತಾ ಅವರ ಗಂಡ ಹೊನ್ನೇಗೌಡ ದುಬೈನಲ್ಲಿ ಕೆಲಸ …
Read More »ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ,: ಚೆಲುವರಾಯ ಸ್ವಾಮಿ
ಕೊಡಗು: ಪಕ್ಷದಲ್ಲಿ ಉದ್ಬವಿಸಿರುವ ಸಮಸ್ಯೆಯನ್ನು ಹೈ-ಕಮಾಂಡ್, ಪಕ್ಷದ ಅಧ್ಯಕ್ಷರು, ಸಿಎಂ ತೀರ್ಮಾನ ಮಾಡ್ತಾರೆ. ಅದು ನಮ್ಮ ಕೆಲಸ ಅಲ್ಲ. ಸಣ್ಣಪುಟ್ಟ ಅಸಮಾಧಾನ ಎಲ್ಲಾ ಕಡೆ ಇರುತ್ತೆ ಅದನ್ನು ಸರಿಪಡಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದು ಸಚಿವ ಚಲುವರಾಯ ಸ್ವಾಮಿ ತಿಳಿಸಿದ್ದಾರೆ. ಮುಂದಿನ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ, …
Read More »
Laxmi News 24×7