Breaking News

ರಾಷ್ಟ್ರೀಯ

ಭ್ರೂಣ ಪತ್ತೆ ಸ್ಕ್ಯಾನಿಂಗ್​ ಆರೋಪ: ಆಸ್ಪತ್ರೆ ಮೇಲೆ ಎಸಿ ನೇತೃತ್ವದಲ್ಲಿ ದಿಢೀರ್ ದಾಳಿ

ಬೆಳಗಾವಿ: ಗರ್ಭಿಣಿಯರ ಭ್ರೂಣ ಪತ್ತೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆಸ್ಪತ್ರೆಯೊಂದರ ಮೇಲೆ ಬೆಳಗಾವಿ ಎಸಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಸ್ಕ್ಯಾನಿಂಗ್ ರೂಮ್ ಸೀಜ್ ಮಾಡಿದ್ದಾರೆ. ಬೆಳಗಾವಿಯ ಮಾಧವ ನಗರದಲ್ಲಿರುವ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆಹಚ್ಚುವ ಯಂತ್ರಗಳ ಕಾಯ್ದೆ ಉಲ್ಲಂಘನೆಯಡಿ ದಾಳಿ ಮಾಡಿ ಅಧಿಕಾರಿಗಳು …

Read More »

ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯ

ಬೆಳಗಾವಿ: ಅಭಿವೃದ್ಧಿ ಸೇರಿ ಮತ್ತಿತರ ವಿಚಾರದಲ್ಲಿ ಉತ್ತರ ಕರ್ನಾಟಕ ತಾರತಮ್ಯಕ್ಕೆ ಒಳಗಾಗುತ್ತಿದೆ. ಈಗ ಹೋರಾಟಗಾರರ ವಿಚಾರದಲ್ಲೂ‌ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಅನುಮಾನ ಮೂಡಿದೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ ಎಂದು ಆರೋಪಿಸಿ ಈ ಭಾಗದ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಹೌದು, ತೀವ್ರ ವಿರೋಧದ ಮಧ್ಯೆ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ 2020ರಲ್ಲಿ ಕನ್ನಡ ಧ್ವಜವನ್ನು ನೆಟ್ಟು ಕನ್ನಡ ಸಂಘಟನೆಗಳು ಸಂಭ್ರಮಿಸಿದ್ದವು. …

Read More »

ನೆದರ್ಲೆಂಡ್ಸ್-ಅಫ್ಘಾನಿಸ್ತಾನ ಮಧ್ಯೆ ಇಂದು ಪೈಪೋಟಿ; ಟಾಸ್​ ಗೆದ್ದ ಡಚ್ ಟೀಂ ಬ್ಯಾಟಿಂಗ್

ಲಖನೌ(ಉತ್ತರಪ್ರದೇಶ): ಐಸಿಸಿ ವಿಶ್ವಕಪ್ ಕ್ರಿಕೆಟ್ 2023ರ 34ನೇ ಪಂದ್ಯ ನೆದರ್ಲ್ಯೆಂಡ್ಸ್ ಮತ್ತು ಅಫ್ಘಾನಿಸ್ತಾನ ನಡುವೆ ಇಂದು ಲಖನೌದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಟಾಸ್​ ಗೆದ್ದ ನೆದರ್ಲೆಂಡ್ಸ್ ಬ್ಯಾಟಿಂಗ್​ ಆಯ್ದುಕೊಂಡಿತು. ನೆದರ್ಲೆಂಡ್ಸ್ ತಂಡದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ವಿಕ್ರಮಜೀತ್ ಬದಲಿಗೆ ಬ್ಯಾರೆಸಿ ಸ್ಥಾನ ಪಡೆದಿದ್ದಾರೆ. ನಾಲ್ವರು ಸ್ಪಿನ್ನರ್‌ಗಳೊಂದಿಗೆ ಅಫ್ಘಾನಿಸ್ತಾನ ಮೈದಾನಕ್ಕಿಳಿಯಲಿದೆ. ಎರಡೂ ತಂಡಗಳು ಏಕದಿನ ವಿಶ್ವಕಪ್‌ನಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಪ್ರಸಕ್ತ ಟೂರ್ನಿಯಲ್ಲಿ ಇತ್ತಂಡಗಳಿಗೂ ಇದು 7ನೇ ಪಂದ್ಯ. ಹಶ್ಮತುಲ್ಲಾ …

Read More »

ಯುವತಿಯಿಂದ ಅಶ್ಲೀಲ ವಿಡಿಯೋ ಕರೆ; 12 ಲಕ್ಷ ರೂಪಾಯಿ ಕಳ್ಕೊಂಡ ವೃದ್ಧ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಇತರೆ ನಗರಗಳಲ್ಲಿ ಸೈಬರ್​ ಕ್ರೈಂ ಮತ್ತು ಹನಿಟ್ರ್ಯಾಪ್​ನಂತಹ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ದೆಹಲಿಯಲ್ಲಿ ಸೈಬರ್​ ಅಪರಾಧ ಪ್ರಕರಣವೊಂದರಲ್ಲಿ ಸಿಲುಕಿದ್ದ ವೃದ್ಧರೊಬ್ಬರನ್ನು ಪೊಲೀಸರು ರಕ್ಷಿಸಿದ್ದಾರೆ. ಅಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಸಂಪೂರ್ಣ ವಿವರ: ಶಾಹದಾರಾ ಜಿಲ್ಲೆಯ ಸೈಬರ್ ಸೆಲ್ ಠಾಣೆ ಪೊಲೀಸರು ರಾಜಸ್ಥಾನದ ವಂಚಕ ತಂಡದ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ರಾಜಸ್ಥಾನ ನಿವಾಸಿಗಳಾದ ಬರ್ಖತ್ ಖಾನ್ (32) …

Read More »

ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ:B.S.Y.

ಬೆಂಗಳೂರು/ಶಿವಮೊಗ್ಗ: ವಿರೋಧ ಪಕ್ಷದ ನಾಯಕರನ್ನು ಹೈಕಮಾಂಡ್ ಆದಷ್ಟು ಬೇಗ ನೇಮಿಸುತ್ತದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲರೂ ವಿರೋಧ ಪಕ್ಷದ ನಾಯಕರನ್ನು ಯಾವಾಗ ಆಯ್ಕೆ ಮಾಡುತ್ತೀರಾ ಎಂದು ಕೇಳುತ್ತಿದ್ದಾರೆ. ಈಗಾಗಲೇ ಪ್ರಕ್ರಿಯೆ ತಡವಾಗಿದೆ. ಆದಷ್ಟು ಬೇಗ ಆಯ್ಕೆ ಮಾಡಲಾಗುವುದು ಎಂದರು. ನಮ್ಮ ಪಕ್ಷದ ವತಿಯಿಂದ ಇಂದಿನಿಂದ ಹತ್ತಾರು ತಂಡಗಳು ಬರ ಅಧ್ಯಯನಕ್ಕಾಗಿ ರಾಜ್ಯದಲ್ಲಿ ಪ್ರವಾಸ ಮಾಡಲಿವೆ. ನಾನು …

Read More »

ರಾಜ್ಯೋತ್ಸವದಂದು ಕರಾಳ ದಿನಾಚರಣೆ ಮೆರವಣಿಗೆ, ಆಕ್ಷೇಪಾರ್ಹ ಘೋಷಣೆ; ಎಂಇಎಸ್​ನ 18 ಜನರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಿಸಿ, ನಾಡದ್ರೋಹಿ ಘೋಷಣೆಗಳನ್ನು ಕೂಗಿದ ಮಹಾರಾಷ್ಟ್ರ ಏಕೀಕಕರಣ ಸಮಿತಿಯ (ಎಂಇಎಸ್) 18 ಸದಸ್ಯರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದಿಂದ ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಲಾಗಿತ್ತು. ಅನುಮತಿ ಇಲ್ಲದೇ ಇದ್ದರೂ ಕೂಡ ನಗರದಲ್ಲಿ ಕರಾಳ ದಿನ ಹೆಸರಲ್ಲಿ ಮೆರವಣಿಗೆ ಮಾಡಿ ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದರು. ಎಂಇಎಸ್ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದ …

Read More »

ಮೈಸೂರು: ಹಸಿರು ಪಟಾಕಿ ಹೊರತುಪಡಿಸಿ ಇತರೆ ಪಟಾಕಿಗಳ ಬಳಕೆ ನಿಷೇಧ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನವೆಂಬರ್ 11 ರಿಂದ 15ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ. ತಡೆಗಟ್ಟಲು ಸರ್ವೋಚ್ಛ ನ್ಯಾಯಾಲಯವು ಹೊರಡಿಸಿರುವ ಆದೇಶಗಳನ್ನು ತಪ್ಪದೇ ಪಾಲಿಸುವುದು ಸಾರ್ವಜನಿಕರ ಜವಾಬ್ದಾರಿಯಾಗಿರುತ್ತದೆ. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ …

Read More »

ಐದು ವರ್ಷ ನಮ್ಮದೇ ಸರ್ಕಾರ , ನಾನೇ C.M.: ಸಿದ್ದರಾಮಯ್ಯ

ವಿಜಯನಗರ: ಐದು ವರ್ಷ ನಮ್ಮದೇ ಸರ್ಕಾರ ಇರಲಿದ್ದು, ನಾನೇ ಮುಂದುವರೆಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಂಪಿಯಲ್ಲಿ ಕರ್ನಾಟಕ ಸಂಭ್ರಮ 50ಕ್ಕೆ ಚಾಲನೆ ಹಾಗೂ ಇತರ ಕಾರ್ಯಗಳಿಗೆ ಹೊಸಪೇಟೆಗೆ ಸಿಎಂ ಆಗಮಿಸಿದ್ದರು. ಈ ವೇಳೆ ಬದಲಾವಣೆ ವಿಚಾರದ ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಅವರು, “ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ” ಎಂದು ಉತ್ತರಿಸಿದ್ದಲ್ಲದೇ, 5 ವರ್ಷ ನೀವೇ ಸಿಎಂ ಆಗಿರುತ್ತೀರಾ ಎನ್ನುವ ಪ್ರಶ್ನೆಗೆ “ನಾನೇ ಮುಂದುವರೆಯುವೆ, ಡಿಸಿಎಂ …

Read More »

ಕಲಬುರಗಿ ಜಿಲ್ಲೆಯಲ್ಲಿ ಲಾರಿ ಮತ್ತು ಬೈಕ್​ ಮಧ್ಯೆ ಭೀಕರ ಅಪಘಾತ ಒಂದೇ ಕುಟುಂಬದಐವರ ಸಾವು

ಕಲಬುರಗಿ: ಅಫಜಲಪುರ ಮತ್ತು ಬಳ್ಳೂರಗಿ ನಡುವಿನ ರಸ್ತೆಯ ಹಳ್ಳೋರಿ ಕ್ರಾಸ್ ಬಳಿ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ನವವಿವಾಹಿತೆ ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.   ನೇಪಾಳ ದೇಶದ ಸುರಕೇತ ಮೂಲದ ಹಾಗೂ ಸದ್ಯ ನಾಲ್ಕು ವರ್ಷಗಳಿಂದ ಅಫಜಲಪುರ ಪಟ್ಟಣದಲ್ಲಿ ವಾಸವಾಗಿದ್ದ ರತನ್ (25), ಇವರ ಪತ್ನಿ ಅಸ್ಮಿತ್ (21), ಇವರ ಮಕ್ಕಳಾದ ಮಿಲನ್ (5), ಧರಕನ್ (2) ಹಾಗೂ ಅಸ್ಮಿತ್ ಅವರ …

Read More »

ಹಾವಿನ ಜತೆ ಕೀಟಲೇ ,ಹಾವು ಕಚ್ಚಿ ಸಾವನ್ನಪ್ಪಿದ್ದ ಯುವ ರೈತ;

ಹಾಸನ: ಹಾವಿನ ದ್ವೇಷ 12 ವರ್ಷ ಎಂಬ ಮಾತಿದೆ. ಆದರೆ, ಈ ಒಂದು ಪ್ರಕರಣದಲ್ಲಿ 12 ದಿನಗಳ ಬಳಿಕ ದ್ವೇಷ ಸಾಧಿಸಿತಾ ಎಂಬ ಅನುಮಾನ ಕಾಡುತ್ತಿದೆ ಎಂಬ ಮಾತು ಸ್ಥಳೀಯರ ಬಾಯಿಂದ ಕೇಳಿ ಬರುತ್ತಿದೆ. ಇದಕ್ಕೆ ಇಂಬು ನೀಡುವಂತೆ ವಿಡಿಯೋವೊಂದು ವೈರಲ್​ ಕೂಡಾ ಆಗಿದೆ. ಅದು ಅ.29 ರಂದು ಹೊಳೆನರಸೀಪುರ ತಾಲೂಕಿನ ದೇವರಗುಡ್ಡೆನ ಹಳ್ಳಿಯಲ್ಲಿ ಯುವ ರೈತನೋರ್ವನಿಗೆ ವಿಷಪೂರಿತ ಹಾವು ಕಚ್ಚಿ ಮೃತಪಟ್ಟಿದ್ದ ಸುದ್ದಿ ಪ್ರಕಟವಾಗಿತ್ತು. ಆದರೆ ಕೃಷಿ ಕೆಲಸ ಮಾಡುವಾಗ …

Read More »