Breaking News

ರಾಷ್ಟ್ರೀಯ

ಬೆಂಗಳೂರಿನಲ್ಲಿ ತಂಗುದಾಣವೇ ಕಳ್ಳತನ

ಬೆಂಗಳೂರು: ಪೊಲೀಸ್ ಕಮೀಷನರ್ ಕಚೇರಿಯ ಅನತಿ ದೂರದಲ್ಲಿರುವ ಬಸ್ ತಂಗುದಾಣವೇ ಕಳ್ಳತನವಾಗಿದೆ, ದಯವಿಟ್ಟು ಪತ್ತೆ ಮಾಡಿ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರೂಪದಲ್ಲಿ ಅಪರೂಪವೆಂಬಂತೆ ಬಸ್ ಶೆಲ್ಟರ್​​ನ್ನೇ ಖದೀಮರು ಕಳ್ಳತನ ಮಾಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಂಗುದಾಣ ನಿರ್ಮಾಣ ಮಾಡಿದ್ದ ಖಾಸಗಿ ಸಂಸ್ಥೆಯ ಉಪಾಧ್ಯಕ್ಷ ಎನ್ ರವಿ ರೆಡ್ಡಿ ಎಂಬುವರು ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಬಿಎಂಪಿ ಅನುಮತಿ ಪಡೆದು ತಮ್ಮ ಕಂಪನಿಯ ಕನ್ನಿಂಗ್ಹ್ಯಾಮ್ …

Read More »

ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ,: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್​​ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ತಿಂಗಳಿಗೊಮ್ಮೆ ಪ್ರಾಧಿಕಾರದ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಪ್ರಾಧಿಕಾರದ ಆಯುಕ್ತರಿಗೆ …

Read More »

ಖ್ಯಾತ ಟೈಲರ್ ಉದ್ಯಮಿಯನ್ನ ಬರ್ಬರವಾಗಿ ಹತ್ಯೆ ಮಾಡಿದ ಮಾಜಿ ಕೆಲಸಗಾರ

ಕಲಬುರಗಿ : ಬಿಸಿಲೂರು ಕಲಬುರಗಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಖ್ಯಾತ ಟೈಲರ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಮಕ್ತಂಪುರ ಬಡಾವಣೆಯಲ್ಲಿ ನಡೆದಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುರೇಶ್​ ಹಂಚಿ (44) ಮೃತ ವ್ಯಕ್ತಿ. ಸೂಪರ್ ಮಾರ್ಕೆಟ್ ಪ್ರದೇಶದ ಪುಠಾಣಿ ಗಲ್ಲಿಯಲ್ಲಿ ಬಿಎಸ್ ಟೈಲರ್ ಹೆಸರಿನ ಅಂಗಡಿ ಹೊಂದಿದ್ದಾರೆ. ಟೈಲರಿಂಗ್ ವೃತ್ತಿಯಲ್ಲಿ ಹೆಸರು ಮಾಡಿದ್ದ …

Read More »

ಅಕ್ರಮವಾಗಿ ಭಾರತದ ಜಲ ಗಡಿ ಪ್ರವೇಶಿಸಿದ ಪಾಕಿಸ್ತಾನಿ ಮೀನುಗಾರನ ಬಂಧನ

ಕಛ್ (ಗುಜರಾತ್): ಕಚ್‌ನ ಸಮುದ್ರ ಗಡಿಯಲ್ಲಿ ಆಗಾಗ ಕಳ್ಳಸಾಗಾಣಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಜೊತೆಗೆ ಪಾಕಿಸ್ತಾನಿ ನುಸುಳುಕೋರರು ಮತ್ತು ಪಾಕಿಸ್ತಾನಿ ಮೀನುಗಾರರು ಕೂಡ ಆಗಾಗ ಭಾರತದ ಯೋಧರ ಬಳಿ ಸಿಕ್ಕಿ ಬೀಳುತ್ತಿದ್ದಾರೆ. ಪ್ರಸ್ತತ ಬಿಎಸ್‌ಎಫ್ ತಂಡವು ಭಾರತದ ಕಚ್-ಪಾಕಿಸ್ತಾನ ಜಲ ಗಡಿ ಬಳಿಯ ಸರ್ ಕ್ರೀಕ್ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಬಂಧಿತ ವ್ಯಕ್ತಿಯ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಬಿಎಸ್‌ಎಫ್ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ, ಸರ್ ಕ್ರೀಕ್ ಬಳಿ ಇಂಜಿನ್ ಅಳವಡಿಸಿದ …

Read More »

ಸಾಲುಮರದ ತಿಮ್ಮಕ್ಕ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದ ಪುತ್ರ ಉಮೇಶ್

ರಾಮನಗರ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ತಿಮ್ಮಕ್ಕ ಅವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ವೈರಲ್ ಆಗಿದ್ದು, ಇದು ಸುಳ್ಳು ಸುದ್ದಿ ಎಂದು ಪುತ್ರ ಉಮೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಉಮೇಶ್, ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ …

Read More »

ಕಾಂಗ್ರೆಸ್​ಗೆ ಲಿಂಗಾಯತರು ಮತ ಹಾಕಿಲ್ಲ ಎನ್ನುವವರು ಮೂರ್ಖರು: ವಿನಯ್ ಕುಲಕರ್ಣಿ

ಬೆಂಗಳೂರು: ಹಿರಿಯ ನಾಯಕ, ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರು, ಕಾಂಗ್ರೆಸ್​​ಗೆ ಲಿಂಗಾಯತರು ಓಟು ಹಾಕಿಲ್ಲ ಎನ್ನುವವರು ಮೂರ್ಖರು. ವೀರೇಂದ್ರ ಪಾಟೀಲ್ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಕಾಂಗ್ರೆಸ್ ಪರ ನಿಂತಿದ್ದಾರೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಮನೂರು ಅವರ ವಿರುದ್ಧ ಯಾರು ಕೌಂಟರ್ ಕೊಡೋದು ಬೇಡ. ಅವರು ಹಿರಿಯರು, ನಮ್ಮ ಯಜಮಾನರು ಅವರು, ಅವರಿಗೆ 92 …

Read More »

ಬಿಪಿ ಶುಗರ್ ಇದ್ದವರ ಮನೆಗೆ ಪ್ರತಿ ತಿಂಗಳು ಉಚಿತವಾಗಿ ಮಾತ್ರೆಗಳು ರವಾನೆ

ಬೆಳಗಾವಿ: ಮುಂದಿನ ಎರಡು ತಿಂಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ‘ಗೃಹ ಆರೋಗ್ಯ’ ಮತ್ತು ‘ಆಶಾ ಕಿರಣ’ ಎಂಬ ಎರಡು ಹೊಸ ಹೊಸ ಯೋಜನೆಗಳನ್ನು ಆರಂಭಿಸುತ್ತಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರತಿಯೊಬ್ಬರ ಆರೋಗ್ಯ ತಪಾಸಣೆಗಾಗಿ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸುವ ಗೃಹ ಆರೋಗ್ಯ ಯೋಜನೆ ಮತ್ತು ಆಶಾಕಿರಣ ಯೋಜನೆಗಳನ್ನು ಜಾರಿಗೆ …

Read More »

ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಆರೋಪ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧದ ಪ್ರಕರಣದ ಸಾಕ್ಷಿಗಳಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಮತ್ತವರ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಮುರುಘಾ ಶರಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಪಿತೂರಿ ನಡೆಸಿದ ಮತ್ತು ಹಣ ಸುಲಿಗೆಗೆ ಪ್ರಯತ್ನಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಬಸವರಾಜನ್ ಮತ್ತು ಸೌಭಾಗ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರ ಪೀಠ …

Read More »

ನಕಲಿ ಕಾರ್ಮಿಕ ಕಾರ್ಡ್​ಗಳ ರದ್ದತಿಗೆ ಸಚಿವ ಸಂತೋಷ್ ಲಾಡ್ ಸೂಚನೆ

ಬೆಳಗಾವಿ: ”ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್​ಗಳನ್ನು ಪಡೆದು ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನ ಸಹಾಯಗಳನ್ನು ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಅಂಥವರ ನೋಂದಣಿಯನ್ನು ರದ್ದುಗೊಳಿಸಬೇಕು. ಅಲ್ಲದೇ ಮಂಡಳಿಯ ಯಾವುದೇ ಸೌಲಭ್ಯಗಳನ್ನು ಅವರಿಗೆ ನೀಡದಂತೆ ತಡೆಹಿಡಿಯಬೇಕು” ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಕಾರ್ಮಿಕ ಇಲಾಖೆಯ ಪ್ರಾದೇಶಿಕ ಮಟ್ಟದ ಇಲಾಖೆ ಅಧಿಕಾರಿಗಳ …

Read More »

ಹೊಸಪೇಟೆ: ಮಹಿಳೆಯ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಗಳು 24 ಗಂಟೆಯೊಳಗೆ ಅಂದರ್​

ವಿಜಯನಗರ (ಹೊಸಪೇಟೆ) : ಮಹಿಳೆಯೊಬ್ಬರ ಕತ್ತಿನಿಂದ ಸರ ದೋಚಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು 24 ಗಂಟೆಯೊಳಗೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಹೊಸಪೇಟೆ ನಿವಾಸಿಗಳಾದ ಆಟೋ ಚಾಲಕ ಶ್ರೀನಿವಾಸ್ ಮತ್ತು ಆತನ ಸ್ನೇಹಿತ ವೆಂಕೋಬ ಬಂಧಿತ ಆರೋಪಿಗಳು. ಹೊರವಲಯದ ಕೊಂಡಾನಾಯಕನಹಳ್ಳಿ ಮಹಿಳೆ ವರಮಹಾಲಕ್ಷ್ಮಿ ಅವರು ಅ.1ರಂದು ಆಟೋದಲ್ಲಿ ಚರ್ಚ್ ಗೆ ಹೋಗಿದ್ದರು. ಅದೇ ಆಟೋದಲ್ಲಿ ಮರಳಿ ಮನೆಗೆ ಹೋಗುವಾಗ ಆರೋಪಿ ಶ್ರೀನಿವಾಸ್ ಆತನ ಸ್ನೇಹಿತ ವೆಂಕೋಬ ಎಂಬವನನ್ನು …

Read More »