Breaking News

ರಾಷ್ಟ್ರೀಯ

ನಾಡ ಹಬ್ಬ ಹಾಗೂ ಹಬ್ಬಕ್ಕಾಗಿ ಇರುವ ದಸರಾ ರಜೆಯ ಕಾರಣದಿಂದ ಪ್ರಯಾಣಿಕರಿಗಾಗಿ 2000 ಕ್ಕೂ ಅಧಿಕ ಬಸ್​ಗಳ ವ್ಯವಸ್ಥೆಯನ್ನು ಕರ್ನಾಟಕ ಸಾರಿಗೆ ವ್ಯವಸ್ಥೆ ಮಾಡಿದೆ.

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗೂ ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚಿನ ಬಸ್​ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸಿದೆ. ಹಬ್ಬಕ್ಕಾಗಿ ಊರಿಗೆ ತೆರಳುವ ಮತ್ತು ರಜೆ ಮುಗಿಸಿ ವಾಪಸ್​ ಆಗಲು ಅನುಕೂಲವಾಗುವಂತೆ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಒದಗಿಸುತ್ತಿದೆ. ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ …

Read More »

ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆಯಲ್ಲಿ ಐಟಿ ದಾಳಿ.. 40 ಕೋಟಿಗೂ ಹೆಚ್ಚು ನಗದು ಪತ್ತೆ!

ಬೆಂಗಳೂರು : ನಗರದಲ್ಲಿ ಗುತ್ತಿಗೆದಾರರು, ಜ್ಯುವೆಲ್ಲರಿ ಶಾಪ್​ ಮಾಲೀಕರು ಹಾಗೂ ಮಾಜಿ ಕಾರ್ಪೊರೇಟರ್​ಗಳ ಮನೆಗಳ ಮೇಲೆ ತಡರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ, ಮಾಜಿ ಕಾರ್ಪೊರೇಟರ್ ಅವರ ಸಂಬಂಧಿಯ ಫ್ಲ್ಯಾಟ್​ನಲ್ಲಿ 42 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ. ಆರ್​ಟಿ ನಗರದ ಆತ್ಮಾನಂದ ಕಾಲೋನಿಯಲ್ಲಿರುವ ಫ್ಲ್ಯಾಟ್​ನಲ್ಲಿ ಈ ದಾಳಿ ನಡೆದಿದೆ. ಫ್ಲ್ಯಾಟ್​ನಲ್ಲಿನ ಮಂಚದ ಕೆಳಗಡೆ ಬಾಕ್ಸ್​ನಲ್ಲಿ ಹಣ ಕಂಡುಬಂದಿದೆ ಎಂದು ಆದಾಯ ತೆರಿಗೆ …

Read More »

ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪರಮಶಿವಯ್ಯಗೆ ಜಾಮೀನು ನೀಡಿದ ಹೈಕೋರ್ಟ್.

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ದಾಖಲಾಗಿದ್ದ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.   ಪರಮಶಿವಯ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ನೇತೃತ್ವದ ಏಕಸದಸ್ಯ ಅರ್ಜಿಯನ್ನು ಪುರಸ್ಕರಿಸಿದ್ದು, ಜಾಮೀನು ನೀಡಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಲ್ಲದೇ, ಅರ್ಜಿದಾರರು ಎರಡು ಲಕ್ಷ ರೂಪಾಯಿ ಮೌಲ್ಯದ ಬಾಂಡ್, …

Read More »

ಬಜೆಟ್ ಪ್ರಗತಿ: 2023 – 24 ಬಜೆಟ್ ವರ್ಷದ ಆರು ತಿಂಗಳಲ್ಲಿ ಇಲಾಖಾವಾರು ಆರ್ಥಿಕ ಪ್ರಗತಿ ಏನಿದೆ..?

ಬೆಂಗಳೂರು: 2023-24 ಬಜೆಟ್ ವರ್ಷದ ಅರ್ಧ ವರ್ಷ ಕಳೆದಿದೆ. ಹೊಸ ಕಾಂಗ್ರೆಸ್ ಸರ್ಕಾರ ರಾಜ್ಯದ ಚುಕ್ಕಾಣಿ ಹಿಡಿದಿದ್ದು, ಪಂಚ ಗ್ಯಾರಂಟಿ ಕೇಂದ್ರೀಕೃತ ಆಡಳಿತ ನಡೆಸುತ್ತಿದೆ. ಆರ್ಥಿಕ ವರ್ಷದ ಆರು ತಿಂಗಳಲ್ಲಿ ರಾಜ್ಯದ ಬಜೆಟ್ ಅನುಷ್ಠಾನದ ಆರ್ಥಿಕ ಪ್ರಗತಿಯ ಸ್ಥಿತಿಗತಿ ಕುರಿತ ಸಂಪೂರ್ಣ ವರದಿ ಇಲ್ಲಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕುವರೆ ತಿಂಗಳು ಆಗಿದ್ದು, ರಾಜ್ಯಭಾರ ನಡೆಸುತ್ತಿದೆ. ಹೊಸ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳೊಂದಿಗೆ ಹೊಸ ಆಡಳಿತ ನಡೆಸುತ್ತಿದೆ. ಪಂಚ ಗ್ಯಾರಂಟಿ …

Read More »

ಮೈಸೂರು ನಗರದ ಟೌನ್​ಹಾಲ್​ನಲ್ಲಿ ಇಂದು ಮಹಿಷ ದಸರಾ ಆಚರಿಸಲಾಯಿತು.

ಮೈಸೂರು: ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ನಗರದ ಟೌನ್‌ಹಾಲ್​ನಲ್ಲಿ ಇಂದು ಮಹಿಷ ಉತ್ಸವ ಸಮಿತಿಯವರು ಮಹಿಷ ದಸರಾ ಆಚರಿಸಿದರು. ಈ ಸಂದರ್ಭದಲ್ಲಿ ಹಲವು ಮುಖಂಡರು ಮಾತನಾಡಿ, ಮಹಿಷಾಸುರನ ಇತಿಹಾಸ ಹಾಗೂ ಮಹಿಷ ದಸರಾಗೆ ವಿರೋಧ ವ್ಯಕ್ತಪಡಿಸುತ್ತಿರುವವರ ವಿರುದ್ಧ ವಾಗ್ದಾಳಿ ನಡೆಸಿದರು.   ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ನಗರದ ಟೌನ್‌ಹಾಲ್‌ನಲ್ಲಿ ಉತ್ಸವ ಸಮಿತಿ ಮಹಿಷ ದಸರಾ ಆಚರಿಸಿತು. ಟೌನ್‌ಹಾಲ್ ಮುಂಭಾಗ ವೇದಿಕೆ ನಿರ್ಮಾಣ ಮಾಡಲಾಗಿತ್ತು. …

Read More »

ರಿಲಯನ್ಸ್​ ಜಿಯೋ ತನ್ನ ಹೊಸ ಜಿಯೋ ಭಾರತ್ ಸರಣಿಯ 4ಜಿ ಫೋನ್​ ಬಿಡುಗಡೆ ಮಾಡಿದೆ.

ಮುಂಬೈ: ರಿಲಯನ್ಸ್ ಜಿಯೋ ಜಿಯೋಭಾರತ್ ಬಿ 1 ಎಂಬ ಹೊಸ 4 ಜಿ ಫೋನ್ ಅನ್ನು ದೇಶದಲ್ಲಿ ಬಿಡುಗಡೆ ಮಾಡಿದೆ. ಕೈಗೆಟುಕುವ ಬೆಲೆಯ ಜಿಯೋಭಾರತ್ ಸರಣಿಯ ಮುಂದಿನ ಫೋನ್ ಇದು. ಈ ಫೋನ್ 2.4 ಇಂಚಿನ ಡಿಸ್​ಪ್ಲೇ, ಅಲ್ಫಾ ನ್ಯೂಮೆರಿಕ್ ಕೀ ಪ್ಯಾಡ್, ಬಹುಭಾಷಾ ಬೆಂಬಲ ಮತ್ತು 2000 ಎಂಎಎಚ್ ಬ್ಯಾಟರಿಯನ್ನು ಹೊಂದಿದೆ. ಬೆಲೆ 1,299 ರೂ. ಆಗಿದ್ದು, ಕಪ್ಪು ಬಣ್ಣದಲ್ಲಿ ಲಭ್ಯವಿದೆ. ಯುಪಿಐ ಪಾವತಿಗಳಿಗಾಗಿ ಜಿಯೋಪೇ ಬೆಂಬಲ, ಎಫ್‌ಎಂ ರೇಡಿಯೋ, …

Read More »

ಮಹಿಷಾ ದಸರಾ, ಚಲೋ ಜಾಥಾಗೆ ನಿರಾಕರಣೆ: ಚಾಮುಂಡಿ ಬೆಟ್ಟ ಹಾಗೂ ಮೈಸೂರು ನಗರದಲ್ಲಿ ನಿಷೇದಾಜ್ಞೆ, ಬಿಗಿ ಬಂದೋಬಸ್ತ್​​

ಮೈಸೂರು: ಮಹಿಷಾ ದಸರಾ ಆಚರಣೆ ಹಾಗೂ ಚಾಮುಂಡಿ ಬೆಟ್ಟ ಚಲೋ ಜಾಥಾಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟ ಹಾಗೂ ಮೈಸೂರು ನಗರದಲ್ಲಿ ಮಧ್ಯರಾತ್ರಿಯಿಂದ ನಾಳೆ ಬೆಳಗ್ಗೆ6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮಹಿಷಾ ಪ್ರತಿಮೆ ಸುತ್ತ ಹಾಗೂ ನಾಲ್ಕು ಕಡೆ ಚಾಮುಂಡಿ ಬೆಟ್ಟದ ದ್ವಾರಗಳಲ್ಲಿ ಬಿಗಿಯಾದ ಪೊಲೀಸ್​ ಬಂದೋಬಸ್ತ್ ಹಾಕಲಾಗಿದೆ. ಈ ನಿಷೇಧಾಜ್ಞೆ ಕೇವಲ ಮಹಿಷಾ ದಸರಾ ಹಾಗೂ ಚಾಮುಂಡಿ ಚಲೋ …

Read More »

ಹುಬ್ಬಳ್ಳಿ ದಲಿತರ ಕೇರಿಯಲ್ಲಿ ಪೇಜಾವರ ಶ್ರೀ ಪಾದಯಾತ್ರೆ

ಹುಬ್ಬಳ್ಳಿ: ಇಲ್ಲಿನ ಭುವನೇಶ್ವರಿ ನಗರದ ದಲಿತರ ಕಾಲೋನಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪಾದಯಾತ್ರೆ ನಡೆಸಿದರು. ವಿಶ್ವ ಹಿಂದೂ ಪರಿಷತ್, ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲೋಟಿ ಅವರ ಮನೆಗೆ ಶ್ರೀಗಳು ಭೇಟಿ ನೀಡಿದರು. ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾರಕ ಬಸವರಾಜ್ ಅವರು ಕುಟುಂಬ ಸದಸ್ಯರನ್ನು ಶ್ರೀಗಳಿಗೆ ಪರಿಚಯಿಸಿದರು. ಕಾಲೋನಿಯ ಭುವನೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಗಳು ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ದೇವಸ್ಥಾನದಲ್ಲಿ …

Read More »

ಲೋಡ್‌ ಶೆಡ್ಡಿಂಗ್‌ ಟೀಕಿಸುವ ಬಿಜೆಪಿ ಎಷ್ಟು ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದಾಗಿ ವಿದ್ಯುತ್ ಕೊರತೆಯಾಗಿದೆ. ಈ ವಿಚಾರವಾಗಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರಾವಧಿಯಲ್ಲಿ ಎಷ್ಟು ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆ ಹೆಚ್ಚಿಸಿದ್ದರು ಎಂಬುದನ್ನು ಹೇಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಇದೇ ಪರಿಸ್ಥಿತಿ …

Read More »

ಬೆಳಗಾವಿ: ಎಣ್ಣೆ ಪಾರ್ಟಿ ಮಾಡಿದ್ದ 7 ಸಿಬ್ಬಂದಿ ಅಮಾನತು ಮಾಡಿ DHO ಆದೇಶ

  ಬೆಳಗಾವಿ : ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಏಳು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಬುಧವಾರ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಕಾರು ಚಾಲಕ ಮಂಜುನಾಥ ಪಾಟೀಲ್​​, ಸಿಬ್ಬಂದಿ ಮಹೇಶ ಹಿರೇಮಠ, ರಮೇಶ ನಾಯಿಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಎಂಬವರನ್ನು ಅಮಾನತು ಮಾಡಲಾಗಿದೆ. ನಗರದ ಟಿಳಕವಾಡಿಯಲ್ಲಿರುವ ಡಿಹೆಚ್​​ಒ ಕಚೇರಿ ಹಿಂಭಾಗದಲ್ಲಿರುವ …

Read More »