ಮಂಗಳೂರು : ಜಿಲ್ಲೆಯಲ್ಲಿ ಕೆಲವು ಸರ್ಕಾರಿ ಮತ್ತು ಅನುದಾನಿತ ಕನ್ನಡ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಕನ್ನಡ ಶಾಲೆಗಳಲ್ಲಿ ವಿವಿಧ ಮೂಲ ಸೌಕರ್ಯಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ತಪ್ಪಿಸಲು ಮಂಗಳೂರಿನ ಅನುದಾನಿತ ಶಾಲೆಯ ಶಿಕ್ಷಕರು ಮಾದರಿ ಕಾರ್ಯವನ್ನು ಮಾಡುತ್ತಿದ್ದಾರೆ. ಮಂಗಳೂರಿನ ಗೋರಿಗುಡ್ಡದ ಯುಬಿಯಂಸಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಿಟ್ಟೆಲ್ ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಹಲವು ವರ್ಷಗಳಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿತ್ತು. ಜೊತೆಗೆ ಶಿಕ್ಷಕರು ನಿವೃತ್ತರಾಗುತ್ತಿದ್ದಂತೆ ಶಿಕ್ಷಕರ ಸಂಖ್ಯೆಯು ಕಡಿಮೆಯಾಗುತ್ತಿತ್ತು. ಈ …
Read More »ಬುಧವಾರ ಒಂದೇ ದಿನ 24,500 ಆಸ್ತಿ ನೋಂದಣಿ.. 244 ಕೋಟಿ ರೂ. ಆದಾಯ ಸಂಗ್ರಹ
ಬೆಂಗಳೂರು : ಬುಧವಾರ ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 244 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆ ಇತಿಹಾಸದಲ್ಲೇ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಸ್ತಿ ನೋಂದಣಿ- ದಸ್ತಾವೇಜು ಪ್ರಕ್ರಿಯೆ ನಡೆದಿರುವುದು ಹಾಗೂ ಗರಿಷ್ಠ ಶುಲ್ಕ ಸಂಗ್ರಹ ಆಗಿರುವುದು ಹೊಸ ದಾಖಲೆಯಾಗಿದೆ. ಕಳೆದ ಸೋಮವಾರವಷ್ಟೇ 15936 ನೋಂದಣಿ ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 158.28 ಕೋಟಿ ರೂ. ಆದಾಯ …
Read More »ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಚಾಲೆಂಜ್ ಮಾಡ್ತೀವಿ: ಸಿದ್ದರಾಮಯ್ಯ
ಚಾಮರಾಜನಗರ : ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿಯು (CWRC) ತಮಿಳುನಾಡಿಗೆ 18 ದಿನಗಳಲ್ಲಿ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಚಾಲೆಂಜ್ ಮಾಡುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹನೂರು ತಾಲೂಕಿನ ಮಾದಪ್ಪನ ಸನ್ನಿಧಾನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರವನ್ನು ಸುಪ್ರೀಂ ಕೋರ್ಟ್ನಲ್ಲಿ ಚಾಲೆಂಜ್ ಮಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಈಗಾಗಲೇ ಕಾನೂನು …
Read More »ಪ್ರಥಮ ಬಾರಿಗೆ 16 ಕೋಟಿ ನಿವ್ವಳ ಲಾಭ ಗಳಿಸಿದ ಓಯೋ
ನವದೆಹಲಿ: ಜಾಗತಿಕ ಟ್ರಾವೆಲ್ ಟೆಕ್ ಬ್ರಾಂಡ್ ಓಯೋ ಇದೇ ಮೊದಲ ಬಾರಿಗೆ ಲಾಭ ಗಳಿಸಿರುವುದಾಗಿ ವರದಿ ಮಾಡಿದೆ. 2024ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಮೊದಲ ಬಾರಿಗೆ ತೆರಿಗೆ ನಂತರ 16 ಕೋಟಿ ರೂ. ಲಾಭ ಮಾಡಿರುವುದಾಗಿ ಓಯೋ ಹೇಳಿದೆ. ಕಂಪನಿಯ ಉನ್ನತ ಆಡಳಿತ ಮಂಡಳಿಗೆ ಬರೆದ ಪತ್ರದಲ್ಲಿ, ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರು 2024 ರ ಎರಡನೇ ತ್ರೈಮಾಸಿಕವು ಕಂಪನಿಯ ಮೊದಲ ಲಾಭದಾಯಕ ತ್ರೈಮಾಸಿಕವಾಗಿದ್ದು, ತೆರಿಗೆ ನಂತರದ ಲಾಭವು …
Read More »ಗೃಹಲಕ್ಷ್ಮೀ, ಗೃಹಜ್ಯೋತಿ ಜಾಹೀರಾತುಗಳಲ್ಲಿ ಸಿಎಂ, ಡಿಸಿಎಂ ಫೋಟೋ ಬಳಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜೋತಿ ಯೋಜನೆಗಳ ಜಾಹೀರಾತು ಮತ್ತು ಒಪ್ಪಿಗೆ ಆದೇಶಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಮಂತ್ರಿಗಳ ಭಾವಚಿತ್ರ, ಹೆಸರು ಬಳಕೆಗೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ …
Read More »ಬೆಂಗಳೂರು ಬಂದ್ : ವ್ಯಾಪಾರ ವಹಿವಾಟು ಸ್ಥಗಿತದಿಂದ ಅಂದಾಜು 200 ಕೋಟಿ ನಷ್ಟ: ಎಫ್ಕೆಸಿಸಿಐ
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆದ ಬೆಂಗಳೂರು ಬಂದ್ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಆದರೆ, ಬೆಂಗಳೂರು ಬಂದ್ನಿಂದ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂ. ನಷ್ಟ ಸಂಭವಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಬೆಂಗಳೂರು ಬಂದ್ಗೆ ಕರೆ ನೀಡಿದ್ದವು. ಬಹುತೇಕ ಕಡೆ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು, ಹೋಟೆಲ್ಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು. ಬಂದ್ ಹಿನ್ನೆಲೆ ನಗರದಲ್ಲಿ …
Read More »ಜನತಾ ದರ್ಶನಕ್ಕೆ ಜನಸಾಗರ: ಸಮಸ್ಯೆ ಆಲಿಸಿದ ಅಧಿಕಾರಿಗಳು, ಶಾಸಕರು
ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ನಡೆದ ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಮಹಿಳೆಯರು, ವೃದ್ಧರು, ಅಂಗವಿಕಲರು ಸೇರಿ ನೂರಾರು ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ತೋಡಿಕೊಂಡರು. ಜಿಲ್ಲಾಧಿಕಾರಿ, ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಆಲಿಸಿದರು. ವಿಠಲ ದೇಸಾಯಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಜಿಲ್ಲಾಡಳಿತದಿಂದ 8 ಕೇಂದ್ರಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಬಳಿಕ ವೇದಿಕೆಗೆ ಆಗಮಿಸಿದ ಜನರು, …
Read More »ಚಿಂಚೋಳಿ ಜನತಾ ದರ್ಶನ ಕಾರ್ಯಕ್ರಮ: 800ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ, 250 ಸ್ಥಳದಲ್ಲಿಯೇ ವಿಲೇವಾರಿ
ಕಲಬುರಗಿ : ಚಿಂಚೋಳಿಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಂದಾಜು 800ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು, ಆಧಾರ್ ಸಂಬಂಧಿತ 250ಕ್ಕೂ ಹೆಚ್ಚು ಅರ್ಜಿ ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಗಿದೆ. ಉಳಿದಂತೆ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗುತ್ತದೆ. 2-3 ದಿನದಲ್ಲಿ ಆದ್ಯತೆ ಮೇರೆಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ, ಜೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ. …
Read More »ಬೆಳಗಾವಿಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳ ಗಾಯ
ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ನಡೆದಿದೆ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಬಸ್ ಸಂಚರಿಸುತ್ತಿತ್ತು. 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಪಾಟಾ ಕಟ್ ಆದ ಪರಿಣಾಮ ಬಿಜಗುಪ್ಪಿ ಸಮೀಪದ ರಸ್ತೆ ಪಕ್ಕದ ಜಮೀನಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಬಸ್ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಘಟನೆ ನಡೆದ ತಕ್ಷಣವೇ 108ಕ್ಕೆ ಕರೆ ಮಾಡಿ ಗಾಯಾಳುಗಳನ್ನು ರಾಮದುರ್ಗ …
Read More »ಪರಿಹಾರ ನೀಡಲು ಆರಂಭಿಸಿದ ನಂತರ ರೈತ ಆತ್ಮಹತ್ಯೆಗಳು ಹೆಚ್ಚಾಗಿವೆ ಎಂದು ಹೇಳಿಲ್ಲ: ಸಚಿವ ಶಿವಾನಂದ ಪಾಟೀಲ್ ಸ್ಪಷ್ಟನೆ
ಹಾವೇರಿ : ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮತ್ತು ಹಾವೇರಿ ಜಿಲ್ಲೆಯ ರೈತರ ನಡುವಿನ ಜಟಾಪಟಿಗೆ ತೆರೆಬಿದ್ದಿದೆ. ಸೋಮವಾರ ನಡೆದ ರೈತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ನಾನು ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಆರಂಭಿಸಿದ ನಂತರ ರೈತರ ಆತ್ಮಹತ್ಯೆಗಳು ಹೆಚ್ಚಾಗಿವೆ ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಈ ರೀತಿ ಹೇಳಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಜೊತೆಗೆ ಯಾರದಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದರು. ಈ …
Read More »