ಹೊಸಕೋಟೆ (ಬೆ. ಗ್ರಾಮಾಂತರ): ಬಸ್ ನಿಲ್ದಾಣದಲ್ಲಿ ಪ್ರಯಾಣಿಕನಂತೆ ನಿಲ್ಲುತ್ತಿದ್ದ ಆತ ಬುದ್ಧಿಮಾಂದ್ಯನಂತೆ ನಟಿಸಿ ಜನರಿಂದ ಪರ್ಸ್, ಮೊಬೈಲ್ಗಳನ್ನು ಕದಿಯುತ್ತಿದ್ದ. ಈ ಐನಾತಿ ಕಳ್ಳನನ್ನು ಪೊಲೀಸರು ಬಂಧಿಸಿದ್ದು 50 ಲಕ್ಷ ರೂ ಮೌಲ್ಯದ 150 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಕದ್ದ ಮೊಬೈಲ್ಗಳನ್ನು ಮಾರಾಟ ಮಾಡಿ ಮೋಜಿನ ಜೀವನ ಮಾಡುತ್ತಿದ್ದ ಕಳ್ಳ ಕೊನೆಗೂ ಪೊಲೀಸರ ಬಲೆಯಲ್ಲಿ ಸೆರೆಯಾಗಿದ್ದಾನೆ. ಆರೋಪಿಯನ್ನು ವಿನಯ್ ಎಂದು ಗುರುತಿಸಲಾಗಿದೆ. ಸಂಜೆ ಮತ್ತು ಬೆಳಗಿನ ಹೊತ್ತಲ್ಲಿ ಬಸ್ ನಿಲ್ದಾಣಕ್ಕೆ ಪ್ರಯಾಣಿಕನಂತೆ ಬರುತ್ತಿದ್ದ …
Read More »ಅಕ್ಟೋಬರ್ 14 ರ ವರೆಗೆ ಇಸ್ರೇಲ್ಗೆ ಏರ್ ಇಂಡಿಯಾ ವಿಮಾನ ಹಾರಾಟ ರದ್ದು
ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ‘ರಾಕೆಟ್ ಕಾಳಗ’ದಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಕ್ಕಟ್ಟು ಇನ್ನೂ ಮುಂದುವರೆದಿರುವ ಕಾರಣ ಭಾರತದ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಇಸ್ರೇಲ್ಗೆ ತನ್ನೆಲ್ಲಾ ವಿಮಾನಗಳ ಹಾರಾಟವನ್ನು ಅಕ್ಟೋಬರ್ 14ರ ವರೆಗೆ ನಿಲ್ಲಿಸಿದೆ. ಇಸ್ರೇಲ್ನ ಪ್ರಮುಖ ನಗರ ಟೆಲ್ ಅವೀವ್ಗೆ ಹೊರಡುವ ಮತ್ತು ಅಲ್ಲಿಂದ ಬರುವ ತನ್ನೆಲ್ಲಾ ವಿಮಾನಗಳನ್ನು ಮುಂದಿನ 6 ದಿನಗಳ ಕಾಲ ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ಭಾನುವಾರ ತಿಳಿಸಿದೆ. ‘ನಮ್ಮ …
Read More »ಬಳ್ಳಾರಿಯಲ್ಲಿ ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿ ಹಿಂದಿರುಗಿಸಲು ಅರ್ಸೆಲರ್ ಮಿತ್ತಲ್ ನಿರ್ಧಾರ
ನವದೆಹಲಿ: ಕರ್ನಾಟಕದ ಬಳ್ಳಾರಿಯಲ್ಲಿ ಉಕ್ಕಿನ ಸ್ಥಾವರ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿಯನ್ನು ಹಿಂದಿರುಗಿಸಲು ನಿರ್ಧರಿಸಿರುವುದಾಗಿ ವಿಶ್ವದ ಅತಿದೊಡ್ಡ ಉಕ್ಕು ಉತ್ಪಾದಕ ಅರ್ಸೆಲರ್ ಮಿತ್ತಲ್ ಕಂಪನಿಯು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈಗಾಗಲೇ ಪಾವತಿಸಿರುವ 267 ಕೋಟಿ ರೂಪಾಯಿ ಮೊತ್ತವನ್ನೂ ಕೂಡ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ತಿಳಿಸಿದೆ. ಈ ಪ್ರಕರಣವು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠದ ಮುಂದೆ ಶುಕ್ರವಾರ …
Read More »ಬೆಳಗಾವಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು
ಬೆಳಗಾವಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಸಡಗರ ದಿಂದ ಆಚರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಬೆಳಗಾವಿ ಕರವೇ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತುನಾಡಿ ಇಡೀ ರಾಜ್ಯದಲ್ಲಿ …
Read More »ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ: ಪೊಲೀಸರ ಕೈಸೇರಿದ ಆರ್ಟಿಒ ಅಧಿಕಾರಿಗಳ ವರದಿ
ಬೆಂಗಳೂರು: ಕನ್ನಡ ಚಿತ್ರರಂಗದ ನಟ ನಾಗಭೂಷಣ್ ಅವರ ಕಾರು ಅಪಘಾತದಿಂದ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಅಧಿಕಾರಿಗಳ ವರದಿ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರ ಕೈ ಸೇರಿದೆ. ಆರ್.ಟಿ.ಒ ಅಧಿಕಾರಿಗಳಿಂದ ಪೊಲೀಸರಿಗೆ ವರದಿ ಸಲ್ಲಿಕೆ: ಅಪಘಾತದ ಬಳಿಕ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ಪೊಲೀಸರು ನಟ ನಾಗಭೂಷಣ್ ಅವರ ಕಾರನ್ನು ವಶಕ್ಕೆ ಪಡೆದಿದ್ದರು. ಗಾಡಿಯನ್ನು ಪರಿಶೀಲನೆ ನಡೆಸಿದ್ದ ಆರ್.ಟಿ.ಒ ಅಧಿಕಾರಿಗಳು, ಕಾರಿನ ಟಯರ್, ಕಾರು ಜಖಂಗೊಂಡ ರೀತಿ, …
Read More »100 ಕರ್ನಾಟಕ ಸಾರಿಗೆ ಹಾಗೂ 40 ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ಗಳಿಗೆ ಸಿಎಂ, ಡಿಸಿಎಂ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಇಂದು ಆಯೋಜಿಸಿದ್ದ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದರು. ‘ಪಲ್ಲಕ್ಕಿ’ಗೆ ಚಾಲನೆಇದೇ ವೇಳೆ ಪಾಯಿಂಟ್ ಟು ಪಾಯಿಂಟ್ ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್ಗಳಿಗೂ ಸಿಎಂ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. …
Read More »ಡೇಂಜರ್ ಸ್ಟುಡೆಂಟ್ಸ್…!! ಗಣಿತದಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯ ವಿದ್ಯಾರ್ಥಿನಿಯರು ಮಾಡಿದ್ದೇನು?
ಉಳ್ಳಾಲ (ಮಂಗಳೂರು): ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ ಒಂದು ಅಂಕ ಕಡಿಮೆ ನೀಡಿದರು ಎಂದು ಸಿಟ್ಟಾಗಿದ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತಮ್ಮ ಗಣಿತ ಶಿಕ್ಷಕಿಯ ನೀರಿನ ಬಾಟಲ್ಗೆ ಅವಧಿ ಮುಗಿದು ಹೋದ ಮಾತ್ರೆಯನ್ನು ಹಾಕಿದ್ದಾರೆ. ಈ ಬಾಟಲ್ನಲ್ಲಿರುವ ನೀರು ಕುಡಿದಿದ್ದರಿಂದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಶಾಲೆಯಲ್ಲಿ ಎಸ್ಡಿಎಂಸಿಯಿಂದ ತುರ್ತು ಸಭೆ ನಡೆಸಿ, ವಿದ್ಯಾರ್ಥಿನಿಯರಿಬ್ಬರಿಗೆ ಟಿಸಿ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿರುವ …
Read More »ಗಗನಯಾನ ಮಿಷನ್ಗಾಗಿ ಇಸ್ರೋ ಮಾನವರಹಿತ ಹಾರಾಟದ ಪರೀಕ್ಷೆ ಪ್ರಾರಂಭ
ಬೆಂಗಳೂರು: ಗಗನಯಾನ ಮಿಷನ್ಗಾಗಿ ಇಸ್ರೋ ಮಾನವರಹಿತ ಹಾರಾಟದ ಪರೀಕ್ಷೆಯನ್ನು ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್ನ ಕಾರ್ಯಕ್ಷಮತೆ ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ಇಸ್ರೋ ತಿಳಿಸಿದೆ. ಈ ಸಂಬಂಧ ಅದು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಗಗನಯಾನಕ್ಕೆ ಇಸ್ರೋ ಸಿದ್ಧತೆ… ಮಾನವ ರಹಿತ ನೌಕೆ ಹಾರಾಟ ಪರೀಕ್ಷೆಗೆ ಭರ್ಜರಿ ತಯಾರಿ!ಗಗನಯಾನ ಹೇಗೆಲ್ಲ ಕಾರ್ಯನಿರ್ವಹಿಸುತ್ತದೆ: ಗಗನಯಾನ ಕಾರ್ಯಾಚರಣೆಯ ಸಮಯದಲ್ಲಿ ಗಗನಯಾತ್ರಿಗಳು ಒತ್ತಡಕ್ಕೊಳಗಾದ ಭೂಮಿಯಂತಹ ವಾತಾವರಣದ …
Read More »ಅಥಣಿಯಲ್ಲಿ ಕಾಣೆಯಾದ ವಿದ್ಯಾರ್ಥಿಗಳು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪತ್ತೆ
ಚಿಕ್ಕೋಡಿ(ಬೆಳಗಾವಿ): ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮೂರು ಮಕ್ಕಳು ಕಾಣೆಯಾಗಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮಕ್ಕಳು ಪತ್ತೆಯಾಗಿದ್ದು, ಪೋಷಕರ ಆತಂಕ ದೂರಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನಿವಾಸಿಯ ಮೂವರು ವಿದ್ಯಾರ್ಥಿಗಳು ಶುಕ್ರವಾರ ಸಂಜೆ ಅಥಣಿ ಪಟ್ಟಣದಲ್ಲಿ ಕಾಣೆಯಾಗಿದ್ದರು. ಶಾಲೆಗೆ ಹೋಗಿ ಬರುತ್ತೇನೆ ಎಂದು ಮಕ್ಕಳು ಮರಳಿ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಆತಂಕಗೊಂಡು ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕುಟುಂಬಸ್ಥರು ಶೋಧ ಕಾರ್ಯ ನಡೆಸಿದರು, ಹುಡುಕಾಟ ಸಮಯದಲ್ಲಿ …
Read More »5 ಗ್ಯಾರಂಟಿ ಸೇರಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ
ಚಿತ್ರದುರ್ಗ: “ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಸೇರಿದಂತೆ ಯಾವುದೇ ನಿಯಮಿತ ಅಭಿವೃದ್ಧಿ ಕಾಮಗಾರಿ ಹಾಗೂ ಕಾರ್ಯಕ್ರಮಕ್ಕೆ ಹಣದ ಕೊರತೆ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗಳು ಕುಂಠಿತಗೊಂಡಿವೆ ಅನ್ನೋದು ಸುಳ್ಳು. ಬಿಜೆಪಿ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದ್ದೇ ಅವರು. ನಾವು ಈ ಹಿಂದೆ ಆಡಳಿತ ನಡೆಸಿದ್ದೆವು. ಯಾವತ್ತೂ ಇಷ್ಟು ಪ್ರಮಾಣದ …
Read More »
Laxmi News 24×7