Breaking News

ರಾಷ್ಟ್ರೀಯ

ಹಾವೇರಿಯ 8 ತಾಲೂಕುಗಳಲ್ಲಿ ಬರ: ಜಾನುವಾರು ಸಾಕಲಾರದೆ ಮಾರಾಟ ಮಾಡಲು ಮುಂದಾದ ರೈತರು

ಹಾವೇರಿ: ಈ ಬಾರಿ ಮಳೆ ಕೊರತೆಯಿಂದಜಿಲ್ಲೆಯ ಎಂಟು ತಾಲೂಕುಗಳನ್ನು ಭೀಕರ ಬರಗಾಲ ಆವರಿಸಿದೆ. ಜಾನುವಾರುಗಳಿಗೆ ಮೇವು, ನೀರು ನೀಡಲಾಗದೇ ರೈತರು ಅವುಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಉತ್ತರ ಕರ್ನಾಟಕದ ಅತಿದೊಡ್ಡ ಜಾನುವಾರು ಸಂತೆಗಳಲ್ಲಿ ಒಂದಾದ ಹಾವೇರಿಯಲ್ಲಿ ಈಗ ರೈತರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಿದ್ದು, ಮಾರುಕಟ್ಟೆಯ ತುಂಬೆಲ್ಲಾ ಜಾನುವಾರುಗಳೇ ಕಾಣಿಸುತ್ತಿವೆ. ರೈತರು ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಮಾರಾಟಕ್ಕೆ ತರುತ್ತಿದ್ದು ಅವುಗಳ ದರವೂ ಕಡಿಮೆಯಾಗಿದೆ. ರೈತ ನಿಂಗಪ್ಪ ನೆಲೋಗಲ್ ಮಾತನಾಡಿ, “ಮಳೆ ಕೊರತೆಯಿಂದ ಹೊಲ, …

Read More »

ಗೋವಾದಿಂದ ತೆಲಂಗಾಣಕ್ಕೆ ಅಕ್ರಮವಾಗಿ ಮದ್ಯ ಸಾಗಣೆ: ₹43 ಲಕ್ಷ ಮೌಲ್ಯದ ಮದ್ಯ ಜಪ್ತಿ

ಬೆಳಗಾವಿ: ಅಬಕಾರಿ ಅಧಿಕಾರಿಗಳು ಬಾನುವಾರ ಬೆಳಿಗ್ಗೆ ಕಾರ್ಯಾಚರಣೆ ಕೈಗೊಂಡಿದ್ದು, ಗೋವಾದಿಂದ ತೆಲಂಗಾಣಕ್ಕೆ ದುಬಾರಿ ಮದ್ಯವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಕರಣ ಭೇದಿಸಿದ್ದಾರೆ. 43 ಲಕ್ಷ ರೂ ಮೌಲ್ಯದ ಮದ್ಯ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿಸಿದ್ದಾರೆ. ಈ ಹಿಂದೆ ಪ್ಲೈವುಡ್‌ ಮತ್ತು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಮಧ್ಯೆ ಮದ್ಯದ ಬಾಟಲಿಗಳನ್ನಿಟ್ಟು ಸಾಗಣೆ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ಭೇದಿಸಿದ್ದ ಅಧಿಕಾರಿಗಳು, ಇದೀಗ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದಾರೆ. ಇಂದು ಬೆಳಿಗ್ಗೆ 3.30ರ ಸುಮಾರಿಗೆ …

Read More »

ಶುಕ್ರ, ಮಂಗಳನತ್ತ ಇಸ್ರೋ ಮುಂದಿನ ಚಿತ್ತ: ಆದಿತ್ಯ-ಎಲ್1ರ ಯೋಜನಾ ನಿರ್ದೇಶಕಿ ನಿಗರ್ ಶಾಜಿ ಹೇಳಿಕೆ

ತಿರುಚ್ಚಿ (ತಮಿಳುನಾಡು): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಂದಿನ ಮಹತ್ವದ ಯೋಜನೆಗಳ ಬಗ್ಗೆ ವಿಜ್ಞಾನಿ ನಿಗರ್ ಶಾಜಿ ಮಾಹಿತಿ ಹಂಚಿಕೊಂಡಿದ್ದಾರೆ. ಶುಕ್ರ ಮತ್ತು ಮಂಗಳದಂತಹ ಗ್ರಹಗಳ ಕುರಿತು ಇಸ್ರೋ ತನ್ನ ಅನ್ವೇಷಣೆ ಮುಂದುವರಿಸಲಿದೆ ಎಂದು ಸೂರ್ಯನ ಅಧ್ಯಯನ ಬಗ್ಗೆ ಭಾರತದ ಮೊದಲ ಬಾಹ್ಯಾಕಾಶ ಯೋಜನೆಯಾದ ಆದಿತ್ಯ-ಎಲ್1ರ ಯೋಜನಾ ನಿರ್ದೇಶಕಿ ಶಾಜಿ ಹೇಳಿದ್ದಾರೆ. ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಶನಿವಾರ ‘ತಾಂತ್ರಿಕ ಮಹಿಳೆ ವಿಶೇಷ ಪ್ರಶಸ್ತಿ ಮತ್ತು ಇಂಟರ್​ನೆಟ್​ ವಾಣಿಜ್ಯೋದ್ಯಮ ಕೌಶಲ್ಯಗಳ ತರಬೇತಿ’ …

Read More »

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ.. ಪೈಲಟ್‌ಗೆ ಗಾಯ

ಬಾರಾಮತಿ (ಮಹಾರಾಷ್ಟ್ರ): ಕಳೆದ ಎರಡು ದಿನಗಳ ಹಿಂದಷ್ಟೇ ಬಾರಾಮತಿಯಲ್ಲಿ ನಡೆದ ವಿಮಾನ ಪತನ ಘಟನೆ ಮಾಸುವ ಮುನ್ನವೇ ಇಂದು ಬೆಳಗ್ಗೆ ಮತ್ತೆ ತರಬೇತಿ ವಿಮಾನವೊಂದು ಪತನವಾಗಿದೆ. ಇಲ್ಲಿನ ಹಳೆ ಸಹ್ಯಾದ್ರಿ ಹಸುವಿನ ತೋಟದ ಬಳಿ ಪತನಗೊಂಡಿದ್ದು, ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ವಾಯುಯಾನ ತರಬೇತಿ ಸಂಸ್ಥೆ ಇದೆ. ಕಳೆದ ಕೆಲವು ದಿನಗಳಲ್ಲಿ ವಿಮಾನ ಅಪಘಾತ ಸಂಭವಿಸಿದ ಐದನೇ ಘಟನೆ ಇದಾಗಿದ್ದು, ದುರಂತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ದಿಢೀರ್ ವಿಮಾನ …

Read More »

ಸಿಸಿಬಿ ಪೊಲೀಸರ ಸೋಗಿನಲ್ಲಿ ಅಪಹರಣ: ಪೊಲೀಸ್​ ಭಾತ್ಮೀದಾರನ ಸಹಿತ ಐವರ ಬಂಧನ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನನ್ನು ಅಪಹರಿಸಿ 5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಪೊಲೀಸ್ ಭಾತ್ಮೀದಾರನ ಸಹಿತ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಖಾಸಿಂ ಮುಜಾಹಿದ್, ಮುಕ್ತಿಯಾರ್, ವಸಿಂ, ಶಬ್ಬೀರ್ ಹಾಗೂ ಶೋಯೆಬ್‌ ಬಂಧಿತ ಆರೋಪಿಗಳು. ಪೊಲೀಸ್ ಭಾತ್ಮೀದಾರನಿಂದಲೇ ಅಪಹರಣದ ಸಂಚು: ಸಿಸಿಬಿ ಪೊಲೀಸರ ಭಾತ್ಮೀದಾರನಾಗಿದ್ದ ಮೊಹಮ್ಮದ್​ ಖಾಸಿಂ ಮುಜಾಹಿದ್, ಸಿಸಿಬಿ ಕಚೇರಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ. ಸೆಪ್ಟೆಂಬರ್ 2 ರಂದು ಕಾಲು ಸಿಂಗ್ ಎಂಬಾತ ತನ್ನ ಕಾರಿನಲ್ಲಿ …

Read More »

ಬಾಲಿವುಡ್​ಗೆ ರಾಕಿಂಗ್​ ಸ್ಟಾರ್ ಪದಾರ್ಪಣೆ

ಹೈದರಾಬಾದ್: ಕೆಜಿಎಫ್ ಸಿನಿಮಾದ ಯಶಸ್ಸಿನ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಕನ್ನಡದ ಸ್ಟಾರ್​ ನಟ ಯಶ್ ಈಗ ಬಾಲಿವುಡ್‌ನಲ್ಲಿ ತಮ್ಮ ಛಾಪು ಮೂಡಿಸಲು ಮುಂದಾಗಿದ್ದಾರೆ. ಇದರ ಭಾಗವಾಗಿ ಅವರು ನಿರ್ದೇಶಕ ನಿತೇಶ್ ತಿವಾರಿ ಅವರ ಮಹತ್ವಾಕಾಂಕ್ಷೆಯ ರಾಮಾಯಣ ಸಿನಿಮಾಕ್ಕೆ ಅಧಿಕೃತವಾಗಿ ಸಹಿ ಹಾಕಿದ್ದಾರೆ. ಈ ಸಿನಿಮಾಕ್ಕೆ ಯಶ್​ ಬರೋಬ್ಬರಿ 100 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆಗೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರದಂಡದ ಪ್ರಕಾರ, ನಿರ್ದೇಶಕ ತಿವಾರಿ ಅವರು ರಾಮನ ಪಾತ್ರಕ್ಕಾಗಿ ರಣಬೀರ್ …

Read More »

ಕಲಬುರಗಿಯಲ್ಲಿ ಬ್ಯೂಟಿಷಿಯನ್ ಬರ್ಬರ ಕೊಲೆ.. 2 ನೇ ಪತಿ ಮೇಲೆ ಶಂಕೆ

ಕಲಬುರಗಿ: ಬ್ಯೂಟಿಷಿಯನ್​ ಕುತ್ತಿಗೆಗೆ ದುಪ್ಪಟ್ಟದಿಂದ ಬಿಗಿದು, ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಶಾಂತಿ ನಗರದಲ್ಲಿ ನಡೆದಿದೆ. ಶಾಹಿನಾ ಬಾನು (35) ಕೊಲೆಯಾದ ಮಹಿಳೆ. ಬ್ಯೂಟಿಷಿಯನ್ ಆಗಿದ್ದ ಶಾಹಿನಾ ಬಾನು ಮೊದಲು ಸೈಯದ್ ಜಿಲಾನಿ ಎಂಬಾತನ ಜೊತೆ ಮದುವೆಯಾಗಿದ್ದು, ಒಂದು ಗಂಡು ಮಗು ಕೂಡ ಇದೆ. ಆದರೆ ದಂಪತಿ ನಡುವೆ ಹೊಂದಾಣಿಕೆ ಇಲ್ಲದ ಕಾರಣ ವಿಚ್ಛೇದನ ಪಡೆದಿದ್ದಾರೆ. ಶಾಹಿನಾ ಬಾನು ಜೊತೆಗೆ ಡೈವರ್ಸ್​ ಪಡೆದ ಮೇಲೆ ಆಕೆಯ ಮಾಜಿ ಪತಿ …

Read More »

ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆ ಖಚಿತಪಡಿಸಿದ ಮದ್ರಾಸ್​ ಹೈಕೋರ್ಟ್: ​15 ದಿನದಲ್ಲಿ ಶರಣಾಗಲು ಆದೇಶ

ಚೆನ್ನೈ (ತಮಿಳುನಾಡು): ಖ್ಯಾತ ನಟಿ ಜಯಪ್ರದಾ ಅವರಿಗೆ ಕೆಳ ಹಂತದ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್ ಇಂದು (ಶುಕ್ರವಾರ)​ ಖಚಿತಪಡಿಸಿತು. 15 ದಿನದಲ್ಲಿ ಎಗ್ಮೋರ್ ಕೋರ್ಟ್‌ಗೆ ಶರಣಾಗುವಂತೆ ಹಾಗೂ 20 ಲಕ್ಷ ರೂ. ಠೇವಣಿ ಇಡುವಂತೆ ಸೂಚಿಸಿದೆ. ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿರುವ ಜಯಪ್ರದಾ, ಸಂಸತ್ ಸದಸ್ಯರಾಗಿದ್ದರು. ಚೆನ್ನೈನಲ್ಲಿ ರಾಮಕುಮಾರ್, ರಾಜ್​ಬಾಬು ಎಂಬವರೊಂದಿಗೆ ಸೇರಿ ಚಿತ್ರಮಂದಿರವನ್ನು ನಡೆಸುತ್ತಿರುವ ಇವರು, …

Read More »

ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಳಗಾವಿ, ಅ.20: ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂಡಿಕೆ ಶಿವಕುಮಾರ್ (DK Shivakumar)ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಸತೀಶ್ ಜಾರಕಿಹೊಳಿ ಜಿಲ್ಲೆಯಿಂದ ಆಚೆ ಉಳಿದಿದ್ದಾರೆ. ಇತರೆ ಕೈ ಶಾಸಕರೂ ಸಾಥ್ ನೀಡಿದ್ದು, ಡಿಕೆ ಶಿವಕುಮಾರ್ ಸ್ವಾಗತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರೊಬ್ಬರೂ ಆಗಮಿಸಿಲ್ಲ. ಆದರೆ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ಮಾಡಿದ ಶಿವಕುಮಾರ್ ಇಂದು ನಿರ್ಗಮಿಸುತ್ತಿದ್ದಂತೆ ಎಲ್ಲಾ ಶಾಸಕರು ಜಿಲ್ಲೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ. ಸತೀಶ್ …

Read More »

ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ.: ಡಿ.ವಿ.ಸದಾನಂದಗೌಡ

ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ. ಬೆಂಗಳೂರು: ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. …

Read More »