ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 13 ವೃತ್ತಗಳ ಹಂತದಲ್ಲಿ ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿಗೆ ಆಹ್ವಾನಿಸಲಾಗಿದೆ. ರಾಜ್ಯ ಅರಣ್ಯ ಇಲಾಖೆಯಲ್ಲಿ ವಿವಿಧ ವೃತ್ತಗಳಲ್ಲಿ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 13 ವೃತ್ತಗಳ ಹಂತದಲ್ಲಿ ಈ ಹುದ್ದೆಗೆ ನೇಮಕಾತಿ ನಡೆಯಲಿದೆ. ಎಸ್ಎಸ್ಎಲ್ಸಿ ಓದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ನೇಮಕಾತಿ, …
Read More »ಬಳ್ಳಾರಿ: ಕಾಲೇಜಿನಿಂದ ವಿದ್ಯಾರ್ಥಿನಿ ಅಪಹರಿಸಿ ಗ್ಯಾಂಗ್ ರೇಪ್
ಬಳ್ಳಾರಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ಬಳ್ಳಾರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆಯಲ್ಲಿ ನಾಲ್ವರ ವಿರುದ್ಧ ಸಂತ್ರಸ್ತ ಯುವತಿಯ ತಂದೆ ದೂರು ದಾಖಲಿಸಿದ್ದಾರೆ. ಬಳ್ಳಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಮುಖ ಆರೋಪಿ ನವೀನ್ ಎಂಬಾತನನ್ನು ಬಂಧಿಸಿ, ಉಳಿದವರಿಗಾಗಿ ಬಲೆ ಬೀಸಿದ್ದಾರೆ. ಸಂತ್ರಸ್ತ ಯುವತಿ ಬಳ್ಳಾರಿ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಅಕ್ಟೋಬರ್ 11 ರಂದು ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ …
Read More »4 ನೇ ಕರ್ನಾಟಕ ರ್ಯಾಂಕಿಂಗ್ ಓಪನ್ ಸ್ಟೇಟ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ 2023 ರಲ್ಲಿ ಭಾಗವಹಿಸಿದ್ದಾರೆ ಬೆಳಗಾವಿಯ ಸ್ಕೇಟರ್ ಗಳು
ಸ್ಟೇಟ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ ನಲ್ಲಿ 13 ಜಿಲ್ಲೆಗಳಿಂದ 400 ಸ್ಕೇಟರ್ಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಬೆಳಗಾವಿಯ ಸ್ಕೇಟರ್ಗಳು 2 ಚಿನ್ನ, 5 ಬೆಳ್ಳಿ ಮತ್ತು 2 ಕಂಚು ಸೇರಿದಂತೆ ಒಟ್ಟು 9 ಪದಕಗಳನ್ನು ಗೆದ್ದಿದ್ದಾರೆ. ಸ್ಪೀಡ್ ಸ್ಕೇಟಿಂಗ್: ಸೌರಭ್ ಸಲೋಖೆ 2 ಚಿನ್ನ 1 ಬೆಳ್ಳಿ, ಜಾನ್ವಿ ತೆಂಡೂಲ್ಕರ್ 2 ಬೆಳ್ಳಿ, ದೂರ್ವಾ ಪಾಟೀಲ್ 2 ಬೆಳ್ಳಿ, ಸಾನ್ವಿ ಎಟ್ಗಿಕರ್ 2 ಕಂಚು. ಗೆದ್ದಿದ್ದಾರೆ ಈ ಎಲ್ಲ ಸ್ಕೇಟರ್ಗಳು …
Read More »ಭೀಮಾತೀರದಲ್ಲಿ..: ಗ್ರಾಮ ಪಂಚಾಯತಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
ಕಲಬುರಗಿ : ಕೆಲವು ತಿಂಗಳುಗಳ ಕಾಲ ತಣ್ಣಗಿದ್ದ ಕಲಬುರಗಿಯ ಭೀಮಾತೀರದಲ್ಲಿ ಹಳೆ ದ್ವೇಷಕ್ಕೆ ನೆತ್ತರು ಹರಿದಿದೆ. ಅಫಜಲಪುರ ತಾಲೂಕಿನ ಚೌಡಾಪುರ ಬಸ್ ನಿಲ್ದಾಣ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ ನಡೆದಿದೆ. ಅಫಜಲಪುರ ತಾಲೂಕಿನ ಮದರಾ (ಬಿ) ಗ್ರಾ.ಪಂ.ಅಧ್ಯಕ್ಷ ಗೌಡಪ್ಪಗೌಡ ಪಾಟೀಲ ಕೊಲೆಯಾಗಿದ್ದಾರೆ. ಹಂತಕರು ಪರಾರಿಯಾಗಿದ್ದಾರೆ. ಮದರಾ (ಬಿ) ಗ್ರಾಮದಿಂದ ಇಂದು ಬೆಳಗ್ಗೆ ಕೆಲಸದ ನಿಮಿತ್ತ ಚೌಡಾಪುರಕ್ಕೆ ಆಗಮಿಸಿದ್ದ ಗೌಡಪ್ಪಗೌಡ ಪಾಟೀಲ್, ಬಸ್ ನಿಲ್ದಾಣ ಮುಂಭಾಗದಲ್ಲಿರುವ ಗ್ಯಾರೇಜ್ನಲ್ಲಿ …
Read More »ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಮತ್ತೆ ಆದೇಶ
ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರಗಾಲದ ಕರಿಛಾಯೆ ಆವರಿಸಿರುವ ನಡುವೆ ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ಮತ್ತೊಂದು ಶಾಕ್ ಎದುರಾಗಿದೆ. ಮಂಡ್ಯದ ಕೆಆರ್ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ಅಕ್ಟೋಬರ್ 31 ರವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಇಂದು ಮತ್ತೊಮ್ಮೆ ಆದೇಶ ನೀಡಿದೆ. ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಕಾವೇರಿ ನೀರು ನಿರ್ವಹಣಾ ಮಂಡಳಿ ಸಭೆ ನಡೆಸಿತು. ಕಳೆದೆರಡು ದಿನಗಳ ಹಿಂದೆ (ಅಕ್ಟೋಬರ್ 11) …
Read More »ರೈತರಿಗೆ ನಿತ್ಯ 5 ತಾಸು ವಿದ್ಯುತ್ ಪೂರೈಕೆ ಮಾಡಿ, ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರಿಕೆ ವಹಿಸಿ: ಸಿಎಂ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವಂತೆ ಹಾಗೂ ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ಕಾಂ ಎಂಡಿಗಳಿಗೆ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ವಿದ್ಯುತ್ಗೆ ಬೇಡಿಕೆ ಹೆಚ್ಚಾಗಿದೆ. ರೈತರಿಗೆ …
Read More »ಭತ್ತದ ಬೆಳೆಯಲ್ಲೇ ಮೂಡಿಬಂದ ಪುನೀತ್ ರಾಜ್ಕುಮಾರ್!
ರಾಯಚೂರು: ಪವರ್ಸ್ಟಾರ್ ದಿ.ಪುನೀತ್ ರಾಜ್ಕುಮಾರ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ವಿವಿಧ ರೀತಿಯಲ್ಲಿ ವಿಶೇಷ ಪ್ರೀತಿ ತೋರಿರುವುದನ್ನು ಕಂಡಿದ್ದೇವೆ. ಇಲ್ಲೊಬ್ಬ ರೈತ ಅಪ್ಪುವಿನ ಅಪ್ಪಟ ಅಭಿಯಾನಿಯಾಗಿದ್ದು, ಭತ್ತದ ಬೆಳೆಯಲ್ಲೇ ಚಿತ್ರ ಬಿಡಿಸಿ ಗಮನ ಸೆಳೆದಿದ್ದಾರೆ. ಜಿಲ್ಲೆಯ ಸಿರವಾರ ತಾಲೂಕಿನ ಡೊಣ್ಣಿ ಕ್ಯಾಂಪ್ನ ರೈತ ಸತ್ಯನಾರಾಯಣ, ತಮ್ಮ ಭತ್ತದ ಬೆಳೆಯಲ್ಲೇ ಪುನೀತ್ ರಾಜ್ಕುಮಾರ್ ಭಾವಚಿತ್ರ ಮೂಡಿಸುವ ಮೂಲಕ 2ನೇ ವರ್ಷ ಪುಣ್ಯಸ್ಮರಣೆಗೆ ವಿಭಿನ್ನವಾಗಿ ಪ್ರೀತಿ ವ್ಯಕ್ತಪಡಿಸಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಎರಡು …
Read More »ನಾಡ ಹಬ್ಬ ಹಾಗೂ ಹಬ್ಬಕ್ಕಾಗಿ ಇರುವ ದಸರಾ ರಜೆಯ ಕಾರಣದಿಂದ ಪ್ರಯಾಣಿಕರಿಗಾಗಿ 2000 ಕ್ಕೂ ಅಧಿಕ ಬಸ್ಗಳ ವ್ಯವಸ್ಥೆಯನ್ನು ಕರ್ನಾಟಕ ಸಾರಿಗೆ ವ್ಯವಸ್ಥೆ ಮಾಡಿದೆ.
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗೂ ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚಿನ ಬಸ್ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕೆಎಸ್ಆರ್ಟಿಸಿ ಕಲ್ಪಿಸಿದೆ. ಹಬ್ಬಕ್ಕಾಗಿ ಊರಿಗೆ ತೆರಳುವ ಮತ್ತು ರಜೆ ಮುಗಿಸಿ ವಾಪಸ್ ಆಗಲು ಅನುಕೂಲವಾಗುವಂತೆ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಒದಗಿಸುತ್ತಿದೆ. ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ …
Read More »ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆಯಲ್ಲಿ ಐಟಿ ದಾಳಿ.. 40 ಕೋಟಿಗೂ ಹೆಚ್ಚು ನಗದು ಪತ್ತೆ!
ಬೆಂಗಳೂರು : ನಗರದಲ್ಲಿ ಗುತ್ತಿಗೆದಾರರು, ಜ್ಯುವೆಲ್ಲರಿ ಶಾಪ್ ಮಾಲೀಕರು ಹಾಗೂ ಮಾಜಿ ಕಾರ್ಪೊರೇಟರ್ಗಳ ಮನೆಗಳ ಮೇಲೆ ತಡರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ, ಮಾಜಿ ಕಾರ್ಪೊರೇಟರ್ ಅವರ ಸಂಬಂಧಿಯ ಫ್ಲ್ಯಾಟ್ನಲ್ಲಿ 42 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ. ಆರ್ಟಿ ನಗರದ ಆತ್ಮಾನಂದ ಕಾಲೋನಿಯಲ್ಲಿರುವ ಫ್ಲ್ಯಾಟ್ನಲ್ಲಿ ಈ ದಾಳಿ ನಡೆದಿದೆ. ಫ್ಲ್ಯಾಟ್ನಲ್ಲಿನ ಮಂಚದ ಕೆಳಗಡೆ ಬಾಕ್ಸ್ನಲ್ಲಿ ಹಣ ಕಂಡುಬಂದಿದೆ ಎಂದು ಆದಾಯ ತೆರಿಗೆ …
Read More »ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪರಮಶಿವಯ್ಯಗೆ ಜಾಮೀನು ನೀಡಿದ ಹೈಕೋರ್ಟ್.
ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ದಾಖಲಾಗಿದ್ದ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪರಮಶಿವಯ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ನೇತೃತ್ವದ ಏಕಸದಸ್ಯ ಅರ್ಜಿಯನ್ನು ಪುರಸ್ಕರಿಸಿದ್ದು, ಜಾಮೀನು ನೀಡಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಲ್ಲದೇ, ಅರ್ಜಿದಾರರು ಎರಡು ಲಕ್ಷ ರೂಪಾಯಿ ಮೌಲ್ಯದ ಬಾಂಡ್, …
Read More »
Laxmi News 24×7