Breaking News

ರಾಷ್ಟ್ರೀಯ

‘ಯುವ ಪೀಳಿಗೆಯನ್ನು ಪ್ರೋತ್ಸಾಹಿಸಲು ಬಿಗ್ ಬಾಸ್​ಗೆ ಹೋಗಿದ್ದೆ’: ಶಾಸಕ‌ ಪ್ರದೀಪ್ ಈಶ್ವರ್

ಕನ್ನಡ ಬಿಗ್ ಬಾಸ್‍ ಸೀಸನ್‍ 10ಕ್ಕೆ ಎಂಟ್ರಿ ಕೊಟ್ಟು ಬಂದಿರುವ ಶಾಸಕ‌ ಪ್ರದೀಪ್ ಈಶ್ವರ್, ದೊಡ್ಮನೆಗೆ ಹೋದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬಹುನಿರೀಕ್ಷಿತ ಕನ್ನಡ ಬಿಗ್ ಬಾಸ್‍ ಸೀಸನ್‍ 10 ಪಾರಂಭಗೊಂಡಿದೆ. ಜನಪ್ರಿಯ ರಿಯಾಲಿಟಿ ಶೋ ಆರಂಭದಲ್ಲೇ ಸದ್ದು ಮಾಡುತ್ತಿದೆ. ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್‍ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿ ಬಂದಿದ್ದಾರೆ. ಅಷ್ಟಕ್ಕೂ ಒಂದು ದಿನದ ಮಟ್ಟಿಗೆ ಬಿಗ್ ಬಾಸ್ ‌ಮನೆಗೆ ಹೋಗಿದ್ದ ಕಾರಣವೇನು? ಎಂಬುದರ ಬಗ್ಗೆ ಸ್ವತಃ …

Read More »

ಸಿಎಂಗೆ ದಸರಾ ಆಹ್ವಾನ ಪತ್ರಿಕೆ ನೀಡಿದ ಸಚಿವ ಹೆಚ್‌.ಸಿ.ಮಹದೇವಪ್ಪ

ಬೆಂಗಳೂರು: ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದ ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದ್ದು ಸೌಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ನೆನಪುಗಳನ್ನು ಸ್ಮರಿಸಿದರು. ದಸರಾದಲ್ಲಿ ಭಾಗವಹಿಸಲು ನೀಡಿದ ಆಹ್ವಾನ ಪತ್ರಿಕೆಯನ್ನು ಅವರು ಸಂತೋಷದಿಂದ ಸ್ವೀಕರಿಸಿದರು. ಸಿಎಂ ಸಿದ್ದರಾಮಯ್ಯನವರಿಗೆ ಇಂದು ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ದಸರಾ ಆಹ್ವಾನಪತ್ರಿಕೆ ನೀಡಿತು. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಿಯೋಗದಲ್ಲಿ ಮೇಯರ್ ಶಿವಕುಮಾರ್, ಶಾಸಕ ರವಿಶಂಕರ್, …

Read More »

ಮೈಸೂರು ದಸರಾ: 10 ಕಡೆ ಸಾಂಸ್ಕೃತಿಕ ಕಾರ್ಯಕ್ರಮಗಳು- ಸಂಪೂರ್ಣ ವಿವರ..

ಮೈಸೂರು : ಈ ಬಾರಿಯ ಸಾಂಪ್ರದಾಯಿಕ ದಸರಾದಲ್ಲಿ 10 ಕಡೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮುಖ್ಯವಾಗಿ, ಅಂಬಾವಿಲಾಸ ಅರಮನೆಯ ಮುಂಭಾಗದ ಸಾಂಸ್ಕೃತಿಕ ವೇದಿಕೆ ಸೇರಿದಂತೆ ನಗರದ ಇತರ 9 ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳು ಏರ್ಪಾಡಾಗಿವೆ.   ಸುಗಮ ಹಾಗೂ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಇತರೆ ಪ್ರಕಾರಗಳ ನೃತ್ಯ, ನಾಟಕ, ಜಾನಪದ, ನಿರೂಪಣೆ, ಜಾದು, ಹರಿಕಥೆ, ಭಕ್ತಿ ಗೀತೆಗಳು, ತತ್ವಪದಗಳು, ವಾದ್ಯ, ಸೂತ್ರ ಸಲಾಕೆ ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. …

Read More »

ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ಆರೋಪಿ ಗುರುತು ಪತ್ತೆ ಹಚ್ಚಿದ ಬೆಳಗಾವಿ ಪೊಲೀಸರು

ಬೆಳಗಾವಿ : ಜಿಲ್ಲೆಯಲ್ಲಿರುವ ಹಿಂಡಲಗಾ ಕೇಂದ್ರ ಕಾರಾಗೃಹ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸ್ಫೋಟಿಸುವುದಾಗಿ ಹಾಗೂ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಹುಕ್ಕೇರಿಯ ಕಿರಣ ಮೋಷಿ (48) ಬೆದರಿಕೆ ಕರೆ ಮಾಡಿದ್ದ ಆರೋಪಿ. ತನ್ನ ಪತ್ನಿಯ ಹೆಸರಿನಲ್ಲಿರುವ ಸೀಮ್‌ನಿಂದ ಬಂದಿಖಾನೆ ಇಲಾಖೆಯ ಉತ್ತರ ವಲಯದ ಡಿಐಜಿಪಿ ಟಿ …

Read More »

ಅಣ್ಣ ತಂಗಿ ಸಂಬಂಧ ತಪ್ಪಾಗಿ ಅರ್ಥೈಸಿಕೊಂಡ ಪತಿ.. ಜೋಡಿ ಕೊಲೆ, ತಂದೆ ಮಗ ಬಂಧನ

ದಾವಣಗೆರೆ/ವಿಜಯನಗರ: ಅಣ್ಣ ತಂಗಿಯ ಸಂಬಂಧವನ್ನು ಪತಿ ತಪ್ಪಾಗಿ ತಿಳಿದು ಇಬ್ಬರನ್ನು ಕೊಲೆ ಮಾಡಿದ್ದಾನೆ. ಈ ಜೋಡಿ ಕೊಲೆಗೆ ಆರೋಪಿ ತಂದೆಯೂ ಸಾಥ್​ ನೀಡಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ ಕೊಲೆ ಮಾಡಿದ ಬಳಿಕ ಅಣ್ಣ ತಂಗಿ ಇಬ್ಬರು ವಿಷ ಕುಡಿದು ಸಾವನ್ನಪ್ಪಿದ್ದಾರೆ ಎಂದು ತಂದೆ ಮಗ ಇಬ್ಬರು ಕಥೆ ಕಟ್ಟಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಎಂಟ್ರಿ ಬಳಿಕ ಸತ್ಯಾಸತ್ಯತೆ ಹೊರ ಬಿದ್ದಿದೆ. ಏನಿದು ಪ್ರಕರಣ: ದಾವಣಗೆರೆ ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ …

Read More »

ಮೊದಲನೇ ಮಹಡಿಯಿಂದ ಬಿದ್ದು ಮಗು ಗಂಭೀರ ಗಾಯ

ಕೊಪ್ಪಳ: ಆಟವಾಡುತಿದ್ದ 3.5 ವರ್ಷದ ಮಗು ಮನೆಯ ಮೊದಲನೇ ಮಹಡಿಯಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಕುಷ್ಟಗಿ ಪಟ್ಟಣದ ಗೌರಿ ನಗರದ ಮಹಡಿ ಮನೆಯೊಂದರಲ್ಲಿ ಶನಿವಾರ (7/10/2023) ರಾತ್ರಿ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಪಟ್ಟಣದ ದುರ್ಗಾ ಕಾಲೋನಿಯ ನಿವಾಸಿ ಸಂಗೀತ ಕಲಾವಿದ ಹೊಳಿಯಪ್ಪ ಗುರಿಕಾರ ಅವರು, ತಮ್ಮ ಮಗಳು ಸೇರಿದಂತೆ ಕುಟುಂಬ ಸಮೇತ ಗೌರಿ ನಗರದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಸೀರೆ …

Read More »

ಶಾಹು ನಗರ ವಂದನ ಕೊಲೊನಿಯಲ್ಲಿ ಎಲ್ಲಿ ನೋಡಿದರಲ್ಲಿ ಗಬ್ಬೆದ್ದು ನಾರುತ್ತಿರುವ ಕೊಳಚೆಗಳು ರಸ್ತೆ ಪಕ್ಕದ ಮೇಲೆ ಪ್ಲಾಸ್ಟಿಕ್ ತ್ಯಾಜ್ಯಗಳು

ಬೆಳಗಾವಿಯನ್ನು ಎರಡನೇ ರಾಜಧಾನಿ ಸ್ಮಾರ್ಟ ಸಿಟಿ ಕುಂದಾನಗರಿ ಹಂಗೆ ಹಿಂಗೇ ಅಂತಾ ವರ್ಣಿಸುತ್ತಾರೆ ಆದರೆ ನಗರದಲ್ಲಿ ಕೆಲವೊಂದಿಷ್ಟು ಬೇಜವಾಬ್ದಾರಿ ಇಲಾಖೆ ಬೇಜವಾಬ್ದಾರಿ ಅಧಿಕಾರಿಗಳು ಬೆಳಗಾವಿಯನ್ನು ಸ್ವಚ್ಛವಾಗಿಡಲು ಸಹಕರಿಸುತ್ತಿಲ್ಲ ಬೆಳಗಾವಿ ಎಲ್ಲಾ ರಂಗದಲ್ಲೂ ತನ್ನ ಪ್ರಾಮುಖ್ಯತೆಯನ್ನು ಪಡೆದಿದೆ ವೀರ ರಾಣಿ ಕಿತ್ತೂರು ಚನ್ನಮ್ಮಾ ಸಂಗೊಳ್ಳಿ ರಾಯಣ್ಣ ರಂತಹ ದೇಶಭಕ್ತರ ಹುಟ್ಟಿದ ನಾಡಿದು ಬೆಳಗಾವಿ ರಾಜಕಾರಣ ಇಡೀ ರಾಜ್ಯಕ್ಕೆ ಒಂತರಾ ಡಿಫರೆಂಟ್ ಸರ್ಕಾರವನ್ನು ಕಟ್ಟುವುದರ ಜೊತೆಗೆ ಕೆಡುವುದರಲ್ಲಿ ನೈಪುಣ್ಯ ಹೊಂದಿದೆ ಎರಡೆರೆಡು ಸಚಿವರನ್ನು …

Read More »

ಕರ್ನಾಟಕದಲ್ಲಿ 5 ವರ್ಷದಲ್ಲಿ 58 ಸಾವಿರ ಮಕ್ಕಳು ಶಾಲೆಗಳಿಂದ ದೂರ.. ಕೋಟಿಗಟ್ಟಲೇ ವ್ಯಯಿಸಿದರೂ ನಿಲ್ಲದ ಡ್ರಾಪ್ ಔಟ್

ಬೆಂಗಳೂರು: ಶಾಲೆ ತೊರೆದಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 7 ನೇ ಸ್ಥಾನ ಪಡೆದುಕೊಂಡಿದ್ದು, ರಾಜ್ಯಾದ್ಯಂತ ಕಳೆದ ಐದು ವರ್ಷಗಳಲ್ಲಿ 57,785 ವಿದ್ಯಾರ್ಥಿಗಳು ಶಿಕ್ಷಣ ತೊರೆದಿದ್ದಾರೆ. ವಿದ್ಯಾರ್ಥಿಗಳು ಶಾಲೆ ತೊರೆಯುವುದನ್ನು ತಡೆಯಲು ಐದು ವರ್ಷದಲ್ಲಿ ಸರ್ಕಾರದಿಂದ ಬರೋಬ್ಬರಿ 1,099.63 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ. ಆದರೂ ಮಕ್ಕಳು ಶಾಲೆ ತೊರೆಯುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದಕ್ಕೆ ಕಾರಣವೇನು, ಸರ್ಕಾರ ಏನೆಲ್ಲಾ ಕ್ರಮವಹಿಸಲು ಮುಂದಾಗಿದೆ ಎನ್ನುವ ಕುರಿತ ಒಂದು ವರದಿ ಇಲ್ಲಿದೆ. ಶಾಲೆ ತೊರೆದ …

Read More »

ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಮಾತು

ಬೆಂಗಳೂರು: ನಾಗರಿಕರ ಧ್ವನಿಯೇ ನಮ್ಮ ಸರ್ಕಾರದ ಧ್ವನಿ. ಹೀಗಾಗಿ ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಯಲ್ಲಿ ನಗರದ ಜನರ ಅಭಿಪ್ರಾಯ ಸಂಗ್ರಹಿಸಿ, ಅವರ ನಿರೀಕ್ಷೆಗೆ ತಕ್ಕಂತೆ ನಾವು ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಿದ್ದಪಡಿಸಲಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ‘ಬ್ರ್ಯಾಂಡ್ ಬೆಂಗಳೂರು’ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್, ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಎಂಬ ಕಳಂಕವನ್ನು ತೊಡೆದು ಹಾಕುತ್ತೇವೆ. ಪ್ರತಿ ರಸ್ತೆಯಲ್ಲಿ …

Read More »

ಸೌಂದರ್ಯ ಕಳೆದುಕೊಂಡ ಕಾರವಾರದ ಪ್ರಸಿದ್ಧ ರಾಕ್ ಗಾರ್ಡನ್; ನಿರ್ವಹಣೆಗೆ ಬಜೆಟ್‌ ಕೊರತೆ

ಕಾರವಾರ : ಅದು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಜನಾಂಗಗಳ ಕಲೆ, ಸಂಸ್ಕೃತಿ ಬಿಂಬಿಸುವ ಶಿಲ್ಪಕಲಾಕೃತಿಗಳ ವನ. ಹೆದ್ದಾರಿಗೆ ಹೊಂದಿಕೊಂಡು ಕಡಲತೀರದಲ್ಲೇ ಈ ವನ ಇರುವುದರಿಂದ ಸಾಕಷ್ಟು ಮಂದಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿ ತೆರಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾದ ನಿರ್ವಹಣೆಯ ಕೊರತೆಯಿಂದ ಪ್ರವಾಸಿಗರ ಆಕರ್ಷಣೆಯ ತಾಣ ತನ್ನ ಕಳೆ ಕಳೆದುಕೊಳ್ಳುತ್ತಿದೆ. ಕಾರವಾರದಲ್ಲಿರುವ ರಾಕ್‌ಗಾರ್ಡನ್ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೀಡಾಗಿ ದುಸ್ಥಿತಿ ತಲುಪಿದೆ. ರವೀಂದ್ರನಾಥ ಟ್ಯಾಗೋರ್ …

Read More »