Breaking News

ರಾಷ್ಟ್ರೀಯ

ಮಹಿಳಾ ಮೀಸಲಾತಿ ಬಿಲ್ ಅನುಷ್ಠಾನ ಆಗುವುದೇ ಅನುಮಾನ: ಸಿದ್ದರಾಮಯ್ಯ

ಬೆಂಗಳೂರು: ಕ್ಷೇತ್ರ ಪುನರ್ ವಿಂಗಡಣೆ, ಜನಗಣತಿಯೆಂಬ ಕೊಕ್ಕೆಯನ್ನಿಟ್ಟು ಪ್ರಕಟಿಸಿರುವ ಮಹಿಳಾ ಮೀಸಲು ಸಂಪೂರ್ಣ ಅನುಷ್ಠಾನ ಸಂಶಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ ಮಹಿಳಾ ಮೀಸಲಾತಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕ್ಷೇತ್ರ ಪುನರ್ ವಿಂಗಡಣೆ, …

Read More »

ಗುಜರಾತ್: ಗೌತಮ್ ಅದಾನಿ ಸಮ್ಮುಖದಲ್ಲಿ ಲ್ಯಾಕ್ಟೋಫೆರಿನ್ ಘಟಕ ಉದ್ಘಾಟಿಸಿದ ಶರದ್ ಪವಾರ್

ವಾಸ್ನಾ (ಗುಜರಾತ್): ಗುಜರಾತ್​ನಲ್ಲಿ ದೇಶದ ಮೊದಲ ಲ್ಯಾಕ್ಟೋಫೆರಿನ್ ಪ್ಲಾಂಟ್ ಎಕ್ಸ್‌ಮ್‌ಪವರ್​ಅನ್ನು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಕೈಗಾರಿಕೋದ್ಯಮಿ ಮತ್ತು ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಸಮ್ಮುಖದಲ್ಲಿ ಉದ್ಘಾಟಿಸಿದರು.   82 ವರ್ಷ ವಯಸ್ಸಿನ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಈ ಕುರಿತು ಸಾಮಾಜಿಕ ಜಾಲತಾಣವಾದ ‘ಎಕ್ಸ್‌’ (ಟ್ವಿಟರ್)ನಲ್ಲಿ ಕಾರ್ಯಕ್ರಮದ ಫೋಟೋಗಳ ಸಮೇತ ಪೋಸ್ಟ್​ ಮಾಡಿದ್ದಾರೆ. “ಗುಜರಾತ್‌ನ ವಾಸ್ನಾಯ ಚಚಾರ್ವಾಡಿಯಲ್ಲಿ ಭಾರತದ …

Read More »

ಬೆಳಗಾವಿ ಜಿಲ್ಲಾ ಮಟ್ಟದ ಸೈಕಲಿಂಗ್ ಸ್ಪರ್ಧೆ

ಬೆಳಗಾವಿ ಜಿಲ್ಲಾ ಪದವಿಪೂರ್ವ ಇಲಾಖೆ ಹಾಗೂ ಎಕ್ಸ್ಪರ್ಟ್ ಪಿ ಯು ಸಿ ಕಾಲೇಜ್ ಇವರ ಸಂಯುಕ್ತ ಆಶ್ರಯದಲ್ಲಿ PUC ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸೈಕಲಿಂಗ್ ( cycling) ಮತ್ತು Cross Country ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತಾನಾಡಿದ ಶ್ರೀ ಸುರೇಶ ಪೌoಡೆಶನ್ ಅಧ್ಯಕ್ಷರಾದ ಶ್ರೀ ಸುರೇಶ ಯಾದವ ಅವರು ಈಗಿನ ವಿದ್ಯಾರ್ಥಿಗಳಲ್ಲಿ ಸ್ಪೋರ್ಟ್ಸ್ ದ ಬಗ್ಗೆ ಕಾಳಜಿ ಕಡಿಮೆಯಾಗಿ ಕೇವಲ ಮೊಬೈಲ್ ಉಪಯೋಗ ಹೆಚ್ಚಾಗಿದೆ. ಇಂತ ಸಮಯದಲ್ಲಿ ಇಲಾಖೆ ಮತ್ತು ಕಾಲೇಜದವರು …

Read More »

ಭಾರತೀಯ ಕರಾಟೆ ಸಂಸ್ಥೆಯ ವತಿಯಿಂದ ಇಂದು ಲೇಡಿಸ್ ಕ್ಲಬ್ ನಲ್ಲಿ ಕರಾಟೆ ಬ್ಲಾಕ್ ಬೆಲ್ಟ್ ಸ್ಪರ್ಧೆ

ಬೆಳಗಾವಿಯ ಖ್ಯಾತ ಕರಾಟೆ ಪಟು ಮಧು ಪಾಟೀಲ ಆಯೋಜಿಸಿದ್ದ ಭಾರತೀಯ ಕರಾಟೆ ಸಂಸ್ಥೆಯ ವತಿಯಿಂದ ಇಂದು ಲೇಡಿಸ್ ಕ್ಲಬ್ ನಲ್ಲಿ ಕರಾಟೆ ಬ್ಲಾಕ್ ಬೆಲ್ಟ್ ಸ್ಪರ್ಧೆ ನಡೆಯಿತು. ಕರಾಟೆ ಬ್ಲಾಕ್ ಬೆಲ್ಟ್ ಸ್ಪರ್ಧೆಯಲ್ಲಿ 40 ಕರಾಟೆ ಪಟುಗಳು ಭಾಗವಹಿಸಿದ್ದರು. ಅವರಲ್ಲಿ 10 ವಿದ್ಯಾರ್ಥಿಗಳು ಕಿತ್ತಳೆ ಬೆಲ್ಟ್ ಪಡೆದರು. ರಿಯಾ ಅಶ್ವ ಶಾ, ಶ್ರೀಧರ್, ಇಂದ್ರಜ ಕಾಳೆ, ನೇಹಾ ಪೋಟೆ, ಬ್ಲೂ ಬೆಲ್ಟ್ ಪಡೆದರು. ವಂದನಾ ಕುರುಪ್, ರಿಯಾ ವರ್ನೇಕರ್, ಸಾಯಿರಾಜ್ …

Read More »

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಕಂಡಕ್ಟರ್​ ಸೇರಿ 15ಕ್ಕೂ ಹೆಚ್ಚು ಜನರಿಗೆ ಗಾಯ

ರಾಯಚೂರು: ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ‌ಬಸ್ ಕಂಡಕ್ಟರ್​ ಸೇರಿದಂತೆ 15ಕ್ಕೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ಶನಿವಾರ ನಡೆದಿದೆ.   ಬಸ್ ಸಿಂಧನೂರಿನಿಂದ ಅಂಕಲಿಮಠಕ್ಕೆ ಕಡೆಗೆ ಹೋಗುವಾಗ ಮಾರ್ಗದ ಮಧ್ಯದಲ್ಲಿ ಈ ದುರ್ಘಟನೆ ನಡೆದಿದೆ. ಲಾರಿಯೊಂದು ಪಂಚರ್ ಆಗಿ ರಸ್ತೆ ಪಕ್ಕದಲ್ಲಿ ನಿಂತಿತ್ತು. ಆದರೆ, ರಾತ್ರಿ ವೇಳೆಯಲ್ಲಿ ಲಾರಿ ನಿಲುಗಡೆ ಮಾಡಿರುವುದನ್ನು ಸೂಚಿಸಲು ಇಂಡಿಕೇಟರ್ …

Read More »

ಭಾನುವಾರದ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ ಹೀಗಿದೆ… ಇಂದಿನ ಪಂಚಾಂಗ: ದಿನಾಂಕ : 24-09-2023, ಭಾನುವಾರ ಸಂವತ್ಸರ: ಶುಭಕೃತ್ ಆಯನ : ದಕ್ಷಿಣಾಯಣ ಋತು : ಶರದ್​ ಮಾಸ : ಭಾದ್ರಪದ ಪಕ್ಷ : ಶುಕ್ಲ ತಿಥಿ : ನವಮಿ ನಕ್ಷತ್ರ : ಪೂರ್ವಾಷಾಢ ಸೂರ್ಯೋದಯ: ಮುಂಜಾನೆ 06:07 ಗಂಟೆಗೆ ಅಮೃತಕಾಲ: ಮಧ್ಯಾಹ್ನ 03:11ರಿಂದ 04:42 ಗಂಟೆವರೆಗೆ ವರ್ಜ್ಯಂ : ಸಂಜೆ 04:31ರಿಂದ 05:19 ಗಂಟೆ ತನಕ ದುರ್ಮೂಹುರ್ತ: ಬೆಳಗ್ಗೆ 11:42 ರಿಂದ 12:30 ಗಂಟೆವರೆಗೆ ರಾಹುಕಾಲ: ಮಧ್ಯಾಹ್ನ 04:42ರಿಂದ 06:13ಗಂಟೆ ತನಕ ಸೂರ್ಯಾಸ್ತ: ಸಂಜೆ 06:13 ಗಂಟೆಗೆ ಇಂದಿನ …

Read More »

ಕಿರುಕುಳ ಪ್ರಕರಣ ದಾಖಲಿಸಿದ ಸೊಸೆ ಮೇಲೆ ಅತ್ತೆಯಿಂದ ಆಯಸಿಡ್​ ದಾಳಿ

ನವದೆಹಲಿ: ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ 22 ವರ್ಷದ ಮಹಿಳೆ ಮೇಲೆ ಆಕೆಯ ಅತ್ತೆ ಆಯಸಿಡ್ ದಾಳಿ ಮಾಡಿರುವ ಘಟನೆ ಬುಧವಾರ ನಡೆದಿದ್ದು ಬೆಳಕಿಗೆ ಬಂದಿದೆ. ದಾಳಿಯಿಂದ ಮಹಿಳೆ ದೇಹ ಶೇ.25ರಷ್ಟು ಸುಟ್ಟ ಗಾಯಗಳಾಗಿವೆ. ಗಾಯಾಳುವನ್ನು ಸ್ಥಳೀಯ ಜೆಪಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃತ್ಯ ಎಸಗಿದ ಅತ್ತೆ ಅಂಜಲಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಆರೋಪಿ ಅಂಜಲಿ ಮತ್ತು ಕುಟುಂಬ ಸದಸ್ಯರು ಪರಾರಿಯಾಗಿದ್ದರು. ಆದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ, ಶುಕ್ರವಾರ …

Read More »

ವಂಚನೆ ಆರೋಪ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿ 7 ಜನ ಆರೋಪಿಗಳ ಪೊಲೀಸ್​ ಕಸ್ಟಡಿ ಇಂದು ಅಂತ್ಯವಾಗಲಿದೆ.

ಬೆಂಗಳೂರು: ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದ ಏಳು ಜನ ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಆರೋಪಿಗಳಾದ ಚೈತ್ರಾ ಕುಂದಾಪುರ, ಗಗನ್, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಹಾಗೂ ಚೆನ್ನನಾಯ್ಕ್​ರನ್ನು ಇಂದು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾಗಿದೆ. ಮಧ್ಯಾಹ್ನದ ವೇಳೆಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಸಿಸಿಬಿ ಪೊಲೀಸರು ಅಗತ್ಯವಿದ್ದಲ್ಲಿ ಮಾತ್ರ ಪುನಃ ಕಸ್ಟಡಿಗೆ ಕೇಳುವ …

Read More »

ಉಪನೋಂದಣೆ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ: ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಸೇವೆ ಲಭ್ಯ

ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ. ಸೆ.23 ರಿಂದ 30ರವರೆಗೆ ಈ ಆದೇಶ ಜಾರಿಗೆಯಲ್ಲಿರಲಿದ್ದು, ಒಂದು ವಾರ ಸಾರ್ವಜನಿಕರು 12 ಗಂಟೆಗಳ ಕಾಲ ಸೇವೆ ಪಡೆಯಬಹುದಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ …

Read More »

ಪತ್ನಿ ಜೊತೆ ಸಂಬಂಧ ಶಂಕೆ: ವ್ಯಕ್ತಿಯ ಕತ್ತರಿಸಿದ ತಲೆ ಹಿಡಿದು ಪತ್ನಿಯ ತವರು ಮನೆಗೆ ಬಂದ ಪತಿ!

ಚೆನ್ನೈ(ತಮಿಳುನಾಡು): ಪತಿಯೊಬ್ಬತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದ ಮೇರೆಗೆ ವ್ಯಕ್ತಿಯೋರ್ವನ ಶಿರಚ್ಛೇದ ಮಾಡಿರುವ ಆಘಾತಕಾರಿ ಘಟನೆ ಗುರುವಾರ ಸಂಜೆ ತಮಿಳುನಾಡಿನ ತೆಂಕಶಿ ಜಿಲ್ಲೆಯಲ್ಲಿ ನಡೆದಿದೆ. ಶಿರಚ್ಛೇದ ಮಾಡಿದ್ದಲ್ಲದೇ ಕತ್ತರಿಸಿದ ತಲೆಯನ್ನು ಟುಟಿಕೋರಿನ್​ ಜಿಲ್ಲೆಯಲ್ಲಿರುವ ಪತ್ನಿಯ ತವರು ಮನೆ ಮುಂದೆ ಇಟ್ಟಿದ್ದ. ಕೃತ್ಯ ಎಸಗಿದ ಎಸ್.ವೇಲುಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಮುರುಗನ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಆಲಂಕುಳಂ ಸಮೀಪದ ರೆಡಿಯಾರಪಟ್ಟಿ ಗಿಮ್ಕುಳಂ ಗ್ರಾಮಕ್ಕೆ ಸೇರಿದ ಆರೋಪಿ ವೇಲುಸಾಮಿಯು ತೂತುಕುಡಿ ಜಿಲ್ಲೆಯ …

Read More »