Breaking News

ರಾಷ್ಟ್ರೀಯ

ಶೇ.50ರಷ್ಟು ರಿಯಾಯಿತಿ ಪಾವತಿಗೆ ಗಡುವು ಮುಕ್ತಾಯ: ವಾಹನ ಸವಾರರಿಂದ ₹9 ಕೋಟಿಗೂ ಹೆಚ್ಚು ದಂಡ​ ಸಂಗ್ರಹ​!

ಬೆಂಗಳೂರು: ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ. 50ರಷ್ಟು ರಿಯಾಯಿತಿ ದಂಡ ಪಾವತಿ ನಿನ್ನೆಗೆ (ಶನಿವಾರ) ಕೊನೆಯಾಗಿದ್ದು, ಒಂದೇ ದಿನದಲ್ಲಿ ಸವಾರರು ಒಂದು ಕೋಟಿ ರೂ.ಗೂ ಹೆಚ್ಚು ದಂಡ ಕಟ್ಟಿದ್ದಾರೆ. ರಿಯಾಯಿತಿ ದಂಡ ಜಾರಿಯಾದಾಗಿನಿಂದ ಹಿಡಿದು ನಿನ್ನೆಯವರೆಗೆ 9 ಕೋಟಿ ರೂಪಾಯಿಗೂ ಹೆಚ್ಚು ದಂಡ ಸಂಗ್ರಹವಾಗಿದೆ. ಶುಕ್ರವಾರದವರೆಗೆ 8 ಕೋಟಿ ರೂ.ವರೆಗೆ ದಂಡ ಸಂಗ್ರಹ ಆಗಿತ್ತು‌. ರಿಯಾಯಿತಿ ದಂಡ ಪಾವತಿಸಲು ನಿನ್ನೆಯೇ ಕೊನೆ ದಿನ. ಫೆಬ್ರವರಿ 11ಕ್ಕೂ …

Read More »

ಜಿ20 ಔತಣಕೂಟದಲ್ಲಿ ನಿತೀಶ್, ಸ್ಟಾಲಿನ್, ಮಮತಾ ಭಾಗಿ; ಗೆಹ್ಲೋಟ್​, ಕೇಜ್ರಿವಾಲ್ ಗೈರು

ನವದೆಹಲಿ: ಶನಿವಾರ ಜಿ20 ಶೃಂಗಸಭೆಯ ಅಂಗವಾಗಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಇನ್ನೂ ಹಲವಾರು ಮುಖ್ಯಮಂತ್ರಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.   ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರೊಂದಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಈ ಕಾರ್ಯಕ್ರಮದಲ್ಲಿ ವೃತ್ತಾಕಾರವಾಗಿ ಜೋಡಿಸಿದ ಊಟದ …

Read More »

ಭಾರತ ತಂಡದಲ್ಲಿ ಪ್ರಮುಖ ಎರಡು ಬದಲಾವಣೆ .. ಟಾಸ್​ ಗೆದ್ದ ಪಾಕ್ ಬೌಲಿಂಗ್​ ಆಯ್ಕೆ​

ಕೊಲಂಬೊ (ಶ್ರೀಲಂಕಾ): ಕಳೆದ ವಾರ ಮಳೆಯಿಂದ ಭಾರತ – ಪಾಕಿಸ್ತಾನ ಪಂದ್ಯ ರದ್ದಾಗಿತ್ತು. ಈಗ ಏಷ್ಯಾಕಪ್​ನ ಸೂಪರ್​ ಫೋರ್​ ಹಂತದಲ್ಲಿ ಎರಡು ತಂಡಗಳು ಮತ್ತೆ ಮುಖಾಮುಖಿ ಆಗುತ್ತಿದ್ದು, ಟಾಸ್​ ಗೆದ್ದ ಪಾಕಿಸ್ತಾನ ನಾಯಕ ಬಾಬರ್​ ಭಾರತಕ್ಕೆ ಮೊದಲ ಬ್ಯಾಟಿಂಗ್​ ಆಹ್ವಾನ ನೀಡಿದ್ದಾರೆ. ಈಗ ಏಷ್ಯಾಕಪ್​ನ ಸೂಪರ್​ ಫೋರ್​ ಹಂತದಲ್ಲಿ ಎರಡು ತಂಡಗಳು ಮತ್ತೆ ಮುಖಾಮುಖಿ ಆಗುತ್ತಿದ್ದು, ಟಾಸ್​ ಗೆದ್ದ ಪಾಕಿಸ್ತಾನ ನಾಯಕ ಬಾಬರ್​ ಅಜಮ್​ ಭಾರತಕ್ಕೆ ಮೊದಲ ಬ್ಯಾಟಿಂಗ್​ ಆಹ್ವಾನ ನೀಡಿದ್ದಾರೆ. …

Read More »

ಲಿಫ್ಟ್ ಕೊಡುವ ನೆಪದಲ್ಲಿ ದರೋಡೆ.. ಕಾಮಾಕ್ಷಿಪಾಳ್ಯ ಪೊಲೀಸರಿಂದ ಔಟರ್ ರಿಂಗ್ ರೋಡ್ ರಾಬರ್ಸ್ ಬಂಧನ

ಬೆಂಗಳೂರು: ಲಿಫ್ಟ್ ಕೊಡುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ನಂಜುಂಡ, ಗಿರೀಶ್ ಹಾಗೂ ನವೀನ್ ಬಂಧಿತ ಆರೋಪಿಗಳು. ಗೊರಗುಂಟೆಪಾಳ್ಯ – ನಾಯಂಡಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಕೃತ್ಯ ಎಸಗುತ್ತಿದ್ದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಚಾಲಕ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು ರಾತ್ರಿ ವೇಳೆ ಬಸ್ಸಿಗಾಗಿ ಕಾಯುವವರನ್ನು ಗುರಿಯಾಗಿಸಿಕೊಂಡು ‘ಲಿಫ್ಟ್ ಕೊಡುವುದಾಗಿ’ ಕಾರು ಹತ್ತಿಸಿಕೊಳ್ಳುತ್ತಿದ್ದರು. ಸ್ವಲ್ಪ ದೂರ ಹೋಗುತ್ತಿದ್ದಂತೆ ಹಿಂಬದಿ ಸೀಟಿನಲ್ಲಿದ್ದ ಇನ್ನಿಬ್ಬರು ಆರೋಪಿಗಳು ಕತ್ತಿನ ಬಳಿ …

Read More »

ಕೌನ್ ಬನೇಗಾ ಕರೋಡ್​​​ಪತಿಯಲ್ಲಿ ಕೆಬಿಸಿಯ ಮೊದಲ ಕೋಟ್ಯಧಿಪತಿ ಇವರೇ ನೋಡಿ!

ಅಮೃತಸರ (ಪಂಜಾಬ್​): ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮ ಈಗಾಗಲೇ ಎಲ್ಲರಿಗೂ ತಿಳಿದಿರುವ ಕಾರ್ಯಕ್ರಮ. ಇದರಲ್ಲಿ 15 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟರೆ 7 ಕೋಟಿ ಗೆಲ್ಲುವ ಅವಕಾಶ ಇದೆ. ಆದರೆ ಇಲ್ಲಿಯ ವರೆಗೆ ತಲುಪಲು 14 ಪ್ರಶ್ನೆಗಳನ್ನು ದಾಟಬೇಕಿದೆ. 15ನೇ ಸರಣಿಯ ಕೌನ್ ಬನೇಗಾ ಕರೋಡ್ಪತಿಯಲ್ಲಿ ಪಂಜಾಬ್‌ನ ಖಲ್ರಾ ಎಂಬ ಸಣ್ಣ ಹಳ್ಳಿಯಿಂದ ಬಂದಿರುವ ಜಸ್ಕರನ್ ಸಿಂಗ್ ಕೋಟಿ ಗೆದ್ದಿದ್ದಾರೆ. ಈ ಆವೃತ್ತಿಯ ಮೊದಲ ಕೋಟಿ ಬಹುಮಾನ ಇದಾಗಿದೆ.     …

Read More »

ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಪ್ರತಿಕ್ರಿಯೆ

ಹುಬ್ಬಳ್ಳಿ: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ‘ಮೈತ್ರಿ ಬಗ್ಗೆ ನನಗೇನು ಗೊತ್ತಿಲ್ಲ. ಈ ವಿಷಯದಲ್ಲಿ ಅಧಿಕೃತ ಮಾಹಿತಿ ಬರುವವರೆಗೆ ನಾನು ಏನು ಹೇಳುವುದಿಲ್ಲ’ ಎಂದರು. ಶುಕ್ರವಾರ (ನಿನ್ನೆ) ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಡಿಎಂಕೆ ನಾಯಕ ಎ ರಾಜಾ ಮತ್ತು ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ಖಂಡಿಸುವ ಪ್ರಯತ್ನ ಮಾಡಿಲ್ಲ. ಘಮಂಡಿಯಾ ಘಟಬಂಧನ ಪ್ರಚಾರ ಬಹಳಷ್ಟು ನಡೆಯುತ್ತಿದೆ. ಇದು ಅರ್ಥವಿಲ್ಲದ ಘಟಬಂಧನ …

Read More »

ಸಂಚಾರ ನಿಯಮ ಉಲ್ಲಂಘನೆ: ಶೇ.50 ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದೇ ಕೊನೆ ದಿನ

ಬೆಂಗಳೂರು: ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು(ಶನಿವಾರ) ಕೊನೆ ದಿನವಾಗಿದ್ದು, ಫೆಬ್ರುವರಿ 11ರ ಮುನ್ನ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸವಾರರಿಗೆ ಈ ಆದೇಶ ಅನ್ವಯವಾಗಲಿದೆ.   ಸವಾರರು ಸದ್ಬಳಕೆ‌ ಮಾಡಿಕೊಳ್ಳುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ರಾಜ್ಯ ಕಾನೂನು ಸೇವೆ ಪ್ರಾಧಿಕಾರ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಶೇ.50 ರಷ್ಟು ದಂಡ ಪಾವತಿಸುವ ಬಗ್ಗೆ ಆದೇಶ ಹೊರಡಿಸಿತ್ತು. ಮೊದಲ …

Read More »

ಮೃದಂಗ ನುಡಿಸಿ ವಿಶ್ವ ಪ್ರತಿನಿಧಿಗಳನ್ನು ಸ್ವಾಗತಿಸಲಿರುವ 12 ವರ್ಷದ ಸಂಗೀತ ಕಲಾವಿದ ದಕ್ಷ್

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಶನಿವಾರ ನಡೆಯಲಿರುವ ಔತಣಕೂಟದಲ್ಲಿ 12 ವರ್ಷದ ಬಾಲಕ ದಕ್ಷಿ ಮೃದಂಗ ಬಾರಿಸುವ ಮೂಲಕ ಅತಿಥಿಗಳನ್ನು ಸ್ವಾಗತಿಸಲಿದ್ದಾರೆ. ಮೂಲಗಳ ಪ್ರಕಾರ, ವಿಶ್ವ ಪ್ರತಿನಿಧಿಗಳನ್ನು ಸ್ವಾಗತಿಸಲು ಆಯೋಜಿಸಲಾದ ಸಂಗೀತ ಕಛೇರಿಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಕನಿಷ್ಠ 78 ಸಂಗೀತಗಾರರು ಭಾಗವಹಿಸಲಿದ್ದಾರೆ. ದೆಹಲಿಯ ವಸುಂಧರಾ ಎನ್‌ಕ್ಲೇವ್‌ನ ಸೋಮರ್‌ವಿಲ್ಲೆ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ದಕ್ಷ್ ಕೂಡ ಸಂಗೀತ ಕಚೇರಿಯಲ್ಲಿ ಪ್ರದರ್ಶನ ನೀಡಲಿದ್ದಾರೆ. ಜಿ20 ಶೃಂಗಸಭೆಯ ಭಾಗವಾಗಿರುವುದು ನನಗೆ ಹೆಮ್ಮೆಯ ವಿಷಯ …

Read More »

ಬಗಲಗುಂಟೆ ವ್ಯಾಪ್ತಿಯಲ್ಲಿ ತಾಯಿ – ಮಗನ ಹತ್ಯೆ ಪ್ರಕರಣ: ಪ್ರಿಯಕರನ ಬಂಧನ

ಬೆಂಗಳೂರು : ಬಗಲಗುಂಟೆ ಠಾಣಾ ವ್ಯಾಪ್ತಿಯ ರವೀಂದ್ರನಾಥ ಗುಡ್ಡೆಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿ ಶೇಖರ್ ಎಂಬಾತನನ್ನು ಬಂಧಿಸಲಾಗಿದೆ. ನವನೀತಾ (35) ಹಾಗೂ ಸಾಯಿ ಸೃಜನ್ (8) ನನ್ನು ಹತ್ಯೆ ಮಾಡಿದ್ದ ಆಕೆಯ ಪ್ರಿಯಕರ ಶೇಖರ್​ನನ್ನು ಬಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ನವನೀತಾ ತನ್ನ ಪತಿಯನ್ನು ತೊರೆದು ಮಗನೊಂದಿಗೆ 2 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ, ನವನೀತಾಳಿಗೆ ಆರೋಪಿ ಶೇಖರ್ ಪರಿಚಯವಾಗಿತ್ತು. ಬಳಿಕ ಇಬ್ಬರೂ ಪರಸ್ಪರ ಪ್ರೀತಿಸಲಾರಂಭಿಸಿದ್ದರು. ಆದರೆ, …

Read More »

ಬೆಂಗಳೂರು: ಯೂಟರ್ನ್ ವೇಳೆ ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿ

ಬೆಂಗಳೂರು : ಯೂಟರ್ನ್ ಪಡೆಯುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿಯಾದ ಘಟನೆ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಇಂದು ನಡೆದಿದೆ.   ಬೆಳಗ್ಗೆ ಕಾಮಾಕ್ಯ ಕಡೆಯಿಂದ ಪದ್ಮನಾಭ ನಗರದ ಖಾಸಗಿ ಶಾಲೆಗೆ ತೆರಳುತ್ತಿದ್ದ ವ್ಯಾನ್ ಚಾಲಕ ರಸ್ತೆ ಸಿಗ್ನಲ್ ಫ್ರೀ ಇದ್ದುದರಿಂದ ದಿಢೀರ್ ಯೂಟರ್ನ್ ಪಡೆದಿದ್ದಾರೆ. ಈ ವೇಳೆ ವ್ಯಾನ್ ಚಕ್ರ ರಸ್ತೆ ವಿಭಜಕದ ಮೇಲೆ ಹತ್ತಿ, ಪಲ್ಟಿಯಾಗಿದೆ. ವ್ಯಾನ್​ನಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿದ್ದರು. …

Read More »