ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಸೇರಿ ಅಕ್ರಮ ಜಾಹೀರಾತುಗಳ ಹಾವಳಿ ತಪ್ಪಿಸಲು ಪ್ರತಿ ಅಕ್ರಮ ಜಾಹೀರಾತು ಅಳವಡಿಕೆಗೆ 50 ಸಾವಿರ ರೂ ದಂಡ ವಿಧಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಹೈಕೋರ್ಟ್ಗೆ ತಿಳಿಸಿದೆ. ಅಲ್ಲದೆ, ಈ ಸಂಬಂಧ 50 ಸಾವಿರ ರೂ.ಗಳವರೆಗೂ ದಂಡ ವಿಧಿಸಲಾಗುತ್ತಿದೆ. ಅಕ್ರಮ ಜಾಹೀರಾತು ಅಳವಡಿಸಿದ್ದ ವ್ಯಕ್ತಿಗಳ ವಿರುದ್ಧ ಒಟ್ಟು 264 ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ಬಿಬಿಎಂಪಿ …
Read More »9 ಅಡಿ ಉದ್ದದ ಅತಿ ದೊಡ್ಡ ಬಿಳಿ ಹೆಬ್ಬಾವು ಕುಮಟಾದಲ್ಲಿ ಪತ್ತೆ!
ಕಾರವಾರ (ಉತ್ತರ ಕನ್ನಡ) : ಸಾಮಾನ್ಯವಾಗಿ ಕಂದು ಬಣ್ಣದ ಹೆಬ್ಬಾವುಗಳು ಎಲ್ಲೆಂದರಲ್ಲಿ ಕಾಣಸಿಗುತ್ತವೆ. ಆದರೆ ಕುಮಟಾದಲ್ಲಿ 2ನೇ ಬಾರಿಗೆ ಬಿಳಿ ಹೆಬ್ಬಾವು ಪ್ರತ್ಯಕ್ಷವಾಗಿದೆ. ಭಾರತದಲ್ಲಿ ಈವರೆಗೆ ಸಿಕ್ಕ ಬಿಳಿ ಹೆಬ್ಬಾವಿನ ಪೈಕಿ ಇದು ಅತಿ ದೊಡ್ಡದೆಂದು ಉರಗ ತಜ್ಞರು ಹೇಳುತ್ತಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ಗ್ರಾಮದ ಗಾಂಧಿ ನಗರದ ದೇವಿ ನಾರಾಯಣ ಮುಕ್ರಿ ಎಂಬವರ ಮನೆಯ ಅಂಗಳದಲ್ಲಿ ಮಂಗಳವಾರ ಈ ಬಿಳಿ ಹೆಬ್ಬಾವು ಕಾಣಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಶುಭ್ರ …
Read More »ಅದ್ಧೂರಿಯಾಗಿ ಗೃಹಲಕ್ಷ್ಮಿ ಯೋಜನೆ ಉದ್ಘಾಟಿಸಿ ‘ಕೈ’ ಪಕ್ಷಕ್ಕೆ ಮತ್ತಷ್ಟು ಹತ್ತಿರವಾದ ಎಸ್.ಟಿ.ಸೋಮಶೇಖರ್
ಬೆಂಗಳೂರು : ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರಿಂದು ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆ ಗೃಹಲಕ್ಷ್ಮಿ ಜಾರಿಗೆ ಅದ್ಧೂರಿ ಕಾರ್ಯಕ್ರಮ ಮಾಡಿದರು. “ಗೃಹಲಕ್ಷ್ಮಿ ಯೋಜನೆ ಜಾರಿಗೆ ನನ್ನದೂ ಕೂಡಾ ಒಂದು ಅಳಿಲು ಸೇವೆ. ನನ್ನ ಕ್ಷೇತ್ರದಲ್ಲಿ ಯೋಜನೆ ಬಗ್ಗೆ ಮಾಹಿತಿ ನೀಡಲು ಏನೆಲ್ಲ ಕ್ರಮ ವಹಿಸಬಹುದೋ ಅದನ್ನು ಮಾಡುತ್ತಿದ್ದೇನೆ ಅಷ್ಟೇ” ಎಂದು ಸಮರ್ಥನೆ ನೀಡಿದರು. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮೋಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ …
Read More »ಗುದ್ದಲಿಯಿಂದ ಹೊಡೆದು ಅಣ್ಣ, ಅತ್ತಿಗೆಯನ್ನೇ ಕೊಂದು ಪೊಲೀಸ್ ಠಾಣೆಗೆ ಬಂದ ತಮ್ಮ
ಮೈಸೂರು : ಗೋಮಾಳದ ಜಾಗದಲ್ಲಿ ತನಗೂ ಪಾಲು ಬೇಕು ಎಂದು ಜಗಳ ತೆಗೆದು, ಸಹೋದರನೊಬ್ಬ ಜಮೀನಿನಲ್ಲೇ ಅಣ್ಣ, ಅತ್ತಿಗೆಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಟಿ ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿ. ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದ ಸಮೀಪದ ಜೀನುಗುಡ್ಡ ಬಳಿ ಸುಮಾರು 170 ಎಕರೆ ಗೋಮಾಳವಿದೆ. …
Read More »ಶ್ರೀರಾಘವೇಂದ್ರಸ್ವಾಮಿಗಳ 352ನೇ ಆರಾಧನ ಮಹೋತ್ಸವಕ್ಕೆ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು.
ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿಗಳ 352ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂಗಳವಾರ ಚಾಲನೆ ನೀಡಿದರು. ಶ್ರೀಮಠದ ಮುಂಭಾಗದಲ್ಲಿ ಗೋ ಪೂಜೆ, ಧಾನ್ಯ ಪೂಜೆ, ಆಶ್ವ, ಒಂಟೆ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಏಳು ದಿನಗಳ ಸಪ್ತ ಮಹೋತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬೆಳಗ್ಗೆ ರಾಯರ ಮೂಲ ಬೃಂದಾವನಕ್ಕೆ ಅಭಿಷೇಕ ಹಾಗೂ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಂದ ಮೂಲ ರಾಮದೇವರ ಪೂಜೆ ನೆರವೇರಿಸಲಾಯಿತು. …
Read More »ಮೈಸೂರು ಮಣಿಸಿ ಮಹಾರಾಜ ಟ್ರೋಫಿ ಚಾಂಪಿಯನ್ ಪಟ್ಟ ಅಲಂಕರಿಸಿದ ಹುಬ್ಬಳ್ಳಿ
ಬೆಂಗಳೂರು : ರೋಚಕ ಫೈನಲ್ ಕಾದಾಟದಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು 8 ರನ್ಗಳಿಂದ ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೈಸೂರು ಬೌಲರ್ಗಳ ವಿರುದ್ಧ ಬ್ಯಾಟಿಂಗ್ನಲ್ಲಿ ಮೇಲುಗೈ ಸಾಧಿಸಿದ ಮೊಹಮ್ಮದ್ ತಾಹಾ, ಮನೀಶ್ ಪಾಂಡೆ ಹಾಗೂ ಮನ್ವಂತ್ ಕುಮಾರ್ ಉತ್ತಮ ಬೌಲಿಂಗ್ ನೆರವಿನಿಂದ ಹುಬ್ಬಳ್ಳಿ ಗೆದ್ದು ಬೀಗಿತು. ಮಹಾರಾಜ ಟ್ರೋಫಿ ಫೈನಲ್ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಹುಬ್ಬಳ್ಳಿ ಟೈಗರ್ಸ್ ಮೊದಲು ಬ್ಯಾಟ್ ಮಾಡಿತು. ಎರಡನೇ …
Read More »ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ
ಮೈಸೂರು: ಬುಧವಾರ (ಆ.30) ನಗರದಲ್ಲಿ ನಡೆಯಲಿರುವ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ. ಹಲವಾರು ರೀತಿಯ ವೈಶಿಷ್ಟ್ಯತೆಗಳಿಂದ ಕೂಡಿರುವ ಈ ಬೃಹತ್ ವೇದಿಕೆಯ ಸಿದ್ಧತೆಯ ಕಾರ್ಯ ಮಹಾರಾಜ ಕಾಲೇಜು ಮೈದಾನದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೇಲ್ವಿಚಾರಣೆಯಲ್ಲಿ ನಡೆದಿದೆ. ಡಿಸಿಎಂ ನಿನ್ನೆ ಸಂಜೆ ಮೈದಾನದಲ್ಲಿ ಸಿದ್ಧವಾಗುತ್ತಿರುವ ವೇದಿಕೆ ನಿರ್ಮಾಣ ಕಾರ್ಯವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದರು. ವೇದಿಕೆಯ ವಿಶೇಷತೆಗಳೇನು: ಗೃಹ ಲಕ್ಷ್ಮಿ ಯೋಜನೆ ಜಾರಿಗೆ …
Read More »ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಕೂಡಿ ಬರದ ಮುಹೂರ್ತ: ಬೇಸತ್ತು ಹಸೆಮಣೆ ಏರಿದ 7 ಜೋಡಿ
ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಇನ್ನೂ ಮುಹೂರ್ತ ಕೂಡಿ ಬಾರದ ಕಾರಣ ಬೇಸತ್ತ 7 ಜೋಡಿಗಳು ಸ್ವಂತ ಹಣದಲ್ಲಿ ವಿವಾಹ ಮಾಡಿಕೊಂಡಿದ್ದಾರೆ. ಸಾಲೂರು ಮಠದಲ್ಲಿ ಹಸೆಮಣೆ ಏರಿದ ಜೋಡಿಗಳು ಹೌದು. ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಾಮೂಹಿಕ ವಿವಾಹ ಎರಡು ಬಾರಿ ಮುಂದೂಡಿಕೆಯಾಗಿದೆ. ಹೀಗಾಗಿ ಕ್ಷೇತ್ರದಲ್ಲಿರುವ ಸಾಲೂರು ಮಠದಲ್ಲಿ 7 ಜೋಡಿಗಳು ಹಸೆಮಣೆ ಏರಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ. 23 ರಂದು …
Read More »ದೊಡ್ಡ ಮಟ್ಟದಲ್ಲಿ ಅನಾವರಣಗೊಳ್ಳಲಿದೆ ಬಹುನಿರೀಕ್ಷಿತ ‘ಜವಾನ್’ ಟ್ರೇಲರ್
ಬಹುನಿರೀಕ್ಷಿತ ‘ಜವಾನ್’ ಚಿತ್ರದ ಟ್ರೇಲರ್ಗೆ ಮುಹೂರ್ತ ನಿಗದಿಯಾಗಿದ್ದು, ದೊಡ್ಡ ಮಟ್ಟದಲ್ಲೇ ರಿಲೀಸ್ ಆಗಲಿದೆ. ಎಲ್ಲಿ? ಯಾವಾಗ? ತಿಳಿಯಲು ಮುಂದೆ ಓದಿ.. ‘ಜವಾನ್’.. ಭಾರತೀಯ ಚಿತ್ರರಂಗ ಎದುರು ನೋಡುತ್ತಿರುವ ಬಹುನಿರೀಕ್ಷಿತ ಚಿತ್ರ. ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ನಟನೆಯನ್ನು ಕಣ್ತುಂಬಿಕೊಳ್ಳಲು ಸಿನಿ ಪ್ರೇಮಿಗಳು ಕಾತರರಾಗಿದ್ದಾರೆ. ‘ಪಠಾಣ್’ ಬಳಿಕ ಈ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದ್ದು, ‘ಜವಾನ್’ನಲ್ಲಿ ನಟ ವಿಭಿನ್ನ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಪ್ರಿವ್ಯೂ ಕುತೂಹಲ ಹೆಚ್ಚಿಸಿದ್ದು, ಟ್ರೇಲರ್ಗಾಗಿ ಪ್ರೇಕ್ಷಕರು …
Read More »ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ಸಿಎಂ, ಡಿಸಿಎಂ
ಮೈಸೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಮತದಾನದ ಹಿಂದಿನ ದಿನ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ಹೊತ್ತಿದ್ದರು. ಆ ಹರಕೆಯನ್ನು ಇಂದು ಇಬ್ಬರು ಚಾಮುಂಡೇಶ್ವರಿ ತಾಯಿಯ ದೇವಾಲಯದ ಮುಂಭಾಗದಲ್ಲಿ ಈಡುಗಾಯಿ ಒಡೆಯುವ ಮೂಲಕ ತೀರಿಸಿದರು. ಇಂದು ಚಾಮುಂಡಿ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮಿಸಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಾಲಯದ …
Read More »