ನವದೆಹಲಿ, ಫೆ. 3 (ಪಿಟಿಐ) ಭಾರತೀಯ ಸರಕುಗಳ ಮೇಲಿನ ಅಮೆರಿಕದ ಸುಂಕ ಕಡಿತವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಾಗತಿಸಿದ್ದಾರೆ, ಈ ಅಭಿವೃದ್ಧಿಯನ್ನು ಭಾರತದಲ್ಲಿ ತಯಾರಿಸಿ ಉಪಕ್ರಮಕ್ಕೆ ಪ್ರಮುಖ ಉತ್ತೇಜನ ಎಂದು ಬಣ್ಣಿಸಿದ್ದಾರೆ. ಭಾರತೀಯ ಉತ್ಪನ್ನಗಳು ಈಗ ಶೇ. 18 ರಷ್ಟು ಕಡಿಮೆ ಪರಸ್ಪರ ಸುಂಕವನ್ನು ಎದುರಿಸಲಿವೆ ಎಂದು ಅವರು ಎಕ್್ಸ ಮಾಡಿದ್ದಾರೆ.ಭಾರತದಲ್ಲಿ ತಯಾರಿಸಿ ಉತ್ಪನ್ನಗಳಿಗೆ ಒಳ್ಳೆಯ ಸುದ್ದಿ. ಅವರು ಈಗ ಶೇ. 18 ರಷ್ಟು ಕಡಿಮೆ ಸುಂಕವನ್ನು ಎದುರಿಸಬೇಕಾಗುತ್ತದೆ. …
Read More »ಜನರು ಸುಂಕಗಳನ್ನು ಟೀಕಿಸಿದರು, ಆದರೆ ನಮ್ಮ ತಾಳ್ಮೆಗೆ ಫಲ ಸಿಕ್ಕಿತು: ಮೋದಿ
ನವದೆಹಲಿ: ಜನರು ಸುಂಕಗಳನ್ನು ಟೀಕಿಸಿದಾಗ ನಾವು ತಾಳ್ಮೆಯಿಂದ ಇದ್ದೆವು. ತಾಳ್ಮೆಯಿಂದ ಇದ್ದ ಪರಿಣಾಮ ಈಗ ಫಲ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ( ಹೇಳಿದ್ದಾರೆ. ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದ ಅಂತಿಮಗೊಂಡ ಹಿನ್ನೆಲೆಯಲ್ಲಿ ಇಂದು ಸದನ ಆರಂಭಗೊಳ್ಳುವ ಮೊದಲು ಎನ್ಡಿಎ ಸಂಸದರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಈ ವೇಳೆ, ಸುಂಕ ಮಾತುಕತೆಗಳ ಕುರಿತಾದ ಹಿಂದಿನ ಟೀಕೆಗಳು ಈಗ ಸಕಾರಾತ್ಮಕ ಫಲಿತಾಂಶಕ್ಕೆ ದಾರಿ ಮಾಡಿಕೊಟ್ಟಿವೆ. ವ್ಯಾಪಾರ ಒಪ್ಪಂದವು …
Read More »ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್ಗೆ ಸುಪ್ರೀಂ ವಾರ್ನಿಂಗ್
ನವದೆಹಲಿ: ʻದೇಶದ ನಿಯಮಗಳನ್ನ ಪಾಲಿಸಲು ಸಾಧ್ಯವಾಗದಿದ್ರೆ, ದೇಶ ಬಿಟ್ಟು ತೊಲಗಿ ಎಂದು ವಾಟ್ಸಪ್ ಒಡೆತನದ ಮೆಟಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಗೌಪ್ಯತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆ ಕೋರ್ಟ್ ಈ ಎಚ್ಚರಿಕೆ ನೀಡಿದೆ. ಮೆಟಾ ಒಡೆತದ ವಾಟ್ಸಪ್ ಇಂದು ವಿಶ್ವದ ಜನಪ್ರಿಯ ಮೆಸೆಂಜರ್ ಅಪ್ಲಿಕೇಶನ್ ಆಗಿದೆ. ಇಂಟರ್ನೆಟ್ ಇದ್ದರೆ ವಿಶ್ವದ ಯಾವುದೇ ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕ ಸಾಧಿಸಬಹುದಾಗಿದೆ. ಫೋಟೋ, ವಿಡಿಯೋ ಧ್ವನಿ ಸಂದೇಶ, ಲೈವ್ ಲೊಕೇಷನ್ಗಳನ್ನ …
Read More »ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ
ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ನಾಥ್ ಹಾಗೂ ಎನ್.ವಿ.ಅಂಜಾರಿಯಾ ಪೀಠವು ವಿವಾದ ಇತ್ಯರ್ಥಪಡಿಸಲು ನ್ಯಾಯಮಂಡಳಿ ರಚಿಸುವುದು ಸೂಕ್ತ. ಆದೇಶ ಪ್ರಕಟವಾದ ಒಂದು ತಿಂಗಳೊಳಗೆ ಜಲ ವಿವಾದ ನ್ಯಾಯಮಂಡಳಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ. ಈ …
Read More »ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್ಜೀ ಯೋಜನೆಗೆ 95,692 ಕೋಟಿ ಮೀಸಲು
ನವದೆಹಲಿ: ಯಂಗ್ ಇಂಡಿಯಾ, ಉದ್ಯೋಗ ಸೃಷ್ಟಿ, ಆರೋಗ್ಯ, ದೇಶದ ರಕ್ಷಣೆಯೊಂದಿಗೆ ಆತ್ಮನಿರ್ಭರ ಭಾರತ, ವಿಕಸಿತ ಭಾರತ ಗುರಿಯಾಗಿಸಿ ಕೇಂದ್ರ ಸರ್ಕಾರ 2026-27 ರ ಬಜೆಟ್ ಪ್ರಸ್ತುತ ಪಡಿಸಿದೆ. ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಜೆಟ್ ಮಂಡಿಸಿದ್ದಾರೆ. ದೇಶದ ಇತಿಹಾಸದಲ್ಲಿ 2ನೇ ಬಾರಿಗೆ ಭಾನುವಾರದಂದೇ ಮಂಡನೆಯಾಗಿದ್ದು, ಮೂರು ಕರ್ತವ್ಯಗಳನ್ನು ಉಲ್ಲೇಖಿಸಲಾಗಿದೆ. ಆರ್ಥಿಕ ಬೆಳವಣಿಗೆಗಳ ವೇಗಗೊಳಿಸುವುದರ ಜೊತೆ ಸ್ಥಿರತೆ, ಜನತೆ ಆಕಾಂಕ್ಷೆಗಳನ್ನ ಈಡೇರಿಸುವುದು ಹಾಗೂ ಸಬ್ ಕಾ ಸಾಥ್, ಸಬ್ ಕಾ …
Read More »ಇಂದು ನಿರ್ಮಲಾ ಸೀತಾರಾಮನ್ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಭಾಗವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದಾರೆ. ಲೋಕಸಭಾ ವ್ಯವಹಾರಗಳ ಪಟ್ಟಿಯ ಪ್ರಕಾರ, ಸದನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಆರಂಭವಾಗಲಿದೆ. ಸೀತಾರಾಮನ್ ಅವರು 2026-27ನೇ ಸಾಲಿನ ಭಾರತ ಸರ್ಕಾರದ ಅಂದಾಜು ಆದಾಯ ಮತ್ತು ವೆಚ್ಚದ ಬಜೆಟ್ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಅನ್ನು ಮಂಡಿಸಲು …
Read More »NCP ಬಣಗಳ ವಿಲೀನ ನಿರ್ಧಾರವನ್ನ ಅಜಿತ್ ಪವಾರ್ ಫೆ.12ಕ್ಕೆ ಪ್ರಕಟಿಸಬೇಕಿತ್ತು: ಶರದ್ ಪವಾರ್
ಮುಂಬೈ: ಕಳೆದ ನಾಲ್ಕು ತಿಂಗಳಿಂದ ಎನ್ಸಿಪಿ ಎರಡು ಬಣಗಳ ವಿಲೀನ ಬಗ್ಗೆ ಮಾತುಕತೆ ನಡೆದಿತ್ತು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ. ಜಯಂತ್ ಪಾಟೀಲ್ ಮತ್ತು ಅಜಿತ್ ಪವಾರ್ ನಡುವೆ ಎರಡು ಎನ್ಸಿಪಿ ಬಣಗಳ ವಿಲೀನದ ಕುರಿತು ಚರ್ಚೆಗಳು ನಡೆದಿದ್ದವು. ಸಕಾರಾತ್ಮಕ ದಿಕ್ಕಿನಲ್ಲಿ ಚರ್ಚೆಗಳು ಸಾಗುತ್ತಿವೆ. ಜನವರಿ 12 ರಂದು ಅಜಿತ್ ಪವಾರ್ ಬಣಗಳ ವಿಲೀನ ನಿರ್ಧಾರವನ್ನು ಪ್ರಕಟಿಸಬೇಕಿತ್ತು. ಅಷ್ಟರಲ್ಲಿ ಈ ದುರ್ಘಟನೆ ಆಗಿದೆ ಎಂದು ಹೇಳಿದ್ದಾರೆ. ಎರಡೂ …
Read More »ಬಜೆಟ್ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ. ಕಳೆದ ಬಜೆಟ್ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ …
Read More »65 ಎಕರೆ ಅರಣ್ಯ ಭೂಮಿಯಲ್ಲಿ ಬೆಳೆದಿದ್ದ 1.80 ಲಕ್ಷ ಗಾಂಜಾ ಗಿಡಗಳನ್ನು ನಾಶಪಡಿಸಿದ ಭದ್ರತಾ ಪಡೆ
ಅಗರ್ತಲ: ತ್ರಿಪುರದ ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು ನಾಶಪಡಿಸಿವೆ. ಕಮಲಾನಗರ, ಕೃಷ್ಣಡೋಲಾ, ದುಲುಂಗಾ ಮತ್ತು ಬಿಜೋಯ್ ನಗರಗಳ ಅರಣ್ಯ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಈ ವೇಳೆ 1.80 ಲಕ್ಷ ಪ್ರೌಢ ವ್ಯವಸ್ಥೆ ಗಾಂಜಾ ಸಸಿಗಳು ಪತ್ತೆಯಾಗಿದ್ದು ಅವುಗಳನ್ನು ನಾಶಪಡಿಸಲಾಗಿದೆ. ನಾಶಪಡಿಸಲಾದ ಗಾಂಜಾದ ಮೌಲ್ಯ 27 ಕೋಟಿ ರೂ. ಮೌಲ್ಯದ್ದು …
Read More »ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು: ಮೋದಿ ಬಣ್ಣನೆ
ನವದೆಹಲಿ: ಭಾರತ-ಯುರೋಪಿಯನ್ ಯೂನಿಯನ್ ನಡುವೆ ಮುಕ್ತ ವಾಣಿಜ್ಯ ಒಪ್ಪಂದ ಜಾರಿಗೆ ಬಂದಿದ್ದು, ಇದು ‘ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು’ ಎಂದು ಪ್ರಧಾನಿ ನರೇಂದ್ರ ಮೋದಿ ವರ್ಣಿಸಿದರು. ಭಾರತೀಯ ಉದ್ಯಮಗಳು ಈ ಅವಕಾಶವನ್ನು ಬಳಸಿಕೊಂಡು ಗುಣಮಟ್ಟದ ಉತ್ಪನ್ನಗಳನ್ನು ಯುರೋಪಿಯನ್ ಒಕ್ಕೂಟದ 27 ದೇಶಗಳಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು. ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ದಿನದಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೊಸ ಮಾರುಕಟ್ಟೆ ತೆರೆದಿದ್ದು, ಭಾರತೀಯ ಉತ್ಪನ್ನಗಳ ಗುಣಮಟ್ಟ ಮತ್ತು ‘ಬ್ರ್ಯಾಂಡ್ ಇಂಡಿಯಾ’ವನ್ನು …
Read More »
Laxmi News 24×7