Breaking News

ರಾಷ್ಟ್ರೀಯ

ಇಂಡೋನೇಷ್ಯಾದ ಬಾಲಿ, ಜಾವಾ ದ್ವೀಪಗಳಲ್ಲಿ ಪ್ರಬಲ ಭೂಕಂಪ: ಯಾವುದೇ ಸಾವು- ನೋವುಗಳು ವರದಿಯಾಗಿಲ್ಲ

ಡೆನ್‌ಪಾಸರ್ (ಇಂಡೋನೇಷ್ಯಾ): ಇಂಡೋನೇಷ್ಯಾದ ರೆಸಾರ್ಟ್ ದ್ವೀಪವಾದ ಬಾಲಿ ಮತ್ತು ದೇಶದ ಇತರ ಭಾಗಗಳಲ್ಲಿ ಮಂಗಳವಾರ ಪ್ರಬಲ ಭೂಕಂಪ ಸಂಭವಿಸಿದೆ. ಭೂಮಿ ಕಂಪಿಸಿದ್ದರಿಂದ ಜನರು ಭಯಭೀತರಾಗಿದ್ದಾರೆ. ಆದರೆ, ಸದ್ಯ ಯಾವುದೇ ಸಾವುನೋವಿನ ಕುರಿತು ವರದಿಯಾಗಿಲ್ಲ. 513.5 ಕಿಲೋಮೀಟರ್ ಆಳದಲ್ಲಿ 7.1 ತೀವ್ರತೆಯ ಭೂಕಂಪ ಸಂಭಸಿದೆ. ಬಾಲಿಯ ಪಕ್ಕದಲ್ಲಿರುವ ಲೊಂಬಾಕ್ ದ್ವೀಪದ ಕರಾವಳಿಯ ಸಮೀಪವಿರುವ ಸಣ್ಣ ದ್ವೀಪವಾದ ಗಿಲಿ ಏರ್‌ನಿಂದ ಈಶಾನ್ಯಕ್ಕೆ 181 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಪಾಯಿಂಟ್​ ಇದೆ ಎಂದು ಅಮೆರಿಕದ ಜಿಯೋಲಾಜಿಕಲ್ …

Read More »

ಸಚಿವ ಜಮೀರ್ ಅಹಮದ್ ಖಾನ್ ಮದರಸಾಗಳಲ್ಲಿ ಮುಖ್ಯವಾಗಿ ಕನ್ನಡ ಕಲಿಸಬೇಕೆಂದು ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ 1265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದರಸಾಗಳಿದ್ದು, ಆ ಪೈಕಿ 100 …

Read More »

ರಾಜ್ಯದಲ್ಲಿ ಬರದ ಛಾಯೆ ಕರುನಾಡಿಗೆ ಬರದ ತೂಗುಗತ್ತಿ: ವಿದ್ಯುತ್ ಬಳಕೆ ಗಣನೀಯ ಏರಿಕೆ, ಉತ್ಪಾದನೆ ಕುಸಿತ

ಬೆಂಗಳೂರು: ರಾಜ್ಯದಲ್ಲಿ ಬರದ ಛಾಯೆ ಗಾಢವಾಗಿದ್ದು, ಒಂದೆಡೆ ಜಲಾಶಯಗಳ ನೀರಿನ ಮಟ್ಟ ಇಳಿಕೆಯಾಗಿದೆ. ವಿದ್ಯುತ್ ಉತ್ಪಾದನೆ ಕುಸಿತ ಕಂಡಿದೆ. ಇನ್ನೊಂದೆಡೆ ರಾಜ್ಯದ ವಿದ್ಯುತ್ ಬಳಕೆ ತಾರಕ್ಕೇರಿರುವುದು ಇಂಧನ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಬರದ ಕರಿ ನೆರಳು ದಟ್ಟವಾಗಿ ವ್ಯಾಪಿಸಿದೆ. ಮುಂಗಾರು ಮಳೆ ಕೈ ಕೊಟ್ಟಿದೆ. ವಾಡಿಕೆಯಂತೆ ಜುಲೈ ಹಾಗೂ ಆಗಸ್ಟ್​ನಲ್ಲಿ ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತೆ. ಆದರೆ, ಈ ಬಾರಿ ವಾಡಿಕೆ ಮಳೆಯೂ ಕೈಕೊಟ್ಟಿದೆ. ಹೀಗಾಗಿ ರಾಜ್ಯದ ಸುಮಾರು 130ಕ್ಕೂ …

Read More »

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಬಿಡುಗಡೆಯಾದ 18ನೇ ದಿನಕ್ಕೆ 600 ಕೋಟಿ ರೂಪಾಯಿ ಕ್ಲಬ್​ ಸೇರಿದೆ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಬಿಡುಗಡೆಯಾದ 18ನೇ ದಿನಕ್ಕೆ 600 ಕೋಟಿ ರೂಪಾಯಿ ಕ್ಲಬ್​ ಸೇರಿದೆ. ‘ಜೈಲರ್​’.. ಸೂಪರ್​ ಹಿಟ್​ ಸೌತ್​ ಸಿನಿಮಾ. ಆಗಸ್ಟ್​ 10ರಂದು ಬಿಡುಗಡೆಯಾಗಿ, ಮೂರು ವಾರ ಕಳೆದರೂ ನಾನ್​ ಸ್ಟಾಪ್​ ಇಲ್ಲದೇ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಕಾಲಿವುಡ್​ ಸೂಪರ್​ಸ್ಟಾರ್​ ರಜನಿಕಾಂತ್​ ನಟನೆಯನ್ನು ಕಣ್ತುಂಬಿಕೊಳ್ಳಲು ಜನರು ಥಿಯೇಟರ್​ಗೆ ಮುಗಿಬೀಳುತ್ತಿದ್ದಾರೆ. ಈ ಕಾರಣಕ್ಕಾಗಿ ಚಿತ್ರವು ವಿಶ್ವದಾದ್ಯಂತ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ. ರಿಲೀಸ್​ ಆದ 18ನೇ ದಿನಕ್ಕೆ 600 ಕೋಟಿ ರೂಪಾಯಿ …

Read More »

ರಿಲಯನ್ಸ್​ ಮಂಡಳಿಗೆ ಅಂಬಾನಿ ಪುತ್ರರ ನೇಮಕ.. ಕಂಪನಿಯ ಅಧಿಕಾರ ಹಸ್ತಾಂತರಕ್ಕೆ ಉದ್ಯಮಿ ಮುಖೇಶ್​ ಸಜ್ಜು?

ಮುಂಬೈ: ಜಿಯೋ ಮೂಲಕ ಎಲ್ಲರ ಮನೆಮಾತಾಗಿರುವ ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ತಮ್ಮ ಕಂಪನಿಯ ಅಧಿಕಾರವನ್ನು ತಮ್ಮ ಮಕ್ಕಳ ಕೈಗೆ ನೀಡಲು ಅಂತಿಮ ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷವಷ್ಟೇ ಆಕಾಶ್​ ಅಂಬಾನಿಯನ್ನು ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ನ ಅಧ್ಯಕ್ಷರಾಗಿ ನೇಮಿಸಿದ್ದರು. ಇದೀಗ ಇನ್ನಿಬ್ಬರು ಮಕ್ಕಳಾದ ಇಶಾ ಮತ್ತು ಅನಂತ್​ ಅಂಬಾನಿಯನ್ನೂ ಕಂಪನಿಗೆ ನೇಮಕ ಮಾಡಲಾಗಿದೆ. ಅಂಬಾನಿ ಪುತ್ರರಾದ ಇಶಾ, ಆಕಾಶ್ ಮತ್ತು ಅನಂತ್ ಅಂಬಾನಿ ಅವರನ್ನು ಸೋಮವಾರ ಎನರ್ಜಿ ಟು …

Read More »

ನಮ್ಮ ಪಕ್ಷದ 19 ಮಂದಿ ಶಾಸಕರು ಸಹ ಪಕ್ಷದ ನಿಷ್ಠೆ ಉಳ್ಳವರು ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ

ಬೆಂಗಳೂರು : ಎರಡು ರಾಷ್ಟ್ರೀಯ ಪಕ್ಷಗಳು ಏನೇ ಕಸರತ್ತು ನಡೆಸಲಿ. ನಮ್ಮ ಪಕ್ಷದ 19 ಮಂದಿ ಶಾಸಕರು ಪಕ್ಷದ ನಿಷ್ಠೆ ಉಳ್ಳವರಾಗಿದ್ದು, ಯಾರೂ ಕೂಡ ಜೆಡಿಎಸ್ ಬಿಡುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಅವರು ಆಪರೇಷನ್ ಹಸ್ತ ಎಂಬ ಮಾತಿಗೆ ಪ್ರತಿಕ್ರಿಯಿಸಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಶಾಸಕರು ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಜೆಡಿಎಸ್ …

Read More »

ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ರಾಮನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ರಾಮನಗರ: ಕೆಎಸ್​ಆರ್​ಟಿಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಕೆಮ್ಮಾಳೆ ಗೇಟ್​ಬಳಿ ಇಂದು ನಡೆದಿದೆ. ಮಹದೇಶ್ವರ ಬೆಟ್ಟದಿಂದ ವಾಪಸ್ ಆಗ್ತಿದ್ದ ಕಾರು ಬೆಂಗಳೂರಿನಿಂದ ಮಳವಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದೆ. ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಸಾತನೂರು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಗಾಯಗೊಂಡವರನ್ನು ರಾಮನಗರದ ಜಿಲ್ಲಾಸ್ಪತ್ರೆಗೆ …

Read More »

ನೀರಿನ ಕಾಲುವೆಗೆ ಕೆಮಿಕಲ್ ಮಿಶ್ರಿತ ಆಯಸಿಡ್​ ಕಪ್ಪು ಬಣ್ಣಕ್ಕೆ ತಿರುಗಿದ‌ ಬೆಳೆ

ದಾವಣಗೆರೆ : ಅವರು ಮೂಲತಃ ಆಂಧ್ರದಿಂದ ಆಗಮಿಸಿ ದಾವಣಗೆರೆಯ ಸುತ್ತಮುತ್ತ ಕೃಷಿ ಚಟುವಟಿಕೆ ಮಾಡ್ತಾ ಜೀವನ ಸಾಗಿಸುತ್ತಿದ್ದವರು. ಯಾರೋ ದುರುಳರು ಬಂದು ಆ ರೈತನ ಹೊಲಕ್ಕೆ ನೀರು ಕಟ್ಟುವ ಕಾಲುವೆಯ ನೀರಿಗೆ ಟ್ಯಾಂಕರ್ ಮೂಲಕ ರಾಸಾಯನಿಕ ತ್ಯಾಜ್ಯ (ಕೆಮಿಕಲ್) ಸುರಿದ ಬೆನ್ನಲ್ಲೇ ಅವರ ಬದುಕು ಬರ್ಬಾದ್ ಆಗಿದೆ. ನೀರಿನಲ್ಲಿ ರಾಸಾಯನಿಕ ಹರಿದುಬಂದು ಹೊಲ ಸೇರಿದ್ದರಿಂದ‌ ಇಡೀ ಭತ್ತದ ಪೈರು ಕಪ್ಪು ಬಣ್ಣಕ್ಕೆ ತಿರುಗಿ ಸುಟ್ಟಿರುವ ರೀತಿ ಭಾಸವಾಗುತ್ತಿದೆ. ಸಾಲಸೋಲ ಮಾಡಿ ಬೆಳೆದಿದ್ದ …

Read More »

ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸಲ್ಲ:H.D.K.

ಮಂಡ್ಯ: ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ನಿಖಿಲ್‌ಗೆ ಸಲಹೆ ನೀಡಿದ್ದೇನೆ, ರಾಜಕೀಯ ಸಹವಾಸಕ್ಕೆ ಹೋಗಬೇಡ. ನಿನಗೆ ಭಗವಂತ ಕೊಟ್ಟಿರೋ ಕಲೆ ಇದೆ ಸಿನಿಮಾ ಮಾಡು ಎಂದು ಹೇಳಿರುವುದಾಗಿ ನಿಖಿಲ್ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್​ ತಂದೆಯೂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಿಖಿಲ್​ಗೆ ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು …

Read More »

ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ.. ಮನೆಗಳಿಗೆ ಬೆಂಕಿ, ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರ ಲೂಟಿ

ಇಂಫಾಲ (ಮಣಿಪುರ): ಈಶಾನ್ಯ ರಾಜ್ಯ ಮಣಿಪುರದಲ್ಲಿ ಭಾನುವಾರ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇಂಫಾಲ ಪೂರ್ವ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಹೊಸದಾಗಿ ಐದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಭದ್ರತಾ ಪಡೆಗಳ ಸಿಬ್ಬಂದಿ ನಡುವೆ ಘರ್ಷಣೆ ಕೂಡ ಭುಗಿಲೆದ್ದಿದೆ. ಮೇ 3ರಿಂದ ಮಣಿಪುರ ರಾಜ್ಯಾದ್ಯಂತ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದೆ. ಆಗಸ್ಟ್ 29ರಂದು ರಾಜ್ಯ ವಿಧಾನಸಭೆಯ ಅಧಿವೇಶನ ಕರೆಯಲಾಗಿದೆ. ಇದರ ನಡುವೆ ಇಂಫಾಲ ಪೂರ್ವ ಜಿಲ್ಲೆಯ ನ್ಯೂ ಲಂಬುಲೇನ್‌ ಪ್ರದೇಶದಲ್ಲಿ …

Read More »