Breaking News

ರಾಷ್ಟ್ರೀಯ

ಆತ್ಮರಕ್ಷಣೆ ಉದ್ದೇಶದಿಂದ ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ ನೀಡಲಾಗುತ್ತಿದೆ.

ಕಲಬುರಗಿ: ಹೆಣ್ಣು ಮಕ್ಕಳ ಆತ್ಮರಕ್ಷಣೆ ಹಿತದೃಷ್ಟಿಯಿಂದ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್​ (ಸ್ವ-ಆತ್ಮರಕ್ಷಣೆ) ಮಾಡಿಕೊಳ್ಳುವ ಉದ್ದೇಶದಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತರಬೇತಿಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿನಿಯರ ವಸತಿ ನಿಲಯಗಳು ಶಾಲಾ ಕಾಲೇಜುಗಳಿಂದ ದೂರ ಇವೆ. ಕಾಲೇಜು ಮುಗಿಸಿ ವಾಪಾಸ್​ ಆಗುವ ವೇಳೆ ಅವರಿಗೆ ರೈಲ್ವೆ ಮತ್ತು ಬಸ್ ನಿಲ್ದಾಣದಂತಹ ಸ್ಥಳಗಳಲ್ಲಿ ಮಾನಸಿಕ ಹಾಗೂ ದೈಹಿಕ, ದೌರ್ಜನ್ಯ ನಡೆಸುವಂತಹ ಘಟನೆಗಳು ನಡೆಯುತ್ತಿರುತ್ತವೆ. ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಯ ಕೌಶಲ್ಯವನ್ನು ಒದಗಿಸುವ ನಿಟ್ಟಿನಲ್ಲಿ …

Read More »

Accident: ಟ್ರಕ್- ಕಾರು ನಡುವೆ ಮುಖಾಮುಖಿ ಡಿಕ್ಕಿ.. 7 ಜನರು ಸಾವು, 12 ಮಂದಿಗೆ ಗಾಯ

ತಿನ್ಸುಕಿಯಾ (ಅಸ್ಸೋಂ): ಅಸ್ಸೋಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಅಸ್ಸೋಂನ ತಿನ್‌ಸುಕಿಯಾ ಜಿಲ್ಲೆಯ ಕಾಕ್‌ಪಥರ್‌ನ ಬೋರ್-ಡಿರಾಕ್​ದಲ್ಲಿ ಮಂಗಳವಾರ ರಾತ್ರಿ 10.30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಸ್ಥಳೀಯರಿಂದ ರಕ್ಷಣಾ ಕಾರ್ಯ: ಪೊಲೀಸ್ ಮೂಲಗಳ ಪ್ರಕಾರ, ಟ್ರಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಇದರಿಂದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದು, ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು …

Read More »

ಜಿ20 ಶಂಗಸಭೆ, ‘ಭಾರತ’ ಫೈಟ್​ ನಡುವೆ ರಾಹುಲ್​ ಗಾಂಧಿ ಒಂದು ವಾರ ಯುರೋಪ್​ ಪ್ರವಾಸ; ಅನಿವಾಸಿ ಭಾರತೀಯರೊಂದಿಗೆ ಸಂವಾದ

ನವದೆಹಲಿ: ಭಾರತ ಇದೇ ಮೊದಲ ಬಾರಿಗೆ ಅಧ್ಯಕ್ಷತೆ ವಹಿಸಿರುವ ಮಹತ್ವದ ಜಿ20 ಶೃಂಗಸಭೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರು ಇಂದಿನಿಂದ ಒಂದು ವಾರ ಕಾಲ ಯುರೋಪ್​ ಪ್ರವಾಸ ಕೈಗೊಂಡಿದ್ದಾರೆ. ಜಿ20 ಮುಗಿದ ಬಳಿಕ ಅವರು ಸ್ವದೇಶಕ್ಕೆ ವಾಪಸ್​ ಆಗಲಿದ್ದಾರೆ. ನಿನ್ನೆ ರಾತ್ರಿಯೇ ಅವರು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ನವದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ಎರಡು ದಿನ ಜಿ 20 ಶೃಂಗಸಭೆ ನಡೆಯಲಿದೆ. …

Read More »

ಇಂಡಿಯಾ ಬದಲು ಭಾರತದ ಪ್ರಧಾನಿ ಎಂದು ಉಲ್ಲೇಖ.. ಮೋದಿ ಇಂಡೋನೇಷ್ಯಾ ಭೇಟಿಯ ಅಧಿಕೃತ ಪತ್ರ ಹಂಚಿಕೊಂಡ ಬಿಜೆಪಿ

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾಗೆ ಭೇಟಿ ನೀಡುತ್ತಿದ್ದಾರೆ. ಈ ಅಧಿಕೃತ ಮಾಹಿತಿಯನ್ನು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಮಾಹಿತಿಯಲ್ಲಿ ಮೋದಿ ಅವರನ್ನು “ಭಾರತದ ಪ್ರಧಾನಿ” ಎಂದು ಉಲ್ಲೇಖಿಸಲಾಗಿದೆ. ಇದಲ್ಲದೆ, ಆಗಸ್ಟ್ 22-25 ರಂದು ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ಗೆ ಅವರ ಇತ್ತೀಚಿನ ಭೇಟಿಯ ಸಂದರ್ಭದಲ್ಲಿ ಸಮಾರಂಭದ ಪತ್ರಗಳಲ್ಲಿ ಮೋದಿ ಅವರನ್ನು ‘ಭಾರತದ ಪ್ರಧಾನ ಮಂತ್ರಿ’ ಎಂದು ಉಲ್ಲೇಖಿಸಲಾಗಿತ್ತು. 20ನೇ ಆಸಿಯಾನ್ಚ-ಭಾರತ ಶೃಂಗಸಭೆ ಮತ್ತು …

Read More »

ಟೀಮ್​ ಜರ್ಸಿಯಲ್ಲಿ “ಇಂಡಿಯಾ” ತೆಗೆದು “ಭಾರತ್​” ಮಾಡಿ.. ಪಾರ್ಟ್‌ಟೈಮ್ ಎಂಪಿ ಆಗಿರುವುದಕ್ಕಿಂತ ಫುಲ್​ಟೈಂ ಕ್ರಿಕೆಟಿಗನಾಗಿರುವೆ: ಸೆಹ್ವಾಗ್

ಹೈದರಾಬಾದ್​​​: ಇಂದು ಟ್ವಿಟರ್​ನಲ್ಲಿ ಎರಡು ವಿಷಯ ಟ್ರೆಂಡಿಂಗ್​ ಆಗಿದೆ. ಅದು ‘ಇಂಡಿಯಾ’ ವರ್ಸಸ್ ‘ಭಾರತ್’ ಆಗಿದ್ದರೆ, ಮತ್ತೊಂದೆಡೆ ವಿರೇಂದ್ರ ಸೆಹ್ವಾಗ್​, ಈ ಚರ್ಚೆ ಮುನ್ನಲೆಗೆ ಬರುವ ಮುನ್ನವೇ ಟೀಂ ಭಾರತ ಎಂದು ಹ್ಯಾಷ್​ ಟ್ಯಾಗ್​ ಹಾಕಿದ್ದರು. ಈ ವಿಷಯವೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸದ್ದು ಮಾಡುತ್ತಿದೆ.     ಈ ನಡುವೆ ಭಾರತ ಸಂವಿಧಾನದಲ್ಲಿನ ಇಂಡಿಯಾ ಎಂಬ ಪದಕ್ಕೆ ಕೊಕ್​ ನೀಡಿ ಭಾರತವನ್ನು ಮಾತ್ರ ಉಳಿಸಿಕೊಳ್ಳುವ ನಿರ್ಧರಿಸಿದೆ ಎನ್ನಲಾಗಿದೆ. ಮುಂಬರುವ ವಿಶೇಷ …

Read More »

ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​ ಭಾರತದ ಅತ್ಯಂತ ಯಶಸ್ವಿ ನಟನಾಗಿ ಹೊರಹೊಮ್ಮಿದ್ದಾರೆ.

ಬಣ್ಣದ ಲೋಕವೇ ಹೀಗೆ ಅಲ್ಲವೇ! ನೂರು ಸಿನಿಮಾ ಮಾಡಿದ್ರೂ ಸಿಗದೇ ಇರೋ ಕ್ರೇಜ್​, ಸ್ಟಾರ್​ ಗಿರಿ ಪಟ್ಟ ಕೆಲವೊಬ್ಬರಿಗೆ ಒಂದೇ ಚಿತ್ರದಲ್ಲಿ ದಕ್ಕಿಬಿಡುತ್ತದೆ. ಇನ್ನು ಕೆಲವರಿಗೆ ಹೀಗಲ್ಲ. ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿದ್ದು, ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನಸ್ಸನ್ನು ಪ್ರತಿ ಬಾರಿಯೂ ಗೆಲ್ಲುತ್ತಾ ಸ್ಟಾರ್​ ಹೀರೋಗಳಾಗಿದ್ದಾರೆ. ಡಾ.ರಾಜ್​ಕುಮಾರ್​, ಎನ್​ಟಿಆರ್​, ಅಮಿತಾಭ್​ ಬಚ್ಚನ್​ರಿಂದ ಹಿಡಿದು ರಜನಿಕಾಂತ್​, ಶಾರುಖ್​ ಖಾನ್​, ಯಶ್​, ಪ್ರಭಾಸ್​ ಹೀಗೆ ಅನೇಕರು ತಮ್ಮ ಕಠಿಣ ಶ್ರಮ, ಛಲದಿಂದ ಸ್ಟಾರ್​ …

Read More »

ನೀರಜ್​ ಚೋಪ್ರಾ ಪ್ರತಿಮೆಯಲ್ಲಿದ್ದ ಜಾವೆಲಿನ್​ ಕಳ್ಳತನ.. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತಪಡಿಸಿ ಸಾರ್ವಜನಿಕರು

ಮೀರತ್ (ಉತ್ತರ ಪ್ರದೇಶ): ಸ್ಟಾರ್ ಜಾವೆಲಿನ್ ಥ್ರೋವರ್ ಮತ್ತು ಒಲಿಂಪಿಕ್ ಚಾಂಪಿಯನ್‌, ಇತ್ತಿಚೆಗೆ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ ಚಿನ್ನ ಗೆದ್ದ ನೀರಜ್​ ಚೋಪ್ರಾ ಅವರ ಪ್ರತಿಮೆಯನ್ನು ಇಲ್ಲಿನ ಹಾಪುರ್​ನ ಸರ್ಕಲ್ ಸ್ಥಾಪಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಈ ಪ್ರತಿಮೆಯ ಕೈಯಲ್ಲಿದ್ದ ಜಾವೆಲಿನ್ ಬದಲಾಗಿತ್ತು. ಮೂರ್ತಿ ಸ್ಥಾಪಿಸಿದಾಗ ಫೈಬರ್​ನಿಂದ ಮಾಡಿದ ಜಾವೆಲಿನ್ ಇಡಲಾಗಿತ್ತು. ಈಗ ಆ ಜಾಗದಲ್ಲಿ ಕಿಡಿಗೇಡಿಗಳು ಮರದ ಕೋಲನ್ನು ಇಟ್ಟಿದ್ದಾರೆ. ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ ಈ …

Read More »

ನಿರೀಕ್ಷೆಯಂತೆ ಸೇಂಟ್ ಪಾಲ್ಸ್ ಪ್ರೌಢಶಾಲೆಯು 55ನೇ ಫಾದರ್ ಎಡ್ಡಿ ಸ್ಮಾರಕ ಫುಟ್ಬಾಲ್ ಪಂದ್ಯಾವಳಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು..

ಬಿಗ್ ವೆಂಚರ್ ಬ್ರಾಡ್ಬ್ಯಾಂಡ್ ಪ್ರಾಯೋಜಕತ್ವದಲ್ಲಿ ಸೇಂಟ್ ಪಾಲ್ಸ್ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವಾದ ಬೆಳಗಾವಿ ವರ್ಲ್ಡ್ವೈಡ್ ಪಾಲಿಟ್ಸ್ ಆಯೋಜಿಸಿದ್ದ 55ನೇ ಫಾದರ್ ಎಡ್ಡಿ ಸ್ಮೃತಿ ನಾಕ್ಔಟ್ ಫುಟ್ಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯ ಇಂದು ಸೇಂಟ್ ಪಾಲ್ಸ್ ಹೈಸ್ಕೂಲ್ ಮತ್ತು ಲವ್ ಡೇಲ್ ಸೆಂಟ್ರಲ್ ಸ್ಕೂಲ್ ನಡುವೆ ನಡೆಯಿತು. . ಶಿಬಿರದ ಸೇಂಟ್ ಪಾಲ್ಸ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸೇಂಟ್ ಪಾಲ್ಸ್ ಪ್ರೌಢಶಾಲೆ 6-5 ಗೋಲುಗಳಿಂದ ಲವ್ ಡೇಲ್ …

Read More »

ಡಾ. ರಾಮಣ್ಣವರ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ಬೆಳಗಾವಿ- ಬೆಳಗಾವಿ ಕೆಎಲ್‌ಇ ಶ್ರೀ ಬಿ.ಎಂ. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯದ ಶಾರೀರ ರಚನಾಶಾಸ್ತç ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಮಹಾಂತೇಶ ರಾಮಣ್ಣವರ ಅವರ ಆಯುರ್ವೆದ ವೈದ್ಯಕೀಯ ಬೋಧನಾ ಸೇವೆಯನ್ನು ಪರಿಗಣಿಸಿ ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬೆಳಗಾವಿ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಮತ್ತು ರಿಸರ್ಚ (ಸ್ವಾಯತ್ತ ವಿಶ್ವವಿದ್ಯಾಲಯ) ವತಿಯಿಂದ ಸೆ.೫ ರಂದು ಬೆಳಗಾವಿ ಕೆಎಲ್‌ಇ ಜೆಎನ್‌ಎಂಸಿಯ ಡಾ.ಎಚ್.ಬಿ.ರಾಜಶೇಖರ ಸಭಾಗೃಹದಲ್ಲಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ …

Read More »

ಎರಡು ವಿಧಾನಸಭಾ ಮತಕ್ಷೇತ್ರಗಳಲ್ಲಿ ಹೆಸರು: ಸಿಎಂ ಅರವಿಂದ್​ ಕೇಜ್ರಿವಾಲ್​ ಪತ್ನಿಗೆ ದೆಹಲಿ ಕೋರ್ಟ್​ ಸಮನ್ಸ್​

ನವದೆಹಲಿ: ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಕಾನೂನು ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರ ಪತ್ನಿ ಸುನೀತಾ ಕೇಜ್ರಿವಾಲ್​ರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಸಮನ್ಸ್​ ನೀಡಿದೆ.   ಮೆಟ್ರೋಪಾಲಿಟನ್ ನ್ಯಾಯಾಧೀಶ ಅರ್ಜಿಂದರ್ ಕೌರ್ ಕೇಜ್ರಿವಾಲ್​ ಪತ್ನಿಗೆ ಸಮನ್ಸ್​ ಜಾರಿ ಮಾಡಿದ್ದಾರೆ. ಬಿಜೆಪಿ ನಾಯಕ ಹರೀಶ್ ಖುರಾನಾ ಅವರು ಸುನಿತಾ ಅವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯ (ಆರ್‌ಪಿ) ಕಾನೂನು ಉಲ್ಲಂಘಿಸಿರುವ ಆರೋಪ …

Read More »