Breaking News

ರಾಷ್ಟ್ರೀಯ

ಹಣದ ಆಸೆಗೆ ಮಾಲೀಕನನ್ನೇ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿರಸಿ(ಉತ್ತರ ಕನ್ನಡ): ಹಣದ ಆಸೆಗಾಗಿ ಕೆಲಸ ನೀಡಿದ ಮಾಲೀಕನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದ 48 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯ ಶವ ಶಿರಸಿಯ ವಡ್ಡಿನಕೊಪ್ಪ ಅರಣ್ಯ ಭಾಗದಲ್ಲಿ ಪತ್ತೆಯಾಗಿತ್ತು. ಕೊಲೆ ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ನಂತರ ತನಿಖೆ ಕೈಗೊಂಡ ಬನವಾಸಿ ಠಾಣೆ ಪೊಲೀಸರು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ …

Read More »

ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್​ ದಾಖಲೆ ಬರೆದ ಗರ್ಭಿಣಿ

ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್‌ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ ಹೆಗ್ಗಳಿಕೆಯೂ ಇವರದ್ದಾಗಿದೆ. ಇದೀಗ ಅಪರೂಪದ …

Read More »

ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ಮತ್ತು 16 ಶಾಸಕರ ಅನರ್ಹತೆ ಅರ್ಜಿಯನ್ನು ಎರಡು ವಾರದಲ್ಲಿ ಇತ್ಯರ್ಥಪಡಿಸಿ ಎಂದು ಸುಪ್ರೀಂಕೋರ್ಟ್​ ಸ್ಪೀಕರ್​ಗೆ ಸೂಚಿಸಿದೆ.

ನವದೆಹಲಿ: ಶಿವಸೇನೆಯಿಂದ ಬಂಡೆದ್ದಿರುವ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್​ ಶಿಂಧೆ ಮತ್ತು ಅವರ ಬಣದ 16 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಯನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ವಿಚಾರಣೆ ನಡೆಸಿ, ಎರಡು ವಾರದೊಳಗೆ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್​ ಸ್ಪೀಕರ್​ಗೆ ಸೂಚಿಸಿದೆ.   ಶಿವಸೇನೆ ಬಂಡಾಯ ಶಾಸಕರ ಅನರ್ಹತೆ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಪಕ್ಷ ವಿರೋಧಿ …

Read More »

ಅಂದು ತಂದೆ-ತಾಯಿ, ಇಂದು ಮಗನ ಬರ್ಬರ ಹತ್ಯೆ

ಬೆಳಗಾವಿ : ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕೊಲೆ ಮಾಡಿರುವ ಘಟನೆ ಚೆನ್ನಮ್ಮ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.   ತಿಗಡೊಳ್ಳಿ ಗ್ರಾಮದ ವಿಜಯ್ ರಾಮಚಂದ್ರಪ್ಪ ಆರೇರ್(35) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಕಲ್ಲಪ್ಪ ಕ್ಯಾತಣ್ಣವರ್ ನಡುವೆ ನಿನ್ನೆ ರಾತ್ರಿ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ತೀವ್ರ ಗಾಯಗೊಂಡಿದ್ದ ವಿಜಯ್​ನನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಕುಟುಂಬಸ್ಥರು …

Read More »

ಗಣೇಶ ಹಬ್ಬದಂದು ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ

ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಅವರು ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಗಣೇಶ ಹಬ್ಬದಂದು ಧ್ರುವ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದೆ ಇದೇ ಖುಷಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನಟ ಧ್ರುವ ಸರ್ಜಾ ಗಣೇಶ ಹಬ್ಬದ ದಿನ ಮನೆಗೆ ಮಗ ಬಂದಿದ್ದಾನೆ. ಮನೆಯಲ್ಲಿ ಎಲ್ಲರೂ ಖುಷಿಯಾಗಿದ್ದಾರೆ. …

Read More »

ನೆಲಮಂಗಲ: ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ

ನೆಲಮಂಗಲ (ಬೆಂಗಳೂರು. ಗ್ರಾ): ಇಲ್ಲಿನರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ಬೆಳಗ್ಗೆ ಸ್ವಿಫ್ಟ್ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ಘಟನೆ ನಡೆಯಿತು. ಸ್ವಿಫ್ಟ್​ ಕಾರಿನಲ್ಲಿದ್ದ ಐವರ ಪೈಕಿ ಮೂವರು ದುರ್ಮರಣ ಹೊಂದಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹಿಂದಿನ …

Read More »

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಗೂಂಡಾ ಕಾಯ್ದೆಯಡಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಜೈಲಿಂದ ಬಿಡುಗಡೆಯಾಗಿದ್ದಾರೆ. ಗೂಂಡಾ ಕಾಯ್ದೆ ರದ್ದಾದ ಹಿನ್ನೆಲೆಯಲ್ಲಿ ಇಂದು ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಕಳೆದ ಆಗಸ್ಟ್ 11ರಂದು ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ಗೂಂಡಾ ಕಾಯ್ದೆಗೆ ಸಂಬಂಧಿಸಿಂತೆ ರಚಿಸಲಾಗಿದ್ದ ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿ‌ಡಲು ಸಾಕಷ್ಟು ಕಾರಣಗಳಿಲ್ಲ ಎಂದು‌ …

Read More »

ರಾಜ್ಯ ಸರ್ಕಾರ ಪತನವಾಗುತ್ತದೆ. ಅವರ ಪಕ್ಷದವರೇ ಅವರ ಸರ್ಕಾರವನ್ನು ಬೀಳಿಸಲಿದ್ದಾರೆ: ಯತ್ನಾಳ್

ಹುಬ್ಬಳ್ಳಿ : ಜನವರಿಯಲ್ಲಿ ರಾಜ್ಯದಲ್ಲಿ ಬದಲಾವಣೆಯಾಗಲಿದೆ.‌ ರಾಜ್ಯ ಸರ್ಕಾರ ಪತನವಾಗುತ್ತದೆ. ಅವರ ಪಕ್ಷದವರೇ ಅವರ ಸರ್ಕಾರವನ್ನು ಬೀಳಿಸಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನಾವೇ ನೇರವಾಗಿ ಸಿಎಂ ಆಗಬಹುದು ಅಂತಾ ವಿರೋಧ ಪಕ್ಷದ ನಾಯಕನನ್ನ ಇದುವರೆಗೂ ಆಯ್ಕೆ ಮಾಡಿಲ್ಲ. ವಿರೋಧ ಪಕ್ಷದ ಬದಲು ಸಿಎಂ ಆಗಬಹುದು ಅಂತಾ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಸಿಎಂ ಯಾಕಾಗಬಾರದು ಎಂದು …

Read More »

ಏಷ್ಯಾಕಪ್​ ಫೈನಲ್​ ಕದನ: ಟಾಸ್​ ಗೆದ್ದ ಲಂಕಾ ಬ್ಯಾಟಿಂಗ್​ ಆಯ್ಕೆ..

ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್​ ಕೀರೀಟಕ್ಕಾಗಿ ಇಂದು ಆರ್​ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ಸೆಣಸಾಡುತ್ತಿದ್ದು, ಟಾಸ್​ ಗೆದ್ದ ಲಂಕಾ ನಾಯಕ ಶನಕ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ.   ಗಾಯಗೊಂಡ ಅಕ್ಷರ್ ಪಟೇಲ್​​ ಏಷ್ಯಾಕಪ್​ನಿಂದ ಹೊರಗುಳಿದಿದ್ದು ಅವರ ಜಾಗಕ್ಕೆ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಉಳಿದಂತೆ ಬಾಂಗ್ಲಾದೇಶದ ಪಂದ್ಯಕ್ಕೆ ವಿಶ್ರಾಂತಿ ನೀಡಿದ್ದ ವಿರಾಟ್​ ಕೊಹ್ಲಿ, ಹಾರ್ದಿಕ್​ ಪಾಂಡ್ಯ, ಕುಲ್ದೀಪ್​​ ಯಾದವ್​, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಮತ್ತೆ …

Read More »

ಚೈತ್ರಾ ಕುಂದಾಪುರ ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲಿ,ಚೈತ್ರಾ ಕುಂದಾಪುರಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ಆಕೆ ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲಿ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಅವರ ಪ್ರಕರಣವನ್ನು ನಾನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಸಿಸಿಬಿ ತನಿಖೆ ನಡೆಯುತ್ತಿದೆ, ತನಿಖೆ ನಂತರ ಎಲ್ಲವೂ ಹೊರಬರುತ್ತದೆ ಎಂದು ಹೇಳಿದರು. ಬಿಜೆಪಿಯಲ್ಲಿ ದುಡ್ಡು ಕೊಟ್ಟು ಟಿಕೆಟ್​ ಪಡೆಯುವ ಸಂಸ್ಕೃತಿ‌ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಪ್ರಕರಣಕ್ಕೂ …

Read More »