ಹೈದರಾಬಾದ್ (ತೆಲಂಗಾಣ): ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ವೊಬ್ಬರು ಸಿಕ್ಕಿ ಬಿದ್ದಿದ್ದಾರೆ. ಪೊಲೀಸ್ ದಾಳಿ ವೇಳೆ ವಶಪಡಿಸಿಕೊಂಡ ಡ್ರಗ್ಸ್ ಕದ್ದು ಅದನ್ನೇ ಮಾರಾಟ ಮಾಡಲು ಎಸ್ಐ ಯತ್ನಿಸುತ್ತಿದ್ದ. ಆರೋಪಿ ಮನೆಯಲ್ಲಿ ಪತ್ತೆಯಾದ ಸುಮಾರು 1,775 ಗ್ರಾಂ ಎಂಡಿಎಂಎ ಡ್ರಗ್ಸ್ಅನ್ನು ತಮ್ಮ ಬಳಿ ಈ ಎಸ್ಐ ಇಟ್ಟುಕೊಂಡಿದ್ದ ಎಂದು ವರದಿಯಾಗಿದೆ. ಸೈಬರಾಬಾದ್ ಪೊಲೀಸ್ ಕಮಿಷನರೇಟ್ನ ಸೈಬರ್ ಕ್ರೈಂ ವಿಭಾಗದಲ್ಲಿ (ಸಿಸಿಎಸ್) ಕಾರ್ಯನಿರ್ವಹಿಸುತ್ತಿದ್ದ ಕೆ.ರಾಜೇಂದರ್ ಎಂಬಾತನೇ ಬಂಧಿತ ಎಸ್ಐ. ರಾಜೇಂದರ್ …
Read More »ಶಾಲಾ ಕೊಠಡಿ ಕಾಮಗಾರಿಗೆ ಪಂಚರು ಗ್ರಾಮಸ್ಥರ ಸಮ್ಮುಖದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಪೂಜೆ
ಶಾಲಾ ಕೊಠಡಿ ಕಾಮಗಾರಿಗೆ ಪಂಚರು ಗ್ರಾಮಸ್ಥರ ಸಮ್ಮುಖದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಪೂಜೆ ಸಲ್ಲಿಸಿದರು. ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದ ಹಾಳದಲ್ಲಿ ಸರಕಾರಿ ಪ್ರೌಢಶಾಲೆಗೆ ಅವಶ್ಯಕತೆವಿರುವ ಒಂದು ಕೊಠಡಿ ಮಂಜೂರುಗೊಂಡಿರುವದರಿಂದ ಅದಕ್ಕೆ ಸ್ಥಳಾವಕಾಶದ ಕೊರತೆ ಇತ್ತು. ಸ್ಥಳಕ್ಕೆ ಭೂಮಿ ಅವಶ್ಯವಿರುವದರಿಂದ ಭಾನುವಾರದಂದು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ಕರೆದು ಭೂಮಿಯನ್ನ ಗ್ರಾಮದ ಬ್ರಹ್ಮದೇವರ ಗಡ್ಡೆ ಶ್ರೀವಿಠ್ಠಲ ದೇವರ ತರ್ಪಿ ಇರುವ ಐದು ಜನರ ಪಂಚರ ಹೆಸರಿನಲ್ಲಿರುವ ದೇವಸ್ಥಾನ ಭೂಮಿಯಲ್ಲಿ ಕಟ್ಟಡಕ್ಕೆ ಒಕ್ಕೋರಲ …
Read More »ಅನ್ಯಕೋಮಿನ 10 ರಿಂದ 12 ಜನ ಯುವಕರ ತಂಡ ಹಿಂದೂ ಯುವಕನ ಮೇಲೆ ದಾಳಿ
ಬೆಳಗಾವಿ, ಆ.27: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳು ಹೆಚ್ಚುತ್ತಲೇ ಇವೆ. ಅನ್ಯಕೋವಿನ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಅದೇ ಸಮುದಾಯದ ವಿದ್ಯಾರ್ಥಿಗಳು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದ ಘಟನೆ ಮಂಗಳೂರಿನಲ್ಲಿ ನಡೆದಿತ್ತು(Group Attack). ಈಗ ಬೆಳಗಾವಿ ನಗರದ ಖಂಜರ್ ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್ಗಿರಿ ಪ್ರಕರಣ ಕಂಡು ಬಂದಿದೆ. ಅನ್ಯಕೋವಿನ ಯುವತಿ ಜೊತೆ ಬಂದಿದ್ದ ಹಿಂದೂ ಯುವಕನ ಮೇಲೆ 10ರಿಂದ 12 ಯುವಕರ ಗುಂಪು ಹಲ್ಲೆ ನಡೆಸಿದೆ. …
Read More »ಬೆಳಗಾವಿಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಊಟದಲ್ಲಿ ಹುಳು: ವಿದ್ಯಾರ್ಥಿಗಳಿಂದ ದೂರು
: ಬೆಳಗಾವಿಯ (Belagavi) ಬೈಲಹೊಂಗಲ ತಾಲೂಕಿನ ಸರ್ಕಾರಿ ವಸತಿ ನಿಲಯದ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ತಾಲೂಕಿನ ಎಸ್ಸಿ ಎಸ್ಟಿ (SC, ST) ಪೋಸ್ಟ್ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ (Post-matric SC-ST boys hostel) ನೀಡುವ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅದಷ್ಟೇ ಅಲ್ಲದೆ ಹಾಸ್ಟೆಲ್ನಲ್ಲಿ ಹಸಿ ರೊಟ್ಟಿ, ಅರೆಬೆಂದ ಇಡ್ಲಿ, ಮಸಾಲೆಗಳಿಲ್ಲದ ಸಾರನ್ನು ನೀಡಲಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅರೆ ಬೆಂದ ಹುಳು ಮಿಶ್ರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. …
Read More »ಪ್ರಲ್ಹಾದ್ ಜೋಶಿ ಅವರು ನಮಗೆ ಭ್ರಷ್ಟಾಚಾರಿಗಳು ಅಂತಾರೆ. ಅನಿಲ್ ಅಂಬಾನಿ ಕಂಪನಿ ಅವರು ಒಂದು ಸೈಕಲ್ ನೂ ಮಾಡಿಲ್ಲ. ಅವರಿಗೆ ಹೆಲಿಕಾಪ್ಟರ್ ಮಾಡಲು ಕೊಟ್ಟಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮಾಡಿದ ಸಾಧನೆ ಪ್ರಚಾರ ಗಿಟ್ಟಿಸಿಕೊಳ್ಳೋದು, ಅದನ್ನು ಬಿಟ್ಟು ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು 10 ವರ್ಷ ಆಯ್ತು ಲೋಕ್ ಪಾಲ್ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡುತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗಾಗಲೇ ಕ್ಯಾಗ್ ರಿಪೋರ್ಟ್ ಬಂದಾಗಿದೆ. ರೆಫೈಲ್ ಡೀಲ್ ಮುಚ್ಚಿ ಹೋಗಿದೆ ನಾನು ಮಾತನಾಡಲ್ಲ, ಈಗಿರುವ …
Read More »ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ
ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. …
Read More »ಬಿಜೆಪಿ 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ನಡೆಯುವ ವಿಧಾನ ಪರಿಷತ್ನ 7 ಸ್ಥಾನಗಳ ಚುನಾವಣೆಗೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯವನ್ನು ಆರಂಭಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೂ ಜವಾಬ್ದಾರಿ ನೀಡಲಾಗಿದ್ದು, ಸಂಘಟನೆಗೆ ಬಳಸಿಕೊಳ್ಳಲು ಪಕ್ಷ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ, 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ …
Read More »ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆಮರಿಗೆ ಜನ್ಮದಿನ
ಆನೇಕಲ್ (ಬೆಂಗಳೂರು): ಸಿಲಿಕಾನ್ ಸಿಟಿ ಬೆಂಗಳೂರಿಗೆ ಹತ್ತಿರದಲ್ಲೇ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಒಂದಲ್ಲ ಒಂದು ವಿಶೇಷತೆಗಳಿಂದ ಪ್ರವಾಸರಿಗೆ ಅಚ್ಚುಮೆಚ್ಚಿನ ತಾಣ. ಆನೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇಂದು ವಿಶೇಷ ಹುಟ್ಟುಹಬ್ಬದ ಸಂಭ್ರಮ ನಡೆಯಿತು. ಹೌದು, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆನೆ ‘ವನಶ್ರೀಯ’ ಹೆಣ್ಣು ಮರಿ ‘ಓಂ ಗಂಗಾ’ ಇಂದು ಮೊದಲನೇ ವರ್ಷದ ಹುಟ್ಟುಹಬ್ಬ. ಅಂತೆಯೇ ಪಾರ್ಕಿನ ಆವರಣದಲ್ಲಿ ಆನೆ ಮರಿಗೆ ಇಷ್ಟ ಆಗುವ ತರಕಾರಿ …
Read More »ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ತವರು ಜಿಲ್ಲೆ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 27ರ ಬೆಳಗ್ಗೆ 8 ಗಂಟೆಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 28ರ ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ರಾತ್ರಿ 7 ಗಂಟೆಗೆ ಹೋಟೆಲ್ ಜೆಪಿ ಪ್ಯಾಲೇಸ್ನಲ್ಲಿ …
Read More »ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಗಗನನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ
ತಿರುವನಂತಪುರಂ (ಕೇರಳ) : ಚಂದ್ರಯಾನ-3 ಬಾಹ್ಯಾಕಾಶ ಯೋಜನೆಯ ಲ್ಯಾಂಡರ್ ‘ವಿಕ್ರಮ್’ ಈಗಾಗಲೇ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದು, ವೈಜ್ಞಾನಿಕ ಸಂಶೋಧನೆಗಳ ಕೆಲಸ ಪ್ರಾರಂಭಿಸಿದೆ. ಇದರ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ತಮ್ಮ ಮುಂದಿನ ಗಮನವನ್ನು ಸೂರ್ಯನತ್ತ ಕೇಂದ್ರೀಕರಿಸಿದ್ದು, ದೇಶದ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಉಡಾವಣೆಗೆ ಸಿದ್ಧವಾಗಿದೆ. ಈ ನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) …
Read More »