ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಆಗಸ್ಟ್ ತಿಂಗಳ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಪಡಿತರದಾರರ ಬ್ಯಾಂಕ್ ಖಾತೆಗೆ ಪಾವತಿಸಲಾಗುತ್ತಿದೆ. ರಾಜ್ಯ ಸರ್ಕಾರವು ಜುಲೈ ತಿಂಗಳಿನಿಂದ ರಾಜ್ಯದ ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಪಿಎಚ್ಎಚ್) ಹೊಂದಿರುವ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ವಿತರಿಸುವುದಾಗಿ ಘೋಷಿಸಿತ್ತು. ಈ ಅಕ್ಕಿಯ ಅಗತ್ಯವನ್ನು FCI (ಫುಡ್ ಕಾರ್ಪೋರೇಷನ್)ನಿಂದ ದೇಶೀಯ ಮುಕ್ತ ಮಾರುಕಟ್ಟೆಯಲ್ಲಿ (OMSS(D) ಅಕ್ಕಿಯನ್ನು …
Read More »KSRTC: ಕೆಂಪು ಬಣ್ಣದ ಬಸ್ಗಳಿಗೆ ಹೈಟೆಕ್ ಸ್ಪರ್ಶ
ಬೆಂಗಳೂರು : ಇನ್ಮುಂದೆ ಕೆಎಸ್ಆರ್ಟಿಸಿಯ ಕೆಂಪು ಬಣ್ಣದ ಬಸ್ಗಳಲ್ಲಿ ಪ್ರಯಾಸದ ಪ್ರಯಾಣಕ್ಕೆ ಗುಡ್ ಬೈ ಹೇಳಿ ಆರಾಮದಾಯಕ ಅನುಭವದ ಪ್ರಯಾಣ ಮಾಡಬಹುದಾಗಿದೆ. ಪುಷ್ ಬ್ಯಾಕ್ ಹೊರತುಪಡಿಸಿ ಬಹುತೇಕ ರಾಜಹಂಸ ಬಸ್ ಪ್ರಯಾಣದ ಅನುಭವ ನೀಡುವ ವ್ಯವಸ್ಥೆಯನ್ನು ಸಾಮಾನ್ಯ ಸಾರಿಗೆಯಲ್ಲಿ ನೀಡಲು ಸಂಸ್ಥೆ ಸಿದ್ಧತೆ ಆರಂಭಿಸಿದೆ. ಅದಕ್ಕಾಗಿಯೇ ವಿಶೇಷವಾಗಿ ವಿನ್ಯಾಸಗೊಂಡ ಪ್ರೋಟೋಟೈಪ್ ಬಸ್ಗಳು ಅಕ್ಟೋಬರ್ ವೇಳೆಗೆ ರಸ್ತೆಗಿಳಿಯಲಿವೆ. ಹತ್ತು ಹಲವು ಪ್ರಯೋಗಗಳ ಮೂಲಕ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅತ್ಯುತ್ತಮ …
Read More »ಕಾಂಗ್ರೆಸ್ ಆಹ್ವಾನ ನಿಜವೆಂದು ಸೋಮಶೇಖರ್ ಒಪ್ಪಿಕೊಂಡಿದ್ದಾರೆ, ಪಕ್ಷ ಬಿಡಲ್ಲ ಅಂತಲೂ ಸ್ಪಷ್ಟಪಡಿಸಿದ್ದಾರೆ: ಆರ್ ಅಶೋಕ್
ಬೆಂಗಳೂರು: ಕಾಂಗ್ರೆಸ್ ಸೇರುವಂತೆ ಹಾಗು ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಆಹ್ವಾನ ಬಂದಿದ್ದು ನಿಜ ಎನ್ನುವುದನ್ನು ಶಾಸಕ ಎಸ್ ಟಿ ಸೋಮಶೇಖರ್ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ಗೆ ಹೋಗಿ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಅವರಿಗೆ ಹೇಳಿದ್ದೇನೆ, ಅವರೂ ಕೂಡ ಪಕ್ಷ ತೊರೆಯುವುದಿಲ್ಲ ಎಂದೇ ಸ್ಪಷ್ಟಪಡಿಸಿದ್ದಾರೆ ಎಂದು ಮಾಜಿ ಡಿಸಿಎಂ ಆರ್ ಅಶೋಕ್ ತಿಳಿಸಿದ್ದಾರೆ. ಆಪರೇಷನ್ ಹಸ್ತ ಪ್ರಯತ್ನಗಳ ಹಿನ್ನೆಲೆಯಲ್ಲಿ ಮಾತುಕತೆ ನಡೆಸಲು ಆಗಮಿಸುವಂತೆ ಮಾಜಿ ಡಿಸಿಎಂ ಆರ್ ಅಶೋಕ್ ಸೂಚನೆಯಂತೆ …
Read More »ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ 777’ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
ನವದೆಹಲಿ: 69ನೇ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಇಂದು (ಗುರುವಾರ) ಪ್ರಕಟಿಸಿದೆ. ಕನ್ನಡ ಚಿತ್ರರಂಗದ ರಕ್ಷಿತ್ ಶೆಟ್ಟಿ ಅವರ ‘ಚಾರ್ಲಿ 777’ ಸಿನಿಮಾ ಉತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ‘ಆರ್ಆರ್ಆರ್’ ಸಿನಿಮಾಗೆ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ, ನೃತ್ಯ ನಿರ್ದೇಶನ ಪ್ರಶಸ್ತಿಗಳ ಗೌರವ ಸಿಕ್ಕಿದೆ. ‘ಉಪ್ಪೇನಾ’ ಸಿನಿಮಾವನ್ನು ಅತ್ಯುತ್ತಮ ತೆಲುಗು ಚಲನಚಿತ್ರವಾಗಿ ಘೋಷಿಸಲಾಗಿದೆ. ‘ಹೋಮ್’ ಅತ್ಯುತ್ತಮ ಮಲಯಾಳಂ ಚಿತ್ರ. ‘ಸರ್ದಾರ್ ಉಧಮ್’ ಅತ್ಯುತ್ತಮ ಹಿಂದಿ …
Read More »‘ಪ್ರತಿ ತಿಂಗಳು 35 ಸಾವಿರ ಲಂಚ ಕೊಡಬೇಕಾ?”..ಅಬಕಾರಿ ಇಲಾಖೆಗೆ ಪ್ರಶ್ನೆ ಮಾಡಿ ಬೆವರಿಳಿಸಿದ ಸಂಸದ ಪ್ರಜ್ವಲ್ ರೇವಣ್ಣ
ಹಾಸನ: ಪ್ರತಿ ತಿಂಗಳು ಮದ್ಯದಂಗಡಿ ಮಾಲೀಕರು ಅಬಕಾರಿ ಇಲಾಖೆಗೆ “35 ಸಾವಿರ ಲಂಚ” ಕೊಡಬೇಕಾ ಎಂದು ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಗಂಭೀರವಾಗಿ ಆರೋಪ ಮಾಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಅಕ್ರಮ ಮದ್ಯ ಮತ್ತು ಲಂಚ ಪಡೆಯುತ್ತಿರುವ ಬಗ್ಗೆ ಗಂಭೀರವಾಗಿ ಅಬಕಾರಿ ಇಲಾಖೆ ಮೇಲೆ ಆರೋಪ ಮಾಡಿದ ಪ್ರಜ್ವಲ್ ರೇವಣ್ಣ ‘ಪ್ರತಿ ತಿಂಗಳು 35 ಸಾವಿರ ಲಂಚ ತಗೋತಿರಲ್ಲ, ಅದನ್ನು …
Read More »ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಜ್ಞಾನ್; ಚಂದ್ರನ ಮೇಲೆ ಇವು ಮಾಡುವ ಕೆಲಸಗಳೇನು?
ಬೆಂಗಳೂರು: ಚಂದ್ರಯಾನ -3 ಮಿಷನ್ನ ಲ್ಯಾಂಡರ್ ‘ವಿಕ್ರಮ್’ ಮತ್ತು ರೋವರ್ ‘ಪ್ರಜ್ಞಾನ್’ ಮೇಲೆ ಈಗ ಎಲ್ಲರ ದೃಷ್ಟಿ ನೆಟ್ಟಿದೆ. ಆದರೆ, ಚಂದ್ರನ ಮೇಲಿನ ಕಾರ್ಯಾಚರಣೆಯ ಒಟ್ಟಾರೆ ಯಶಸ್ಸಿಗೆ ನಿರ್ಣಾಯಕವಾದ ಲ್ಯಾಂಡರ್ ಮತ್ತು ರೋವರ್ ಇವುಗಳು ತಕ್ಷಣವೇ ಕೆಲ ಮುಖ್ಯ ಕೆಲಸಗಳನ್ನು ಮಾಡಲಿವೆ. ಏತನ್ಮಧ್ಯೆ ವಿಕ್ರಮ್ ಮತ್ತು ಪ್ರಜ್ಞಾನ್ ಇವೆರಡೂ ಯಶಸ್ವಿಯಾಗಿ ಕೆಲಸ ಮಾಡಲಿವೆ ಎಂದು ಇಸ್ರೋ ವಿಜ್ಞಾನಿಗಳು ಕೂಡ ವಿಶ್ವಾಸ ಹೊಂದಿದ್ದಾರೆ. ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸುವ ಮತ್ತು ರೋವರ್ ಅನ್ನು ನಿಯೋಜಿಸುವ …
Read More »307 ಟ್ರಾನ್ಸ್ಲೇಟರ್ ಹುದ್ದೆಗೆ ಅರ್ಜಿ ಆಹ್ವಾನ.. ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಖಾಲಿ ಇರುವ ಟ್ರಾನ್ಸ್ಲೇಟರ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗದಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜ್ಯೂನಿಯರ್ ಟ್ರಾನ್ಸ್ಲೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 307 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸ್ನಾತಕೋತ್ತರ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ವೇತನ ಸೇರಿದಂತೆ …
Read More »ಬುಧವಾರದ ವಹಿವಾಟಿನಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಏರಿಕೆಯೊಂದಿಗೆ ವಹಿವಾಟು ಕೊನೆಗೊಳಿಸಿವೆ.
ಮುಂಬೈ : ದೇಶೀಯ ಈಕ್ವಿಟಿ ಬೆಂಚ್ ಮಾರ್ಕ್ ಸೂಚ್ಯಂಕಗಳು ಬುಧವಾರ ಏರಿಕೆಯೊಂದಿಗೆ ವಹಿವಾಟು ಆರಂಭಿಸಿದವು. ಆದರೆ ನಂತರ ಮಿಶ್ರ ಜಾಗತಿಕ ಮಾರುಕಟ್ಟೆ ಪ್ರವೃತ್ತಿಗಳು ಮತ್ತು ನಿರಂತರ ವಿದೇಶಿ ನಿಧಿಯ ಹೊರಹರಿವಿನ ಹಿನ್ನೆಲೆಯಲ್ಲಿ ವಹಿವಾಟಿನ ಮಧ್ಯದಲ್ಲಿ ಶೇರು ಮಾರುಕಟ್ಟೆಗಳು ಏರಿಕೆಯನ್ನು ತುಸು ಕಡಿಮೆ ಮಾಡಿಕೊಂಡವು. ದೇಶೀಯ ಸೂಚ್ಯಂಕಗಳಾದ ಎನ್ಎಸ್ಇ ನಿಫ್ಟಿ ಮತ್ತು ಬಿಎಸ್ಇ ಸೆನ್ಸೆಕ್ಸ್ ಒಂದು ದಿನದ ಅಸ್ಥಿರ ವಹಿವಾಟಿನ ನಂತರ ಬುಧವಾರ ಏರಿಕೆಯಲ್ಲಿ ಕೊನೆಗೊಂಡವು. ಸೆನ್ಸೆಕ್ಸ್ 213.27 ಪಾಯಿಂಟ್ ಅಥವಾ …
Read More »40 ವರ್ಷದ ವ್ಯಕ್ತಿಯಲ್ಲಿ ಗಂಡು, ಹೆಣ್ಣಿನ ಎರಡೂ ಜನನಾಂಗ ಪತ್ತೆ: ಅಪರೂಪದ ಪ್ರಕರಣಕ್ಕೆ ಕಿಮ್ಸ್ ವೈದ್ಯರ ಶಸ್ತ್ರಚಿಕಿತ್ಸೆ
ಹೈದರಾಬಾದ್ (ತೆಲಂಗಾಣ): ಮಾನವನ ದೇಹ ರಹಸ್ಯಗಳ ಗೂಡು. ದೇಹದಲ್ಲಿ ಕೆಲವೊಮ್ಮೆ ವಿಶೇಷತೆಗಳು ಘಟಿಸಿ ವೈದ್ಯಲೋಕಕ್ಕೇ ಅಚ್ಚರಿ ಉಂಟು ಮಾಡುತ್ತವೆ. ಅಂಥಹದ್ದೇ ಒಂದು ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಹೊಟ್ಟೆ ನೋವೆಂದು ಹೋದ ವ್ಯಕ್ತಿಗೆ ತಪಾಸಣೆಯ ವೇಳೆ ದೇಹದಲ್ಲಿ ಪುರುಷ ಮತ್ತು ಸ್ತ್ರೀ ಜನನಾಂಗ ಎರಡೂ ಇರುವುದು ಕಂಡುಬಂದಿದೆ. ಇದರಲ್ಲಿ ಒಂದನ್ನು ಶಸ್ತ್ರಚಿಕಿತ್ಸೆ ನಡೆಸಿ ತೆಗೆದುಹಾಕಲಾಗಿದೆ. 40 ವರ್ಷದ ವ್ಯಕ್ತಿಯೊಬ್ಬರು ಇತ್ತೀಚೆಗೆ ಸಿಕಂದರಾಬಾದ್ನ ಕಿಮ್ಸ್ ಆಸ್ಪತ್ರೆಗೆ ಹೊಟ್ಟೆ ನೋವೆಂದು ದಾಖಲಾಗಿದ್ದರು. ಅವರಿಗೆ ನಡೆಸಿದ …
Read More »ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸದೇ ಇರುವುದು ಖಂಡನೀಯ ಎಂದು ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ವಾಗ್ದಾಳಿ ನಡೆಸಿದ್ದಾರೆ
ಬೆಂಗಳೂರು : ಪರಿಷತ್ತು ಸಮಸ್ತ ಕನ್ನಡಿಗರ ಪರವಾಗಿ ಮಾಡಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶ ನೀಡಬೇಕು ಎನ್ನುವ ಬೇಡಿಕೆಯ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ ಎನ್ನುವುದು ಖೇದದ ಸಂಗತಿ. ಕನ್ನಡ ಸಾಹಿತ್ಯ ಪರಿಷತ್ತು ಸಹಿಸುವುದಿಲ್ಲ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸದೇ ಇರುವುದು ಸಮಸ್ತ …
Read More »