Breaking News

ರಾಷ್ಟ್ರೀಯ

ಬಿಟ್ ಕಾಯಿನ್ ಹಗರಣ: ಆರೋಪಿಗಳಿಗೆ ಮುಂದಿನ ವಿಚಾರಣೆವರೆಗೂ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದ ಹೈಕೋರ್ಟ್

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದ ಆರೋಪಿಗಳಾದ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ, ಸುನೀಶ್ ಹೆಗ್ಡೆ ಮತ್ತು ಹೇಮಂತ್ ಮುದ್ದಪ್ಪ ಅವರಿಗೆ ಅರ್ಜಿಯ ಕುರಿತ ಮುಂದಿನ ದಿನಾಂಕದ ವರೆಗೂ ಖುದ್ದು ವಿಚಾರಣೆಗೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶಿಸಿದೆ.   ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಕಾನೂನು ಪ್ರಕ್ರಿಯೆ ವಜಾ ಮಾಡುವಂತೆ ಕೋರಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ, ಸಹ ಆರೋಪಿಗಳಾದ ಸುನೀಶ್ ಹೆಗ್ಡೆ …

Read More »

ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು:C.M.

ಬೆಂಗಳೂರು: ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಕಚೇರಿಯಲ್ಲಿರಬೇಕು, ಇಲ್ಲವೆ ಜಿಲ್ಲೆಯಲ್ಲಿ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home …

Read More »

ಅಪಘಾತದ ಬಾಕಿ ಪರಿಹಾರ ಮೊತ್ತ ನೀಡದ ಕೆಎಸ್​ಆರ್​ಟಿಸಿ.. ದಾವಣಗೆರೆಯಲ್ಲಿ ಎರಡು ಬಸ್ ಜಪ್ತಿ

ದಾವಣಗೆರೆ: ಅಪಘಾತ ಪ್ರಕರಣವೊಂದರಲ್ಲಿ ಬಾಕಿ ಪರಿಹಾರ ಮೊತ್ತ ನೀಡದ ಹಿನ್ನೆಲೆ ಸೋಮವಾರ ನ್ಯಾಯಾಲಯದ ಆದೇಶದ ಮೇರೆಗೆ ಎರಡು ವಾಯುವ್ಯ ಕರ್ನಾಟಕ ಸಾರಿಗೆ ಬಸ್​ಗಳನ್ನು ಜಪ್ತಿ ಮಾಡಲಾಯಿತು. ಇಲ್ಲಿನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಹಾವೇರಿ ಡಿಪೋಗೆ ಸೇರಿದ ಎರಡು ಬಸ್‍ಗಳನ್ನು ನ್ಯಾಯಾಂಗ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೊಡಬೇಕಿದ್ದ ಪರಿಹಾರದ ಬಾಕಿ ಮೊತ್ತ ಉಳಿಸಿಕೊಂಡಿರುವ ಕೆಎಸ್​ಆರ್​ಟಿಸಿ ಸಂಸ್ಥೆಯ ಚರಾಸ್ತಿ ಜಪ್ತಿಗೆ ದಾವಣಗೆರೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‍ಸಿ …

Read More »

ಬಾಗೇಪಲ್ಲಿ ಬಳಿ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು‌ ಪಲ್ಟಿ.. ಸಿನಿಮಾ ಸ್ಟೈಲ್​ನಲ್ಲಿ ವೇಗವಾಗಿ ಹೊರಟಿದ್ದವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಚಾಲಕನ ನಿಂಯತ್ರಣ ತಪ್ಪಿ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಸಾದಲಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.   ನೆರೆಯ ರಾಜ್ಯ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಭೇಟಿ ಕೊಟ್ಟು ಗಾಯಾಳುಗಳನ್ನು …

Read More »

ಒಂದೇ ಕುಟುಂಬದ 15 ಮಂದಿಯಿಂದ ಪರಿಸರಸ್ನೇಹಿ ಗಣಪತಿ ನಿರ್ಮಾಣ: ಗ್ರಾಹಕ ನಿಗದಿಪಡಿಸಿದ ದುಡ್ಡಿಗೆ ಮೂರ್ತಿ ಮಾರಾಟ

ಹಾವೇರಿ: ಇಲ್ಲಿನಗುತ್ತಲ ಪಟ್ಟಣದಲ್ಲೊಂದು ಗಣಪತಿ ತಯಾರಿಸುವ ವಿಶೇಷ ಅನ್ನಿಸುವ ಕುಟುಂಬವಿದೆ. ನೆಗಳೂರುಮಠ ಎಂಬ ಹೆಸರಿನ ಕುಟುಂಬದ ಸುಮಾರು 15 ಮಂದಿ ಗಣಪತಿ ವಿಗ್ರಹ ತಯಾರಿಸುತ್ತಾರೆ. ಮೂರ್ತಿ ಸಿದ್ಧಪಡಿಸುವ ಈ ಕಲಾವಿದರೆಲ್ಲರೂ ಸರ್ಕಾರಿ ನೌಕರಿಯಲ್ಲಿದ್ದಾರೆ. ಗಣೇಶೋತ್ಸವಕ್ಕೆ ಈ ಮನೆಯ ಅಳಿಯಂದಿರು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಒಟ್ಟು ಸೇರಿದರೆ ಇವರ ಸಂಖ್ಯೆ 25 ದಾಟುತ್ತದೆ. ಹಬ್ಬ ಸಮೀಪಿಸುತ್ತಿದ್ದಂತೆ ಸರ್ಕಾರಿ ಕೆಲಸಕ್ಕೆ ರಜೆ ಹಾಕುವ ಇವರು ವಿಘ್ನವಿನಾಶಕನ ತಯಾರಿಯಲ್ಲಿ ಸಂಪೂರ್ಣವಾಗಿ ತೊಡುಗುತ್ತಾರೆ. ಯುಗಾದಿಯಂದು ಗಣೇಶ ಮೂರ್ತಿಗಳ …

Read More »

ಗ್ಯಾರಂಟಿ ಯೋಜನೆಗೆ ‘SCSPTSP’ ಅನುದಾನ ಬಳಕೆ: ಈವರೆಗೆ ಬಿಡುಗಡೆಯಾದ ಹಣ ಎಷ್ಟು?

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (SCSP TSP) ಅನುದಾನ ಬಳಕೆ ಮಾಡುತ್ತಿದೆ. ಸರ್ಕಾರದ ನಡೆಗೆ ಪ್ರತಿಪಕ್ಷ ಬಿಜೆಪಿ ಹಾಗು ದಲಿತ ನಾಯಕರು ಟೀಕಾಸಮರ ನಡೆಸಿದ್ದಾರೆ. ಸರ್ಕಾರ ಈಗಾಗಲೇ ಎಸ್​ಸಿಎಸ್​ಪಿಟಿಎಸ್​ಪಿ ಅನುದಾನದಿಂದ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಬಿಡುಗಡೆ ಮಾಡಿದೆ. ಈವರೆಗೆ ಬಿಡುಗಡೆಯಾದ ಹಣ ಎಷ್ಟು?, ಎಷ್ಟು ಹಣ ಹಂಚಿಕೆಯಾಗಿದೆ? ನೋಡೋಣ. ಕಾಂಗ್ರೆಸ್ ಸರ್ಕಾರ ತನ್ನ‌ ಶತದಿನಗಳ ಆಡಳಿತದಲ್ಲಿ ಗ್ಯಾರಂಟಿಗಳ ಅನುಷ್ಠಾನಕ್ಕೆ …

Read More »

ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಇಂದು ರಾಜ್ಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ಜೆಡಿಎಸ್‌ನೊಂದಿಗಿನ ಹೊಂದಾಣಿಕೆಯ ನಂತರದ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ …

Read More »

ಬಹಿರಂಗ ಹೇಳಿಕೆ ನೀಡದಂತೆ ಬಿ.ಕೆ.ಹರಿಪ್ರಸಾದ್​ಗೆ ಕಾಂಗ್ರೆಸ್​ ಹೈಕಮಾಂಡ್ ತಾಕೀತು

ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿರುವ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಶನಿವಾರ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಟೀಕಾಪ್ರಹಾರ ನಡೆಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ, ಯಾರ ಬಗ್ಗೆಯೂ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್​​ ಹೈಕಮಾಂಡ್ ಮೌಖಿಕ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಹರಿಪ್ರಸಾದ್ ಹೇಳಿಕೆಗೆ ಆಕ್ಷೇಪ: ಸಿದ್ದರಾಮಯ್ಯರ ವಿರುದ್ಧ ಹರಿಪ್ರಸಾದ್ ಅವರು ಮುಸುಕಿನ ಗುದ್ದಾಟ ನಡೆಸುತ್ತಿರುವುದು ಆಡಳಿತ ಪಕ್ಷದೊಳಗೆ ಅಸಮಾಧಾನ ಉಂಟುಮಾಡಿದೆ. ಬಹಿರಂಗ ಹೇಳಿಕೆ ನೀಡುವ …

Read More »

ಅಣ್ಣ ಚಿರು ಸಮಾಧಿ ಬಳಿ ಪತ್ನಿ ಸೀಮಂತ ನೆರವೇರಿಸಿದ ಧ್ರುವ ಸರ್ಜಾ

ಕನ್ನಡ ಚಿತ್ರರಂಗದಲ್ಲಿ ನಟನೆ ಮತ್ತು ಗುಣದಿಂದ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನಟ ಧ್ರುವ ಸರ್ಜಾ. ಸಿನಿಮಾ ಮತ್ತು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಕೆಲ ದಿನಗಳ ಹಿಂದೆ ಅಣ್ಣ ಚಿರಂಜೀವಿ ಸರ್ಜಾ ಸಮಾಧಿ ಬಳಿ ಮಲಗಿದ್ದ ಧ್ರುವ ಸರ್ಜಾ ಅವರ ವಿಡಿಯೋ ಎಲ್ಲೆಡೆ ವೈರಲ್​ ಆಗಿತ್ತು. ಇದೀಗ ಆಯಕ್ಷನ್​ ಪ್ರಿನ್ಸ್​ ಮನೆಯಲ್ಲಿ ಸೀಮಂತದ ಸಂಭ್ರಮ ಮನೆ ಮಾಡಿದೆ. ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರವನ್ನು ವಿಶೇಷ …

Read More »

ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆ ಸಂಬಂಧ 12 ಜನರನ್ನು ಬಂಧಿಸಲಾಗಿದೆ

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಮಾಲೀಕರ ಒಕ್ಕೂಟ ಕರೆ ನೀಡಿದ್ದ ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಿದರೆ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ. ಇಂದು ಬಂದ್ ವೇಳೆ ನಗರದ ಕೆಲವೆಡೆ ಬೈಕ್ ಟಾಕ್ಸಿಗಳ ಮೇಲೆ ಹಾಗೂ ಆಟೊ ಚಾಲಕರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿ, ಅಲ್ಲದೇ ವಾಹನಗಳನ್ನ ಜಖಂಗೊಳಿಸಿದ್ದರು. ಈ …

Read More »