Breaking News

ರಾಷ್ಟ್ರೀಯ

ಮೈಸೂರು ಮಣಿಸಿ ಮಹಾರಾಜ ಟ್ರೋಫಿ ಚಾಂಪಿಯನ್ ಪಟ್ಟ ಅಲಂಕರಿಸಿದ ಹುಬ್ಬಳ್ಳಿ

ಬೆಂಗಳೂರು : ರೋಚಕ ಫೈನಲ್ ಕಾದಾಟದಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು 8 ರನ್‌ಗಳಿಂದ ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೈಸೂರು ಬೌಲರ್‌ಗಳ ವಿರುದ್ಧ ಬ್ಯಾಟಿಂಗ್​ನಲ್ಲಿ ಮೇಲುಗೈ ಸಾಧಿಸಿದ ಮೊಹಮ್ಮದ್ ತಾಹಾ, ಮನೀಶ್ ಪಾಂಡೆ ಹಾಗೂ ಮನ್ವಂತ್ ಕುಮಾರ್ ಉತ್ತಮ ಬೌಲಿಂಗ್ ನೆರವಿನಿಂದ ಹುಬ್ಬಳ್ಳಿ ಗೆದ್ದು ಬೀಗಿತು. ಮಹಾರಾಜ ಟ್ರೋಫಿ ಫೈನಲ್​ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಹುಬ್ಬಳ್ಳಿ ಟೈಗರ್ಸ್ ಮೊದಲು ಬ್ಯಾಟ್ ಮಾಡಿತು. ಎರಡನೇ …

Read More »

ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ

ಮೈಸೂರು: ಬುಧವಾರ (ಆ.30) ನಗರದಲ್ಲಿ ನಡೆಯಲಿರುವ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ. ಹಲವಾರು ರೀತಿಯ ವೈಶಿಷ್ಟ್ಯತೆಗಳಿಂದ ಕೂಡಿರುವ ಈ ಬೃಹತ್ ವೇದಿಕೆಯ ಸಿದ್ಧತೆಯ ಕಾರ್ಯ ಮಹಾರಾಜ ಕಾಲೇಜು ಮೈದಾನದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೇಲ್ವಿಚಾರಣೆಯಲ್ಲಿ ನಡೆದಿದೆ. ಡಿಸಿಎಂ ನಿನ್ನೆ ಸಂಜೆ ಮೈದಾನದಲ್ಲಿ ಸಿದ್ಧವಾಗುತ್ತಿರುವ ವೇದಿಕೆ ನಿರ್ಮಾಣ ಕಾರ್ಯವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದರು. ವೇದಿಕೆಯ ವಿಶೇಷತೆಗಳೇನು: ಗೃಹ ಲಕ್ಷ್ಮಿ ಯೋಜನೆ ಜಾರಿಗೆ …

Read More »

ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಕೂಡಿ ಬರದ ಮುಹೂರ್ತ: ಬೇಸತ್ತು ಹಸೆಮಣೆ ಏರಿದ 7 ಜೋಡಿ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಇನ್ನೂ ಮುಹೂರ್ತ ಕೂಡಿ ಬಾರದ ಕಾರಣ ಬೇಸತ್ತ 7 ಜೋಡಿಗಳು ಸ್ವಂತ ಹಣದಲ್ಲಿ ವಿವಾಹ ಮಾಡಿಕೊಂಡಿದ್ದಾರೆ. ಸಾಲೂರು ಮಠದಲ್ಲಿ ಹಸೆಮಣೆ ಏರಿದ ಜೋಡಿಗಳು ಹೌದು. ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಾಮೂಹಿಕ ವಿವಾಹ ಎರಡು ಬಾರಿ ಮುಂದೂಡಿಕೆಯಾಗಿದೆ. ಹೀಗಾಗಿ ಕ್ಷೇತ್ರದಲ್ಲಿರುವ ಸಾಲೂರು ಮಠದಲ್ಲಿ 7 ಜೋಡಿಗಳು ಹಸೆಮಣೆ ಏರಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ. 23 ರಂದು …

Read More »

ದೊಡ್ಡ ಮಟ್ಟದಲ್ಲಿ ಅನಾವರಣಗೊಳ್ಳಲಿದೆ ಬಹುನಿರೀಕ್ಷಿತ ‘ಜವಾನ್’​ ಟ್ರೇಲರ್

ಬಹುನಿರೀಕ್ಷಿತ ‘ಜವಾನ್’ ಚಿತ್ರದ ಟ್ರೇಲರ್​ಗೆ ಮುಹೂರ್ತ ನಿಗದಿಯಾಗಿದ್ದು, ದೊಡ್ಡ ಮಟ್ಟದಲ್ಲೇ ರಿಲೀಸ್​ ಆಗಲಿದೆ. ಎಲ್ಲಿ? ಯಾವಾಗ? ತಿಳಿಯಲು ಮುಂದೆ ಓದಿ.. ‘ಜವಾನ್​’.. ಭಾರತೀಯ ಚಿತ್ರರಂಗ ಎದುರು ನೋಡುತ್ತಿರುವ ಬಹುನಿರೀಕ್ಷಿತ ಚಿತ್ರ. ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ನಟನೆಯನ್ನು ಕಣ್ತುಂಬಿಕೊಳ್ಳಲು ಸಿನಿ ಪ್ರೇಮಿಗಳು ಕಾತರರಾಗಿದ್ದಾರೆ. ‘ಪಠಾಣ್​’ ಬಳಿಕ ಈ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದ್ದು, ‘ಜವಾನ್​’ನಲ್ಲಿ ನಟ ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಪ್ರಿವ್ಯೂ ಕುತೂಹಲ ಹೆಚ್ಚಿಸಿದ್ದು, ಟ್ರೇಲರ್​ಗಾಗಿ ಪ್ರೇಕ್ಷಕರು …

Read More »

ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ಸಿಎಂ, ಡಿಸಿಎಂ

ಮೈಸೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಮತದಾನದ ಹಿಂದಿನ ದಿನ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ಹೊತ್ತಿದ್ದರು. ಆ ಹರಕೆಯನ್ನು ಇಂದು ಇಬ್ಬರು ಚಾಮುಂಡೇಶ್ವರಿ ತಾಯಿಯ ದೇವಾಲಯದ ಮುಂಭಾಗದಲ್ಲಿ ಈಡುಗಾಯಿ ಒಡೆಯುವ ಮೂಲಕ ತೀರಿಸಿದರು. ಇಂದು ಚಾಮುಂಡಿ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮಿಸಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಾಲಯದ …

Read More »

ಗಿನ್ನೆಸ್ ಬುಕ್​ ಸೇರಲು ಸಜ್ಜಾದ ಮಧ್ಯಪ್ರದೇಶದ ಬೃಹತ್​ ರಾಖಿ

ಬಿಂಡಿ(ಮಧ್ಯಪ್ರದೇಶ): ಪ್ರೀತಿ ಮತ್ತು ರಕ್ಷಣೆಯ ಬಂಧವಾಗಿರುವ ರಾಖಿ ಸಹೋದರ ಮತ್ತು ಸಹೋದರಿಯರ ನಡುವಿನ ಮುರಿಯಾಲಾಗದ ಸಂಬಂಧವನ್ನು ಮತ್ತಷ್ಟು ಗಟ್ಟಿ ಮಾಡುವುದು ಸುಳ್ಳಲ್ಲ. ಇಂತಹ ಹಬ್ಬವನ್ನು ಮತ್ತಷ್ಟು ಸ್ಮರಣಿಯವಾಗಿಸಲು ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಸಾಮಾಜಿಕ ಕಾರ್ಯಕರ್ತ ಅಶೋಕ್​ ಭಾರಧ್ವಾಜ್​ ಮುಂದಾಗಿದ್ದಾರೆ. ಇದಕ್ಕಾಗಿ ಅವರು ವಿಶ್ವದ ಬೃಹತ್​ ಗಾತ್ರದ ರಾಖಿ ತಯಾರಿಸಲು ಮುಂದಾಗಿದ್ದಾರೆ. ಈಗಾಗಲೇ ಭಾರಧ್ವಾಜ್​ ಹೆಸರು ಗಿನ್ನೆಸ್​ ಸೇರಿದಂತೆ ಅನೇಕ ದಾಖಲೆಗಳನ್ನು ಅಚ್ಚೊತ್ತಿದ್ದು, ಇದೀಗ ಒಎಂಜಿ ಬುಕ್​ ಆಫ್​ …

Read More »

ತಾವು ಕೆಲಸ ನಿರ್ವಹಿಸಿದ್ದ ಬಿಎಂಟಿಸಿ ಡಿಪೋಗೆ ಭೇಟಿ ಕೊಟ್ಟ ರಜನಿಕಾಂತ್

ಬೆಂಗಳೂರು: ನಗರ ಸಾರಿಗೆ ಬಸ್​ನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸಿರುವ ರಜನಿಕಾಂತ್​ ಸದ್ಯ ಭಾರತೀಯ ಚಿತ್ರರಂಗದ ಸುಪ್ರಸಿದ್ಧ ನಟ. ಮನರಂಜನಾ ಕ್ಷೇತ್ರದಲ್ಲಿ ದೊಡ್ಡ ಮಟ್ಟಕ್ಕೆ ಬೆಳೆದು, ಸಾಕಷ್ಟು ಹೆಸರು ಸಂಪಾದಿಸಿರುವ ಬಹುಭಾಷಾ ನಟ ರಜನಿಕಾಂತ್ ಬದುಕು ಕಟ್ಟಿಕೊಳ್ಳಲು ವೃತ್ತಿಜೀವನ ಆರಂಭಿಸಿದ್ದ ಸ್ಥಳಕ್ಕೆ ಅಚ್ಚರಿಯ ಭೇಟಿ ಕೊಟ್ಟಿದ್ದಾರೆ. ಜೈಲರ್​ ಯಶಸ್ಸಿನಲ್ಲಿರುವ ನಟನನ್ನು ಕಂಡ ಬೆಂಗಳೂರು ಸಾರಿಗೆ ಸಿಬ್ಬಂದಿ ಆಶ್ಚರ್ಯಚಕಿತರಾದರು. ಒಂದು ಕ್ಷಣ ತಮ್ಮನ್ನೇ ತಾವು ನಂಬದಂತಾದರು. ಬಿಎಂಟಿಸಿ ಸಿಬ್ಬಂದಿ ಜೊತೆ ತಲೈವಾಕೆಲಸ …

Read More »

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಉತ್ಪಾದನೆಯನ್ನು ಪುನಾರಂಭಿಸಿದೆ.

ಶಿವಮೊಗ್ಗ: ಭದ್ರಾವತಿ ಪಟ್ಟಣದ ಆಶಾಕಿರಣವಾಗಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಉತ್ಪಾದನಾ ಕಾರ್ಯವನ್ನು ಪುನಾರಂಭಿಸಿದೆ. ಇದರಿಂದ ಕಾರ್ಖಾನೆಯ ಕಾರ್ಮಿಕರಲ್ಲಿ ಸಂತಸ ಮನೆ ಮಾಡಿದೆ. ನಿನ್ನೆಯಿಂದ ಕಾರ್ಖಾನೆಯ ಎನ್​ಆರ್​ಎಂ ಘಟಕ ಆರಂಭಗೊಂಡಿದೆ. 6 ದಿನಗಳ ಹಿಂದೆ ಉಕ್ಕು ಪ್ರಾಧಿಕಾರದ ಬಿಲಾಯ್ ಘಟಕದಿಂದ 19 ರೈಲು ವ್ಯಾಗನ್‌ಗಳಲ್ಲಿ ಬ್ಲೂಮ್‌ಗಳು ಕಾರ್ಖಾನೆಗೆ ಬಂದಿದ್ದವು. ಇದರಿಂದ ಎನ್‌ಆರ್‌ಎಂ ಘಟಕ ಕಾರ್ಯವನ್ನು ಶುರು ಮಾಡಿದೆ. ವಿಐಎಸ್‌ಎಲ್ ಕಾರ್ಖಾನೆಯು ಆಗಸ್ಟ್ 10 ರಿಂದಲೇ ಪ್ರಾರಂಭವಾಗಬೇಕಿತ್ತು. ಆದರೆ NRM ಘಟಕದ …

Read More »

ಹೆಸ್ಕಾಂನಲ್ಲಿ 248 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಸ್ಕಾಂನಲ್ಲಿ ಒಂದು ವರ್ಷದ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ, ನೇಮಕಾತಿ ಸೇರಿದಂತೆ ಇನ್ನಿತರ ವಿವರಗಳು ಇಲ್ಲಿವೆ. ಹುಬ್ಬಳ್ಳಿ ವಿದ್ಯುತ್​​ ಸರಬರಾಜು ಕಂಪನಿ ನಿಯಮಿತದಿಂದ ಪ್ರಸಕ್ತ ಸಾಲಿನ ವೃತ್ತಿ ತರಬೇತಿಗಾಗಿ 248 ಐಟಿಐ ಅಪ್ರೆಂಟಿಸ್​ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಸ್ಕಾಂನಲ್ಲಿ ಕಾರ್ಯ ನಿರ್ವಹಣೆ ಅನುಭವವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದ್ದು, ಈ ವೇಳೆ ಆಯ್ಕೆಯಾದ …

Read More »

ಪ್ರಮೋದ್ ಶೆಟ್ಟಿ’ ಹೊಸ ಅವತಾರಕ್ಕೆ ಅಭಿಮಾನಿಗಳು ಫಿದಾ

ಜಲಪಾತ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ವಿಭಿನ್ನ‌ ಪಾತ್ರ ಮಾಡುತ್ತಿದ್ದು,‌ ಈ‌ ಚಿತ್ರದಲ್ಲಿ ಅವರ ಫಸ್ಟ್​ ಲುಕ್ ರಿವೀಲ್ ಆಗಿದೆ. ಖಳನಟ ಹಾಗೂ ಪೋಷಕ ಪಾತ್ರಗಳಲ್ಲಿ ಸ್ಯಾಂಡಲ್​​ವುಡ್ ನಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟ‌ ಪ್ರಮೋದ್ ಶೆಟ್ಟಿ. ‌ಇದೀಗ ‘ಜಲಪಾತ’ ಎಂಬ‌ ಸಿನಿಮಾದಲ್ಲಿ ಪ್ರಮೋದ್ ವಿಭಿನ್ನ‌ ಪಾತ್ರ ಮಾಡುತ್ತಿದ್ದಾರೆ. ‌ಈ‌ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರ ಫಸ್ಟ್​ ಲುಕ್ ರಿವೀಲ್​ ಆಗಿದೆ. ನಿರ್ದೇಶಕ ರಮೇಶ್ ಬೇಗಾರ್ ರಚಿಸಿ, ನಿರ್ದೇಶಿಸಿರುವ ಜಲಪಾತ ಚಿತ್ರದಲ್ಲಿ …

Read More »