Breaking News

ರಾಷ್ಟ್ರೀಯ

G20: ಆರ್ಥಿಕ ಅಪರಾಧಿಗಳ ಹಸ್ತಾಂತರಕ್ಕೆ ಜಾಗತಿಕ ವೇದಿಕೆ ರಚಿಸಲು ಭಾರತದ ಒತ್ತಾಯ

ನವದೆಹಲಿ: ವಿದೇಶಗಳಲ್ಲಿ ಆಶ್ರಯ ಪಡೆದಿರುವ ದೇಶಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲು, ಅವರನ್ನು ಹಸ್ತಾಂತರಿಸಲು ಮತ್ತು ಆರ್ಥಿಕ ಅಪರಾಧಿಗಳ ಆಸ್ತಿಗಳನ್ನು ಪತ್ತೆಹಚ್ಚಲು ಸಾಮಾನ್ಯ ವೇದಿಕೆಯೊಂದನ್ನು ಸ್ಥಾಪಿಸುವ ನಿಟ್ಟಿನಲ್ಲಿ ಜಿ 20 ನಾಯಕರನ್ನು ಒತ್ತಾಯಿಸಲು ಕೇಂದ್ರ ಸರ್ಕಾರ ಕಾರ್ಯತಂತ್ರವೊಂದನ್ನು ರೂಪಿಸಿದೆ. ಈ ಕಾರ್ಯತಂತ್ರವು ಎಲ್ಲ ಜಿ 20 ನಾಯಕರ ಬೆಂಬಲ ಪಡೆದದ್ದೇ ಆದಲ್ಲಿ ವಿಜಯ್ ಮಲ್ಯ, ನೀರವ್ ಮೋದಿ, ಜುನೈದ್ ಇಕ್ಬಾಲ್ ಮೆಮನ್ ಮತ್ತು ಅಭಿಜಿತ್ ಅಸೋಮ್ ಅವರಂತಹ ಹಲವಾರು ದೇಶಭ್ರಷ್ಟ ಮತ್ತು ಆರ್ಥಿಕ …

Read More »

ಸೆ.3 ರಂದು ‘ಸನಾತನ ಧರ್ಮ ದಿನ’ ಆಚರಣೆ; ಭಾರತದಲ್ಲಿ ಅಲ್ಲ, ಇದು ಅಮೆರಿಕದಲ್ಲಿ!

ವಾಷಿಂಗ್ಟನ್ (ಅಮೆರಿಕ) : ಸೆಪ್ಟೆಂಬರ್​ 3 ರಂದು ‘ಸನಾತನ ಧರ್ಮ ದಿನ’ ಆಚರಣೆಗೆ ಅಧಿಕೃತವಾಗಿ ಘೋಷಿಸಲಾಗಿದೆ. ಆದರೆ ಇದು ಭಾರತದಲ್ಲಿ ಅಲ್ಲ, ಬದಲಾಗಿ ಅಮೆರಿಕದಲ್ಲಿ. ಅಮೆರಿಕದ ಕೆಂಟುಕಿ ರಾಜ್ಯದ ನಗರವೊಂದರಲ್ಲಿ ಸೆಪ್ಟೆಂಬರ್ 3ನ್ನು ‘ಸನಾತನ ಧರ್ಮ ದಿನ’ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಭಾರತದಲ್ಲಿನ ರಾಜ್ಯವೊಂದರ ಸಚಿವರೊಬ್ಬರು ಸನಾತನ ಧರ್ಮವನ್ನು ಹೀಯಾಳಿಸಿ ಮಾತನಾಡಿದ ಮಧ್ಯೆ ದೂರದ ಅಮೆರಿಕದಲ್ಲಿ ಅದೇ ಹಿಂದೂ ಸನಾತನ ಧರ್ಮದ ಬಗ್ಗೆ ಒಲವು ಬೆಳೆಯುತ್ತಿರುವುದು ಗಮನಾರ್ಹ. ಲೂಯಿಸ್​ವಿಲ್ಲೆ ಮೇಯರ್ ಕ್ರೇಗ್ …

Read More »

ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬೇಡ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸನಾತನ ಧರ್ಮದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾನು ಮಾಡಿದ ಟ್ವೀಟ್​ನಲ್ಲಿ ಏನೂ ತಪ್ಪಿಲ್ಲ, ಸಂವಿಧಾನವೇ ನನ್ನ ಧರ್ಮ ಅಂತಾ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.   ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಸಂವಿಧಾನದಿಂದ ಸ್ವಾಭಿಮಾನದ ಬದುಕು ಸಿಗುತ್ತದೆ. ಸಂವಿಧಾನದಿಂದ ಏನೂ ಇಲ್ಲ ಅಂತ ಬಿಜೆಪಿ ಪಕ್ಷದವರು ಅವರು ಹೇಳಲಿ.‌ ಮೊಸರಲ್ಲಿ ಕಲ್ಲು ಹುಡುಕುವುದು ಬೇಡ” ಎಂದು ತಿರುಗೇಟು ನೀಡಿದರು. …

Read More »

ಉಮ್ಲಿಂಗ್ ಲಾ ಪ್ರದೇಶ ತಲುಪಿದ ಸುಳ್ಯ ಬಾಲಕ.. ಮೂರುವರೆ ವರ್ಷದ ಜಝೀಲ್ ರೆಹ್ಮಾನ್​ನಿಂದ ವಿಶಿಷ್ಟ ಸಾಧನೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಉದ್ಯಮಿಯೊಬ್ಬರು ಪತ್ನಿ ಮತ್ತು ತಮ್ಮ ಮೂರುವರೆ ವರ್ಷದ ಮಗನೊಂದಿಗೆ ಸುಮಾರು 19,024 ಅಡಿ ಎತ್ತರದ ಉಮ್ಲಿಂಗ್ ಲಾ ಪ್ರದೇಶವನ್ನು ಬೈಕ್‌ನಲ್ಲಿ ತಲುಪಿದ್ದು, ಇದೀಗ ಸುಳ್ಯಕ್ಕೆ ವಾಪಸಾಗುತ್ತಿದ್ದಾರೆ.   ಸುಳ್ಯ ತಾಲೂಕಿನ ನಿವಾಸಿಯಾದ ಮತ್ತು ಇಲ್ಲಿನ ಹಳೆಗೇಟ್‌ ಎಂಬಲ್ಲಿರುವ ಹೋಮ್ ಗ್ಯಾಲರಿ ಮಾಲೀಕರಾದ ತೌಹೀದ್ ರೆಹ್ಮಾನ್ ಹಾಗೂ ಅವರ ಪತ್ನಿ ಜಶ್ಮಿಯಾ ಮತ್ತು ಮಗ ಜಝೀಲ್ ರೆಹ್ಮಾನ್ ಅವರು ತಮ್ಮ ಬುಲೆಟ್‌ ಬೈಕ್‌ನಲ್ಲಿ ಉಮ್ಮಿಂಗ್ ಲಾ …

Read More »

ಬ್ಲ್ಯಾಕ್ ಆ್ಯಂಡ್ ವೈಟ್ ಮನಿ ಹೆಸರಿನಲ್ಲಿ ರೈತನಿಗೆ ಮೋಸ

ಬ್ಲ್ಯಾಕ್ ಆ್ಯಂಡ್ ವೈಟ್ ಮನಿ ಹೆಸರಿನಲ್ಲಿ ರೈತನಿಗೆ ಮೋಸಗೈದಿರುವ ನಾಲ್ವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಎಚ್‌ಡಿ ಆನಂದಕುಮಾರ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಲಕ್ಷ್ಮೀ ಕಂಕನವಾಡಿ, ಈರಣ್ಣ ಕೌಜಲಗಿ, ಅಪ್ಪಾಸಾಹೇಬ್ ಇಂಚಲ್, ಸುನೀಲ ದೊಡಮನಿ ಅವರನ್ನು ಬಂಧನ ಮಾಡಲಾಗಿದೆ. ಅಲ್ಲದೇ, ಬಬಲೇಶ್ವರದ ರೈತ ಚಂದ್ರಶೇಖರ ಕನ್ನೂರ ಅವರಿಗೆ ನಾಲ್ವರು ಮೋಸ ಮಾಡಿದ್ದಾರೆ . ವೈಟ್ ಮನಿ ನೀಡಿದ್ರೇ ದುಪ್ಪಟ್ಟು ಹಣದ ಆಸೆ ತೋರಿಸಿದ್ದಾರೆ. ಇದನ್ನು ನಂಬಿ ರೈತ ಅವರಿಗೆ …

Read More »

ಬೆಂಗಳೂರು: ಇನ್ಸ್​ಪೆಕ್ಟರ್​​​ ವಿರುದ್ಧವೇ ದೂರು ನೀಡಿದ ಪತ್ನಿ

ಬೆಂಗಳೂರು : ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್​ಸ್ಪೆಕ್ಟರ್ ಮಲ್ಲಿಕಾರ್ಜುನ್ ವಿರುದ್ಧ ಪತ್ನಿಯೇ ಯಶವಂತಪುರ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ನಿ ನೀಡಿದ ದೂರಿನ ಮೇರೆಗೆ ಇನ್​ಸ್ಪೆಕ್ಟರ್ ಮಲ್ಲಿಕಾರ್ಜುನ ಸೇರಿ ಒಟ್ಟು ನಾಲ್ವರ ವಿರುದ್ಧ ವಂಚನೆ ಹಾಗೂ ವರದಕ್ಷಿಣೆಯಡಿ ಪ್ರಕರಣ ದಾಖಲಾಗಿದೆ.   ದೂರಿನಲ್ಲಿ ಇರುವುದೇನು?: ದೂರುದಾರ ಮಹಿಳೆ ದೂರಿನಲ್ಲಿ ಹೇಳಿರುವ ಪ್ರಕಾರ, ನಾನು ಹಾಗೂ ಮಲ್ಲಿಕಾರ್ಜುನ್ ಇಬ್ಬರು 2012ರಲ್ಲಿ ಮದುವೆ ಮಾಡಿಕೊಂಡಿದ್ದೆವು. ವಿವಾಹದ ವೇಳೆ 8 ಲಕ್ಷ‌ ನಗದು, 250 ಗ್ರಾಂ ಚಿನ್ನ ಹಾಗೂ …

Read More »

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇಂದಿನಿಂದ ರಾತ್ರಿ ಸೇವೆಗೆ ಹೆಚ್ಚುವರಿ ದರ ಸ್ಥಗಿತ, ಹಗಲಿನ ದರವೇ ನಿಗದಿ

ಬೆಂಗಳೂರು : ರಜತ ಮಹೋತ್ಸವದ ಸಂಭ್ರಮದಲ್ಲಿರುವ ಬಿಎಂಟಿಸಿ ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ ಪಾಳೆ ಸೇವೆಗೆ ಪಡೆಯುತ್ತಿದ್ದ ಒಂದೂವರೆ ಪಟ್ಟು ಹೆಚ್ಚು ಟಿಕೆಟ್ ದರವನ್ನು ರದ್ದುಪಡಿಸಿ ಹಗಲಿನಲ್ಲಿ ಪಡೆಯುವ ದರವನ್ನೇ ನಿಗದಿಪಡಿಸಿ ಆದೇಶ ಹೊರಡಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಮರ್ಪಕ ಸುರಕ್ಷಿತ ಸಾರಿಗೆ ಸೇವೆಯನ್ನು ಮಿತವ್ಯಯ ದರದಲ್ಲಿ ಒದಗಿಸುತ್ತಿದೆ. ಬೆಂಗಳೂರು ನಗರದಲ್ಲಿ ತಡರಾತ್ರಿ ಹಾಗೂ ಮುಂಜಾನೆ ಪ್ರಯಾಣಿಸುವ ಸಾರ್ವಜನಿಕರ …

Read More »

ಆತ್ಮರಕ್ಷಣೆ ಉದ್ದೇಶದಿಂದ ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ ನೀಡಲಾಗುತ್ತಿದೆ.

ಕಲಬುರಗಿ: ಹೆಣ್ಣು ಮಕ್ಕಳ ಆತ್ಮರಕ್ಷಣೆ ಹಿತದೃಷ್ಟಿಯಿಂದ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್​ (ಸ್ವ-ಆತ್ಮರಕ್ಷಣೆ) ಮಾಡಿಕೊಳ್ಳುವ ಉದ್ದೇಶದಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತರಬೇತಿಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿನಿಯರ ವಸತಿ ನಿಲಯಗಳು ಶಾಲಾ ಕಾಲೇಜುಗಳಿಂದ ದೂರ ಇವೆ. ಕಾಲೇಜು ಮುಗಿಸಿ ವಾಪಾಸ್​ ಆಗುವ ವೇಳೆ ಅವರಿಗೆ ರೈಲ್ವೆ ಮತ್ತು ಬಸ್ ನಿಲ್ದಾಣದಂತಹ ಸ್ಥಳಗಳಲ್ಲಿ ಮಾನಸಿಕ ಹಾಗೂ ದೈಹಿಕ, ದೌರ್ಜನ್ಯ ನಡೆಸುವಂತಹ ಘಟನೆಗಳು ನಡೆಯುತ್ತಿರುತ್ತವೆ. ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಯ ಕೌಶಲ್ಯವನ್ನು ಒದಗಿಸುವ ನಿಟ್ಟಿನಲ್ಲಿ …

Read More »

Accident: ಟ್ರಕ್- ಕಾರು ನಡುವೆ ಮುಖಾಮುಖಿ ಡಿಕ್ಕಿ.. 7 ಜನರು ಸಾವು, 12 ಮಂದಿಗೆ ಗಾಯ

ತಿನ್ಸುಕಿಯಾ (ಅಸ್ಸೋಂ): ಅಸ್ಸೋಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಅಸ್ಸೋಂನ ತಿನ್‌ಸುಕಿಯಾ ಜಿಲ್ಲೆಯ ಕಾಕ್‌ಪಥರ್‌ನ ಬೋರ್-ಡಿರಾಕ್​ದಲ್ಲಿ ಮಂಗಳವಾರ ರಾತ್ರಿ 10.30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಸ್ಥಳೀಯರಿಂದ ರಕ್ಷಣಾ ಕಾರ್ಯ: ಪೊಲೀಸ್ ಮೂಲಗಳ ಪ್ರಕಾರ, ಟ್ರಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಇದರಿಂದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದು, ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು …

Read More »

ಜಿ20 ಶಂಗಸಭೆ, ‘ಭಾರತ’ ಫೈಟ್​ ನಡುವೆ ರಾಹುಲ್​ ಗಾಂಧಿ ಒಂದು ವಾರ ಯುರೋಪ್​ ಪ್ರವಾಸ; ಅನಿವಾಸಿ ಭಾರತೀಯರೊಂದಿಗೆ ಸಂವಾದ

ನವದೆಹಲಿ: ಭಾರತ ಇದೇ ಮೊದಲ ಬಾರಿಗೆ ಅಧ್ಯಕ್ಷತೆ ವಹಿಸಿರುವ ಮಹತ್ವದ ಜಿ20 ಶೃಂಗಸಭೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರು ಇಂದಿನಿಂದ ಒಂದು ವಾರ ಕಾಲ ಯುರೋಪ್​ ಪ್ರವಾಸ ಕೈಗೊಂಡಿದ್ದಾರೆ. ಜಿ20 ಮುಗಿದ ಬಳಿಕ ಅವರು ಸ್ವದೇಶಕ್ಕೆ ವಾಪಸ್​ ಆಗಲಿದ್ದಾರೆ. ನಿನ್ನೆ ರಾತ್ರಿಯೇ ಅವರು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ನವದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ಎರಡು ದಿನ ಜಿ 20 ಶೃಂಗಸಭೆ ನಡೆಯಲಿದೆ. …

Read More »